ಶ್ರೀನಿವಾಸಪುರದ ರೈಲು ನಿಲ್ದಾಣದಲ್ಲಿ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅಜಯ್‌ ಕುಮಾರ್‌ ಸಿಂಗ್‌ ಸಾರ್ವಜನಿಕರ ಕುಂದು ಕೊರತೆ ವಿಚಾಯಿಸಿದರು. ಸಂಸದ ಎಸ್‌.ಮುನಿಸ್ವಾಮಿ ಜೊತೆಗಿದ್ದರು

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರದ ರೈಲು ನಿಲ್ದಾಣದಲ್ಲಿ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅಜಯ್‌ ಕುಮಾರ್‌ ಸಿಂಗ್‌ ಸಾರ್ವಜನಿಕರ ಕುಂದು ಕೊರತೆ ವಿಚಾಯಿಸಿದರು. ಸಂಸದ ಎಸ್‌.ಮುನಿಸ್ವಾಮಿ ಜೊತೆಗಿದ್ದರು

ಶ್ರೀನಿವಾಸಪುರ: ಪಟ್ಟಣದ ಹೊರ ವಲಯದ ರೈಲು ನಿಲ್ದಾಣಕ್ಕೆ ವಿಶೇಷ ರೈಲಿನಲ್ಲಿ ಆಗಮಿಸಿದ ರೈಲ್ವೆ ವಿಭಾಗೀಯ ವ್ಯಸ್ಥಾಪಕ ಅಜಯ್‌ ಕುಮಾರ್‌ ಸಿಂಗ್‌ ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿದರು.

  ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲ ಸೌಕರ್ಯ ಒದಗಿಸಬೇಕು. ಭದ್ರತೆಗೆ ಆದ್ಯತೆ ನೀಡಬೇಕು. ಅಂಡರ್‌ ಪಾಸ್‌ಗಳನ್ನು ದುರಸ್ತಿ ಮಾಡಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ಶ್ರೀನಿವಾಸಪುರದಿಂದ ತಿರುಪತಿಗೆ ರೈಲು ಮಾರ್ಗ ಹಾಕಬೇಕು ಎಂದು ಸಾರ್ವಜನಿಕರು ಮನವಿ ಮಾಡಿದರು.

  

  ಲೋಕಸಭಾ ಸದಸ್ಯ ಎಸ್‌.ಮುನಿಸ್ವಾಮಿ ಮಾತನಾಡಿ, ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರೈಲ್ವೆಯಲ್ಲಿನ ಕುಂದು ಕೊರತೆಗಳನ್ನು ವಿಭಾಗೀಯ ವ್ಯವ್ಥಾಪಕರ ಗಮನಕ್ಕೆ ತರಲಾಗಿದೆ ಹೇಳಿದರು.

  ತಾಲ್ಲೂಕು ಬಿಜೆಪಿ ಮುಖಂಡರಾದ ಡಾ. ಕೆ.ಎನ್‌.ವೇಣುಗೋಪಾಲ್‌, ವೆಂಕಟೇಗೌಡ, ಇ.ಶಿವಣ್ಣ, ನಾರಾಯಣಸ್ವಾಮಿ, ರೆಡ್ಡಪ್ಪ, ಶಫಿವುಲ್ಲಾ, ಸುನಿಲ್‌, ಎಂ.ಎನ್‌.ಕೆ.ನಾಗರಾಜ್‌ ಇದ್ದರು.