ಭಂಡಾರ್ಕಾರ್ಸ್‍ಕಾಲೇಜಿನ ವಾರ್ಷಿಕೋತ್ಸವ ದಿನಾಚರಣೆ ದತ್ತಿ ಬಹುಮಾನ ವಿತರಣಾ ಕಾರ್ಯಕ್ರಮ – ಜೀವನದಲ್ಲಿ ಶಿಕ್ಷಣ ಅತಿ ಮುಖ್ಯ : ಸುರೇಶ ಮರಾಕಲ

JANANUDI.COM NETWORK

 

ಭಂಡಾರ್ಕಾರ್ಸ್‍ಕಾಲೇಜಿನ ವಾರ್ಷಿಕೋತ್ಸವ ದಿನಾಚರಣೆ ದತ್ತಿ ಬಹುಮಾನ ವಿತರಣಾ ಕಾರ್ಯಕ್ರಮ – ಜೀವನದಲ್ಲಿ ಶಿಕ್ಷಣ ಅತಿ ಮುಖ್ಯ : ಸುರೇಶ ಮರಾಕಲ

 

 

 

ಕುಂದಾಪುರ: ಪೆಬ್ರುವರಿ1ರಂದು ಇಲ್ಲಿನ ಭಂಡಾರ್ಕಾರ್ಸ್‍ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ದಿನಾಚರಣೆಯ ದತ್ತಿ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ ಮರಾಕಲ ಮಾತನಾಡಿ ಜೀವನದಲ್ಲಿ ಶಿಕ್ಷಣ ಅತಿ ಮುಖ್ಯ. ಗುರುವಿನ ಋಣ ತೀರಿಸುವುದು ಅತಿ ಕಷ್ಟ. ಅಲ್ಲದೇ ಜೀವನದಲ್ಲಿ ಪೋಷಕರು ಬಹುಮುಖ್ಯ ಪಾತ್ರ ವಹಿಸುತ್ತಾರೆ. ಅವರೆ ಮಕ್ಕಳಿಗೆ ನಿಜವಾದ ಸ್ನೇಹಿತರುಎಂದು ಹೇಳಿದರು.
ಕಾರ್ಯಕ್ರಮದಲ್ಲಿಭಂಡಾರ್ಕಾರ್ಸ್‍ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದಡಾ. ಹೆಚ್. ಶಾಂತಾರಾಂ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ವಂದಿಸಿದರು. ಗ್ರಂಥಪಾಲಕ ಶ್ರೀ ಆನಂದ ಸ್ವಾಗತಿಸಿದರು. ವಿದ್ಯಾರ್ಥಿನಿ ಗೌತಮಿಗಾಣಿಗ ಕಾರ್ಯಕ್ರಮ ನಿರ್ವಹಿಸಿದರು.