ಶ್ರೀನಿವಾಸಪುರದಲ್ಲಿ ಕನ್ಯಕಾ ಪರಮೇಶ್ವರಿ ದೇವಾಲಯದ 28ನೇ ವಾರ್ಷಿಕೋತ್ಸವದ ಆಚರಣೆ : ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ 

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಕನ್ಯಕಾ ಪರಮೇಶ್ವರಿ ದೇವಾಲಯದ 28ನೇ ವಾರ್ಷಿಕೋತ್ಸವದ ಆಚರಣೆ : ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ 

ಶ್ರೀನಿವಾಸಪುರ: ಪಟ್ಟಣದ ಕನ್ಯಕಾ ಪರಮೇಶ್ವರಿ ದೇವಾಲಯದ 28ನೇ ವಾರ್ಷಿಕೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು. ಅದರ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

  ಅರ್ಚಕ ಸುಬ್ರಮಣಿ ಅವರ ನೇತೃತ್ವದಲ್ಲಿ ದೇವಾಯದ ಸಭಾಂಗಣದಲ್ಲಿ ಹೋಮ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಮಂತ್ರ ಘೋಷದೊಂದಿಗೆ ದೇವಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.

  ಪಟ್ಟಣದ ವೈಶ್ಯರು ಮಾತ್ರವಲ್ಲದೆ ಇತರ ಸಮುದಾಯದ ಜನರೂ ವಿಶೇಷ ಪೂಜೆಯಲ್ಲಿ ಭಾಗವಹಸಿ ದೇವಿ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು

  ಮುಖಂಡರಾದ ಕೆ.ವಿ.ಸೂರ್ಯನಾರಾಯಣಶೆಟ್ಟಿ, ವೈ.ಆರ್‌.ಶ್ರೀನಿವಾಸಯ್ಯ, ಶ್ರೀನಾಥ್‌, ಕೇದಾರನಾಥ್‌್, ರಾಮನಾಥ್‌, ಕೆ.ಸತ್ಯನಾರಾಯಣ, ಪದ್ಮೇಶ್‌, ಆರ್‌.ಬಿ.ನಾಗೇಂದ್ರ ಬಾಬು ಕಾರ್ಯಕ್ರಮದಲ್ಲಿ ಭಾಗವಹಿಸದ್ದರು.