ಭಂಡಾರ್ಕಾರ್ಸ್‍- ಪದ್ಮಭೂಷಣ ಆರ್.ಎನ್.ಶೆಟ್ಟಿ (ರಾಮ ನಾಗಪ್ಪ ಶೆಟ್ಟಿ) ಅವರಿಗೆ ಚಿರಶಾಂತಿಯನ್ನುಕೋರಿ ಶೃದ್ಧಾಂಜಲಿ ಸಭೆ ನಡೆಯಿತು.

JANANUDI.COM NETWOEK

ಕುಂದಾಪುರ: ದಿನಾಂಕ 17ರಂದು ಭಂಡಾರ್ಕಾರ್ಸ್‍ಕಾಲೇಜಿನಲ್ಲಿಇಂದು ಬೆಳಗಿನ ಜಾವ ದೈವಾಧೀನರಾದ ಉದ್ಯಮಿ, ಪದ್ಮಭೂಷಣ ಆರ್.ಎನ್.ಶೆಟ್ಟಿ (ರಾಮ ನಾಗಪ್ಪ ಶೆಟ್ಟಿ) ಅವರಿಗೆ ಚಿರಶಾಂತಿಯನ್ನುಕೋರಿ ಶೃದ್ಧಾಂಜಲಿ ಸಭೆ ನಡೆಯಿತು.
ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ರೇಖಾ ಬನ್ನಾಡಿ ಮಾತನಾಡಿ ಪದ್ಮಭೂಷಣ ಆರ್.ಎನ್.ಶೆಟ್ಟಿಅವರು ಸಮಾಜಕ್ಕೆದೇಶಕ್ಕೆ ಮಾದರಿಯಾಗಿ ನಿಂತವರು. ಅನೇಕ ಶಿಕ್ಷಣ ಸಂಸ್ಥೆಗಳು ಅವರದೇಣಿಗೆ ಪಡೆದಿವೆ. ಅವರುಉದ್ಯಮಿ ಅಷ್ಟೇ ಅಲ್ಲದೇ ಸಮಾಜಮುಖಿತಾದ ಜೀವಪರ ಚಿಂತಕರಾದ ಅವರು ಸಮಾಜವನ್ನು ಕಟ್ಟುವಲ್ಲಿ ತಮ್ಮಕೊಡುಗೆಯನ್ನು ನೀಡಿದವರು. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇವೆ. ಅವರ ಪತ್ನಿಗೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಅಧಿಕಾರಿ ಪ್ರೊ.ರಾಮಚಂದ್ರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಧ್ಯಾಪಕರು ಪದ್ಮಭೂಷಣ ಆರ್.ಎನ್.ಶೆಟ್ಟಿಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿ ಶೃದ್ಧಾಂಜಲಿ ಸಲ್ಲಿಸಿ ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು ಕೋರಲಾಯಿತು.