ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ‌‌ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡೋತ್ಸವ

JANANUDI.COM NETWORK

 

 

ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ‌‌ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡೋತ್ಸವ
                   

 ಕುಂದಾಪುರ: “ಶೈಕ್ಷಣಿಕ ಸಾಧನೆಯೊಂದಿಗೇ ವಿದ್ಯಾರ್ಥಿಗಳಿಗೆ  ಮನೋ ದೈಹಿಕ ಸಧೃಢತೆ ನೀಡುವ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ವೃದ್ಧಿಸಲು ಅತ್ಯಗತ್ಯ..ಈ ನಿಟ್ಟಿನಲ್ಲಿ ಆರ್.ಎನ್. ಎಸ್ ಕಾಲೇಜು ಶೈಕ್ಷಣಿಕ ಮತ್ತು ಕ್ರೀಡಾವಲಯಗಳೆರಡರಲ್ಲೂ ಸಮಾನ  ಅವಕಾಶ, ಪ್ರೋತ್ಸಾಹವನ್ನು ನೀಡುತ್ತಿರುವುದು ಶ್ಲಾಘನೀಯ” ಎಂದು ಖ್ಯಾತ ಉದ್ಯಮಿ  ಸುಪ್ರೀಮ್ ಟೈಲ್ಸ್ ತಲ್ಲೂರಿನ  ಆಡಳಿತ ನಿರ್ದೇಶಕರಾದ ಲಯನ್  ಪಿ. ಡಿ.ಜಿ. ಕೆ. ಜಯಕರ ಶೆಟ್ಟಿಯವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ‌ ವಾರ್ಷಿಕ ಕ್ರೀಡೋತ್ಸವವನ್ನು   23-11-2019 ರಂದು ಉದ್ಘಾಟಿಸಿ ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕುಂದಾಪುರ ಎಜುಕೇಶನ್ ಸೊಸೈಟಿಯ  ಜೊತೆ ಕಾರ್ಯದರ್ಶಿ ಶ್ರೀ ಕೆ. ಸುಧಾಕರ ಶೆಟ್ಟಿ ಭಾಂಡ್ಯ ಇವರು ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಡಾ. ಬಿ. ಬಿ. ಹೆಗ್ಡೆ ಪ್ರಥಮ‌ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಲೋನಾ ಲೂಯಿಸ್ ರವರು ಪಥ ಸಂಚಲನ ಕಾರ್ಯಕ್ರಮವನ್ನು ನಿರ್ವಹಿಸಿದರು. ವಾಣಿಜ್ಯ ಉಪನ್ಯಾಸಕಿ ಪ್ರೆಸಿಲ್ಲಾ ರವರು ಕ್ರೀಡಾಜ್ಯೋತಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ. ಬಿ ಯವರು ವಂದನಾರ್ಪಣೆಗೈದರು. ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಶಾನ್ ಪೌಲ್ ಕಾರ್ಯಕ್ರಮ ನಿರೂಪಿಸಿದರು‌.