ಶ್ರೀನಿವಾಸಪುರ ಯಯ್ಯಪ್ಪಲ್ಲಿ ಗ್ರಾಮದಲ್ಲಿ ಗ್ರಾಮ ದೇವತೆಗಳಾದ ಗಂಗಮ್ಮ, ಪುಲೇಕಮ್ಮ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಯಯ್ಯಪ್ಪಲ್ಲಿ ಗ್ರಾಮದಲ್ಲಿ ಶುಕ್ರವಾರ ಗ್ರಾಮ ದೇವತೆಗಳಾದ ಗಂಗಮ್ಮ ಹಾಗೂ ಪುಲೇಕಮ್ಮ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಏರ್ಪಡಿಸಿಲಾಗಿತ್ತು.
  ರಾಯಲ್ಪಾಡಿನ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳನ್ನು ಪೂರೈಸಲಾಯಿತು. ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌, ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕಾರ್ಯಕ್ರದಲ್ಲಿ ಭಾಗವಹಿಸಿದ್ದರು.  ಸೇವಾಕರ್ತರಾದ ಬಿ.ಎನ್‌.ನಾರಾಯಣಸ್ವಾಮಿ, ಡಿಷ್‌ ಚಂದ್ರಶೇಖರ ರೆಡ್ಡಿ, ಕೃಷ್ಣಾರೆಡ್ಡಿ, ಮುನಿರೆಡ್ಡಿ, ಜಯರಾಮರೆಡ್ಡಿ, ಪ್ರಕಾಶ್‌, ಬಿ.ಸಿ.ನಾಗೇಶ್‌, ವರದರೆಡ್ಡಿ, ಕಿರಣ್‌, ಮುರಳಿ, ಸೋಮಶೇಖರರೆಡ್ಡಿ, ಮಂಜುನಾಥರೆಡ್ಡಿ ಇದ್ದರು.