ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ


ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್‍ಶಿಪ್ ಕಾರ್ಯಕ್ರಮದ ಮೂಲಕ 20ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರ ಸ್ಮರಣಾರ್ಥ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಬಳಿ ಶುಕ್ರವಾರ ಗಿಡ ನೆಟ್ಟು ಸೈನಿಕರಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ರಾಜೇಶ್ ಕೋಟ್ಯಾನ್ ಗಿಡ ನೆಟ್ಟು ಮಾತನಾಡಿದವರು ಪ್ರತಿಯೊಂದು ಕೆಲಸ ಕಾರ್ಯ, ಸಾಧನೆ, ಗೆಲುವಿನ ಹಿಂದೆ ಬಹಳಷ್ಟು ಜನರ ಬಲಿದಾನವಿದೆ. 1999ರಲ್ಲಿ ಪಾಕ್ ಭಾರತೀಯ ಗಡಿ ಆಕ್ರಮಿಸಿದ್ದರ ವಿರುದ್ಧ ನಡೆದ ಯುದ್ಧದಲ್ಲಿ 527 ಸೈನಿಕರು ವೀರ ಮರಣವನ್ನಪ್ಪಿದರು. 1350ಕ್ಕೂ ಅಧಿಕ ವೀರ ಯೋಧರು ಗಾಯಾಳುಗಳಾಗಿದ್ದರು. ಇಂದು ಕಾರ್ಗಿಲ್ ವಿಜಯೋತ್ಸವವಾಗಿ ಇಪ್ಪತ್ತು ವರ್ಷಗಳೇ ಸಂದಿದೆ. ಕಾರ್ಗಿಲ್ ವಿಜಯ ಹಾಗೂ ಸೈನಿಕರ ಕೆಚ್ಚೆದೆಯ ಹೋರಾಟದ ನೆನಪಿಗಾಗಿ ಗಿಡ ನೆಟ್ಟು ಸೈನಿಕರಿಗೆ ಗೌರವ ಸಲ್ಲಿಸುತ್ತಿದ್ಧೇವೆ ಎಂದರು.
ಈ ಸಂದರ್ಭದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯಕ್ರಮದ ನಿರ್ದೇಶಕ ಅಬ್ಬನಡ್ಕ ಸತೀಶ್ ಪೂಜಾರಿ, ನಿಕಟ ಪೂವಾಧ್ಯಕ್ಷ ಕಾಸ್ರಬೈಲು ಸುರೇಶ್ ಪೂಜಾರಿ, ಪೂರ್ವಾಧ್ಯಕ್ಷ ಆನಂದ ಪೂಜಾರಿ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಉಪಾಧ್ಯಕ್ಷ ಹರೀಶ್ ಪೂಜಾರಿ, ಅಬ್ಬನಡ್ಕ ಸುರೇಶ್ ಪೂಜಾರಿ, ಸುನೀತಾ ಪಿಂಟೋ, ಮೊದಲಾದವರಿದ್ದರು.
ಕಾರ್ಗಿಲ್ ಯುದ್ಧದಲ್ಲಿ ಸೆಣಸಾಡಿ ಹುತಾತ್ಮರಾದ ವೀರ ಯೋಧರಿಗೆ ಮೌನ ಪ್ರಾರ್ಥನೆ ಮಾಡಲಾಯಿತು.