ಮಂಕುತಿಮ್ಮನ ಕಗ್ಗ ಆಧುನಿಕ ಭಗವದ್ಗೀತೆ ಇದ್ದಂತೆ – ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ವಿ.ಗೋಪಿನಾಥ್

ಕೋಲಾರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಡಿ.ವಿ.ಜಿ ಅವರ ಮಂಕುತಿಮ್ಮನ ಕಗ್ಗವನ್ನು ಆಧುನಿಕ ಭಗವದ್ಗೀತೆ ಎಂದು ಕರೆಯುತ್ತಾರೆ. ಮಂಕುತಿಮ್ಮನ ಕಗ್ಗವನ್ನು ಅರ್ಥ ಮಾಡಿಕೊಂಡರೆ ಬದುಕಿನಲ್ಲಿ ಎಲ್ಲಾ ಸವಾಲುಗಳನ್ನು ಧೈರ್ಯವಾಗಿ ಎದುರಿಸಬಹುದು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಇಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಕೆಯುಡಬ್ಲ್ಯೂಜೆ ಸಂಸ್ಥಾಪಕರಾದ ಡಿ.ವಿ.ಜಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇರುವುದರಲ್ಲಿ ತೃಪ್ತಿ ಪಡುವುದು ನಿಜವಾದ ಜೀವನ ಎಂಬ ಸೂತ್ರವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಡಿ.ವಿ.ಜಿ ಅವರು ಬದಕಿನಲ್ಲಿ ಎಷ್ಟೇ ಕಷ್ಟಗಳಿದ್ದರೂ ಸಹ ಹಾಸ್ಯದಿಂದಲೇ ಮಾತನಾಡುತ್ತಿದ್ದರು. ಹಾಸ್ಯಕ್ಕೆ ಮತ್ತೊಂದು ಹೆಸರು ಡಿ.ವಿ.ಜಿ. ಅವರಿಗೆ ಬಂದ ಪ್ರಶಸ್ತಿ ಕಾಣಿಕೆಗಳನ್ನು ಬಳಸಿಕೊಳ್ಳದೆ ಗೋಖಲೆ ಸಂಸ್ಥೆಗೆ ಕೊಟ್ಟಿರುವುದು ಅವರ ಪ್ರಾಮಾಣಿಕತೆಗೆ ಮತ್ತೊಂದು ಮಕುಟಪ್ರಾಯ ಎಂದರು.

ಹೊಟ್ಟೆಪಾಡಿಗಾಗಿ ಬೇರೆ ವೃತ್ತಿ ನೋಡಿಕೊಳ್ಳಿ ಜನರ ಸೇವೆಗಾಗಿ ಮತ್ತು ಸಮಾಜ ಸೇವೆಗಾಗಿ ಮಾತ್ರ ರಾಜಕೀಯ ಮಾಡಿ ಎಂದು ಹೇಳಿದ್ದರು. ಆದರೆ ಇಂದಿನ ಪರಿಸ್ಥಿತಿಯ ಚಿತ್ರಣವೇ ಬೇರೆಯಾಗಿದೆ. ಅವರು ಮಾರ್ಗದರ್ಶನ ನೀಡದ ಕ್ಷೇತ್ರವಿಲ್ಲ. ಎಲ್ಲಾ ಕ್ಷೇತ್ರಗಳಿಗೂ ಅವರ ಮಾರ್ಗದರ್ಶನ ಪ್ರಸ್ತುತ. ಡಿ.ವಿ.ಜಿ ಅವರ ಹಾದಿಯಲ್ಲಿ ಸಾಗಲು ಸಾಧ್ಯವಿಲ್ಲದಿದ್ದರೂ ಅವರನ್ನು ನೆನೆಯುವ ಕೆಲಸ ಮಾಡೋಣ. ಅವರ ಆದರ್ಶಗಳನ್ನು ನೆನಪಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸೋಣ ಎಂದರು.

ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ.ಮುನಿರಾಜು ಮಾತನಾಡಿ, ಬದುಕಿನ ಎಷ್ಟೇ ಕಷ್ಟದಲ್ಲಿಯೂ ಹಣ ಮತ್ತು ಪ್ರಸಿದ್ಧಿಯ ವ್ಯಾಮೋಹದ ಹಿಂದೆ ಹೋಗದೆ ಸ್ವಾಭಿಮಾನದಿಂದ ಸಾಹಿತ್ಯ ರಚನೆ ಮಾಡಿದ ಡಿವಿಜಿಯವರು ಇಂದಿನ ಪೀಳಿಗೆಯ ಪತ್ರಕರ್ತರಿಗೆ ಆದರ್ಶವಾಗಬೇಕೆಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ ಮಾತನಾಡಿ, ಡಿ.ವಿ.ಜಿ ಅವರ ಜೀವನ ಚರಿತ್ರೆಯನ್ನು ಮೆಲುಕು ಹಾಕಲು ಪ್ರತಿಯೊಬ್ಬ ವ್ಯಕ್ತಿಯೂ ದಿನಪತ್ರಿಕೆ ಮತ್ತು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಹನೀಯರ ಪುಸ್ತಕಗಳನ್ನು ಓದಿದಾಗ ಮಾತ್ರ ಅವರ ಬಗ್ಗೆ ತಿಳಿದುಕೊಳ್ಳಲು ಸಾಧ್ಯ. ಪತ್ರಕರ್ತರಿಗೆ ಪತ್ರಿಕಾ ಮೌಲ್ಯಗಳನ್ನು ತುಂಬುವ ಮೂಲಕ ಸಮಾಜದ ನೊಂದವರ ಧ್ವನಿಯಾಬೇಕೆಂದರು. ಇಂದು ಅದೇ ದಾರಿಯಲ್ಲಿ ಯುವ ಪತ್ರಕರ್ತರು ಮುನ್ನಡೆಯುವ ದಿಸೆಯಲ್ಲಿ ಡಿ.ವಿ.ಜಿ. ಅವರ ಜಯಂತಿಯನ್ನು ಪ್ರತಿಯೊಬ್ಬ ಪತ್ರಕರ್ತರು ಮಾಡುವ ಮೂಲಕ ಅವರಿಂದ ನಾವು ಎನ್ನುವ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದರು.

ಕಾರ್ಯಕಾರಿ ಸಮಿತಿ ಸದಸ್ಯ ವೆಂಕಟೇಶ್ ಮಾತನಾಡಿ, ಇಂದು ಪತ್ರಿಕಾರಂಗ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬದನ್ನು ಮನಗಂಡು ಹಿರಿಯರು ಹಾಕಿಕೊಟ್ಟಿರುವ ಹಾದಿಯಲ್ಲಿ ಸಾಗಿದಾಗ ಮಾತ್ರ ಪತ್ರಿಕಾರಂಗದ ಗೌರವ ಹೆಚ್ಚುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಪಿ.ನಾರಾಯಣಪ್ಪ ಮಾತನಾಡಿ ಸಮಾಜದ ಪ್ರತಿಯೊಬ್ಬರು ಡಿ.ವಿ.ಜಿ ಅವರ ಹಾದಿಯಲ್ಲಿ ಸಾಗಿ ಅವರಲ್ಲಿದ್ದ ಚಿಂತನೆಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಡಿ.ವಿ.ಜಿ ಅವರಿಗೆ ನೀಡುವ ನಿಜವಾದ ಗೌರವ ಎಂದರು.

ಡಿ.ವಿ.ಗುಂಡಪ್ಪ ಅವರನ್ನು ಆಧುನಿಕ ಸರ್ವಜ್ಞ ಎಂದರೆ ತಪ್ಪಾಗಲಾರದು. ಅವರು ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಅವರು ಬರೆದಿರುವ ಕೃತಿಗಳನ್ನು ಓದುವ ಮೂಲಕ ಜೀವನದಲ್ಲಿ ಅಳವಡಿಸಿಕೊಳ್ಳಲು ಮುಂದಾಗಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಬೇಕೆಂದರು.

ಕಾರ್ಯಕ್ರಮದಲ್ಲಿ ಮಾಮಿ, ಬಾಲನ್, ಎನ್.ಸತೀಶ್, ಈಶ್ವರ್, ರಮೇಶ್, ಎನ್.ಗಂಗಾಧರ್, ಕಿರಣ್, ಗೋಪಿ, ಮುಕ್ತಿಯಾರ್ ಅಹಮದ್, ಮದನ್, ರಾಘವೇಂದ್ರ ಪ್ರಸಾದ್, ಅಮರ್, ಎನ್.ಶಿವಕುಮಾರ್, ಪ್ರಕಾಶ್, ಶಿವು ಉಪಸ್ಥಿತರಿದ್ದರು.

ಶ್ರೀನಿವಾಸಪುರ : ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಬಳಗದಿಂದ ಪುನೀತ್ ರಾಜ್ಕುಮಾರ್ ಅವರ 48ನೇ ಹುಟ್ಟು ಹಬ್ಬ ಆಚರಣೆ

ಶ್ರೀನಿವಾಸಪುರ: ಪಟ್ಟಣದಲ್ಲಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಲಗದ ವತಿಯಿಂದ ಶುಕ್ರವಾರ ಪುನೀತ್ ರಾಜ್ಕುಮಾರ್ ಅವರ 48ನೇ ಹುಟ್ಟು ಹಬ್ಬ ಆಚರಿಸಲಾಯಿತು.

  ಹುಟ್ಟು ಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ಉಚಿತ ರಕ್ತದಾನ ಶಿಬಿರದಲ್ಲಿ 135 ಮಂದಿ ರಕ್ತದಾನ ಮಾಡಿದರು. 35 ಮಂದಿ ನೇತ್ರದಾನ ಮಾಡಲು ನೋಂದಾಯಿಸಿಕೊಂಡರು. 

  ಈ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಗೆ ಸನ್ಮಾನ ಮಾಡಲಾಯಿತು. ಸಾರ್ವಜನಿಕರಿಗೆ ಪುನೀತ್ ರಾಜ್ಕುಮಾರ್ ಅವರು ಹೆಚ್ಚಾಗಿ ಇಷ್ಟಪಡುತ್ತಿದ್ದ ಬಿರಿಯಾನಿ ಹಾಗೂ ಮೊಟ್ಟೆ ಊಟ ನೀಡಲಾಯಿತು.

  ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಸರಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜಿ.ಎಸ್.ಶ್ರೀನಿವಾಸ್, ತಾಲ್ಲೂಕು ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದ ಎಲ್ಲಾ ಸದ್ಯಸರು ಉಪಸ್ಥಿತರಿದ್ದರು.

ಚಾಕಪ್ಪಲ್ಲಿ ಗ್ರಾಮದ ಸಮೀಪ ಚಲಿಸುತ್ತಿದ್ದ ಕಾರು ಆಯತಪ್ಪಿ ಹಳ್ಳಕ್ಕೆ ಬಿದ್ದು ದಂಪತಿಯ ಸಾವು

ಶ್ರೀನಿವಾಸಪುರ: ತಾಲ್ಲೂಕಿನ ಚಾಕಪ್ಪಲ್ಲಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ ಚಲಿಸುತ್ತಿದ್ದ ಕಾರೊಂದು ಆಯತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮವಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಆಂಧ್ರಪ್ರದೇಶದ ಮದನಪಲ್ಲಿಯ ಶೇಖ್ ಷಫಿವುಲ್ಲಾ (62), ಶಾಹೀನಾ ಬೇಗಂ (55) ಮೃತರು. ಅವರು ತಮ್ಮ ಮಗಳನ್ನು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಿಟ್ಟಿ ಹಿಂದಿರುಗುವಾಗ ಘಟನೆ ನಡೆದಿದೆ. ಮೃತ ದೇಹಗಳನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್, ಡಿವೈಎಸ್‍ಪಿ ಜಯಶಂಕರ್, ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ದಯಾನಂದ, ಗೌನಿಪಲ್ಲಿ ಠಾಣೆ ಪೊಲೀಸ್ ಠಾಣೆ ಸಬ್ ಇನ್ಸ್‍ಪೆಕ್ಟರ್ ರಾಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಿತ್ರಸಂಗಮದ ರಜತ್ಸೋವದಲ್ಲಿ ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಗೆ ಸನ್ಮಾನ

ಕುಂದಾಪುರ:ನಿಮ್ಮ ಜೊತೆ ಸೇರಿ ನನಗೆ ಇನ್ನಷ್ಟು ಸಮಾಜ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಸಂತೋಷದ ವಿಷಯವಾಗಿದೆ. ಗ್ರಾಮಗಳ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಬಹಳ ಮುಖ್ಯವಾದದ್ದು. ಈ ನಿಟ್ಟಿನಲ್ಲಿ ಮಿತ್ರಸಂಗಮ ಸಂಸ್ಥೆ ಜನಪರ ಕಾರ್ಯಗಳನ್ನು ಸಮಾಜಕ್ಕೆ ನೀಡುತ್ತಾ ಆಶಕ್ತರಿಗೆ ನೆರವು ನೀಡಿ ಸಮಾಜ ಮುಖಿಯಾಗಿ ತನ್ನದೇ ಆದ ವಿಶಿಷ್ಠ ಸೇವೆಯನ್ನು ನೀಡಿ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ, ಗ್ರಾಮಗಳ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಮುಖ್ಯ ಎಂದು ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.
“ಸನ್ಮಾನ ಎನ್ನುವುದು ಎಂದಿಗೂ ನನಗೆ ಖುಷಿ ಕೊಡುವುದಿಲ್ಲ” ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಬೀಜಾಡಿ ಗೋಪಾಡಿ ಮಿತ್ರಸಂಗಮದ ರಜತ ಮಹೋತ್ಸವದ ಅಂಗವಾಗಿ ಊರ ಗೌರವದ ನಮ್ಮೂರ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ಮಿತ್ರಸಂಗಮದ ಗೌರವಧ್ಯಕ್ಷ ವಾದಿರಾಜ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದಶಿ೯ ರಾಜೇಶ್ ಆಚಾರ್, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ದೀಪಾನಂದ ಉಪಾಧ್ಯಾಯ ಉಪಸ್ಥಿತರಿದ್ದರು.
ಗಣೇಶ್ ಐಶ್ವರ್ಯ ಬೀಜಾಡಿ ಸ್ವಾಗತಿಸಿದರು. ಮಿತ್ರಸಂಗಮದ ಅಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಪಾಂಡುರಂಗ ಬೀಜಾಡಿ ವಂದಿಸಿದರು.