ಕುಂದಾಪುರ ರೋಜರಿ ಸೊಸೈಟಿಗೆ ಇನ್ನೊಂದು ಸಹಕಾರಿ ಸಾಧನ ಪ್ರಶಸ್ತಿಯ ಗರಿ

JANANUDI.COM NETWORK


ಮಂಗಳೂರು,ನ.27: ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಉತ್ಕ್ರಷ್ಟ ಸಹಕಾರಿ ಸೌಧದಲ್ಲಿ ನಡೆದ 106ನೇ ಮಹಾಸಭೆಯಲ್ಲಿ ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಠ ಸಾಧನೆಯನ್ನು ಗುರುತಿಸಿ, ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿಯನ್ನು ಪತ್ರ ಮತ್ತು ಫಲಕ ನೀಡಿ ಸನ್ಮಾನಿಸಲಾಯಿತು.
ಸಂಸ್ಥೆಯ ಕಾರ್ಯಸಾಧನೆಯನ್ನು ಪ್ರಶಂಸಿಸಿ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರಾದ ಡಾ. ಎಮ್.ಎನ್. ರಾಜೇಂದ್ರಕುಮಾರ್ ಅವರು ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಜೋನ್ಸನ್ ಡಿ’ಅಲ್ಮೇಡಾ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಫಾಸ್ಕಲ್ ಡಿ’ಸೋಜಾ ಅವರನ್ನು ಗೌರವಿಸಿದರು. ಈ ಪ್ರಶಸ್ತಿ ಪತ್ರದಲ್ಲಿ, ಪ್ರಶಸಿ ಲಭಿಸಲು ಶ್ರಮಿಸಿದ ಎಲ್ಲಾ ಆಡಳಿತ ಮಂಡಳಿಯ ಸದಸ್ಯರಿಗೆ ಹಾಗೂ ನೌಕರ ವ್ರಂದದವರಿಗೆ ಹಾರ್ದಿಕವಾಗಿ ಅಭಿನಂದಿಸಲಾಗಿದೆ.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಸ್.ರಾಜು ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.