ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆಸಲಾದ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ.

JANANUDI.COM NETWORK

ಮಕ್ಕಳ ದಿನಾಚರಣೆ ಪ್ರಯುಕ್ತ ಲಯನ್ಸ್ ಕ್ಲಬ್ ಮತ್ತು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಲಾದ ಕನ್ನಡ ಮತ್ತು ಇಂಗ್ಲಿಷ್ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ‌‌ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಲಯನ್ಸ್ ಕ್ಲಬ್ ಕುಂದಾಪುರ, ಇದರ ಕಾರ್ಯದರ್ಶಿಯವರಾದ ಪ್ರೊ. ರಾಜೇಂದ್ರ ಇವರು ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿಯವರು  ಮಕ್ಕಳ ದಿನಾಚರಣೆಯ ಪ್ರಸ್ತುತತೆಯ ಬಗ್ಗೆ ತಿಳಿಸಿದರು.  ಲಯನ್ಸ್ ಕ್ಲಬ್, ಕುಂದಾಪುರ ಇದರ ಅಧ್ಯಕ್ಷರಾದ ಲಯನ್ ಚಂದ್ರಶೇಖರ ಕಲ್ಪತರು ಇವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು. ಲಯನ್ಸ್ ಕ್ಲಬ್, ಕುಂದಾಪುರ ಇದರ ಡಿಸ್ಟ್ರಿಕ್ಟ್ ಕ್ಯಾಬಿನೆಟ್ ಮೆಂಬರ್ ಶ್ರೀ ರಾಜೀವ್ ಕೋಟ್ಯಾನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಡಿ
ಬಿ. ಕೃಷ್ಣಮೂರ್ತಿ ಯವರು ಕಾರ್ಯಕ್ರಮ ನಿರ್ವಹಿಸಿ ಧನ್ಯವಾದ ಸಲ್ಲಿಸಿದರು.