ಮಕ್ಕಳ ದಿನಾಚರಣೆ ಅಂಗವಾಗಿ ವಾಸವಿ ಯುವಜನ ಸಂಘದ ವತಿಯಿಂದ ಲೇಖನ ಸಾಮಗ್ರಿ ವಿತರಣೆ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

ಮಕ್ಕಳ ದಿನಾಚರಣೆ ಅಂಗವಾಗಿ ವಾಸವಿ ಯುವಜನ ಸಂಘದ ವತಿಯಿಂದ ಲೇಖನ ಸಾಮಗ್ರಿ ವಿತರಣೆ
ಶ್ರೀನಿವಾಸಪುರದ ಕರ್ನಾಟಕ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗುರುವಾರ ಮಕ್ಕಳ ದಿನಾಚರಣೆ ಅಂಗವಾಗಿ ವಾಸವಿ ಯುವಜನ ಸಂಘದ ವತಿಯಿಂದ ಲೇಖನ ಸಾಮಗ್ರಿ ವಿತರಿಸಲಾಯಿತು. ಸಂಘದ ಪದಾಧಿಕಾರಿಗಳಾದ ಪೃಥ್ವಿ, ನಾಗಕಿರಣ್‌, ವೆಂಕಟ್‌ ಕಾರ್ತಿಕ್, ಚಿನ್ಮಯ, ರಘು, ಮುಖ್ಯ ಶಿಕ್ಷಕ ಸಿ.ಮಹೇಶ್‌, ಶಿಕ್ಷಕ ಪಿ.ಎನ್‌.ನಾರಾಯಣಸ್ವಾಮಿ ಇದ್ದರು.