ಕುಂದಾಪುರದಲ್ಲಿ ಸೆಪ್ಟೆಂಬರ್ 5 ರಂದು ಗೌರಿ ಬಳಗ  ಮತ್ತು ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ  ‘ಗೌರಿ ನೆನಪು  

JANANUDI.COM NETWORK

ಕುಂದಾಪುರದಲ್ಲಿ ಸೆಪ್ಟೆಂಬರ್ 5 ರಂದು ಗೌರಿ ಬಳಗ  ಮತ್ತು ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ  ‘ಗೌರಿ ನೆನಪು  


ಕುಂದಾಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಎರಡು ವರ್ಷ ತುಂಬುವ ಹಿನ್ನೆಲೆಯಲ್ಲಿ ನಾಳೆ ಸೆಪ್ಟೆಂಬರ್ 5 ಗುರುವಾರ ಸಂಜೆ ಕುಂದಾಪುರದ ಗೌರಿ ಬಳಗ ಮತ್ತು ಇತರ ಸಮಾನ ಮಮಸ್ಕ ಸಂಘಟನೆಗಳು ‘ಗೌರಿ ನೆನಪು’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಮೊಂಬತ್ತಿಗಳ ಬೆಳಕಿನಲ್ಲಿ ಗುರುವಾರ ಸಂಜೆ 6.30ಕ್ಕೆ ಶಾಸ್ತ್ರಿ ಸರ್ಕಲ್‌ನಲ್ಲಿ ನಡೆಯಲಿದೆ. ಖ್ಯಾತ ಚಿಂತಕ ಮತ್ತು ಲೇಖಕ ಕೆ. ಫಣಿರಾಜ್ ಪ್ರಧಾನ ಭಾಷಣ ಮಾಡಲಿದ್ದಾರೆ.
ಗೌರಿ ಲಂಕೇಶ್ ಅಭಿಮಾನಿಗಳು ಮತ್ತು ಸಹೃದಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಂಘಟಕರು ಕೋರಿದ್ದಾರೆ.