ಕೋಲಾರ: ಪಂಚಾಯತಿ ನೂತನ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್ ತಮ್ಮ ಗೆಲುವಿನ ಬೆಂಬಲಕ್ಕೆ ಸಚಿವ ಹೆಚ್. ನಾಗೇಶ್‍ಗೆ ಸನ್ಮಾನ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

 

 

ಕೋಲಾರ: ಪಂಚಾಯತಿ ನೂತನ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್ ತಮ್ಮ ಗೆಲುವಿನ ಬೆಂಬಲಕ್ಕೆ ಸಚಿವ ಹೆಚ್. ನಾಗೇಶ್‍ಗೆ ಸನ್ಮಾನ

 

 

ಕೋಲಾರ: ಕೋಲಾರ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್ ರವರು ತಮ್ಮ ಗೆಲುವಿಗೆ ಬೆಂಬಲ ನೀಡಿದ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ನಾಗೇಶ್ ರವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಗೆ ಹೆಚ್ಚಿನ ಅನುದಾನ ಪಡೆಯುವ ಬಗ್ಗೆ ಸಚಿವರೊಡನೆ ಚರ್ಚೆ ನಡೆಸಲಾಯಿತು.
ಮಾಜಿ ಸಚಿವರಾದ ಆರ್.ವರ್ತೂರು ಪ್ರಕಾಶ್, ಮುಖಂಡರಾದ ಬೆಗ್ಲಿ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಅರುಣ್ ಪ್ರಸಾದ್, ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಶ್ರೀನಿವಾಸ್. ಬಂಕ್ ಮಂಜು ಮತ್ತಿತರರು ಉಪಸ್ಥಿತರಿದ್ದರು.

ಸಿ.ಎಸ್.ವೆಂಕಟೇಶ್
ಕೋಲಾರ ಜಿಲ್ಲಾ ಪಂಚಾಯತಿ ಅಧ್ಯಕ್ಷರು
9980812265