ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ – ರಾಮ ನವಮಿ, ಸಾಮೂಹಿಕ ಉಪನಯನದ ಆಮಂತ್ರಣ ಪತ್ರಿಕೆ ಬಿಡುಗಡೆ

 

JANANUDI.COM NETWORK

 

ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ
ರಾಮ ನವಮಿ, ಸಾಮೂಹಿಕ ಉಪನಯನದ ಆಮಂತ್ರಣ ಪತ್ರಿಕೆ ಬಿಡುಗಡೆ

 

 

ಕುಂದಾಪುರ: ಇಲ್ಲಿನ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಎ. 2ರಂದು ಗುರುವಾರ ನಡೆಯುವ ಶ್ರೀ ರಾಮ ನವಮಿ, ಸಾಮೂಹಿಕ ಉಪನಯನ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕುಂದಾಪುರದ ವ್ಯಾಸರಾಜ ಮಠದಲ್ಲಿ ಜರುಗಿತು.
ಗಾಣಿಗ ಸಮಾಜ ಕುಲಗುರು, ಕುಂದಾಪುರದ ವ್ಯಾಸರಾಜ ಮಠದ ಶ್ರೀ ಲಕ್ಷ್ಮೀಂದ್ರ ತೀರ್ಥ ಶ್ರೀಪಾದರು ಆಮಂತ್ರಣ ಬಿಡುಗಡೆಗೊಳಿಸಿ ಆಶೀರ್ವಚನಗೈದರು.
ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಗೌರವಾಧ್ಯಕ್ಷ ಕೆ.ಎಂ.ಲಕ್ಷ್ಮಣ, ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು, ಕೋಶಾಧಿಕಾರಿ ನಾಗರಾಜ ಗಾಣಿಗ ಹಿಲ್ಕೋಡು, ಶ್ರೀ ವ್ಯಾಸರಾಜ ಸೇವಾ ಟ್ರಸ್ಟ್ ಕಾರ್ಯದರ್ಶಿ ಶ್ರೀನಿವಾಸ ಗಾಣಿಗ ಕನ್ಯಾಣ, ಕೋಶಾಧಿಕಾರಿ ಗಣಪಯ್ಯ ಗಾಣಿಗ ಉಪ್ಪುಂದ, ತಾಲೂಕು ಗಾಣಿಗ ಸೇವಾ ಸಂಘದ ಮಾಜಿ ಅಧ್ಯಕ್ಷ ಕೆ.ಕೊಗ್ಗ ಗಾಣಿಗ, ಮಾಜಿ ಕಾರ್ಯದರ್ಶಿ ಕೆ.ಭಾಸ್ಕರ್, ಬಿ.ಜಿ.ನಾಗರಾಜ ಮೊದಲಾದವರು ಉಪಸ್ಥಿತರಿದ್ದರು.