ಗ್ರಾಮೀಣ ಭಾಗದಲ್ಲಿ ಪಕ್ಷಾತೀತವಾಗಿ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ : ಶಾಸಕ ಕೆ.ಆರ್.ರಮೇಶ್‍ಕುಮಾರ್

ಗ್ರಾಮೀಣ ಭಾಗದಲ್ಲಿ ಪಕ್ಷಾತೀತವಾಗಿ ವಸತಿ ರಹಿತರಿಗೆ ವಸತಿ ನೀಡಲಾಗಿದೆ. ಕುಡಿಯುವ ನೀರು, ಸಮುದಾಯಭವನಗಳನ್ನು ನಿರ್ಮಿಸಲಾಗುತ್ತಿದೆ. ಮುಖ್ಯವಾಗಿ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.
ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ವಿವಿಧ ಯೋಜನೆಯಲ್ಲಿ 30 ಲಕ್ಷ ವೆಚ್ಚದ ಕಾಮಗಾರಿಗಳನ್ನು ಹಾಗು ಜಿಲ್ಲಾ ಕೋಮುಲ್ ಹಾಲು ಒಕ್ಕೂಟದಿಂದ ನಿರ್ಮಿಸಲಾದ ಹಾಲಿನ ಡೈರಿ ಕಟ್ಟಡವನ್ನು ಶುಕ್ರವಾರ ಉದ್ಗಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ರೈತ ಹಾಗೂ ಬಡ ಕುಟುಂಬಗಳ ಆರ್ಥಿಕವಾಗಿ ಸಭಲರಾಗಲು ಕಾರಣವಾಗಿದ್ದು, ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಮಾಡುವಂತೆ ಸಲಹೆ ನೀಡಿದರು.
ಗ್ರಾಮದಲ್ಲಿನ ಹಾಲು ಡೈರಿಯಲ್ಲಿ ದಿನಕ್ಕೆ 385 ಲೀಟರ್ ಉತ್ಪಾದನೆ ಆಗುತ್ತಿದ್ದು, ಇದರಿಂದ 4.20 ಲಕ್ಷ ಆದಾಯ ಇದೆ. ಈಗ ಬರುವ ಆದಾಯವು 4.20 ಲಕ್ಷ ದಿಂದ 8 ಲಕ್ಷ ಆದಾಯದ ಗುರಿ ಸೇರಬೇಕು. ಆಗ ನೀವು ಅಭಿವೃದ್ಧಿಯಾಗುತ್ತೀರಿ ಎಂದರು. ಜನರಿಗೆ ಒಳ್ಳೆಯ ಅಭಿವೃದ್ಧಿ ಕಾರ್ಯಗಳು ಮಾಡಿದರೆ ಮುಂದಿನ ದಿನಗಳಲ್ಲಿ ಪುನಃ ನಮ್ಮನ್ನ ಆಯ್ಕೆ ಮಾಡುತ್ತಾರೆ.
ಈ ನಿಟ್ಟಿನಲ್ಲಿ ಬಡ ಕುಟುಂಬಗಳ ಮಹಿಳೆಯರ ಏಳಿಗೆಗಾಗಿ ಡಿಸಿಸಿ ಬ್ಯಾಂಕ್ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿಯಲ್ಲಿ ಸಾಲವಿತರಣೆಯು ಪಕ್ಷತೀತವಾಗಿ ಮಾಡಲಾಗಿದೆ. ಗ್ರಾಮದಲ್ಲಿನ ಎಲ್ಲಾ ಗ್ರಾಮಸ್ಥರು ಒಟ್ಟಾಗಿ ಸಲಹೆ ಸಹಕಾರಗಳೊಂದಿಗೆ ಹಬ್ಬ ಹರಿದಿನಗಳನ್ನು ಆಚರಣೆ ಮಾಡಿಕೊಳ್ಳುತ್ತಾ ಒಗ್ಗಾಟ್ಟಾಗಿ ಇರುವಂತೆ ಸಲಹೆ ನೀಡಿದರು.
ಅಂಗನವಾಡಿ ನೂತನ ಕಟ್ಟಡ, ಸಿಸಿ ರಸ್ತೆ , ಶಾಲಾ ಶೌಚಾಲಯ , ಶಾಲಾ ಕಾಂಪೌಂಡ್, ಸಿಸಿ ಚರಂಡಿ ರಸ್ತೆಯನ್ನು ಉದ್ಗಾಟಿಸಲಾಯಿತು. ಪಿಎಲ್‍ಡಿ ಬ್ಯಾಂಕ್ ತಾಲೂಕು ಅಧ್ಯಕ್ಷ ದಿಂಬಾಲ್ ಅಶೋಕ್ , ನೆಲವಂಕಿ ಗ್ರಾ.ಪಂ.ಅಧ್ಯಕ್ಷೆ ಗೌತಮಿ ಮುನಿರಾಜು, ಸದಸ್ಯ ಸಿ.ಎಂ.ರಮೇಶ್ , ಕೋಚಿಮುಲ್ ಮಾಜಿ ಅಧ್ಯಕ್ಷ ಕೊಂಡಸಂದ್ರ ಕೆ.ಆರ್.ಶಿವಾರೆಡ್ಡಿ, ಮುಖಂಡರಾದ ಆರ್.ವೆಂಕಟೇಶ್‍ಮೂರ್ತಿ, ಕೆ.ಕೆ.ಮಂಜು, ಬೋರ್‍ವೈಲ್ ಕೃಷ್ಣಾರೆಡ್ಡಿ, ಎಂಸಿಎಸ್ ಅಧ್ಯಕ್ಷ ನಾರಾಯಣಸ್ವಾಮಿ, ರಮಣಾರೆಡ್ಡಿ, ಮುನಿಯಪ್ಪ, ಅಮರನಾರಾಯಣ, ಶ್ರೀನಿವಾಸ್ ಕೋಮುಲ್ ಶ್ರೀನಿವಾಸಪುರ ಶಿಬಿರ ಕಚೇರಿ ವ್ಯವಸ್ಥಾಪಕ ಮುನಿರಾಜು ಇದ್ದರು.

ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ , ಆಂತಸ್ತು, ಮಾಡಿಕೊಟ್ಟರೆ ಮಾರಿಕೊಳ್ಳುತ್ತಾರೆ,ಆದರೆ ವಿದ್ಯೆ ಕೊಟ್ಟರೆ ಶಾಶ್ವತವಾಗಿ ನಿಮ್ಮ ಮಕ್ಕಳು ಸುಖ ಜೀವನ ನಡೆಸಲು ಕಾರಣರಾಗುತ್ತೀರಿ :ಕೆ.ಆರ್.ರಮೇಶ್‌ಕುಮಾರ್

ಶ್ರೀನಿವಾಸಪುರ : ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ , ಆಂತಸ್ತು, ಮಾಡಿಕೊಟ್ಟರೆ ಮಾರಿಕೊಳ್ಳುತ್ತಾರೆ . ಆದರೆ ವಿದ್ಯೆ ಕೊಟ್ಟರೆ ಶಾಶ್ವತವಾಗಿ ನಿಮ್ಮ ಮಕ್ಕಳು ಸುಖ ಜೀವನ ನಡೆಸಲು ಕಾರಣರಾಗುತ್ತೀರಿ ಎಂದು ಮಕ್ಕಳ ಪೋಷಕರಿಗೆ ಶಾಸಕ ಕೆ.ಆರ್.ರಮೇಶ್‌ಕುಮಾರ್ ಕಿವಿಮಾತು ಹೇಳಿದರು.

 ಗೌಡತಾತಗಡ್ಡ ಗ್ರಾಮದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಚುನಾವಣೆಯು ಐದು ವರ್ಷಗಳಿಗೊಮ್ಮೆ ನಡೆಯುವಂತಹ ಕಾರ್ಯಕ್ರಮ.  ಈ ದೇಶವನ್ನು ಯಾವ ರೀತಿಯಲ್ಲಿ ನಡೆಸಬೇಕು ಎಂದು ಆಲೋಚನೆ ಮಾಡಲು, ನೀವು  ಎಲ್ಲರೂ ಸೇರಿ ನಮಗೆ ಇಂತಹ ಸೌಲಭ್ಯಗಳು ಬೇಕು. ಇಂತಹ ಸಮಸ್ಯೆ ಇದೆ . ಎಂದು ನೀವು ನನಗೆ ಮಾಹಿತಿ ನೀಡಬೇಕು. ಸಮಸ್ಯೆಯ ಬಗ್ಗೆ ನನ್ನಲ್ಲಿ ಮಾಹಿತಿ ಇರಬೇಕು. ಅದನ್ನ ನಾನು ವಿಧಾನಸೌದ ಚರ್ಚೆ ಮಾಡುತ್ತೇನೆ. ಆಗ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯವಾಗುತ್ತದೆ ಎಂದು ಭರವಸೆ ನೀಡಿದರು. 

ಸಾರ್ವಜನಿಕರು ಮುಖ್ಯವಾಗಿ ನಮ್ಮ ಗಮನಕ್ಕೆ ತರುವುದು, ಗ್ರಾಮಕ್ಕೆ ಸುಸಜ್ಜಿತ ರಸ್ತೆ, ಚರಂಡಿ, ಶುದ್ದಕುಡಿಯುವ ನೀರು, ಶಾಲೆ, ಕಾಲೇಜು, ಆರೋಗ್ಯ ಕೇಂದ್ರ, ವಸತಿ ನಿಲಯ, ಉದ್ಯೋಗ ಕೇಳುತ್ತಾರೆ ಅಷ್ಟೇ. 

ಗೌಡತಾತ ಗಡ್ಡ ಗ್ರಾಮದಲ್ಲಿ ಬಹುತೇಕ ಭೋವಿ ಜನಾಂಗವಿದ್ದು, ೫೦ ವರ್ಷ ಹಿಂದೆ ಯಾವ ರೀತಿಯಲ್ಲಿ ಜೀವನ ಶೈಲಿಯ ಬಗ್ಗೆ ಮಾಹಿತಿ ನೀಡಿದರು . ಈ ಹಿಂದೆ ಗ್ರಾಮದಲ್ಲಿ ಬಹುತೇಕ ಗುಡಿಸಲು ವಾಸಿಗಳೇ ಇದಿದ್ದು, ಶಿಕ್ಷಣ ಅಷ್ಟಕ್ಕಷ್ಟೆ  ಆದರೆ ಇಂದು ಗ್ರಾಮದ ಜನತೆ ಸಂವೃದ್ಧಿಯಾಗಿ ಜೀವನವನ್ನು ನಡೆಸುತ್ತಿದ್ದಾರೆ ಇದು ನನ್ನ ಮನಸ್ಸಿಗೆ ಖುಷಿ ತಂದಿದೆ. 

೬೦ ವರ್ಷಗಳ ಹಿಂದೆ ಇಂದಿರಗಾAದಿ ರವರು ಎಲ್ಲರೂ ಶಿಕ್ಷಣವನ್ನು ಪಡೆಯಲು ಆದೇಶಿದ್ದರು. ಈ ಒಂದು ದೃಷ್ಟಿಯಿಂದ ಇಂದು ಬಹುತೇಕರು  ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇಂದಿರಾಗಾAದಿಯವರ ಆಶಯವನ್ನು ನಾನು ಪೂರ್ಣಗೊಳಿಸುತ್ತೇನೆ ಎಂದು ಭರವಸೆ ನೀಡಿದರು. 

ಮುಂದಿನ ದಿನಗಳಲ್ಲಿ ಶಾಲೆ ೧೦ ಕೋಟಿ ವೆಚ್ಚದಲ್ಲಿ ವಸತಿ ಶಾಲೆಯನ್ನು ನಿರ್ಮಿಸಿ ಗ್ರಾಮದ ಎಲ್ಲಾ ಮಕ್ಕಳು ಇಲ್ಲಿಯೇ ಓದಿ ಬುದ್ದಿವಂತರಾಗುವ ನಿಟ್ಟಿನಲ್ಲಿ ಆಂತರರಾಷ್ಟೀಯ ಮಟ್ಟದಲ್ಲಿ ಇಂಗ್ಲೀಷ್ ಭಾಷೆಯನ್ನು ಕಲಿಸುವ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಬೆಂಗಳೂರು ಖಾಸಗಿ ಶಾಲೆಗಳನ್ನು ಮೀರಿಸುವ ರೀತಿಯಲ್ಲಿ ಈ ಶಾಲೆಯಲ್ಲಿ ಪಾಠಪ್ರವಚನಗಳನ್ನು ಹಮ್ಮಿಕೊಳ್ಳಲಾಗುವುದು. 

ದೇಶಕ್ಕೆ ಅನ್ನ ನೀಡುವವರೆಲ್ಲರೂ ರೈತರೆ. ಅನ್ನವನ್ನು ನೀಡುವ ರೈತರಿಗೆ ಜಾತಿ ಮತ ಬೇದವಿಲ್ಲ. ರೈತರನ್ನು ಕಾಪಾಡಿ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಮಳೆ ಬರಲಿ, ಇರಲಿ ಇಂದು ಕೆಸಿ ವ್ಯಾಲಿ ನೀರಿನಿಂದ ತಾಲೂಕಿನ ಕೆರೆಗಳು ಬಹುತೇಕ ಭರ್ತಿಯಾಗಿದೆ. ರಾಯಲ್ಪಾಡು , ನೆಲವಂಕಿ ಹೋಬಳಿಗಳಲ್ಲಿ ಚೆಕ್ ನಿರ್ಮಾಣ ಮಾಡಲಾಗುತ್ತಿದೆ. ಗ್ರಾಮದಲ್ಲಿ ಅರ್ಧ ಎಕರೆ, ಒಂದು ಎಕರೆ ಜಮೀನು ಇರುವ ರೈತರಿಗೆ ಸರ್ಕಾರದಿಂದ ಉಚಿತವಾಗಿ ಕೊಳವೆಬಾವಿಗಳನ್ನು ಪಕ್ಷಾತೀತವಾಗಿ ಹಾಕಿಸಲಾಗುತ್ತದೆ ಎಂದು ಭರವಸೆ ನೀಡಿದರು.

ರಾಜಕೀಯಕ್ಕೆ ಅರ್ಥ ಬರಬೇಕಾದರೆ, ಗೌರವ ಸಿಗಬೇಕಾದರೆ ನೀವು ಕೊಡುವ ಗೌರವ, ಆಪ್ಯಾಯತೆ ನಾವು ಉಳಿಸಿಕೊಳ್ಳಬೇಕು. ಅದರಂತೆ ಮುಂದಿನ ದಿನಗಳಲ್ಲಿ ಗೌಡತಾತಗಡ್ಡ ಗ್ರಾಮಕ್ಕೆ ಬೇಟಿ ನೀಡಿದರೆ ಬೆಂಗಳೂರಿಗೆ ಬೇಟಿ ನೀಡಿದಂತೆ ಇರಬೇಕು ಎಂದರು. ಈ ಒಂದು ನಿಟ್ಟಿನಲ್ಲಿ ತಾವೆಲ್ಲರೂ ಮುಂದಿನ ಚುನಾವಣೆಯಲ್ಲಿ ನನ್ನ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು. 

ಈ ಕಾರ್ಯಕ್ರಮದಲ್ಲಿ ಗ್ರಾಮದ ೩೫ ಕುಟುಂಬಗಳು ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಲಕ್ಷಿಪುರ ಗ್ರಾ.ಪಂ.ಅಧ್ಯಕ್ಷೆ ಮಂಗಮ್ಮ ನಡುಪನ್ನ ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್, ಕೋಚಿಮುಲ್ ಮಾಜಿ ಅಧ್ಯಕ್ಷ ಕೊಂಡಸAದ್ರ ಶಿವಾರೆಡ್ಡಿ, ರಾಯಲ್ಪಾಡು ಗ್ರಾ.ಪಂ.ಸದಸ್ಯ. ಆರ್.ಗಂಗಾದರ್, ಮುಖಂಡರಾದ ಕೆ.ಕೆ.ಮಂಜು, ಬೋರ್‌ವೆಲ್ ಕೃಷ್ಣಾರೆಡ್ಡಿ, ಎಸ್ . ಎನ್.ವೆಂಕಟೇಶ್, ರೋಣುರು ಸಂತೋಷ, ಸೀತಾರಾಮರೆಡ್ಡಿ, ಪೇಪರ್ ವೆಂಕಟೇಶ್, ಮುನಿಪ್ಪ , ಭಾಸ್ಕರ ಇದ್ದರು. 

ವಿಶ್ವ ಕ್ಷಯರೋಗ ದಿನಾಚರಣೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆಯು ಅತೀ ಹೆಚ್ಚು ಟಿ. ಬಿ. ರೋಗಿಗಳನ್ನು ದತ್ತು ಪಡೆದುದಕ್ಕಾಗಿ ಸನ್ಮಾನ

ಕುಂದಾಪುರ : ವಿಶ್ವ ಕ್ಷಯರೋಗ ದಿನಾಚರಣೆಯ ಅಂಗವಾಗಿ, ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ದಲ್ಲಿ ನಡೆದ ಕಾರ್ಯ ಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ ಇವರು ಉದ್ಘಾಟಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆಯು ಅತೀ ಹೆಚ್ಚು ಟಿ. ಬಿ. ರೋಗಿಗಳನ್ನು ದತ್ತು ಪಡೆದುದಕ್ಕಾಗಿ ಸನ್ಮಾನಿಸಲಾಯಿತು. ರೆಡ್ ಕ್ರಾಸ್ ಕುಂದಾಪುರ ಘಟಕ ಇಪ್ಪತ್ತೈದು ಕ್ಷಯ ರೋಗಿಗಳನ್ನು ಆರು ತಿಂಗಳ ಕಾಲ ದತ್ತು ಪಡೆದಿದೆ. ಈ ಸನ್ಮಾನವನ್ನು ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಸ್ವೀಕರಿದರು. ಕಾರ್ಯಕ್ರಮ ದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ರಾಮ, ಟಿ.ಬಿ. ನಿರ್ಮೂಲನ ಅಧಿಕಾರಿಗಳಾದ ಚಿದಾನಂದ ಸಂಜು ‌ನರ್ಸಿಂಗ್ ಕಾಲೇಜು ಪ್ರಾಂಶುಪಾಲರು ಉಪಸ್ಥಿತರಿದ್ದರು.

ಕಾಂಗ್ರೆಸ್: ಚುನಾವಣ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯನವರು ವರುಣಾದಿಂದ ಸ್ಪರ್ಧೆ – ಕುಂದಾಪುರದಿಂದ ಎಮ್. ದಿನೇಶ್ ಹೆಗ್ಡೆಗೆ ಸ್ಪರ್ಧೆಗೆ ಟಿಕೆಟ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ 124 ಮಂದಿ ಅಭ್ಯರ್ಥಿಗಳ ಹೆಸರಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಾಗ ಕುಂದಾಪುರ ಕ್ಷೇತ್ರದಿಂದ ಎಮ್. ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು  ಕೆ.ಗೋಪಾಲ ಪೂಜಾರಿಗೆ ಟಿಕೆಟ್ ನೀಡಲಾಗಿದೆ.


 ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಯು.ಟಿ ಖಾದರ್ ಮಂಗಳೂರಿನಿಂದ, ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಸುವರ್ಣ, ಸುಳ್ಯ ಮೀಸಲು ಕ್ಷೇತ್ರದಿಂದ ಕೃಷ್ಣಪ್ಪ ಜಿ. ಕಣಕ್ಕಿಳಿಯಲಿದ್ದಾರೆ. ಇನ್ನೂ ಉಡುಪಿ ಜಿಲ್ಲೆಯ ಕಾಪುದಿಂದ ವಿನಯ ಕುಮಾರ್ ಸೊರಕೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಕಾರವಾರ ಅಂಕೋಲಾ ಕ್ಷೇತ್ರದಿಂದ ಸತೀಶ್ ಸೈಲ್, ಭಟ್ಕಳದಿಂದ ಮಂಕಾಳ ವೈದ್ಯ, ಹಳಿಯಾಳದಿಂದಾರ ಆರ್. ವಿ. ದೇಶಪಾಂಡೆ ಸ್ಪರ್ಧೆ ಮಾಡಲಿದ್ದಾರೆ.

ನಂಜನಗೂಡು ಕ್ಷೇತ್ರದಿಂದ ದ್ರವನಾರಾಯಣ ಪುತ್ರ ದರ್ಶನ್ ದ್ರವನಾರಾಯಣ ಹಾಗೂ ರಾಜಾಜಿನಗರ ಕ್ಷೇತ್ರದಿಂದ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂ ಎಲ್ ಸಿ ಪುಟ್ಟಣ್ಣಗೆ ಟಿಕೆಟ್ ಘೋಷಿಸಲಾಗಿದೆ.

ಸಂಪೂರ್ಣ ಪಟ್ಟಿ ಇಲ್ಲಿದೆ