ಶ್ರೀನಿವಾಸಪುರ,ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣಗೆ ಬಾ.ಸ. ಪ.ಪೂ.ಕಾ.ಆವರಣದಲ್ಲಿ ರೋಟರಿ ಸಂಸ್ಥೆಯಿಂದ ಗಿಡ ನೆಡುವ ಕಾರ್ಯಕ್ರಮ: ತಾ. ಪಂ. ಇ.ಒ. ಆನಂದ್ ಚಾಲನೆ.

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಪ್ರಯುಕ್ತ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ ಸುತ್ತಲೂ ರೋಟರಿ ಸಂಸ್ಥೆ, ಶ್ರೀನಿವಾಸಪುರ ಇವರ ವತಿಯಿಂದ ಗಿಡ ನೆಡುವ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಇ.ಒ. ಆನಂದ್ ಚಾಲನೆ ನೀಡಿದರು.
ಈ ಸಮಯದಲ್ಲಿ ಶ್ರೀನಿವಾಸಪುರ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಶಿವಮೂರ್ತಿ, ಮಾಧ್ಯಮ ಕಾರ್ಯದರ್ಶಿ ಎನ್. ಕೃಷ್ಣಮೂರ್ತಿ, ಖಜಾನ್ಸಿ ಎಸ್.ಎನ್. ಮಂಜುನಾಥರೆಡ್ಡಿ, ಸದಸ್ಯರಾದ ಕುಲಕರ್ಣಿ, ಮತ್ತು ಗೊರವಿಮಾಕಲಹಳ್ಳಿ ಶ್ರೀನಿವಾಸ ಹಾಜರಿದ್ದರು.