ಪ್ರಸ್ತುತ ಮಾಹಿತಿ ಸಂವಹನ ತಂತ್ರಜ್ಞಾನ ಅನಿವಾರ್ಯ, ಶೈಕ್ಷಣಿಕ ನೆಲೆಯಲ್ಲಿ ಪ್ರಾಮುಖ್ಯತೆ ಪಡೆದುಕೊಂಡಿದೆ : ಡಾ. ಹೆಚ್.ಎಸ್.ಬಲ್ಲಾಳ್

JANANUDI.COM NETWORK

ಕುಂದಾಪುರ: ಪ್ರಸ್ತುತದ ದಿನಗಳಲ್ಲಿ ಮಾಹಿತಿ ಸಂವಹನ ತಂತ್ರಜ್ಞಾನವೆನ್ನುವುದು ನಮ್ಮ ಅನಿವಾರ್ಯ ಅಗತ್ಯಗಳಲ್ಲಿ ಒಂದಾಗಿದೆ. ಅಲ್ಲದೇ ಶೈಕ್ಷಣಿಕ ನೆಲೆಯಿಂದಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದು ಮಣಿಪಾಲದ ಅಕಾಡೆಮಿಆಫ್ ಜನರಲ್ ಎಜುಕೇಶನ್, ಇದg ಅಧ್ಯಕ್ಷರಾದ ಡಾ. ಹೆಚ್.ಎಸ್.ಬಲ್ಲಾಳ್ ಅವರು ಹೇಳಿದರು.
ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಐಕ್ಯೂಎಸಿ ಮತ್ತು ಮಣಿಪಾಲದ ಅಕಾಡೆಮಿ ಆಫ್‍ಜನರಲ್ ಎಜುಕೇಶನ್ ನ ಸಹಯೋಗದಲ್ಲಿ ನಡೆದ ಆನ್‍ಲೈನ್ ತರಗತಿಗಳನ್ನು ತೆಗೆದುಕೊಳ್ಳುವಲ್ಲಿ ಮಾಹಿತಿ ಸಂವಹನ ತಂತ್ರಜ್ಞಾನದ ಪರಿಣಾಂಕಾರಿ ಉಪಯೋಗ” ಎಂಬ ವಿಷಯದ ಕುರಿತ ರಾಷ್ಟ್ರೀಯ ವೆಬಿನಾರ್ ನಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈಗಿನ ಸಂಧಿಗ್ದ ಸಂದರ್ಭದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಮಾಹಿತಿ ಸಂವಹನ ತಂತ್ರಜ್ಞಾನದ ಉಪಯೋಗ ಬಹಳವಿದೆ. ವಿವಿಧ ತೆರನಾದ ಮಾಹಿತಿ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ತರಗತಿಗಳನ್ನು ತೆಗೆದುಕೊಳ್ಳುವುದು ಮತ್ತು ವಿದ್ಯಾರ್ಥಿಗಳಿಗೆ ಅತ್ಯಂತ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ ನೀಡುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ವೆಬಿನಾರ್‍ನ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಮಾಹೆಯ ಎಮ್.ಎಸ್.ಒ.ಐ.ಎಸ್ ನ ಸಹಾಯಕ ಪ್ರಾಧ್ಯಾಪಕರಾದ ನಂದೀಶ್. ಎಸ್. ಅವರು “ಆನ್‍ಲೈನ್ ತರಗತಿಗಳನ್ನು ತೆಗೆದುಕೊಳ್ಳುವಲ್ಲಿ ಮಾಹಿತಿ ಸಂವಹನ ತಂತ್ರಜ್ಞಾನದ ಪರಿಣಾಂಕಾರಿ ಉಪಯೋಗ ಕುರಿತು ಮಾತನಾಡಿದರು.
ಅವರು ಆನ್‍ಲೈನ್ ತರಗತಿಗಳನ್ನು ತೆಗೆದುಕೊಳ್ಳುವಲ್ಲಿ ಮಾಹಿತಿ ಸಂವಹನ ತಂತ್ರಜ್ಞಾನದ ಉಪಯೋಗ ಮತ್ತುಅದರ ಸಾಧ್ಯತೆಗಳನ್ನು ಮತ್ತು ಉಪಯೋಗಿಸಿ ಕೊಳ್ಳುವಲ್ಲಿನ ತಾಂತ್ರಿಕ ಸವಾಲುಗಳನ್ನುು ತಿಳಿಸದರು. ಅಲ್ಲದೇ ಮೈಕ್ರೊಸಾಫ್ಟ್ ಟೀಮ್ಸ್ ಮತ್ತು ಸ್ಟ್ರೀಮ್ಸ್ ಆನ್‍ಲೈನ್ ತಂತ್ರಜ್ಞಾನವನ್ನು ಸರಳವಾಗಿ ಬಳಸುವ ರೀತಿ ಮತು ್ತಉಪಯೋಗವನ್ನು ತಿಳಿಸಿದರು. “ಆನ್‍ಲೈನ್ ತರಗತಿಗಳನ್ನು ತೆಗೆದುಕೊಳ್ಳುವಲ್ಲಿ ಪ್ರಾಯೋಗಿಕವಾಗಿ ಅತ್ಯಂತ ಸೂಕ್ತ ಮತ್ತು ಸುಲಭದ ಒಂದು ಮಾದರಿ ಇದಾಗಿದೆ ಎಂದು ಹೇಳಿದರು. ಆನ್‍ಲೈನ್ ವೆಬಿನಾರ್‍ನಲ್ಲಿ ಭಾಗವಹಿಸಿದವರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
13 ದೇಶಗಳು ಮತ್ತು 34 ರಾಜ್ಯಗಳ 2200 ಕ್ಕಿಂತ ಹೆಚ್ಚು ಸಂಖ್ಯೆಯ ಜನರು ನೊಂದಾವಣೆಗೊಂಡು ಅದರಲ್ಲಿ ಸುಮಾರು 1200 ಜನರು ವೆಬಿನಾರ್‍ನಲ್ಲಿ ಭಾಗವಹಿಸಿದ್ದರು.
ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಸ್ವಾಗತಿಸಿದರು. ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಶಶಿಕಾಂತ್ ಹತ್ವಾರ್ ಕಾಲೇಜಿನ ಐಟಿ ತಂಡದ ಸಂಯೋಜಕರಾದ ಡಾ. ನಟರಾಜ್ ಎಮ್. ಬಿ ಮತ್ತು ಅವರ ತಂಡದ ಸದಸ್ಯರಾದ್ ಅಮರ್ ಸಿಕ್ವೆರಾ, ಪ್ರವೀಣ್, ಗಣೇಶ್, ಗುರುದಾಸ್ ಪ್ರಭು, ಶಂಕರನಾರಾಯಣ ಉಪಾಧ್ಯಾಯ ಮತ್ತು ವಿಕ್ರಮ್ ಇವರುಗಳು ತಾಂತ್ರಿಕವಾಗಿ ಸಹಕರಿಸಿದರು. ಇಂಗ್ಲೀಷ್ ವಿಬಾಗದ ಉಪನ್ಯಾಸಕಿ ಜೆವಿಲ್ಲಾ ರೋಡ್ರಿಗಸ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.