ಪ್ರತಿಯೊಬ್ಬರೂ ಚುನಾವಣಾ ನೀತಿ ಸಂಹಿತೆ ಪಾಲಿಸಬೇಕು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್.ಬಿ.ನಂದಿನಿ

ಶ್ರೀನಿವಾಸಪುರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಸೇರಿದಂತೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಚುನಾವಣಾ ನೀತಿ ಸಂಹಿತೆ ಪಾಲಿಸಬೇಕು ಎಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್.ಬಿ.ನಂದಿನಿ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಪಾಲನೆಯಲ್ಲಿ ಯಾವುದೇ ಲೋಪ ಕಂಡುಬಂದರೂ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಏ.13 ರಂದು ಗೆಜೆಟ್ ಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ ಏ.20, ನಾಮಪತ್ರಗಳ ಪರಿಶೀಲನೆ ಏ.21, ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕ ಏ.24, ಮತದಾನ ದಿನಾಂಕ ಮೇ.10, ಮತ ಎಣಿಕೆ ಏ.13, ಏ.15ಕ್ಕೆ ಮೊದಲು ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ಶಿರಸ್ತೇದಾರ್ ಬಲರಾಮಚಂದ್ರೇಗೌಡ, ಸಿಬ್ಬಂದಿ ಶಿಲ್ಪ, ಭಾವನಾ ಇದ್ದರು.

ಗ್ರಾಮದ ಜನತೆ ಬಹಳ ಶ್ರಮಜೀವಿಗಳು. ನಿಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು ಎನ್ನುವುದೇ ನನ್ನ ಆಶಯ:ಶಾಸಕ ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ : ಈ ಗ್ರಾಮದ ಜನತೆ ಬಹಳ ಶ್ರಮಜೀವಿಗಳು. ನಿಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು ಎನ್ನುವುದೇ ನನ್ನ ಆಶಯ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅಭಿಪ್ರಾಯಪಟ್ಟರು. 

ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಮಂಗಳವಾರ ೭.೨೫ ಲಕ್ಷದಲ್ಲಿ ನಿರ್ಮಿಸಲಾದ ಶಾಲೆಯ ನೂತನ ಕೊಠಡಿಯನ್ನು ಉದ್ಗಾಟಿಸಿ ಮಾತನಾಡಿದರು. 

ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಕುಡಿಯುವ ನೀರು, ಕಾಂಪೌAಡ್ ನಿರ್ಮಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು . ನೀವು ಬೆಂಗಳೂರಿನಲ್ಲಿನ ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಈ ಒಂದು ದೃಷ್ಟಿಯಿಂದ ಈ ಭಾಗದ ವಿದ್ಯಾರ್ಥಿಗಳಿಗಾಗಿ ೨೫ ಕೋಟಿ ವೆಚ್ಚದಲ್ಲಿ ವಸತಿ ಶಾಲೆಯನ್ನ ನಿರ್ಮಿಸಿ ಉತ್ತಮ ಗುಣಮಟ್ಟವನ್ನು ಹೊಂದಿರುವ ಶಿಕ್ಷರನ್ನ ನೇಮಿಸಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಲಾಗುವುದು  ಭರವಸೆ ನೀಡಿದರು.

ಈ ಭಾಗದಲ್ಲಿ ವಸತಿ ಶಾಲೆಯನ್ನು ನಿರ್ಮಿಸಿದರೆ ಕೋನೇಟಿ ತಿಮ್ಮನಪಲ್ಲಿ, ಶಿವಪುರ, ಗೌಡಹಳ್ಳಿ, ಜೆವಿ ಕಾಲೋನಿ ಗ್ರಾಮಗಳಲ್ಲಿನ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು. 

ಒಂದು ಗ್ರಾಮವು ಅಭಿವೃದ್ಧಿಯಾಗಬೇಕಾದರೆ ಗ್ರಾಮದಲ್ಲಿನ ಎಲ್ಲರೂ ಪಕ್ಷಾತೀತವಾಗಿ ಸೇರಿ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸುವಂತೆ ಕರೆನೀಡಿದರು. ಈ ಹಿಂದೆ ಗ್ರಾಮದಲ್ಲಿ ಘರ್ಷಣೆಗಳು ಇತ್ತು , ಘರ್ಷಣೆಗಳನ್ನು ಮರೆತು ಸಹಬಾಳ್ವೆಯೊಂದಿಗೆ ನೆಲಸುವಂತೆ ಮನವಿ ಮಾಡಿದರು. ನನಗೆ ಈ ಭಾಗದ ಮುಖಂಡರಾದ ತಿಮ್ಮಿರೆಡ್ಡಿ, ರಾಮಚಂದ್ರಪ್ಪ, ಸಿದ್ದಪ್ಪ, ಮುನಿಯಪ್ಪ ಸಹಕರಿಸಿದ್ದರು ಎಂದು ಮಾಹಿತಿ ನೀಡಿದರು.   

ಇದೇ ಸಮಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹಲವಾರು ಕುಟುಂಬಗಳು ಮುಖಂಡರು ಸೇರ್ಪಡೆಗೊಂಡರು. ಕೆಎಂಎಫ್ ನಿರ್ದೇಶಕ ಎನ್.ಹನುಮೇಶ್, ಮಾಸ್ತೇನಹಳ್ಳಿ ಗ್ರಾ.ಪಂ.ಅಧ್ಯಕ್ಷ ರವಿಕುಮಾರ್, ತಾ.ಪಂ.ಮಾಜಿ ಅಧ್ಯಕ್ಷ ಗರ‍್ರಪ್ಪ, ಮುಖಂಡರಾದ ಪ್ರಥಮ ದರ್ಜೆ ಗುತ್ತಿಗೆದಾರರಾದ ಗೌಡಹಳ್ಳಿ ವೆಂಕಟರೆಡ್ಡಿ, ಶಿವಪುರ ಎಸ್.ಜಿ.ವಿ ವೆಂಕಟೇಶ್, ಆಲೇರಿ ಬಾಬು, .ವೆಂಕಟೇಶ್, ಗಾಂಡ್ಲಹಳ್ಳಿ ಶಶಿಕುಮಾರ್, ಮುನಿಯಪ್ಪ, ಗಂಗಾಧರ್, ಅಶ್ವತಗೌಡ ,ಅಮರೀಶ್.ಇದರು. 

ಮೂಡ್ಲಕಟ್ಟೆ ಎಂ ಐ ಟಿ: ವಿಶ್ವ ಜಲ ದಿನಾಚರಣೆ

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್  ಕಾಲೇಜಿನ ಸಿವಿಲ್‌ ಇಂಜಿನಿಯರಿಂಗ್ ವಿಭಾಗ ಹಾಗೂ ಇಕೋ ಕ್ಲಬ್ ಇದರ ಸಹಭಾಗಿತ್ವದಲ್ಲಿ ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಯಿತು.  ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ರಾಜೇಂದ್ರ ಕಲ್ಬಾವಿ ಇವರು ಆಗಮಿಸಿ ನೀರಿನ ಮಹತ್ವ ಮತ್ತು ಸಂರಕ್ಷಣೆ ವಿಷಯದ ಕುರಿತು ವಿಚಾರ ವಿನಿಮಯ ಮಾಡಿದರು. ನೀರನ್ನು ಜೀವ ಜಲ ಎಂದು ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ನೀರಿನ ಅಭಾವದ ಕುರಿತು ಎಚ್ಚರಿಸುತ್ತ ಬಾವಿಯ ನೀರಿನ ಮಟ್ಟ ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಹೊಸ ಹೊಸ ಆವಿಷ್ಕಾರದ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಐಎಮ್ ಜೆ ವಿದ್ಯಾಸಂಸ್ಥೆಯ ನಿರ್ದೇಶಕರಾದ ಪ್ರೊಫ಼ೆಸರ್ ದೋಮ ಚಂದ್ರಶೇಖರ ಮಾತನಾಡಿ ಮುಂದಿನ ಪೀಳಿಗೆಗೆ ನೀರನ್ನು ಕಾಯ್ದಿರಿಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. ವಿದ್ಯಾರ್ಥಿಗಳು ಆ ಕುರಿತು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ|ಅಬ್ದುಲ್ ಕರೀಮ್ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ ಅದನ್ನು ಎಲ್ಲರೂ ಪಾಲಿಸಬೇಕು ಎಂದು ವಿಧ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ಐಎಮ್ ಜೆಐ ಎಸ್ ಸಿ ಕಾಲೇಜಿನ ಪ್ರಾಂಶುಪಾಲೆ ಡಾ ಪ್ರತಿಭ ಪಟೇಲ್, ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ|ರಾಮಕೃಷ್ಣ ಹೆಗ್ಡೆ, ಸಿವಿಲ್‌ ವಿಭಾಗದ ಮುಖ್ಯಸ್ಥ ಪ್ರೊಫ಼ೆಸರ್ ಪ್ರಶಾಂತ ಹೆಗ್ಡೆ, ಸಿಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರಥಮ್ ಮೈಕೆಲ್ ಕಾರ್ಯಕ್ರಮ ನಿರೂಪಿಸಿ, ಆಮೆ ನಾಂಗ್ಬೋ ವಂದಿಸಿದರು.

ಕೆದಿಂಜೆ ಶಾಲೆ : ಹಳೆ ವಿದ್ಯಾರ್ಥಿಗಳ ಸಮಾವೇಶ, ಗುರುವಂದನೆ ಕಾರ್ಯಕ್ರಮ

ಕಾರ್ಕಳ ತಾಲೂಕು ಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಪುರಸ್ಕøತ ಸಂಸ್ಥೆ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಶಾಲಾ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿಗಳ ಸಮಾವೇಶ, ಗುರುವಂದನೆ ಕಾರ್ಯಕ್ರಮ, ವಿದ್ಯಾರ್ಥಿ ವೇತನ ವಿತರಣೆ, ಚೈತ್ಯನ್ಯ ಅವಲೋಕನ ಬಿಡುಗಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಜರಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಯು. ಶೇಷಗಿರಿ ಕಾಮತ್ ವಹಿಸಿದ್ದರು. ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜಯಂತ್ ರಾವ್ ಪಿ. ಚೈತ್ಯನ್ಯ ಅವಲೋಕನ ಬಿಡುಗಡೆ ಮಾಡಿದರು. ಭಾರತೀಯ ಜೇಸಿಐನ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಕೆ. ಅಭಿನಂದನಾ ಭಾಷಣ ಮಾಡಿದರು. ಬೆಳ್ಮಣ್ಣು ವಾಸ್ತು ತಜ್ಞರು, ಜ್ಯೋತಿಷ್ಯರಾದ ಡಾ. ಆಚಾರ್ಯ ವಾದಿರಾಜ ಅವರು ಗುರುವಂದನಾ ಕಾರ್ಯಕ್ರಮದ ಪ್ರಯೋಜಕತ್ವ ನೀಡಿ ನಿವೃತ್ತ ಹಾಗೂ ಪ್ರಸಕ್ತ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರು ಆರ್ಥಿಕವಾಗಿ ಹಿಂದುಳಿದ ಕಲಿಕೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು. ವೇದಿಕೆಯಲ್ಲಿ ಶಾಲಾ ಯಕ್ಷಗಾನ ಗುರುಗಳಾದ ಮಹಾವೀರ ಪಾಂಡಿ ಕಾಂತಾವರ, ಶಾಲಾ ಚಿತ್ರಕಲಾ ಶಿಕ್ಷಕರಾದ ಶಿರ್ವ ಗಣೇಶ್ ಆಚಾರ್ಯ, ಶಾಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸೂರ್ಯಕಾಂತ್ ಶೆಟ್ಟಿ ಮೊದಲಾದವರಿದ್ದರು.
ಗುರುವಂದನೆ : ಶಾಲಾ ನಿವೃತ್ತ ಶಿಕ್ಷಕರಾದ ಪ್ರಭಾಕರ್ ಶೆಟ್ಟಿ, ತುಕಾರಾಮ ಶೆಟ್ಟಿ, ಸರೋಜಿನಿ ಶೆಟ್ಟಿ, ಅನಿಲ್ ಕುಮಾರ್, ಲಕ್ಷ್ಮೀನಾರಾಯಣ ಭಟ್, ಸುಧಾಕರ್ ರಾವ್ ಹಾಗೂ ಪ್ರಸಕ್ತ ಸಾಲಿನಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಾದ ಪ್ರಥ್ವೀರಾಜ್ ಬಲ್ಲಾಳ್, ರೇಖಾ ಪೈ, ಗೌರವ ಶಿಕ್ಷಕರಾದ ಮಮತಾ, ಜಯಲಕ್ಷ್ಮೀ, ಚೇತನಾ, ಭಾರತಿ ಅವರನ್ನು ಸನ್ಮಾನಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಪ್ತಾರ್ಥನೆಗೈದರು, ಶಾಲಾ ಮುಖ್ಯ ಶಿಕ್ಷಕರಾದ ಪ್ರಥ್ವೀರಾಜ್ ಬಲ್ಲಾಳ್ ಅವರು ಸ್ವಾಗತಿಸಿದರು, ಶಾಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ತುಕಾರಾಮ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು, ಶಾಲಾ ಸಹಶಿಕ್ಷಕಿ ರೇಖಾ ಪೈ ವಿದ್ಯಾರ್ಥಿ ವೇತನದ ವಿವರ ನೀಡಿದರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸದಸ್ಯರಿಂದ ಸಂಗೀತ ಕಾರ್ಯಕ್ರಮ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ‘ಪಂಚವಟಿ’ ಯಕ್ಷಗಾನ ಜರಗಿತು.

ಮಾ. 30 ರಂದು ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವ


ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಮಾ. 30 ರಂದು ಶ್ರೀ ರಾಮನವಮಿಯಂದು ಜರುಗಲಿದೆ.
ರಥೋತ್ಸವ ಸಂಬಂಧ ಮಾ. 26 ರಿಂದ ಕಾರ್ಯಕ್ರಮಗಳು ನಡೆಯುತ್ತಿದ್ದು 30 ರಂದು ಗುರುವಾರ ಬೆಳಿಗ್ಗೆಯಿಂದ ಪಂಚಮೃತ ಅಭಿಷೇಕ, ಕನಕಾಭಿಷೇಕ, ತುಲಾಭಾರ, ಮಹಾಪೂಜೆ, ಮಹಾಬಲಿ ಪ್ರಧಾನ ನಡೆದು ಸಂಜೆ ಬ್ರಹ್ಮರಥಾರೋಹಣ ನಡೆಯಲಿದೆ ನಂತರ ರಾತ್ರಿ ಬ್ರಹ್ಮರಥೋತ್ಸವ ಜರುಗಲಿರುವುದು.
ಮಾರ್ಚ್ 31 ರಂದು ಓಕುಳಿ ಸಂಭ್ರಮದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು, ಓಕುಳಿ ಉತ್ಸವ, ಚೂರ್ಣೋತ್ಸವ, ಅವಭೃತ ಸ್ನಾನ, ಧ್ವಜಾರೋಹಣ ಹಾಗೂ ರಾತ್ರಿ ಮೃಗಬೇಟೆ ಉತ್ಸವ ಜರುಗಲಿದೆ ಎಂದು ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದು, ರಥೋತ್ಸವಕ್ಕೆ ಸರ್ವರನ್ನು ಆಹ್ವಾನಿಸಿದ್ದಾರೆ.


ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ: ಮೇ 10ರಂದು ಮತದಾನ ಒಂದೇ ಹಂತದ ಮತದಾನ: 13ರಂದು ಮತ ಎಣಿಕೆ – ನೀತಿ ಸಂಹಿತೆ ಜಾರಿ -ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಘೋಷಿಸಿದೆ
ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದ್ದು ಮೇ 13 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಘೋಷಣೆ ಆದ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಬಳಿಕ ಮೇ 23ರ ಒಳಗೆ ಹೊಸ ಸರಕಾರ ಅಸ್ತಿತ್ವಕ್ಕೆ ಬರಬೇಕಿದೆ
.

ಏನಿದು ನೀತಿ ಸಂಹಿತೆ? ಅದರ ಮಾಹಿತಿ ಇಲ್ಲಿದೆ

ಚುನಾವಣಾ ದಿನಾಂಕಗಳ ಘೋಷಣೆಯೊಂದಿಗೆ, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಅಂದರೆ ನಾಯಕರು, ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲರೂ ಈ ಸಂಹಿತೆಗೆ ಬದ್ಧರಾಗಿರುತ್ತಾರೆ. ಅಂದರೆ ದೇಶದಲ್ಲಿ ಚುನಾವಣೆ ಸಂದರ್ಭದಲ್ಲಿ ಈ ಮಾದರಿ ನೀತಿ ಸಂಹಿತೆ ಎಂದರೆ ಏನು? ನೀತಿ ಸಂಹಿತೆ ಜಾರಿಯಾದಾಗ ಏನು ಮಾಡಬಹುದು ಹಾಗೂ ಏನು ಮಾಡುವ ಹಾಗಿಲ್ಲ ಎಂದು ಕೆಳಗೆ ತಿಳಿಸಲಾಗಿದೆ.

1. ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ಅಭ್ಯರ್ಥಿ ಮತದಾರರನ್ನು ಯಾವುದೇ ರೀತಿಯಲ್ಲಿ ಪ್ರೇರೇಪಿಸಲು ಪ್ರಯತ್ನ ಪಡುವಂತಿಲ್ಲ. ಯಾವುದೇ ಅಭ್ಯರ್ಥಿಯು ತನ್ನ ಮತದಾರರಿಗೆ ಮದ್ಯ ಅಥವಾ ಯಾವುದೇ ರೀತಿಯ ಲಂಚ ನೀಡುವ ಬಗ್ಗೆ ಅಮೀಷ ಒಡ್ಡುವಂತ್ತಿಲ್ಲ. ಯಾವುದೇ ಮತದಾರರನ್ನು ಬೆದರಿಸಬಾರದು. ಈ ರೀತಿ ಮಾಡಿ ಸಿಕ್ಕಿಬಿದ್ದರೆ ಚುನಾವಣಾ ಆಯೋಗ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬಹುದು.

2. ಯಾವುದೇ ಅಭ್ಯರ್ಥಿಯು ಧಾರ್ಮಿಕ ಅಥವಾ ಜಾತಿ ಭಾವನೆಗಳಿಗೆ ನೋವುಂಟು ಮಾಡುವ ಅಥವಾ ಪ್ರಚೋದಿಸುವ ಪ್ರಯತ್ನವೆಂದು ಪರಿಗಣಿಸಬಹುದಾದಂತಹ ಕೆಲಸವನ್ನು ಮಾಡಬಾರದು. ಈ ಸಂದರ್ಭದಲ್ಲಿ ಯಾರ ವಿರುದ್ಧವೂ ಅಶ್ಲೀಲ ಭಾಷೆ ಬಳಸುವಂತಿಲ್ಲ. ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರು ತಮ್ಮ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಮತಕ್ಕಾಗಿ ಮತದಾರರಲ್ಲಿ ಮನವಿ ಮಾಡುವಂತಿಲ್ಲ.

3. ಚುನಾವಣೆಯ ಸಂದರ್ಭದಲ್ಲಿ ಸರ್ಕಾರಿ ವಾಹನ ಅಥವಾ ಸರ್ಕಾರಿ ವಿಮಾನವನ್ನು ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರೀತಿಯ ಸರ್ಕಾರಿ ಘೋಷಣೆಗಳು, ಉದ್ಘಾಟನೆ,
ಶಂಕುಸ್ಥಾಪನೆ ಅಥವಾ ಭೂಮಿಪೂಜೆ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

4. ಪಕ್ಷಗಳು ಯಾವುದೇ ಸಭೆ ಅಥವಾ ಕೂಟವನ್ನು ನಡೆಸಬೇಕಾದರೆ, ಅದಕ್ಕಾಗಿ ಆ ಪ್ರದೇಶದ ಸ್ಥಳೀಯ ಪೊಲೀಸರಿಗೆ ಅದರ ಬಗ್ಗೆ ತಿಳಿಸಬೇಕಾಗುತ್ತದೆ ಮತ್ತು ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಯ ಅನುಮತಿ ಕೂಡ ಅಗತ್ಯ.

5. ಚುನಾವಣಾ ಆಯೋಗದಿಂದ ಮಾನ್ಯವಾದ ಪಾಸ್ ಹೊಂದಿರುವ ಮತದಾರರು ಮಾತ್ರ ಮತಗಟ್ಟೆಯನ್ನು ಪ್ರವೇಶಿಸಬಹುದು.

6. ಚುನಾವಣಾ ಆಯೋಗವು ಪ್ರತಿ ಮತಗಟ್ಟೆಯ ಹೊರಗೆ ನಿರೀಕ್ಷಕರನ್ನು ನಿಯೋಜಿಸುತ್ತದೆ ಇದರಿಂದ ಯಾರಾದರೂ ನೀತಿ ಸಂಹಿತೆ ಉಲ್ಲಂಘಿಸಿದರೆ ಅವರಿಗೆ ದೂರು ನೀಡಬಹುದು.

7. ರಾಜಕೀಯ ಪಕ್ಷಗಳು ಮತ್ತು ಅವರ ಅಭ್ಯರ್ಥಿಗಳು ತಮ್ಮ ಪ್ರತಿಸ್ಪರ್ಧಿಗಳ ಟೀಕೆಗಳನ್ನು ರಾಜಕೀಯ, ಕಾರ್ಯಕ್ರಮಗಳು, ಹಿಂದಿನ ದಾಖಲೆ ಮತ್ತು ಕೆಲಸಗಳಿಗೆ ಸೀಮಿತಗೊಳಿಸಬೇಕು. ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷವು ವೈಯಕ್ತಿಕ ಟೀಕೆಗಳನ್ನು ಅಥವಾ ನಾಯಕರು ಅಥವಾ ಕಾರ್ಯಕರ್ತರ ಸಾರ್ವಜನಿಕ ಚಟುವಟಿಕೆಗಳಿಗೆ ಸಂಬಂಧಿಸದ ಯಾವುದೇ ಹೇಳಿಕೆಗಳನ್ನು ನೀಡುವಂತಿಲ್ಲ.

8. ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವುದು, 48 ಗಂಟೆಗಳ ಅವಧಿಯಲ್ಲಿ ಹಾಗೂ ಮತದಾನದ ಮುಕ್ತಾಯಕ್ಕೆ ನಿಗದಿತ ಗಂಟೆ ಇತ್ಯಾದಿ ಸಮಯಾವಧಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ಮುಂತಾದ ಪದ್ಧತಿಗಳನ್ನು ತಪ್ಪಿಸಬೇಕು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

9. ವ್ಯಕ್ತಿಗಳ ಅಭಿಪ್ರಾಯಗಳು ಅಥವಾ ಚಟುವಟಿಕೆಗಳ ವಿರುದ್ಧ ಪ್ರತಿಭಟಿಸುವ ಮೂಲಕ ಅವರ ಮನೆಗಳ ಮುಂದೆ ಪ್ರದರ್ಶನಗಳು ಅಥವಾ ಪಿಕೆಟಿಂಗ್ ಅನ್ನು ಚುನಾವಣಾ ಸಮಿತಿಯು ನಿಷೇಧಿಸುತ್ತದೆ. ಇದಲ್ಲದೆ, ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಯಾವುದೇ ವ್ಯಕ್ತಿಯ ಜಮೀನು, ಕಟ್ಟಡವನ್ನು ಅನುಮತಿಯಿಲ್ಲದೆ ಧ್ವಜಗಳು, ಬ್ಯಾನರ್‌ಗಳು, ಸೂಚನೆಗಳು ಮತ್ತು ಘೋಷಣೆಗಳನ್ನು ಬರೆಯಲು ಅವರ ಅನುಯಾಯಿಗಳಿಗೆ ಬಳಸಲು ಅನುಮತಿ ಇರುವುದಿಲ್ಲ.

10. ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯು ಯಾವುದೇ ಸಭೆ ನಡೆಸುವುದಾಗಿದ್ದರೆ ಸಾಕಷ್ಟು ಮುಂಚೆಯೇ ಅದರ ಬಗ್ಗೆ ಮಾಹಿತಿ ನೀಡಿ ಚುನಾವಣಾ ಆಯೋಗದಿಂದ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ. ಉದ್ದೇಶಿತ ಸಭೆಯ ಸ್ಥಳ ಮತ್ತು ಸಮಯವನ್ನು ಸಾಕಷ್ಟು ಮುಂಚಿತವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಬೇಕು. ಧ್ವನಿವರ್ಧಕ ಬಳಸಲು ಸ್ಥಳೀಯ ಪ್ರಾಧಿಕಾರವು ಸೂಚಿಸಿದಂತೆ ಸರಿಯಾದ