ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಕೋಲಾರ ಜಿಲ್ಲೆಯ 10 ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ:- ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಇವರ ಸಹಯೋಗದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರನ್ನು ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ ವಾನಳ್ಳಿ ಮತ್ತಿತರರು ಸನ್ಮಾನಿಸಿದರು.
ದಿವಂಗತ ಕೆ.ಆರ್.ಕೃಷ್ಣಸ್ವಾಮಿ ಅವರ ನೆನಪಿನಲ್ಲಿ ಕೋಲಾರದ ಸಾಕ್ಷಿ ದಿನಪತ್ರಿಕೆಯ ಜಿಲ್ಲಾ ವರದಿಗಾರ ಡಿ.ಎಸ್.ಮಂಜುನಾಥ್, ಜಿ.ನಾರಾಯಣಸ್ವಾಮಿ ಅವರ ನೆನಪಿನಲ್ಲಿ ಕೆ.ಜಿ.ಎಫ್‍ನ ಸುವರ್ಣ ಟೈಮ್ಸ್ ಆಫ್ ಕರ್ನಾಟಕ ತಾಲೂಕು ವರದಿಗಾರ ಶ್ರೀಧರ್ ಫಿಳ್ಳೈ, ಬಿ.ವಿ.ನರಸಿಂಹಮೂರ್ತಿ ಅವರ ನೆನಪಿನಲ್ಲಿ- ಕೋಲಾರದ ಕೋಲಾರ ಕಿರಣ ಪತ್ರಿಕೆಯ ಸಂಪಾದಕ ಎಂ.ಡಿ.ಚಾಂದ್‍ಪಾಷ, ಎಂ.ಮಲ್ಲೇಶ್ ನೆನಪಿನಲ್ಲಿ-ಕೋಲಾರದ ವಿಜಯಕರ್ನಾಟಕ ಜಿಲ್ಲಾ ವರದಿಗಾರ ವೆಂ.ಸುನೀಲ್‍ಕುಮಾರ್, ಬಿ.ಎನ್.ಗುರುಪ್ರಸಾದ್ ನೆನಪಿನಲ್ಲಿ- ಮುಳಬಾಗಿಲಿನ ವಿಜಯಕರ್ನಾಟಕ ತಾಲೂಕು ವರದಿಗಾರ ಪ್ರಕಾಶ, ಹೆಚ್.ಎನ್.ಸೋಮಶೇಖರಗೌಡ ನೆನಪಿನಲ್ಲಿ- ಬಂಗಾರಪೇಟೆಯ ವಿಜಯವಾಣಿ ಗ್ರಾಮಾಂತರ ವರದಿಗಾರ ಜಿ.ನಾಗರಾಜ್, ಬಿ.ಆರ್ಮುಗಂ ನೆನಪಿನಲ್ಲಿ- ಕೋಲಾರದ ನ್ಯೂಸ್ 18-ಕನ್ನಡ ಜಿಲ್ಲಾ ವರದಿಗಾರ ಜಿ.ರಘುರಾಜ್, ಸಿ.ಎಂ.ರಂಗಾರೆಡ್ಡಿ ನೆನಪಿನಲ್ಲಿ- ಶ್ರೀನಿವಾಸಪುರದ ಅಂತರಗಂಗೆ ತಾಲೂಕು ವರದಿಗಾರ ಆರ್.ಬಾಬು, ವಿ.ಎಂ.ನಾಗಪ್ಪ ಅವರ ನೆನಪಿನಲ್ಲಿ- ಕೋಲಾರಪ್ರಭ ಜಿಲ್ಲಾ ವರದಿಗಾರ ಕೆ.ಎಸ್.ಸುದರ್ಶನ್ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಡಿ.ಉಮಾಪತಿ, ಕೆ.ಯು.ಡಬ್ಲ್ಯೂ.ಜೆ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ವಿ.ಮುನಿರಾಜು, ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್‍ಕುಮಾರ್ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು, ಪತ್ರಕರ್ತರು ಉಪಸ್ಥಿತರಿದ್ದರು.