ಶ್ರೀನಿವಾಸಪುರ: ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಾಲಾವತಿ ಆಯ್ಕೆಯಾಗಿದ್ದಾರೆ.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ: ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಾಲಾವತಿ ಆಯ್ಕೆಯಾಗಿದ್ದಾರೆ.
ಶ್ರೀನಿವಾಸಪುರ:  ಈ ಹಿಂದೆ ಉಪಾಧ್ಯಕ್ಷೆಯಾಗಿದ್ದ ಮಂಜುಳ ರಾಮಚಂದ್ರಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಹಾಜರಿದ್ದ ಸದಸ್ಯರು ಕೈ ಎತ್ತುವುದರ ಮೂಲಕ ಬಾಲಾವತಿ ಅವರನ್ನು ಆಯ್ಕೆ ಮಾಡಿದರು.
  ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್‌ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಇದ್ದರು.
  ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ವಿ.ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಆರ್.ಜಿ.ನರಸಿಂಹಯ್ಯ, ಮಂಜುನಾಥರೆಡ್ಡಿ, ರಾಜಶೇಖರರೆಡ್ಡಿ, ಕೃಷ್ಣಾರೆಡ್ಡಿ, ಮುಖಂಡ ಗೋಪಾಲರೆಡ್ಡಿ ಬಾಲಾವತಿ ಅವರನ್ನು ಭೇಟಿಯಾಗಿ ಅಭಿನಂದಿಸಿದರು.