ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ವಿಭಾಗದ ವತಿಯಿಂದ ವಿಎಲ್ಎಸ್ಐ ಸಿಸ್ಟಮ್ ವಿನ್ಯಾಸ

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್  ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ವಿಭಾಗದ ವತಿಯಿಂದ ವಿಎಲ್ಎಸ್ಐ ಸಿಸ್ಟಮ್ ವಿನ್ಯಾಸ ಎಂಬ ವಿಷಯದ ಬಗ್ಗೆ ಒಂದು ದಿನದ ತಾಂತ್ರಿಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ  ಸಿಐಯೆಂಟ್ ಸೆಮಿಕಂಡಕ್ಟರ್ ಇದರ ಪ್ರೋಗ್ರಾಮ್ ಮ್ಯಾನೇಜರ್ ಆಗಿರುವ ರಿಝ್ವಾನ್ ರೋಶನ್ ಹಾಗೂ ಕಾರ್ಮಿಕ್  ಡಿಸೈನ್ ಪ್ರೈವೇಟ್ ಲಿಮಿಟೆಡ್ ಇದರ ನಿರ್ದೇಶಕರಾದ ದಿಲೀಪ್ ಮೊಗವೀರ ಇವರು ಆಗಮಿಸಿದ್ದು ವಿಧ್ಯಾರ್ಥಿಗಳಿಗೆ ಕಾರ್ಯಗಾರ ನಡೆಸಿಕೊಟ್ಟರು. ಸೆಮಿಕಂಡಕ್ಟರ್ ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ತಿಳಿಸುತ್ತ, ಚಿಪ್ ತಯಾರಿಸುವ ಬಗೆ, ಸೆಮಿಕಂಡಕ್ಟರ್ ಕಂಪೆನಿಯಲ್ಲಿನ ಅವಕಾಶಗಳನ್ನು ಸವಿವರವಾಗಿ ತಿಳಿಸಿಕೊಟ್ಟರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅತಿಥಿಗಳು ಮುಂದಿನ ಹತ್ತು ವರ್ಷಗಳಲ್ಲಿ ಸೆಮಿಕಂಡಕ್ಟರ್ ತಂತ್ರಜ್ಞಾನ ಯಾವ ಮಟ್ಟದಲ್ಲಿ ಅಭಿವೃದ್ಧಿ ಹೊಂದಲಿದೆ ಹಾಗೂ ಅತಿಹೆಚ್ಚಿನ ಅವಕಾಶಗಳನ್ನು ಕಲ್ಪಿಸಿದೆ ಹಾಗಾಗಿ ಎಲೆಕ್ಟ್ರಾನಿಕ್ ವಿಭಾಗವನ್ನು ಆಯ್ಕೆ ಮಾಡಿದ ನೀವು ಅದರ ಬಗ್ಗೆ ಹೆಮ್ಮೆಯಿಂದ ಇರಬೇಕು ಹಾಗು ಹೊಸ ಹೊಸ ತಂತ್ರಜ್ಞಾನಗಳನ್ನು ಕಲಿಯುವುದರಲ್ಲಿ ಹೆಚ್ಚಿನ ಆಸಕ್ತಿ ಹೊಂದಬೇಕು ಎಂದು ವಿಧ್ಯಾರ್ಥಿಗಳನ್ನು ಹುರಿದುಂಬಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ|ಅಬ್ದುಲ್ ಕರೀಮ್, ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಬಾಲನಾಗೇಶ್ವರ್, ಆರ್ಟಿಫ಼ಿಶಿಯಲ್ ಇಂಟೆಲಿಜೆನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊಫ಼ೆಸರ್ ವರುಣಕುಮಾರ್, ಸಿಬ್ಬಂದಿ ವರ್ಗ, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.ಪ್ರಾಧ್ಯಾಪಕಿ ಸುಷ್ಮ  ಶೆಟ್ಟಿ ಸ್ವಾಗತಿಸಿ ,  ವಿಧ್ಯಾರ್ಥಿನಿ ಸಿಂಚನ ದೇವಾಡಿಗ ವಂದಿಸಿ , ಫ಼ಾತಿಮ ನಿರೂಪಿಸಿದರು.

ಸಂವಿಧಾನದ ಆಶಯದಂತೆ ನಡೆದುಕೊಂಡಾಗ ಸಾಮಾಜಿಕ ಬದಲಾವಣೆ ಸಾಧ್ಯವಾಗುತ್ತದೆ : ಶಾಸಕ ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ: ಸಂವಿಧಾನದ ಆಶಯದಂತೆ ನಡೆದುಕೊಂಡಾಗ ಸಾಮಾಜಿಕ ಬದಲಾವಣೆ ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ದೊಡ್ಡಬಂದಾರ್ಲಹಳ್ಳಿಯಲ್ಲಿ ಮಂಗಳವಾರ, ಒಟ್ಟು ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಅಂಬೇಡ್ಕರ್ ಸಮುದಾಯ ಭವನ, ಅಂಗನವಾಡಿ ಕಟ್ಟಡ ಹಾಗೂ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಸ್ಥರು ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ತಾಲ್ಲೂಕಿನ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿಸಲಾಗುತ್ತಿದೆ. ಇನ್ನೊಂದು ವರ್ಷದಲ್ಲಿ ಎತ್ತಿನ ಹೋಳೆ ನೀರು ಹರಿದುಬರಲಿದೆ. ಆಗ ನೀರಿನ ಸಮಸ್ಯೆ ನೀಗುತ್ತದೆ. ಜಲ್ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ಮೂಲಕ ನೀರು ಪೂರೈಸಲಾಗುವುದು ಎಂದು ಹೇಳಿದರು.
ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗಿದೆ. ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಬಡವರಿಗೆ ಮನೆ ನಿರ್ಮಿಸಿ ಕೊಡಲಾಗಿದೆ. ಎಸ್ಸಿ ಎಸ್ಟಿ ಸಮುದಾಯದ ರೈತರು ಕೃಷಿ ಕೊಳವೆ ಬಾವಿ ನಿರ್ಮಿಸಲು ಅರ್ಜಿ ನೀಡಿದಲ್ಲಿ, ಸೌಲಭ್ಯ ಕಲ್ಪಿಸಲಾಗುವುದು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌತಮಿ ಮುನಿರಾಜು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಮುಖಂಡರಾದ ಎನ್.ಮುನಿಸ್ವಾಮಿ, ತಿಮ್ಮಯ್ಯ, ಸಂಜಯ್ ರೆಡ್ಡಿ, ವಿ.ಆಂಜನೇಯಲು, ಮುಳಬಾಗಿಲಪ್ಪ, ವಿ.ಮುನಿಯಪ್ಪ, ಸಿಆರ್‍ಪಿ ಟಪರಾಜ್ ಇದ್ದರು.

ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನಿಡುವುದರ ಮೂಲಕ ಸ್ಥಿರ ಸರ್ಕಾರ ರಚಿಸಲು ಸಹಕರಿಸಬೇಕು : ಸಚಿವ ಆರ್.ಅಶೋಕ್

ಶ್ರೀನಿವಾಸಪುರ: ಮತದಾರರು ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನಿಡುವುದರ ಮೂಲಕ ಸ್ಥಿರ ಸರ್ಕಾರ ರಚಿಸಲು ಸಹಕರಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಪಟ್ಟಣದ ಮುಳಬಾಗಿಲು ವೃತ್ತದಿಂದ ಎಂಜಿ ರಸ್ತೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ರೋಡ್ ಷೋನಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಮತದಾರರು ಸುಭದ್ರ ಸರ್ಕಾರ ಬಯಸುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಬಿಜೆಪಿ ಅವರ ಮೊದಲ ಆಯ್ಕೆಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ 70, ಜೆಡಿಎಸ್ 20 ಸ್ಥಾನ ಗೆದ್ದರೆ ಹೆಚ್ಚು. ಇನ್ನು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸುರಕ್ಷಿತ ಕ್ಷೇತ್ರದ ಹುಡುಕಾಟದಲ್ಲಿ ನಿರತರಾಗಿದ್ದಾರೆ. ಅವರು ಕೋಲಾರದಲ್ಲಿ ಗೆಲ್ಲುವ ಭರವಸೆ ಇಲ್ಲ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದುಬರುತ್ತಾರೆ ಎಂದು ಹೇಳಿದರು.
ಶಾಸಕ ಕೆ.ಆರ್.ರಮೇಶ್ ಕುಮಾರ್, ಕಾಂಗ್ರೆಸ್ ಮುಖಂಡರು ಮೂರು ತಲೆಮಾರಿಗೆ ಸಾಕಾಗುಷ್ಟು ಸಂಪತ್ತು ಗಳಿಸಿದ್ದಾರೆ ಎಂದು ಹೇಳಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೈಲಿಗೆ ಹೋಗದಂತೆ ನೋಡಿಕೊಂಡರೆ ಸಾಕು. ತಾಲ್ಲೂಕು ರೆಡ್ಡಿ, ಸ್ವಾಮಿ ನಾಯಕತ್ವದಲ್ಲಿ ಆಭಿವೃದ್ಧಿ ಶೂನ್ಯವಾಗಿದೆ. ಈ ಬಾರಿ ಮತದಾರರು ಬದಲಾವಣೆ ಬಯಸಿದ್ದಾರೆ. ಅದರ ಲಾಭ ಬಿಜೆಪಿಗೆ ದೊರೆಯಲಿದೆ ಎಂದು ಹೇಳಿದರು.
ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಮಾತನಾಡಿ, ತಾಲ್ಲೂಕಿನಲ್ಲಿ ಶಾಸಕರು ಹಾಗೂ ಮಾಜಿ ಶಾಸಕರಿಗೆ ವಯಸ್ಸಾಗಿದೆ. ಅವರಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯವಿಲ್ಲ. ಹಾಗಾಗಿ ಮತದಾರರು ಅವರನ್ನು ಮನೆಗೆ ಕಳಿಸಬೇಕು. ಮಾತಿನಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಎಂಬುದನ್ನು ಶಾಸಕರು ಅರಿಯಬೇಕು. ಅವರು ನೀಡಿದ್ದ ಯಾವುದೇ ಭರವಸೆ ಈಡೇರಿಲ್ಲ. ಆದರೆ ಬಿಜೆಪಿ ಸರ್ಕಾರದ ಸಾಧನೆ ಪರಿಗಣಿಸಿ ಮತದಾರರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ದೇಶದ ಘನತೆ ಹೆಚ್ಚಿಸಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಭಿವೃದ್ಧಿ ಯೋಜನೆಗಳು ಸಮಾಜದ ಕಟ್ಟ ಕಡೆ ವ್ಯಕ್ತಿಯ ಅಭ್ಯುದಯಕ್ಕೆ ಪೂರಕವಾಗಿವೆ. ರಾಜ್ಯ ಸರ್ಕಾರದ ಸಾಧನೆ ಜನರ ಗಮನ ಸೆಳೆದಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಅಶೋಕರೆಡ್ಡಿ, ಮುಖಂಡರಾದ ಬಿ.ಪಿ.ವೆಂಕಟಮುನಿಯಪ್ಪ, ಆರ್.ಎನ್.ಚಂದ್ರಶೇಖರ್, ರಾಮಾಂಜಿ, ರಮೇಶ್, ಜಯಣ್ಣ, ನಾರಾಯಣಸ್ವಾಮಿ, ಷಫಿವುಲ್ಲಾ, ನಾಗರಾಜ್, ರೆಡ್ಡಪ್ಪ,

ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಪ್ರಾಕ್ತನ ವಿದ್ಯಾರ್ಥಿ ಸಂಘ (ರಿ) ಕುಂದಾಪುರ – ನೋಟೀಸು


ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಪ್ರಾಕ್ತನ ವಿದ್ಯಾರ್ಥಿ ಸಂಘ (ರಿ) ಕುಂದಾಪುರ ಇದರ ವಾರ್ಷಿಕ ಮಹಾಸಭೆಯು ಶನಿವಾರ ದಿನಾಂಕ 18-03-2023ರಂದು ಅಪರಾಹ್ನ 3ಗಂಟೆಗೆ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಈ ಸಭೆಗೆ ಎಲ್ಲಾ ಸದಸ್ಯರು, ಸದಸ್ಯರಾಗ ಬಯಸುವವರು ಮತ್ತು ಈ ಹಿಂದಿನ ಎಲ್ಲಾ ಸಂಘದ ಪದಾಧಿಕಾರಿಗಳು ಭಾಗವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.