ಶ್ರೀನಿವಾಸಪುರದಲ್ಲಿ  ಪುರಸಭಾ ಮಾರುಕಟ್ಟೆ ವಾಣಿಜ್ಯ ಸಂಕೀರ್ಣವನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಉದ್ಘಾಟಿಸಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

ಶ್ರೀನಿವಾಸಪುರದಲ್ಲಿ  ಪುರಸಭಾ ಮಾರುಕಟ್ಟೆ ವಾಣಿಜ್ಯ ಸಂಕೀರ್ಣವನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಉದ್ಘಾಟಿಸಿದರು.

 

ಶ್ರೀನಿವಾಸಪುರ: ಪಟ್ಟಣದಲ್ಲಿ ರೂ.6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪುರಸಭಾ ಮಾರುಕಟ್ಟೆ ವಾಣಿಜ್ಯ ಸಂಕೀರ್ಣವನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಉದ್ಘಾಟಿಸಿದರು.

  ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌, ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಮೋಹನ್‌ ಕುಮಾರ್‌, ಆರೋಗ್ಯ ನಿರೀಕ್ಷಕ ರಮೇಶ್‌, ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಘವೇಂದ್ರ ಪ್ರಸಾದ್‌, ಪುರಸಭಾ ಸದಸ್ಯರಾದ ಬಿ.ವೆಂಕಟರೆಡ್ಡಿ, ಕೆ.ಜಯಲಕ್ಷ್ಮಿ ಸತ್ಯನಾರಾಯಣ, ಅನೀಸ್‌, ಸರ್ದಾರ್‌, ನಾಗೇಶ್‌, ಸಂಜಯ್‌ ಸಿಂಗ್‌, ಎಸ್‌.ರಾಜು ಅಪ್ಪೂರ್‌, ಉನಿಕಿಲಿ ನಾಗರಾಜ್‌, ಗುತ್ತಿಗೆದಾರ ಚೌಡರೆಡ್ಡಿ ಇದ್ದರು.

  ಭೇಟಿ: ಪುರಸಭಾ ಮಾರುಕಟ್ಟೆ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿದ ಬಳಿಕ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ, ಆಹಾರ ತಯಾರಿಕೆ ಹಾಗೂ ವಿತರಣೆ ಬಗ್ಗೆ ಪರಿಶೀಲಿಸಿದರು. ಅಡುಗೆ ಮನೆಯಲ್ಲಿ ಶುಚಿತ್ವ ಹಾಗೂ ಆಹಾರದ ರುಚಿ ಕಾಪಾಡಿಕೊಂಡು ಹೋಗುವಂತೆ ಸಿಬ್ಬಂದಿಗೆ ಸಲಹೆ ನೀಡಿದರು.