ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 11 ಜನರ ದಾರುಣ ಸಾವು

ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 11 ಜನರ ದಾರುಣ ಸಾವು

ಚಿಕ್ಕಬಳ್ಳಾಪುರ,ಜು.03:  ಟಾಟಾ ಏಸ್  ಮತ್ತು ಖಾಸಗಿ ಬಸ್​   ಖಾಸಗಿ ಬಸ್​  ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 11 ಜನರು ದಾರುಣವಾಗಿ ಸಾವನ್ನಪ್ಪಿರುವ ಹ್ರದಯ ಜಲ್ಲ್ ಎನ್ನುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮುರುಗಮಲ್ಲ ಬಳಿ ನಡೆದಿದೆ.

ಈ ದುರಂತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು. ಸ್ಥಳಕ್ಕೆ ಚಿಂತಾಮಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಂತಾಮಣಿ ಹಾಗೂ ಕೋಲಾರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆಯೆಂದು ತಿಳಿದು ಬಂದಿದೆ.

 ಬಸ್​ ಮುರುಗಮಲ್ಲದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮುರುಗಮಲ್ಲ ಕಡೆ ಹೋಗುತ್ತಿದ್ದ ಟಾಟಾ ಏಸ್ ಬಸ್​​ಗೆ​ ಡಿಕ್ಕಿ ಹೊಡೆದಿದೆಯೆಂದು ತಿಳಿದು ಬಂದಿದೆ.