ಕೋಲಾರ, ರೈತವಿರೋಧಿ ಭೂಸುಧಾರಣಾ, ಹಾಗೂ ವಿದ್ಯುತ್, ಕಾರ್ಮಿಕ, ಎಪಿಎಂಸಿ ಕಾಯಿದೆಗಳ ತಿದ್ದುಪಡಿ ಸುಗ್ರೀವಾಜ್ಞೆಯನ್ನು ವಾಪಸ್ಸು ಪಡೆಯಲು ಬ್ರಹತ್ ಹೋರಾಟ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ,ಸೆ.24 ರೈತವಿರೋಧಿ ಭೂಸುಧಾರಣಾ, ಹಾಗೂ ವಿದ್ಯುತ್, ಕಾರ್ಮಿಕ, ಎಪಿಎಂಸಿ ಕಾಯಿದೆಗಳ ತಿದ್ದುಪಡಿ ಎಪಿಎಂಸಿಯ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಸ್ಥಳೀಯ ಬಂಡವಾಳಶಾಹಿಗಳಿಗೆ ಹಂಚುವ ಹುನ್ನಾರ ನಡೆಸಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ವಾಪಸ್ಸು ಪಡೆಯಬೇಕೆಂದು ರೈತ ಸಂಘದಿಂದ ಮೆಕ್ಕೆ ವೃತ್ತದಲ್ಲಿ ರಸ್ತೆ ತಡೆ ಮಾಡಿ ಸರ್ಕಾರವನ್ನು ಒತ್ತಾಯಿಸಲಾಯಿತು.

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ನೂತನ ಭೂಸುಧಾರಣಾ ಕಾಯಿದೆಯು ರೈತ ವಿರೋಧಿಯಾಗಿರುವುದು ಅಕ್ಷರಶಹಃ ಸತ್ಯ ಎನ್ನುವ ಬಗ್ಗೆ ದೇಶದ ಮೂಲೆ ಮೂಲೆಯಲ್ಲಿಯೂ ವಿಚಾರಗಳು ಕೇಳಿಬರುತ್ತಿವೆ. ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ಕಾಯಿದೆಗಳನ್ನು ಜಾರಿಗೆ ಮುಂದಾಗಿರುವುದು ಇಡೀ ಸಂಕುಲವನ್ನು ನಾಶ ಮಾಡಿ ಕಾರ್ಪೋರೇಟ್ ಕಂಪನಿಗಳ ಪರವಾಗಿ ಸರ್ಕಾರಗಳಿರುವುದು ಎನ್ನುವುದನ್ನು ಸಾಭೀತುಪಡಿಸುವುದಕ್ಕೆ ಹೊರತು ರೈತರ ಪರವಾಗಿ ಅಲ್ಲ. ಸುಗ್ರೀವಾಜ್ಞೆ ಮೂಲಕ ಭೂಸುಧಾರಣಾ ಕಾಯಿದೆ ತಿದ್ದುಪಡಿ ತಂದಿರುವುದನ್ನು ಗಮನಿಸಿದರ ರೈತರಿಗೆ ಭೂಮಿ ಹಂಚಿಕೆಯಿರಲಿ. ಈಗ ಅವರ ಬಳಿ ಇರುವ ಭೂಮಿಯು ಉಳಿಯುವ ಲಕ್ಷಣವಿಲ್ಲ. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯಿಂದಾಗಿ ಕೃಷಿ ಜಮೀನಿನ ಮೇಲೆ ಕಪ್ಪು ಹಣ ಹೂಡಿಕೆಯಾಗಲಿದೆ. ರೈತರ ಹೆಸರಿನಲ್ಲಿ ಬಂಡವಾಳಶಾಹಿಗಳಿಗೆ, ಕಾರ್ಮಿಕರ ನೆಪದಲ್ಲಿ ಕೈಗಾರಿಕೋದ್ಯಮಗಳಿಗೆ ಸರ್ಕಾರ ಪರೋಕ್ಷವಾಗಿ ಸಹಾಯ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅದೇ ರೀತಿ ಎಪಿಎಂಸಿ ಕಾಯಿದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಮಾರುಕಟ್ಟೆಗೆ ಬರುವಂತಾಗಿದ್ದು, ಎಪಿಎಂಸಿಯ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಸ್ಥಳೀಯ ಬಂಡವಾಳಶಾಹಿಗಳಿಗೆ ಹಂಚುವ ಹುನ್ನಾರ ನಡೆಸಲಾಗುತ್ತಿದೆ. ದೇಶದ ಬಡ ಜನರಿಗೆ ಬೆಳಕು ಸಿಗಲಿ ಎಂದು ಭಾಗ್ಯಜ್ಯೋತಿ ಕುಟೀರ ಜ್ಯೋತಿ ಎಂದು ಯೋಜನೆಗಳನ್ನು ತರಲಾಗಿತ್ತು. ಈ ಯೋಜನೆಗಳು ಇನ್ನು ಮುಂದೆ ಇರುವುದಿಲ್ಲ. ರೈತರ ಪಂಪ್‍ಸೆಟ್‍ಗಳಿಗೆ ನೀಡುತ್ತಿರುವ ಉಚಿತ ವಿದ್ಯುತ್ ನಿಲ್ಲುತ್ತದೆ. 1961 ರಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಗೆ ಬಂದ ಮೇಲೆ ಭೂಮಿ ಹೆಚ್ಚು ಕೃಷಿಗೆ ಮೀಸಲಾಗಿತ್ತು, ಈಗಾಗಿ ಈ ಕೃಷಿ ಭೂಮಿಯನ್ನು ರೈತರು ಮತ್ತೊಬ್ಬರಿಗೆ ವರ್ಗಾಯಿಸುವ ಮುನ್ನ ಕೃಷಿ ಆದ್ಯತೆಯನ್ನು ಕಳೆದುಕೊಳ್ಳಬಾರದೆಂದು ಕಾಯ್ದೆಯನ್ನು ರೂಪಿಸಲಾಗಿತ್ತು. ಆದರೆ ಈಗ ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ರೈತರನ್ನು ಒಕ್ಕಲುತನದಿಂದ ಹೊರಹಾಕಿ ಖಾಸಗಿ ಕಂಪನಿಗಳಿಗೆ ಮತ್ತು ಬಂಡವಾಳದಾರರಿಗೆ ಕೃಷಿ ಭೂಮಿಯನ್ನು ವರ್ಗಾಯಿಸುವ ಕುತಂತ್ರವಾಗಿದೆ. ಈ ಕಾಯ್ದೆಯಿಂದಾಗಿ ರಾಜ್ಯದಲ್ಲಿ ಸುಮಾರು 80 ರಷ್ಟು ಸಣ್ಣ ರೈತರು ಮೊದಲ ಹಂತದಲ್ಲಿ ಕೃಷಿ ಕ್ಷೇತ್ರದಿಂದ ಕಣ್ಮರೆಯಾಗುತ್ತಾರೆ. 2ನೇ ಹಂತದಲ್ಲಿ ರೈತರ ಭೂಮಿಯನ್ನು ಕರಾರು ಪತ್ರಗಳ ಮೂಲಕ ಕಾರ್ಪೋರೇಟ್ ಕಂಪನಿಗಳು ಒತ್ತೆ ಇಟ್ಟುಕೊಳ್ಳುತ್ತವೆ ತದನಂತರ ರೈತರು ಗೇಣಿದಾರರಾಗಿ ಕೃಷಿಯಿಂದ ವಿಮುಕ್ತಿಗೊಳಿಸುವ ಹುನ್ನಾರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಮಾತನಾಡಿ ಸರ್ಕಾರಗಳು ರೈತ ಮತ್ತು ಕಾರ್ಮಿಕ ವಿರೋದಿ ಕಾಯ್ದೆಗಳನ್ನು ಜಾರಿ ಮಾಡಿ ರೈತರನ್ನು ಮತ್ತು ಕಾರ್ಮಿಕರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿವೆ. ಈ ಎಲ್ಲಾ ಕಾಯ್ದೆಗಳು ಒಂದು ವೇಳೆ ರೈತಪರವಾಗಿದ್ದರೆ ಈ ಕೋವಿಡ್ ಸಂದರ್ಭದಲ್ಲಿ ತರುವ ಅವಶ್ಯಕತೆ ಏನಿತ್ತು, ಇಷ್ಟು ಆತುರ ನಿರ್ದಾರಗಳೇಕೆ, ಹೋರಾಟಗಾರರಿಗೆ ಸೌಜನ್ಯಕ್ಕೂ ತಿಳುವಳಿಕೆ ಯಾಕೆ ನೀಡಲಿಲ್ಲ, ನಿಜವಾದ ಕರಡನ್ನು ಯಾಕೆ ಜನಭೀಪ್ರಾಯಕ್ಕೆ ಬಿಡಲಿಲ್ಲ ಎಂಬ ಪ್ರಶ್ನೆಗಳು ಕಾಡುತ್ತಿವೆ. ಇವೆಲ್ಲದರ ಜೊತೆಗೆ ಸರ್ಕಾರದ ವಾದ ಯುವ ರೈತರು ಕೃಷಿಗೆ ಆಸಕ್ತಿ ತೋರುತ್ತಿದ್ದಾರೆ ಆಗಾಗಿ ಈ ಕಾಯ್ದೆ ತಿದ್ದುಪಡಿ ಮಾಡಿದ್ದೇವೆ. ರೈತರ ವಾದ ಯುವ ರೈತರು ಕೃಷಿಗೆ ಆಸಕ್ತಿ ತೋರಿದರೆ ಸರ್ಕಾರದಲ್ಲಿ ಪಾಳು ಬಿದ್ದಿರುವ ಭೂಮಿಯನ್ನು ಗುತ್ತಿಗೆ ಮೇಲೆ ಕೊಡಬಹುದಿತ್ತಲ್ವಾ, ಕೃಷಿ ಮಾಡುವ ಒಂದು ಕುಟುಂಬಕ್ಕೆ 216 ಎಕರೆ ಕೃಷಿ ಜಮೀನು ಯಾಕೆ? ಇನ್ನೂ ಭೂಸುದಾರಣೆ ಕಾಯ್ದೆ ತಿದ್ದುಪಡಿಯಿಂದ ಭೂಮಿ ಕಳೆದುಕೊಂಡು ಉಳ್ಳವರ ಬಳಿ ಗೇಣಿದಾರರಾಗುತ್ತಾರೆ ಈ ತೊಂದರೆಗಳಿದ್ದರೂ ಯಾಕೆ ಸರ್ಕಾರ ನಿರ್ಲಕ್ಷ ಮಾಡುತ್ತಿವೆ. ಈ ಕಾಯ್ದೆಗಳಿಂದ ರೈತರಿಗೆ ಯಾವುದೇ ಅನುಕೂಲವಿಲ್ಲ ಸರ್ಕಾರ ಈ ರೈತ ವಿರೋದಿ ಕಾಯ್ದೆಗಳನ್ನು ಕೂಡಲೇ ಕೈಬಿಡಬೇಕು ಇಲ್ಲವಾದಲ್ಲಿ ಸೋಮವಾರ ಬಂದ್ ಜೊತೆಗೆ ಬೃಹತ್ ಹೋರಾಟ ನಡೆಸಬೇಕಾಗುತ್ತದೆಂದು ಎಚ್ಚರಿಕೆ ಕೊಟ್ಟರು

ಮನವಿ ಸ್ವೀಕರಿಸಿದ ಗ್ರೇಡ್ 2 ತಹಶೀಲ್ದಾರ್‍ರವರು ನಿಮ್ಮ ಈ ಮನವಿಯನ್ನು ಈ ಕೂಡಲೇ ಸರ್ಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.
ಈ ಹೋರಾಟದಲ್ಲಿ ಬಂಗವಾದಿ ನಾಗರಾಜಗೌಡ, ನಳಿನಿ.ವಿ ತಾಲ್ಲೂಕಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಬಂಗಾರಪೇಟೆ ತಾಲ್ಲೂಕಾದ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ನಾರಾಯಣಪ್ಪ ಹೊಳಲಿ, ಲೋಕೇಶ್, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ಸಹದೇವಣ್ಣ, ಮೀಸೆ ವೆಂಕಟೇಶಪ್ಪ, ರಂಜಿತ್, ಸುಪ್ರೀಂಚಲ, ಮೀಸೆ ವೆಂಕಟೇಶಪ್ಪ, ನಾರಾಯಣ, ಬೂದಿಕೋಟೆ ಹರೀಶ್, ಸಹದೇವಣ್ಣಾ, ಸುದೀಪ್ ಕುಮಾರ್, ಮಣಿ, ಸುನಿಲ್, ರಾಜೇಶ್, ಹರೀಶ್, ದನುಷ್, ಕಾರ್ತಿಕ್, ಮಿಥುನ್, ಚರಣ್, ಪುತ್ತೇರಿ ರಾಜು, ರವಿ, ಮುಂತಾದವರಿದ್ದರು,