ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವನಮಹೋತ್ಸವ ಕಾರ್ಯಕ್ರಮ ‘ಗಿಡ ಬೆಳೆಸಿ ಪರಿಸರ ಉಳಿಸಿ’ ಅರಿವು ಮೂಡಿಸುವ ಕಾರ್ಯಕ್ರಮ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವನಮಹೋತ್ಸವ ಕಾರ್ಯಕ್ರಮ
‘ಗಿಡ ಬೆಳೆಸಿ ಪರಿಸರ ಉಳಿಸಿ’ ಅರಿವು ಮೂಡಿಸುವ ಕಾರ್ಯಕ್ರಮ

ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ಬೆಳ್ಮಣ್ಣು ಇದರ ಸಹಯೋಗದಲ್ಲಿ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್‍ಶಿಪ್ ಕಾರ್ಯಕ್ರಮದಡಿಯಲ್ಲಿ ಬೆಳ್ಮಣ್ಣು ದೇವಸ್ಥಾನ ಬಳಿ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಜರಗಿತು.
ಬೆಳ್ಮಣ್ಣು ವಲಯ ಅರಣ್ಯಾಧಿಕಾರಿ ಪ್ರಕಾಶ್ಚಂದ್ರ ‘ಗಿಡ ಬೆಳೆಸಿ ಪರಿಸರ ಉಳಿಸಿ’ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಉದ್ಯಮಿ ಪೆರಲ್‍ಪಾದೆ ದೇವೇಂದ್ರ ಶೆಟ್ಟಿ, ಬೋಳ ಪದವು ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಉಮೇಶ್ ಬಿ. ಮೂಲ್ಯ, ಅಬ್ಬನಡ್ಕ ಸತೀಶ್ ಪೂಜಾರಿ, ಉಪಾಧ್ಯಕ್ಷ ಹರೀಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಕೋಶಾಧಿಕಾರಿ ಹರಿಪ್ರಸಾದ್ ಆಚಾರ್ಯ, ಸುನೀತಾ ಪಿಂಟೋ, ಸುಂದರ ದೇವಾಡಿಗ ಮೊದಲಾದವರಿದ್ದರು.