ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ಗೆ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷ ಪುರಸ್ಕಾರ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ಗೆ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷ ಪುರಸ್ಕಾರ


ಕಾರ್ಕಳದ ಬಾಹುಬಲಿ ಬೆಟ್ಟದಲ್ಲಿ ಜರಗಿದ ಹತ್ತರ ಸಂಭ್ರಮದ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಾರಂಭದಲ್ಲಿ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಪ್ರೆಂಡ್ಸ್ (ರಿ.)ನ ಪರವಾಗಿ ವಿಶೇಷ ಪುರಸ್ಕಾರ ನೀಡಿ ಸಂಘದ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್‍ರವರನ್ನು ಸನ್ಮಾನಿಸಿದರು.
ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಪ್ರದೀಪ್ ಕುಮಾರ್ ಹೆಬ್ರಿ, ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್‍ನ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನರೂರು, ಮುದ್ರಾಡಿ ನಾಟ್ಕದೂರು ಶ್ರೀ ಆದಿಶಕ್ತಿ ಕ್ಷೇತ್ರದ ಧರ್ಮಯೋಗಿ ಮೋಹನ ಸ್ವಾಮೀಜಿ, ಪ್ರಸಿದ್ಧ ಹಾಸ್ಯ ಸಾಹಿತಿಗಳಾದ ಎಚ್. ದುಂಡಿರಾಜ್, ಎಂ.ಎಸ್. ನರಸಿಂಹ ಮೂರ್ತಿ, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮೀತಿಯ ಅಧ್ಯಕ್ಷರಾದ ಶೇಖರ್ ಅಜೆಕಾರು, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಪ್ರೆಂಡ್ಸ್ (ರಿ.)ನ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ನಂದಳಿಕೆ ಪ್ರಶಾಂತ್ ಪೂಜಾರಿ, ಕೋಶಾಧಿಕಾರಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಮೊದಲಾದವರಿದ್ದರು.