ಶ್ರೀನಿವಾಸಪುರ: ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಸ್‌.ವಿನೋದ್ ಕುಮಾರ್‌ ಆಯ್ಕೆ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ: ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಸ್‌.ವಿನೋದ್ ಕುಮಾರ್‌ ಆಯ್ಕೆ
 
ಶ್ರೀನಿವಾಸಪುರ: ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಸ್‌.ವಿನೋದ್ ಕುಮಾರ್‌ ಆಯ್ಕೆಯಾಗಿದ್ದಾರೆ.
  ಈ ಹಿಂದೆ ಅಧ್ಯಕ್ಷರಾಗಿದ್ದ ಜಮೀರ್‌ ಪಾಷ  ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಒಟ್ಟು 17 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಎಸ್‌.ವಿನೋದ್‌ ಕುಮಾರ್‌ 11 ಮತ ಪಡೆದು ಚುನಾಯಿತರಾದರು. ಅವರ ಪ್ರತಿ ಸ್ಪರ್ಧಿ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಎಸ್‌.ಎಂ.ಮುನಿವೆಂಕಟಪ್ಪ 6 ಮತ ಪಡೆದು ಪರಾಭವಗೊಂಡರು.
 ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ರಾಮಕೃಷ್ಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಿಡಿಒ ಕೃಷ್ಣ ಇದ್ದರು. ಕಾಂಗ್ರೆಸ್‌ ಮುಖಂಡ ಶೇಷಾಪುರ ಗೋಪಾಲ್‌ ಗೆದ್ದ ಅಭ್ಯರ್ಥಿಗೆ ಶುಭ ಹಾರೈಸಿದರು.