ಕೊಲಾರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಡಾ|| ಅಂಬೇಡ್ಕರ್ ಜಯಂತಿ ಆಚರಣೆ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಕೊಲಾರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಡಾ|| ಅಂಬೇಡ್ಕರ್ ಜಯಂತಿ ಆಚರಣೆ
ಕೆಜಿಎಫ್ :ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮದಿನಾಚರಣೆಯನ್ನು ಕೆಜಿಎಫ್‍ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಂಗಳವಾರದಂದು ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ಡಾ|| ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಡಾ|| ಅಂಬೇಡ್ಕರ್ ಅವರ ಆದರ್ಶ, ತತ್ವಗಳನ್ನು ಇಂದಿನ ಸಮಾಜದಲ್ಲಿ ಅಳವಡಿಸಿಕೊಂಡು ಮುನ್ನಡೆಯುವಂತೆ ಕರೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಅವರ ಅಧ್ಯಕ್ಷತೆಯಲ್ಲಿ ನಡೆದ ಡಾ|| ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಬಿ.ಕೆ. ಉಮೇಶ್, ಸಹಾಯಕ ಆಡಳಿತಾಧಿಕಾರಿ ಜಿ. ವಿಶ್ವನಾಥ, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಶಿವರಾಜ್ ಮುಧೋಳ್, ಚಂದ್ರಶೇಖರ್ ಹಾಗೂ ಇಲ್ಲಿನ ಪಿಎಸ್‍ಐ ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.