ಜುಲೈ 14 ರಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಪದಾದಿಕಾರಿಗಳ ಪದಗ್ರಹಣ ಸಮಾರಂಭ.‌

JANANUDI NETWORK

ಜುಲೈ 14 ರಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಪದಾದಿಕಾರಿಗಳ ಪದಗ್ರಹಣ ಸಮಾರಂಭ.‌

 

ಕುಂದಾಪುರ, ಜು .೧೨:  ಬ್ಲಾಕ್ ಕಾಂಗ್ರೆಸ್ ಸಮಿತಿ, ಕುಂದಾಪುರ ಇದರ ನೂತನ ಅಧ್ಯಕ್ಷರು ಮತ್ತು ಪದಾದಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 14 ಆದಿತ್ಯವಾರ ಬೆಳಿಗ್ಗೆ 10ಗಂಟೆಗೆ ಕುಂದಾಪುರದ ಈಸ್ಟ್ ವೆಸ್ಟ್ ಸ್ಪೋರ್ಟ್ಸ್ ಕ್ಲಬ್ ಇಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡೀಸ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ವಿಷ್ಣುನಾಧನ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಜಯಮಾಲ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ನಿಯೋಜಿತ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮುಂತಾದ ನಾಯಕರು ಬಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ವಿನೋದ್ ಕ್ರಾಸ್ತಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.