ಐ.ಎಂ.ಜೆ. ವಿದ್ಯಾ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಎಪ್ರಿಲ್ ಹತ್ತರಂದು:ಹಲವಾರು ಪ್ರಮುಖ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ

ಮೂಡ್ಲಕಟ್ಟೆ ಐ.ಎಂ.ಜೆ. ವಿದ್ಯಾ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯನ್ನು ಇದೇ ಬರುವ ಎಪ್ರಿಲ್ ಹತ್ತರಂದು ನಡೆಯಲಿದೆ. ಇದರ ಪ್ರಯುಕ್ತ ಸಂಸ್ಥೆಯಲ್ಲಿ ಹಲವಾರು ಪ್ರಮುಖ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಎಪ್ರಿಲ್ ಎಂಟನೇ ತಾರೀಖಿನಂದು ಬೆಂಗಳೂರಿನ ಮಾಜಿ ಇಸ್ರೋ ವಿಜ್ಞಾನಿ ಆರ್‍ಆರ್‍ಎಸ್‍ಸಿ ಸೌತ್ ಇದರ ನಿವೃತ್ತ ಜನರಲ್ ಮ್ಯಾನೇಜರ್ ಡಾ. ಕೆ. ಗಣೇಶ ರಾಜ್‍ರವರಿಂದ ಶ್ರೀ ಐ.ಎಂ.ಜಯರಾಮ ಶೆಟ್ಟಿ ಸ್ಮರಣಾರ್ಥ ಉಪನ್ಯಾಸವನ್ನು ಏರ್ಪಡಿಸಲಾಗಿದೆ. ಅವರು ಭೂಕಂಪ ಹಾಗೂ ಸಮಾಜದ ಮೇಲೆ ಅದರ ಪರಿಣಾಮ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಇದೇ ಬರುವ ಎಪ್ರಿಲ್ 10, ಸೋಮವಾರದಂದು ಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಗುವುದು ಈ ಕಾರ್ಯಕ್ರಮಕ್ಕೆ ಡಿವೈನ್ ಪಾರ್ಕ್ ಕೋಟ ಇಲ್ಲಿಯ ಎಸ್ ಎಚ್ ಆರ್ ಎಸ್ ವಿಭಾಗದ ಮೆಡಿಕಲ್ ಡೈರೆಕ್ಟರ್ ಹಾಗೂ ಡಿವೈನ್ ಪಾರ್ಕ್ ಟ್ರಸ್ಟ್‍ನ ಟ್ರಸ್ಟಿ ಆಗಿರುವ ಡಾ. ವಿವೇಕ್ ಎ. ಉಡುಪರವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐ.ಎಂ.ಜೆ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಶ್ರೀಯುತ ಸಿದ್ದಾರ್ಥ ಜೆ. ಶೆಟ್ಟಿಯವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀದೇವಿ ಆಂಬುಲೆನ್ಸ್ ಸರ್ವಿಸ್, ಕುಂದಾಪುರದ ಶ್ರೀ ವಾಸುದೇವ ಹಂದೆ ಅವರಿಗೆ ಅವರ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನ ಮಾಡಲಾಗುವುದು. ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅಲ್ಲದೇ ಸಮಾಜ ಸೇವಾ ಕಾರ್ಯಕ್ರಮಗಳಾಗಿ ಬುದ್ಧಿಮಾಂಧ್ಯ ಮಕ್ಕಳಿಗೆ “ವಿಸ್ಮಯ” ವೃದ್ಧಾಶ್ರಮದಲ್ಲಿ “ಮೈತ್ರಿ” ಕುಂದಾಪುರ ನಗರಸಭಾ ಸಹಯೋಗದೊಂದಿಗೆ “ಸಂರಕ್ಷಣೆ” ನಗರ ಸ್ವಚ್ಛತಾ ಕಾರ್ಯಕ್ರಮ “ನಮ್ಮ ಭೂಮಿ” ಬಸ್ರೂರು ಅವರೊಂದಿಗೆ ಒಡಂಬಡಿಕೆ ಹಾಗೂ ಸಂಸ್ಥೆಯ ಆವರಣದಲ್ಲಿ ಮಳೆನೀರು ಕೊಯ್ಲು ಮುಂತಾದವುಗಳನ್ನು ಹಮ್ಮಿಕೊಳ್ಳಲಾಗಿದೆ.

ಸಂಸ್ಥಾಪಕರ ದಿನಾಚರಣೆಯ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದಿಂದ “ಸತ್ವ ದರ್ಶನಂ” ನಾಟಕ ಪ್ರದರ್ಶನವನ್ನು ಮಾಡಲಾಗುವುದು.

ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ “ESPERANZA 2K23” ಫ್ರೆಶರ್ಸ್ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು

ಕುಂದಾಪುರ, ಎ:5: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ “ESPERANZA 2K23” ಫ್ರೆಶರ್ಸ್ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆದರದಿಂದ ಸ್ವಾಗತಿಸಿಕೊಂಡರು. ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು.

 ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಜೆನಿಫರ್ ಫ್ರೀಡಾ ಮಿನೇಜೆಸ್ ಹಾಗೂ ಐ.ಎಂ.ಜೆ. ಸಮೂಹ ವಿದ್ಯಾಸಂಸ್ಥೆಯ ನಿರ್ದೇಶಕರಾದ ಪ್ರೊಫೆಸರ್ ದೋಮ ಚಂದ್ರಶೇಖರ್ ರವರು ದೀಪ ಬೆಳಗಿಸುವ ಮೂಲಕ  ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು.   ಕಾರ್ಯಕ್ರಮದಲ್ಲಿ ಐ.ಎಂ.ಜೆ.ಐ.ಎಸ್.ಸಿ. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ಮತ್ತು ಬೋಧಕ – ಬೋಧಕೇತರ ವೃಂದದವರು ಉಪಸ್ಥಿತರಿದ್ದು,  ವಿದ್ಯಾರ್ಥಿನಿ ಕುಮಾರಿ ಶೇರಿಲ್ ಸಾರ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ಕುಮಾರಿ ನಿತ್ಯ ಸ್ವಾಗತಿಸಿ, ಕುಮಾರಿ ಗಾಯತ್ರಿ ಧನ್ಯವಾದ ಸಮರ್ಪಣೆ ಮಾಡಿದರು.

ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಸಭಾಂಗಣದಲ್ಲಿ ಬುಧವಾರ ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಣೆ

ಶ್ರೀನಿವಾಸಪುರ: ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಸಭಾಂಗಣದಲ್ಲಿ ಬುಧವಾರ ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಿಸಲಾಯಿತು. ಶಾಸಕ ಕೆ.ಆರ್.ರಮೇಶ್ ಕುಮಾರ್ ಡಾ. ಬಾಬು ಜಗಜೀವನ್ ರಾಂ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಅರ್ಪಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಮುಖಂಡರಾದ ವೆಂಕಟೇಶ್, ಎನ್.ಮುನಿಸ್ವಾಮಿ, ಕೆ.ಕೆ.ಮಂಜು, ಸೀತಾರಾಮರೆಡ್ಡಿ, ವರ್ತನಹಳ್ಳಿ ವೆಂಕಟೇಶ್, ಮುನಿರಾಜು, ಕೆ.ನಾರಾಯಣಸ್ವಾಮಿ ಇದ್ದರು.
ಮಾಲಾರ್ಪಣೆ: ಬಾಬು ಜಗಜೀವನ್ ರಾಂ ಜಯಂತಿ ಅಂಗವಾಗಿ ತಾಲ್ಲೂಕು ಕಚೇರಿ ಮುಂಭಾಗ ಅಂಬೇಡ್ಕರ್ ಉದ್ಯಾನದಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾಲಾರ್ಪಣೆ ಮಾಡಿದರು.

ಹಸಿರು ಕ್ರಾಂತಿಗೆ ರಾಷ್ಟ್ರದ ಮಾಜಿ ಹಂಗಾಮಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಕೊಡುಗೆ ಅಪಾರ

ಶ್ರೀನಿವಾಸಪುರ: ಹಸಿರು ಕ್ರಾಂತಿಗೆ ರಾಷ್ಟ್ರದ ಮಾಜಿ ಹಂಗಾಮಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಕೊಡುಗೆ ಅಪಾರ. ಅವರು ತಮ್ಮ ಸಾಮಾಜಿಕ ಬದ್ಧತೆಯಿಂದಾಗಿ ಸಮಾಜದ ಎಲ್ಲ ಸಮುದಾಯಗಳ ಪ್ರೀತಿಗೆ ಪಾತ್ರರಾಗಿದ್ದರು ಎಂದು ದಲಿತ ಮುಖಂಡ ಸೀತಪ್ಪ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಡಾ. ಬಾಬು ಜಗಜೀವನ್ ರಾಂ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಬಾಬು ಜಗಜೀವನ್ ರಾಂ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಡಾ. ಬಾಬು ಜಗಜೀವನ್ ರಾಂ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಶಿರಸ್ತೇದಾರ್ ಬಲರಾಮಚಂದ್ರೇಗೌಡ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಶಿವಕುಮಾರ್, ರಾಜೇಶ್, ದಲಿತ ಸಂಘಟನೆಗಳ ಮುಖಂಡರಾದ ಶಂಕರ್, ರಾಮಕೃಷ್ಣ, ಎಂ.ವೆಂಕಟೇಶ್, ಭಾವನ ಇದ್ದರು.