ಬೆಳ್ಮಣ್ಣು ಹೋಬಳಿ ಫಟಕ ಕನ್ನಡ ಸಾಹಿತ್ಯ ಪರಿಷತ್ತು : ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಸನ್ಮಾನ

ವರದಿ:ವಾಲ್ಟರ್ ಮೊಂತೇರೊ

ಬೆಳ್ಮಣ್ಣು ಹೋಬಳಿ ಫಟಕ ಕನ್ನಡ ಸಾಹಿತ್ಯ ಪರಿಷತ್ತು : ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾರ್ಕಳ ತಾಲೂಕು ಬೆಳ್ಮಣ್ಣು ಹೋಬಳಿ ಘಟಕ ಮತ್ತು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಯುಕ್ತ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಅಬ್ಬನಡ್ಕ ಶರತ್ ಆಚಾರ್ಯ (580 ಅಂಕ) ಮತ್ತು ಬೋಳ ಶ್ರದ್ಧಾ ಪೂಜಾರಿ (532 ಅಂಕ) ಇಬ್ಬರು ವಿದ್ಯಾರ್ಥಿಗಳನ್ನು ಕಾರ್ಕಳ ತಾಲೂಕು ಕಸಾಪ ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಸನ್ಮಾನಿಸಿದರು.
ಕಾರ್ಕಳ ಎಸ್.ವಿ.ಟಿ. ಕಾಲೇಜಿನ ಉಪನ್ಯಾಸಕರಾದ ದೇವದಾಸ್ ಕೆರೆಮನೆ, ಯುವ ಸಾಹಿತಿ ಹಾಗೂ ಸಾಣೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ದರ್ಜೆ ಸಹಾಯಕ ಧರಣೇಂದ್ರ ಕುಮಾರ್, ಕಸಾಪ ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್, ಕೆದಿಂಜೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿರೋಟ್ಟು ದಿನೇಶ್ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಕಸಾಪ ಬೆಳ್ಮಣ್ಣು ಹೋಬಳಿ ಘಟಕದ ಪದಾಧಿಕಾರಿಗಳಾದ ನಂದಳಿಕೆ ಪ್ರಶಾಂತ್ ಪೂಜಾರಿ, ಕಾಸ್ರಬೈಲು ಸುರೇಶ್ ಪೂಜಾರಿ, ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಮೊದಲಾದವರು ಉಪಸ್ಥಿತಿತರಿದ್ದರು.