ಕುಂದಾಪುರದ ಆರ್. ಎನ್.‌ ಶೆಟ್ಟಿ‌ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ‌ ಜನ್ಮದಿನ ಆಚರಣೆ.

JANANUDI.COM NETWORK

ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ‌ಪೂರ್ವ ಕಾಲೇಜು ಮತ್ತು ಕುಂದಾಪುರ ಲಯನ್ಸ್ ಕ್ಲಬ್ ಇದರ‌‌ ಜಂಟಿ‌ ಆಶ್ರಯದಲ್ಲಿ ಭಾರತದ ಧೀಮಂತ ಮಾಜಿ ರಾಷ್ಟ್ರಪತಿ, ಶಿಕ್ಷಣ ತಜ್ಞ ಡಾ. ಎ.ಪಿ.ಜೆ. ಅಬ್ದುಲ್ ಕಲಾಂರವರ ಜನ್ಮದಿನ ಆಚರಣೆಯ ಅಂಗವಾಗಿ ಅಬ್ದುಲ್ ಕಲಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಮಾಸ್ಕ್  ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕುಂದಾಪುರ ಲಯನ್ಸ್ ಕ್ಲಬ್ ನ‌‌ ಅಧ್ಯಕ್ಷರಾದ ಶ್ರೀ ಲಯನ್ ಚಂದ್ರಶೇಖರ ಕಲ್ಪತರು ಇವರು ಲಯನ್ಸ್ ಕ್ಲಬ್ ನ‌ ಸಮಾಜ ಮುಖಿ ಕಾರ್ಯ ಯೋಜನೆಗಳ‌ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿ ಅಬ್ದುಲ್ ಕಲಾಂರ ವರ ಜೀವನ ಮೌಲ್ಯಗಳ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿ‌ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಲಯನ್ಸ್ ಕ್ಲಬ್ ನ ಕೋಶಾಧಿಕಾರಿ ಲಯನ್ ಕಿರಣ್ ಕುಮಾರ್, ರೀಜನಲ್ ಸೆಕ್ರೆಟರಿ ಲಯನ್ ವೇಣುಗೋಪಾಲ್ ಶೆಟ್ಟಿ, ಕ್ಯಾಬಿನೇಟ್ ಮೆಂಬರ್ ಲಯನ್‌ ರಾಜೀವ್ ಕೋಟ್ಯಾನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಶ್ರೀಮತಿ ಜಯಶೀಲಾ ಪೈಯವರು ಕಾರ್ಯಕ್ರಮ ನಿರ್ವಹಿಸಿ ವಂದನೆ ಸಲ್ಲಿಸಿದರು.