ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಾಧ್ಯಮ ಪತ್ರಿಕೆಗಳ ಸಂಪಾದಕರ ಸಭೆ

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಾಧ್ಯಮ ಪತ್ರಿಕೆಗಳ ಸಂಪಾದಕರ ಸಭೆ

ಕೋಲಾರ.ಜು,15: ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಾಧ್ಯಮ ಪತ್ರಿಕೆಗಳ ಸಂಪಾದಕರ ಸಂಘದಿಂದ ದಿನಾಂಕ 18-7-2019 ರಂದು ಗುರುವಾರ ಬೆಳಗ್ಗೆ 10-00 ಗಂಟೆಗೆ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಪತ್ರಿಕೆಗಳ ಸಂಪಾದಕರ ಸಭೆಯನ್ನು ಕರೆಯಲಾಗಿದೆ.
ಜಿಲ್ಲಾ ಪತ್ರಿಕೆಗಳ ಹಲವಾರು ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜಿಲ್ಲಾ ಸಂಪಾದಕರ ಸಂಘ ಸ್ಥಾಪನೆ ಬಹುಮುಖ್ಯವಾಗಿದ್ದು, ಇದರ ಆಗುಹೋಗುಗಳ ಬಗ್ಗೆ ಹಾಗೂ ಸಂಘದ ಕಾರ್ಯಕಾರಿ ಸಮಿತಿ ರಚಿಸುವ ಕುರಿತು ಚರ್ಚೆ ನಡೆಸುವ ಸಲುವಾಗಿ ಈ ಸಭೆಯನ್ನು ಕರೆಯಲಾಗಿದ್ದು, ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳ ಸಂಪಾದಕರುಗಳು ಈ ಸಭೆಗೆ ತಪ್ಪದೆ ಹಾಜರಾಗತಕ್ಕದ್ದು.
ಅಂದು ಸಭೆಯಲ್ಲಿ ಕಾರ್ಯಕಾರಿ ಸಮಿತಿ ರಚನೆ ಆಗಲಿದ್ದು, ಅಂದೇ ಸಂಘದ ಸದಸ್ಯತ್ವ ನೊಂದಣಿ ಮಾಡಿಕೊಳ್ಳಲಾಗುವುದು. ನೊಂದಣಿ ಶುಲ್ಕ 1000 ರೂಗಳನ್ನು ಪಾವತಿಸಿ ಸಂಘದ ಸದಸ್ಯರಾಗಲು ರಾಜ್ಯ ಸಂಘದ ಜಂಟಿ ಕಾರ್ಯದರ್ಶಿ ಹೆಚ್.ಎಲ್.ಸುರೇಶ್ ಹಾಗೂ ಕೋಲಾರ ಜಿಲ್ಲಾ ಸಂಚಾಲಕ ಹೆಚ್.ಎನ್.ಮುರಳೀಧರ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9448663528, 9448715073 ಸಂಪರ್ಕಿಸಬಹುದಾಗಿದೆ.

ವಿಶೇಷ ಸೂಚನೆ: ಅಂದು ಬೆಳಗ್ಗೆ 9-30 ಗಂಟೆಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ.