ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಅಭಿಯಾನ ಸ್ವಚ್ಛತೆಯ ಮೂಲಕ ಗಾಂಧೀಜಿಗೆ ಶ್ರದ್ಧಾಂಜಲಿ ಸಲ್ಲಿಸೋಣ – ಸತೀಶ್ ಪೂಜಾರಿ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಅಭಿಯಾನ
ಸ್ವಚ್ಛತೆಯ ಮೂಲಕ ಗಾಂಧೀಜಿಗೆ ಶ್ರದ್ಧಾಂಜಲಿ ಸಲ್ಲಿಸೋಣ – ಸತೀಶ್ ಪೂಜಾರಿ

ಸ್ವಚ್ಛತೆ ಎಂಬುದು ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕು. ಮನೆ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ ಮನಸ್ಸು ಶುದ್ಧವಾಗಿರುತ್ತದೆ. ಸ್ವಚ್ಛತೆಯ ಪಾಠ ಹೇಳಿದ ಗಾಂಧೀಜಿಯವರ ತತ್ವಗಳಿಗೆ ನಮ್ಮ ಪರಿಸರವನ್ನು ಸ್ವಚ್ಛತೆಗೊಳಿಸುವ ಮೂಲಕ ಮಹಾತ್ಮ ಗಾಂಧೀಜಿಯವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ ಎಂದು ಸಂಘದ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ ಹೇಳಿದರು.
ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಬ್ಬನಡ್ಕ ಪರಿಸರದ ಬಸ್‍ಸ್ಟ್ಯಾಂಡ್ ಹಾಗೂ ರಸ್ತೆಯ ಇಕ್ಕೆಲಗಳಲ್ಲಿದ್ದ ಕಸಕಡ್ಡಿ, ಪ್ಲಾಸ್ಟಿಕ್, ಬಾಟಲಿ ಇನ್ನಿತರ ತ್ಯಾಜ್ಯಗಳನ್ನು ಸ್ವಚ್ಛತೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂವಾಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷ ಬಾಲಕೃಷ್ಣ ಮಡಿವಾಳ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಜೊತೆ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಪೂಜಾರಿ, ಸದಸ್ಯರಾದ ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಪುಷ್ಪ ಕುಲಾಲ್, ಸುನೀತಾ ಪಿಂಟೋ ಪೂಜಾರಿಮೊದಲಾದವರಿದ್ದರು.