ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಧನ ಸಹಾಯ ಹಸ್ತಾಂತರ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಧನ ಸಹಾಯ ಹಸ್ತಾಂತರ


ನಂದಳಿಕೆ ಗ್ರಾಮದ ಕುಂಟಲಗುಂಡಿ ಬಳಿಯ ನಿವಾಸಿ ಕೃಷ್ಣ ಮೂಲ್ಯ ಮತ್ತು ಸುನಂದ ಮೂಲ್ಯ ದಂಪತಿಗಳ ಪುತ್ರ ಸುದೇಶ್ ಕುಲಾಲ್ ಎನ್ನುವ ಯುವಕನೋರ್ವ ಗೆಳೆಯರೊಂದಿಗೆ ವಿಹಾರಕ್ಕೆಂದು ಸ್ವಾತಂತ್ರ್ಯ ದಿನದಂದು ನಿಟ್ಟೆ ಸಮೀಪದ ಅರ್ಬಿ ಜಲಪಾತಕ್ಕೆ ಹೋಗಿದ್ದ ಸಂದರ್ಭದಲ್ಲಿ ಆಯತಪ್ಪಿ ಕಾಲುಜಾರಿ ಬಿದ್ದು ಮೃತಾಗಿರುತ್ತಾನೆ. ಬಡ ಹುಟ್ಟಿದ ಇಬ್ಬರು ಸಹೋದರಿಯರ ಏಕೈಕ ಸಹೋದರನಾಗಿದ್ದ ಸುದೇಶನ ಅಕಾಲಿಕ ಮರಣ ಹೆತ್ತವರಿಗೆ ಬರಸಿಡಿಲು ಬಡಿದಂತಾಗಿ ದಿಕ್ಕು ತೊಚದೆ ಕಂಗಾಲಾಗಿದ್ದಾರೆ.
ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಸಾಂತ್ವನದ ಮಾತುಗಳನ್ನಾಡಿ ಸಾಂತ್ವಾನದ ಜೊತೆಗೆ ಸಣ್ಣ ಪ್ರಮಾಣದ ಆರ್ಥಿಕ ಸಹಾಯವನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ವತಿಯಿಂದ ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್, ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಪೂರ್ವಾಧ್ಯಕ್ಷ ರಘುವೀರ್ ಶೆಟ್ಟಿ, ಕಾಸ್ರಬೈಲು ಸುರೇಶ್ ಪೂಜಾರಿ, ಉಪಾಧ್ಯಕ್ಷ ಬಾಲಕೃಷ್ಣ ಮಡಿವಾಳ, ಕೋಶಾಧಿಕಾರಿ ಹರಿಪ್ರಸಾದÀ ಆಚಾರ್ಯ, ಮಾಜಿ ಉಪಾಧ್ಯಕ್ಷ ಹರೀಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಪೂಜಾರಿ, ಹರೀಶ್ ಪೂಜಾರಿ, ಲಲಿತಾ ಆಚಾರ್ಯ, ಸುನೀತಾ ಪಿಂಟೋ, ಪುಷ್ಪ ಕುಲಾಲ್, ಹರಿಣಿ ಪೂಜಾರಿ, ಅಶ್ವಿನಿ ಪ್ರಭಾಕರ್, ಸುಲೋಚನಾ ಕೋಟ್ಯಾನ್ ಮೊದಲಾದವರಿದ್ದರು.