ಕುಕ್ಕೆ ಸುಬ್ರಹ್ಮಣ್ಯ ದಾರಿಯಲ್ಲಿ ಅಡ್ಡಗಟ್ಟಿ ಅರ್ಚಕರ ಮೇಲೆ  ಪೋಲೀಸ್ ಹಲ್ಲೆ

JANANUDI.COM NETWORK

 

ಕುಕ್ಕೆ ಸುಬ್ರಹ್ಮಣ್ಯ ದಾರಿಯಲ್ಲಿ ಅಡ್ಡಗಟ್ಟಿ ಅರ್ಚಕರ ಮೇಲೆ  ಪೋಲೀಸ್ ಹಲ್ಲೆ

 

 

ಸುಬ್ರಹ್ಮಣ್ಯ,ಮಾ. 29: ಕುಕ್ಕೆ ಸುಬ್ರಹ್ಮಣ್ಯದ. ಆದಿ ಸುಬ್ರಹ್ಮಣ್ಯದ ಅರ್ಚಕರು ಶ್ರೀನಿವಾಸ್ ಇವರು ಶನಿವಾರ ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ದೇವಳದ ಕೀ ಸಹಿತ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಶಂಕರ್ ಎನ್ನುವ ಕಾನ್ಸ್ ಟೇಬಲ್ ಅವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಅರ್ಚಕರನ್ನು ಬೈಯ್ದದಲ್ಲದೆ , ಅರ್ಚಕರು ತಾನು ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತ ಇರುವುದಾಗಿ ದೇವಳದ ಕೀಯನ್ನ ತೋರಿಸಿ ಹೇಳಿದರೂ ಬಿಡದ ಈ ಪೋಲೀಸ್ ಸಿಬ್ಬಂದಿ ಅರ್ಚಕರ ಮೇಲೆ ತನ್ನ ಕೈಯಲ್ಲಿದ್ದ ಕೋಲಿನಿಂದ ಬಾಸುಂಡೆ ಏಳುವಂತೆ ಹಲ್ಲೆ ನಡೆಸಿರುತ್ತಾರೆ.

   ಜಿಲ್ಲೆಯ ಖ್ಯಾತ ದೇವಳದ ಮುಖ್ಯ ಅರ್ಚಕರು ತನ್ನ ದೈನಂದಿನ ಕಾರ್ಯ ನಡೆಸಲು ತೆರಳುವಾಗಲೂ ಈ ರೀತಿ ಅಮಾನುಷವಾಗಿ ಹಲ್ಲೆಗೈದ ಈ ಪೋಲೀಸ್ ಸಿಬ್ಬಂದಿ ಸ್ಥಳೀಯರೇ ಆಗಿದ್ದು ಗುರುತು ಇದ್ದರೂ ಈ ರೀತಿ ವರ್ತಿಸಿರುವ ಘಟನೆಯನ್ನ ವಿಪ್ರ ಸಂಘಟನೆ ಉಗ್ರವಾಗಿ ಖಂಡಿಸುತ್ತದೆ. ಮತ್ತು ಅನ್ಯಾಯವಾಗಿ ಹಲ್ಲೆ ನಡೆಸಿದ ಪೋಲೀಸ್ ಸಿಬ್ಬಂದಿಯನ್ನ ತಕ್ಷಣವೇ ಅಮಾನತು ಮಾಡಬೇಕಾಗಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಯವರನ್ನ ಮತ್ತು ಜಿಲ್ಲಾಧಿಕಾರಿಯವರಲ್ಲಿ ವಿಪ್ರ ಪರಿವಾರ ಆಗ್ರಹಿಸ.