ಸಂವಿಧಾನ ಹಾಗೂ ದಲಿತ ವಿರೋಧಿ ಕೊತ್ತೂರು ಮಂಜುನಾಥ ರನ್ನು ಸೋಲಿಸಿ ಮನೆಗೆ ಕಳುಹಿಸಿ ; ಬಾಲಾಜಿ ಚನ್ನಯ್ಯ

ಕೋಲಾರ ಏಪ್ರಿಲ್ 26 : ಸುಳ್ಳು ಜಾತಿ ಪ್ರಮಾಣಪತ್ರದ ಪ್ರಕರಣದಲ್ಲಿ ಜೈಲಿನಲ್ಲಿರಬೇಕಾಗಿದ್ದ ಕೊತ್ತೂರು ಮಂಜುನಾಥ್‍ಗೆ ಕೋಲಾರ ವಿಧಾನಸಭಾ ಕ್ಷೇತ್ರದ ಟಿಕೇಟ್‍ನ್ನು ಕಾಂಗ್ರೆಸ್ ಪಕ್ಷವು ನೀಡಿರುತ್ತದೆ. ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡಿ ಶಾಸಕನಾಗಿ ಐದು ವರ್ಷಗಳ ಅಧಿಕಾರವನ್ನು ನಡೆಸಿ ದಲಿತರ ಮೀಸಲಾತಿಯನ್ನು ಕಿತ್ತುಕೊಂಡ ಕೊತ್ತೂರು ಮಂಜುನಾಥ್ ರವರಿಗೆ ಕ್ಷೇತ್ರದ ಜನತೆ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸುವ ಮೂಲಕ ತಕ್ಕ ಪಾಠವನ್ನು ಕಲಿಸುವಂತೆ ಬಾಲಾಜಿ ಚನ್ನಯ್ಯ ಆಗ್ರಹಿಸಿರುತ್ತಾರೆ.
ಪತ್ರಿಕಾಗೋಷ್ಠಿ ನಡೆಸಿದ ಇವರು ಕೊತ್ತೂರು ಮಂಜುನಾಥ್ ಹಿಂದುಳಿದ ವರ್ಗಗಳ ಪ್ರವರ್ಗ-1 ಬೈರಾಗಿ ಜಾತಿಗೆ ಸೇರಿದವರಾಗಿದ್ದು, ಇವರು ಪರಿಶಿಷ್ಟ ಜಾತಿಯ ಬುಡ್ಗ ಜಂಗಮ ಜಾತಿಗೆ ಸೇರಿದವನೆಂದು ಅಂದಿನ ತಹಶೀಲ್ದಾರ್ ಜಯಮಾದವ ರವರಿಗೆ ಲಂಚ ನೀಡಿ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಪಡೆದು ಶಾಸಕರಾಗಿರುತ್ತಾರೆ. ಇವರು ದಲಿತರನ್ನು ತನ್ನ ಬೆಲೆ ಬಾಳುವ ಲೇಲೆಕರ್ ಶೂಗೆ ಹೋಲಿಸಿ ಅವಹೇಳನ ಮಾಡಿ ಅವಮಾನಿಸಿರುತ್ತಾರೆ. ಜಿಲ್ಲೆಯ ಪ್ರಭಾವಿ ಮುಖಂಡರಾದ ದಲಿತ ಜನಾಂಗದ ಕೆ.ಹೆಚ್.ಮುನಿಯಪ್ಪನವರನ್ನು ಚರಂಡಿಗೆ ಹೋಲಿಕೆ ಮಾಡಿ ಹೀಯಾಳಿಸಿರುತ್ತಾರೆ. ಆಗ ಇದಕ್ಕೆ ಪ್ರತಿ ಉತ್ತರವಾಗಿ ಪತ್ರಿಕಾಗೋಷ್ಠಿಯನ್ನು ನಡೆಸಿದಂತಹ ಕೆ.ಹೆಚ್.ಎಂ. ರವರು ಈತನು ಮುಳಬಾಗಿಲು ಕ್ಷೇತ್ರದಲ್ಲಿ ಸಾವಿರಾರು ಮನೆಗಳನ್ನು ಹಾಳು ಮಾಡಿರುವುದಾಗಿ ಸಾರಿರುತ್ತಾರೆ. ಇವರ ವಿರುದ್ಧ ಅಂದಿನ ಕಾಂಗ್ರೆಸ್ ಮುಖಂಡರುಗಳು ಪ್ರತಿಕೃತಿ ದಹನ ಮಾಡಿ ಪ್ರತಿಭಟಿಸಿದವರು. ಕೊತ್ತೂರು ಮಂಜುನಾಥ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಿರುವುದು ವಿಪರ್ಯಾಸವೆಂದು ಹಾಗೂ ಇವರ ವಿರುದ್ಧವಾಗಿ ಪ್ರತಿಭಟಿಸಿದವರು ಇಂದು ಇವರ ಪರವಾಗಿ ಪ್ರಚಾರ ಮಾಡುತ್ತಿರುವುದು ಇವರಿಗೆ ಮಾನ ಮರ್ಯಾದೆ ಇಲ್ಲವೆ ಎಂದಿದ್ದಾರೆ.
ಕೋಲಾರ ಕ್ಷೇತ್ರದಲ್ಲಿ ಸ್ಥಳೀಯ ಟಿಕೇಟ್ ಆಕಾಂಕ್ಷಿಗಳಾದ ವಿ.ಆರ್.ಸುದರ್ಶನ್, ಎಲ್.ಎ. ಮಂಜುನಾಥ್, ಊರುಬಾಗಿಲು ಶ್ರೀನಿವಾಸ್, ಬ್ಯಾಲಹಳ್ಳಿ ಗೋವಿಂದಗೌಡ, ಜಯರಾಮ್ (ಜೆಕೆ) ರಂತಹ ಎಲ್ಲಾ ವಿದದಲ್ಲೂ ಸಮರ್ಥರಾಗಿರುವವರನ್ನು ಬಿಟ್ಟು ಹೊರಗಿನ ಮೀಸಲಾತಿ ವಂಚಕ ಕೊತ್ತೂರು ಮಂಜುನಾಥ್‍ರವರನ್ನು ತರಬೇಕಾದ ಔಚಿತ್ಯವಾದರೂ ಕಾಂಗ್ರೆಸ್ ಪಕ್ಷಕ್ಕೆ ಏನು ಎಂದು ಪ್ರಶ್ನಿಸಿದ್ದಾರೆ.
ಮುಳಬಾಗಿಲು ಕ್ಷೇತ್ರದಲ್ಲಿ ಎ.ಐ.ಸಿ.ಸಿ. ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಬಲಗೈ ಅಸ್ಪøಶ್ಯ ಜನಾಂಗದ ಮುದ್ದು ಗಂಗಾಧರ್ ಎಂಬುವರಿಗೆ ಟಿಕೇಟ್ ನೀಡಿದರೂ ಸಹ ಕೊತ್ತೂರು ಮಂಜುನಾಥ್ ಹಟ ಹಿಡಿದು ಇದನ್ನು ರದ್ದುಗೊಳಿಸಿ, ಮಲ್ಲಿಕಾರ್ಜುನ ಖರ್ಗೆಯವರನ್ನು ಬ್ಲಾಕ್‍ಮೇಲ್ ಮಾಡಿ ಸೃಷ್ಯ ಜನಾಂಗದ ಆದಿ ನಾರಾಯಣ್ ರವರಿಗೆ ಟಿಕೇಟ್ ಕೊಡಿಸಿದ್ದು, ಇದು ಇವರು ಅಸ್ಪøಶ್ಯ ದಲಿತ ಜನಾಂಗದ ಕಡು ವಿರೋಧಿ ಎಂಬುವುದಕ್ಕೆ ಸಾಕ್ಷಿಯಾಗಿದೆ.
ಅಂಬೇಡ್ಕರ್‍ಗೆ ಧಿಕ್ಕಾರ ಕೂಗಿದ ಕೋಲಾರ ನಗರಸಭೆಯ ಸದಸ್ಯ ಅಂಬರೀಶ್ ಹಾಗೂ ಹಿಂದೆ ದಲಿತರನ್ನು ಲೇಲೇಕರ್ ಶೂಗೆ ಹೋಲಿಸಿ ಅವಮಾನಗೊಳಿಸಿದ ಸಂದರ್ಭದಲ್ಲಿ ಕೊತ್ತೂರು ಮಂಜುನಾಥ್ ವಿರುದ್ಧ ಹೋರಾಟ ಮಾಡಿದ್ದ ದಲಿತ ವಕ್ಕಲೇರಿ ರಾಜಪ್ಪ ರವರುಗಳು ಈಗ ಇಂತಹ ಕೊತ್ತೂರು ಮಂಜುನಾಥ್ ಪರವಾಗಿಯೇ ಪ್ರಚಾರದಲ್ಲಿ ತೊಡಗಿರುವುದು ದಲಿತ ಸಿದ್ಧಾಂತದ ವಿರೋಧ ಅಲ್ಲವೆ ಎಂದು ಪ್ರಶ್ನಿಸಿದ್ದಾರೆ.
ಕೊತ್ತೂರು ಮಂಜುನಾಥ್ ರವರಿಂದ ನ್ಯಾಯಾಲಯವು ವಿಧಿಸಿರುವ 92 ಲಕ್ಷ ದಂಡವನ್ನು ತಕ್ಷಣ ವಸೂಲಿ ಮಾಡುವುದರ ಜೊತೆಗೆ ಇವರನ್ನು ಜೈಲಿಗೆ ಕಳುಹಿಸುವ ಕೆಲಸವು ಸರ್ಕಾರವು ತಕ್ಷಣ ಮಾಡಬೇಕೆಂದು ಒತ್ತಾಯಿಸಿರುತ್ತಾರೆ. ಇಂತಹ ದಲಿತ ಮೀಸಲಾತಿಯನ್ನು ಕಬಳಿಸಿ, ಅವಕಾಶವನ್ನು ತಪ್ಪಿಸಿ ವಂಚಿಸಿದ ಇವರಿಗೆ ಕ್ಷೇತ್ರದ ಯಾವೊಬ್ಬ ಸ್ವಾಭಿಮಾನಿ ದಲಿತರು ಹಾಗೂ ಇತರೆ ಪ್ರಜ್ಞಾವಂತ ಮತದಾರರು ಮತ ನೀಡದಿರುವಂತೆ ಮನವಿ ಮಾಡಿಕೊಂಡಿರುತ್ತಾರೆ.
ಕುರುಬ ಸಂಘದ ಮಾಜಿ ರಾಜ್ಯ ನಿರ್ದೇಶಕರಾದ ಕನಕನಪಾಳ್ಯ ಜಟ್ ಅಶೋಕ್ ಮಾತನಾಡಿ ಕೋಲಾರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಅಭ್ಯರ್ಥಿಗಳಾದ ಸಂದರ್ಭಗಳಲ್ಲಿ ಈಗಿನ ಘಟಬಂಧನ್ ನಾಯಕರು ಏಕೆ ಪ್ರಚಾರ ಮಾಡಿ ಗೆಲ್ಲಿಸಲಿಲ್ಲ? ಈಗ ಸಿದ್ಧರಾಮಯ್ಯನವರು ಬರದೇ ಇದ್ದಾಗ ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿ ಶಾಸಕರನ್ನಾಗಿ ಮಾಡುವ ಕೆಲಸವನ್ನು ಇವರುಗಳು ಮಾಡದೆ ಜನಾಂಗವನ್ನು ವಂಚಿಸಿ ಅವಕಾಶವನ್ನು ಕಿತ್ತುಕೊಂಡಿದ್ದಾರೆ. ಈಗಿನ ಚುನಾವಣೆ ಹಣ-ಮನುಷ್ಯತ್ವದ ನಡುವೆ ನಡೆಯುತ್ತಿರುವ ಹೋರಾಟವಾಗಿದ್ದು, ಜನರು ಒಳ್ಳೆಯತನದ ಪರವಾಗಿ ನಿಂತು ಗೆಲ್ಲಿಸಬೇಕು. ಮಂಗಳವಾರ ರಘುಪತಿ ಹೊಸಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಸಿ.ಎಂ.ಆರ್.ಗೆ ಜೈಕಾರವನ್ನು ಹಾಕುತ್ತಿದ್ದಾಗ ಈ ಮಾರ್ಗವಾಗಿ ಬಂದ ವಕ್ಕಲೇರಿ ರಾಜಪ್ಪ ಹಾಗೂ ನಗರಸಭೆ ಸದಸ್ಯ ಅಂಬರೀಶ್ ರವರುಗಳು ಇವರ ಮೇಲೆ ದೌರ್ಜನ್ಯ ಮಾಡಿ ಘೋಷಣೆ ಕೂಗದಂತೆ ಧಮಕಿ ಹಾಕಿ ಗೂಂಡಾಗಿರಿ ಪ್ರದರ್ಶಿಸಿರುತ್ತಾರೆ. ಚುನಾವಣೆ ಮುಂಚಿತವಾಗಿಯೇ ಕಾಂಗ್ರೆಸ್‍ನವರ ದಬ್ಬಾಳಿಕೆ ಗೂಂಡಾಗಿರಿ ಈ ಮಟ್ಟಕ್ಕೆ ಇರಬೇಕಾದರೆ ಇವರನ್ನು ಗೆಲ್ಲಿಸಿದರೆ ಕ್ಷೇತ್ರ ಜನತೆಯ ಮೇಲೆ ಇನ್ನೆಷ್ಟು ದಬ್ಬಾಳಿಕೆ ಹಾಗೂ ಗೂಂಡಾಗಿರಿಯನ್ನು ಇವರುಗಳು ಮಾಡಬಹುದು ಎಂದು ಪ್ರಶ್ನಿಸಿರುತ್ತಾರೆ.
ರಾಜ್ಯ ಜೆಡಿಎಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಕುತುಬ್ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿನ ಘಟ ಬಂಧನ್ ನಾಯಕರು ಹಿಂದಿನ ಕೋಲಾರ ಕ್ಷೇತ್ರದ ಚುನಾವಣಾ ಸಂದರ್ಭದಲ್ಲಿ ಪಕ್ಷದ ಮುಸ್ಲಿಂ ಅಭ್ಯರ್ಥಿಗೆ ಏಕೆ ಮತ ಹಾಕಿಸಲಿಲ್ಲ. ಮುಸ್ಲಿಂ ಜನಾಂಗವನ್ನು ಕೇವಲ ಮತ ಬ್ಯಾಂಕ್ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷವು ಬಳಸಿಕೊಂಡು ಅಧಿಕಾರ ವಂಚಿತರನ್ನಾಗಿ ಮಾಡುತ್ತಿರುವುದು ಜನಾಂಗದ ಅರಿವಿಗೆ ಬಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಮುನಿಸ್ವಾಮಿರವರನ್ನು ಬೆಂಬಲಿಸಿ ಗೆಲ್ಲಿಸಿದ ಕೊತ್ತೂರು ಮಂಜುನಾಥ್ ಹೇಗೆ ತಾನೇ ಮುಸ್ಲಿಂ ಹಿತೈಷಿಯಾಗಲು ಸಾಧ್ಯ ಎಂದು ಪ್ರಶ್ನಿಸಿರುತ್ತಾರೆ.
ಪತ್ರಿಕಾಗೋಷ್ಠಿಯಲ್ಲಿ ಅಂಬೇಡ್ಕರ್ ನಗರದ ಹರೀಶ್, ಹೂಹಳ್ಳಿ ನಾರಾಯಣಸ್ವಾಮಿ, ಖಾದ್ರಿಪುರ ಸುಧಾಕರ್, ಕ್ಯಾಲನೂರು ಸುರೇಶ್, ಉಮರ್‍ವುಲ್ಲಾ ಷರೀಫ್, ಬಾರಂಡಹಳ್ಳಿ ನಾರಾಯಣಸ್ವಾಮಿ, ಕಲಾ ರಮೇಶ್, ಸಿರಾಜ್, ಕಠಾರಿಪಾಳ್ಯ ಅಶೋಕ್ ಮುಂತಾದವರು ಭಾಗವಹಿಸಿದ್ದರು.

ಏ.30ರ ಸಮಾವೇಶಕ್ಕೆ ಸಕಲಸಿದ್ದತೆ-ಮೋದಿ ಹೆಸರಿಂದಲೇ ವಿರೋಧಿಗಳಲ್ಲಿ ನಡುಕ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತದ ಮೂಲಕ ಬಿಜೆಪಿ ಭರ್ಜರಿ ಗೆಲುವು-ಮುನಿಸ್ವಾಮಿ

ಕೋಲಾರ:- ಸರ್ವವ್ಯಾಪಿ,ಸರ್ವಸ್ಪರ್ಶಿಯಾಗಿ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಿರುವ ವಿಶ್ವವೇ ಮೆಚ್ಚುವ ನಾಯಕರಾದ ಪ್ರಧಾನಿ ಮೋದಿ ಹೆಸರೇ ವಿರೋಧಿಗಳಲ್ಲಿ ನಡುಕ ಹುಟ್ಟಿಸುತ್ತದೆ, ಕೋಲಾರಕ್ಕೆ ಅವರು ಬರುತ್ತಿರುವುದರಿಂದ ಇಲ್ಲಿನ ಪಕ್ಷದ ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಲಿದ್ದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸುನಾಮಿ ಅಪ್ಪಳಿಸಿ, ಭರ್ಜರಿ ಗೆಲುವು ದಾಖಲಿಸಲಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಬುಧವಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಕೆಂದಟ್ಟಿ ಸಮೀಪ ಏ.30ರ ಪ್ರಧಾನಿಯವರ ರ್ಯಾಲಿಯ ಪೂರ್ವಸಿದ್ದತೆಗಳನ್ನು ಪರಿಶೀಲಿಸಿ ಅವರು ಮಾತನಾಡಿ, ಪ್ರಧಾನಿಗಳ ಪ್ರಚಾರದಿಂದ ಹಳೆ ಮೈಸೂರು ಜಿಲ್ಲೆಗಳಲ್ಲಿ ಬಿಜೆಪಿ ಮತ್ತಷ್ಟು ಹೆಚ್ಚಿನ ಸ್ಥಾನ ಗಳಿಸಲು ಸಹಹಾರಿಯಾಗಲಿದೆ, ಬಿಜೆಪಿಯ ಅಭಿವೃದ್ದಿ ಕಾರ್ಯಗಳು ಹಾಗೂ ಮೋದಿ ನಾಮಬಲದಿಂದ ನಾನು ಸಂಸದನಾದೆ ಅದೇ ರೀತಿ ಈ ಬಾರಿಯೂ ಬಿಜೆಪಿ ಗೆಲ್ಲಲಿದೆ ಎಂದರು.
ಏ.30 ರಂದು ಬೆಳಗ್ಗೆ 9-30 ಗಂಟೆಗೆ ಮೋದಿ ಆಗಮಿಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ದತೆ ನಡೆಸಲಾಗಿದೆ, ರಾಜ್ಯದ ದೇವಮೂಲೆಯಾಗಿರುವ ಇಲ್ಲಿ ಸಮಾವೇಶ ನಡೆಯುತ್ತಿದ್ದು, ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ,ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳ ಸುಮಾರು 2.5 ಲಕ್ಷ ಮಂದಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕಳೆದ ಒಂದು ವಾರದಿಂದು ಸುಮಾರು 150 ಎಕರೆ ಪ್ರದೇಶದಲ್ಲಿ ಸಿದ್ದತೆಗಳನ್ನು ನಡೆಸಿದ್ದು, ಮೂರು ಹೆಲಿಪ್ಯಾಡ್ ಸಿದ್ದವಾಗುತ್ತಿದೆ, ಮಳೆ,ಬಿಸಿಲಿನಿಂದ ರಕ್ಷಣೆಗೆ ಸುಸಜ್ಜಿತ ಪೆಂಡಾಲ್ ನಿರ್ಮಾಣಗೊಳ್ಳುತ್ತಿದ್ದು, 10ಕ್ಕೂ ಹೆಚ್ಚು ಜೆಸಿಬಿಗಳು, ಐದು ಕ್ರೈನ್‍ಗಳು ಸಿದ್ದತಾ ಕಾರ್ಯದಲ್ಲಿ ಬಳಕೆಯಾಗುತ್ತಿವೆ ಎಂದರು.


ಮೋದಿ ನೋಡಲು ಜನರ ಕಾತುರ


135 ಕೋಟಿ ಜನರಿಗೆ ಉಚಿತ ಸ್ವದೇಶಿ ತಯಾರಿತ ವ್ಯಾಕ್ಸಿನ್ ಒದಗಿಸಿ, ಇಡೀ ವಿಶ್ವಕ್ಕೆ ಮಾರಣಾಂತಿಕವಾಗಿದ್ದ ಕೋವಿಡ್‍ನಿಂದ ಜೀವ ಉಳಿಸಿದ ಮೋದಿ ಕಾಣಲು ಜನತೆ ಸ್ವಯಂಪ್ರೇರಿತರಾಗಿ ಬರುತ್ತಾರೆ ಎಂದರು.
ಕಿಸಾನ್ ಸಮ್ಮಾನ್ ಮೂಲಕ ರೈತರ ಖಾತೆಗಳಿಗೆ 10 ಸಾವಿರ ಹಾಕುತ್ತಿರುವುದು, ಆಯುಷ್ಮಾನ್ ಭಾರತ್, ಸ್ತ್ರೀಶಕ್ತಿ ಸಂಘಗಳಿಗೆ ಸೌಲಭ್ಯ, ಜಲಜೀವನ್ ಮಿಷನ್‍ನಡಿ ಪ್ರತಿ ಮನೆಗೂ ನಳದ ಮೂಲಕ ನೀರು, ಷಟ್ಪತ ರಸ್ತೆಗೆ ಅನುದಾನ, ಅಮೃತಸರೋವರ ಯೋಜನೆ, ಶ್ರೀನಿವಾಸರಪುರ ಬೈಪಾಸ್ ರಸ್ತೆಗೆ 250 ಕೋಟಿ, ಚಿಂತಾಮಣಿ ಬೈಪಾಸ್ ರಸ್ತೆಗೆ 256 ಕೋಟಿ ಹೀಗೆ ವಿವಿಧ ಯೋಜನೆಗಳನ್ನು ಜಿಲ್ಲೆಗೆ ನೀಡಿರುವ ಮೋದಿ ಕಾಣಲು ಜನರಲ್ಲಿ ಕಾತರವಿದೆ ಎಂದರು.
ಭೋವಿ,ಗೊಲ್ಲ,ವಕ್ಕಲಿಗ ಬಲಿಜ,ಬ್ರಾಹ್ಮಣ,ವಿಶ್ವಕರ್ಮ ಹೀಗೆ ಎಲ್ಲಾ ಸಮುದಾಯಗಳ ಅಭಿವೃದ್ದಿ ನಿಗಮ ನೀಡಿರೋದು ಬಿಜೆಪಿ ಸರ್ಕಾರ ಎಲ್ಲಾ ಸಮುದಾಯಗಳಿಗೂ ನ್ಯಾಯ ನೀಡಿದೆ,ಅಲ್ಪಸಂಖ್ಯಾತರು ಬೆಂಬಲಿಸಲಿದ್ದಾರೆ ಎಂದರು.


ಜಿಲ್ಲೆಯ ಹಲವು ಬೇಡಿಕೆಗೆ ಮನವಿ


ಕೋಲಾರ ರಿಂಗ್ ರಸ್ತೆ, ಮೆಡಿಕಲ್ ಕಾಲೇಜು, ದೊಡ್ಡ ಕಾರ್ಖಾನೆಗಳು, ರೈತರಿಗೆ ಕೃಷಿ ಸಂಶೋಧನಾ ಕೇಂದ್ರ, ಚಿನ್ನದ ಗಣಿ ಕಾರ್ಮಿಕರ ರಕ್ಷಣೆ, ಕೆಜಿಎಫ್ ಚಿನ್ನದ ಗಣಿ ಹಳೆ ವೈಭವ ಮರುಕಳಿಸುವುದು ಸೇರಿದಂತೆ ಹಲವಾರು ಬೇಡಿಕೆಗಳ ಕುರಿತು ಗಮನ ಸೆಳೆಯುವುದಾಗಿ ತಿಳಿಸಿ, ಬೆಮೆಲ್ ಖಾಸಗೀಕರಣವಿಲ್ಲ ಎಂದು ಈಗಾಗಲೇ ಸಚಿವ ರಾಜನಾಥಸಿಂಗ್ ಸ್ಪಷ್ಟಪಡಿಸಿರುವುದರಿಂದ ಅದರ ಕುರಿತು ಮತ್ತೆ ಪ್ರಸ್ತಾಪ ಅಗತ್ಯವಿಲ್ಲ ಎಂದರು.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಮೋದಿಗೆ ಸರಿಸಾಟಿಯಾಗಲು ಸಾಧ್ಯವೇ? ರಾಹುಲ್ ಇರುವೆಯಾದರೆ ಮೋದಿ ಆನೆಯಿದ್ದಂತೆ ಅವರ ಹೆಸರೇ ಶತ್ರುಗಳ ಎದೆಯಲ್ಲಿ ನಡುಕ ಸೃಷ್ಟಿಸುತ್ತದೆ, ವಿಶ್ವಮಟ್ಟದಲ್ಲಿ ಭಾರತದ ಗೌರವ ಹೆಚ್ಚಿದೆ ಆದರೆ ರಾಹುಲ್ ವಿದೇಶಗಳಿಗೆ ಹೋಗಿ ದೇಶದ ಮಾನ ಹರಾಜು ಹಾಕುವ ಮೂಲಕ ಕಾಂಗ್ರೆಸ್ ಸಂಸ್ಕøತಿಯನ್ನು ಬಿಂಬಿಸಿದ್ದಾರೆ ಎಂದರು.
ಕ್ಲಾಕ್ ಟವರ್‍ಮೇಲೆ ನಮ್ಮ ರಾಷ್ಟ್ರಧ್ವಜ ಹಾರಿಸಿದ್ದನ್ನು ಹೇಳಿಕೊಂಡು ಕಾಂಗ್ರೆಸ್ ಮತ ಕೇಳಲು ಹೊರಟಿರುವುದು ನಾಚಿಕೇಗೇಡು ಎಂದ ಅವರು, ರಾಷ್ಟ್ರಧ್ವಜ ಹಾರಿಸಿದ್ದು ತಪ್ಪೇ ಎಂದು ಪ್ರಶ್ನಿಸಿದರು.


ಕೆ.ವೈ.ನಂಜೇಗೌಡ ವಿರುದ್ದ ವಾಗ್ದಾಳಿ


ಮಾಲೂರು ಶಾಸಕ ಕೆ.ವೈ.ನಂಜೇಗೌಡರ ವಿರುದ್ದ 50 ಕೇಸ್ ಇದೆ, ಅಕ್ಕಿ,ಕಲ್ಲು,ಮಣ್ಣು,ಹಾಲು,ಮೊಸರು,ಬೆಣ್ಣೆ, ಪೆಟ್ರೋಲ್ ಎಲ್ಲವೂ ತಿಂದಿದ್ದಾರೆ, ಉಪ್ಪು ತಿಂದೋರು ನೀರು ಕುಡಿಯಲೇ ಬೇಕು, ಖಾಯಂ ಆಗಿ ಜೈಲು ಸೇರುವ ಕಾಲ ಹತ್ತಿರವೇ ಇದೆ, ನಾಳೆಯಿಂದ ನಾನು ಮಾಲೂರು ತಾಲ್ಲೂಕಿನಲ್ಲಿ ಪ್ರಚಾರ ನಡೆಸುವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್,ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ,ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ, ದಿಶಾಸಮಿತಿ ಸದಸ್ಯ ಅಪ್ಪಿನಾರಾಯಣಸ್ವಾಮಿ, ನಗರಸಭಾ ಸದಸ್ಯ ಪ್ರವೀಣ್ ಗೌಡ,ಬಿಜೆಪಿ ಮುಖಂಡರಾದ ಗುರುನಾಥರೆಡ್ಡಿ,ಬೆಗ್ಲಿ ಸಿರಾಜ್,ಮಮತಾ, ಗಾಂಧಿನಗರ ವೆಂಕಟೇಶ್, ನಗರ ಪ್ರ.ಕಾರ್ಯದರ್ಶಿ ಮಂಜುನಾಥ್,ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ, ಅಮರ್,ಅನಿಲ್‍ಬಾಬು,ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

ಚುನಾವಣಾ ತನಿಖಾ ಚೆಕ್ ಪೋಸ್ಟ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಊಟ ತಿಂಡಿ ಕುಡಿಯುವ ನೀರು ಒದಗಿಸಲು ಮನವಿ

ಕೋಲಾರ ಏಪ್ರಿಲ್ 25 : ಕರ್ನಾಟಕ ರಾಜ್ಯದಾದ್ಯಂತ ಹೊರವಲಯದ ಚೆಕ್ ಪೋಸ್ಟ್‍ಗಳಲ್ಲಿ ಕರ್ನಾಟಕ ರಾಜ್ಯದ ಚುನಾವಣಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಪೊಲೀಸ್ ಹಾಗೂ ಇತರೆ ಸಿಬ್ಬಂದಿಗೆ ಊಟ, ತಿಂಡಿ, ಕಾಫಿ, ನೀರಿನ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಅಥವಾ ಸರ್ಕಾರದ ವತಿಯಿಂದ ಒದಗಿಸುವಂತೆ ಜಿಲ್ಲಾಡಳಿತ ಮುಖಾಂತರ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ವಂದಿತಾ ಶÀರ್ಮಾ ರವರಿಗೆ ಮನವಿಯನ್ನು ಸಾಮಾಜಿಕ ಕಾರ್ಯಕರ್ತ ಗೌರಿಪೇಟೆ ಕೆ.ಎನ್.ರವೀಂದ್ರನಾಥ್, ಬೆಗ್ಲಿಹೊಸಹಳ್ಳಿ ಬಿ.ಎಂ.ಮುನಿಕೃಷ್ಣಯ್ಯ, ನಿವೃತ್ತ ಪಿಡಬ್ಲೂಡಿ ಅಧಿಕಾರಿ ಎನ್. ರಾಮಚಂದ್ರ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023ರ ಸಲುವಾಗಿ ರಾಜ್ಯದಾದ್ಯಂತ ವಿವಿಧ ಕಡೆಗಳಲ್ಲಿ ತನಿಖಾ ಚೆಕ್ ಪೋಸ್ಟ್‍ಗಳನ್ನು ತೆರೆದು ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲಾಗಿರುವುದು ಸ್ವಾಗತಾರ್ಹವಾಗಿದೆ. ಆದರೆ ಇಂತಹ ತನಿಖಾ ಚಕ್‍ಪೋಸ್ಟ್‍ಗಳು ಊರುಗಳಿಂದ ಹೊರವಲಯದಲ್ಲಿ ನಿರ್ಮಿಸಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಹಾಗೂ ಇತರೆ ಸಿಬ್ಬಂದಿಗೆ ಉಪಹಾರ ಮತ್ತು ಊಟಕ್ಕೆ ತೊಂದರೆಯಾಗುತ್ತಿದೆ. ಮಾನವೀಯತೆಯ ದೃಷ್ಟಿಯಿಂದ ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಜಿಲ್ಲಾಡಳಿತ ಮತ್ತು ಸರ್ಕಾರದ ವತಿಯಿಂದ ಉಚಿತವಾಗಿ ತಿಂಡಿ, ಊಟ, ಕಾಫಿ, ಕುಡಿಯುವ ನೀರು ಹಾಗೂ ಇತರೆ ಮೂಲಭೂತ ವ್ಯವಸ್ಥೆಯನ್ನು ಮಾಡಬೇಕೆಂದು ಹಾಗೂ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿರುವ ಇತರೆ ಇಲಾಖೆಗಳ ಸಿಬ್ಬಂದಿಗೆ ಸಿಗುವ ಸೌಲಭ್ಯವನ್ನು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಪೊಲೀಸ್ ವಿಶೇಷ ಭತ್ಯೆಯನ್ನು ಮಂಜೂರು ಮಾಡುವಂತೆ ಮನವಿಯಲ್ಲಿ ಕೋರಿದ್ದಾರೆ.

ಶ್ರೀನಿವಾಸಪುರ: ತಾಲ್ಲೂಕಿನ ರೈತರಿಗೆ ಕೆಸಿ ವ್ಯಾಲಿ ನೀರು ವರದಾನವಾಗಿದೆ:ಶಾಸಕ ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ: ತಾಲ್ಲೂಕಿನ ರೈತರಿಗೆ ಕೆಸಿ ವ್ಯಾಲಿ ನೀರು ವರದಾನವಾಗಿದೆ. ಕ್ಷೇತ್ರದ ಕೆರೆ ತುಂಬುವ ಕಾರ್ಯ ಪ್ರಗತಿಯಲ್ಲಿದ್ದು, ಅಂತರ್ಜಲ ಹೆಚ್ಚಿದೆ. ರೈತರು ನೆಮ್ಮದಿ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಈತರಾಸನಹಳ್ಳಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳಾ ಸಂಘಗಳಿಗೆ ಬಡ್ಡಿರಹಿತ ಸಾಲ ನೀಡಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಸಾಲದ ಪ್ರಮಾಣ ಹೆಚ್ಚಿಸಲಾಗುವುದು ಎಂದು ಹೇಳಿದರು.
ನನ್ನ ಎದುರಾಳಿಗಳು ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕಾರ್ಯ ಮುಂದಿಟ್ಟುಕೊಂಡು ಮತ ಯಾಚನೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಏಕೆಂದರೆ ಮತ ಕೇಳಲು ಅಭಿವೃದ್ಧಿ ಕಾರ್ಯ ಕೈಗೊಂಡಿರಬೇಕು. ಮತದಾರರು ತಮ್ಮ ಮತವನ್ನು ಜಾತಿಗೆ ಹಾಕಬಾರದು ದೇಶದ ಪ್ರಗತಿಗೆ ಹಾಕಬೇಕು. ಅಭಿವೃದ್ಧಿಗಾಗಿ ಶ್ರಮಿಸಿದ ಹಾಗೂ ಶ್ರಮಿಸುವ ವ್ಯಕ್ತಿಗಳಿಗೆ ಮತ ನೀಡಬೇಕು. ಚುನಾವಣೆ ವಿಷಯದಲ್ಲಿ ಗೊಂದಲಕ್ಕೆ ಅವಕಾಶ ಬೇಡ. ಪ್ರಗತಿಗೆ ಮತ ನೀಡಿ ಎಂದು ಹೇಳಿದರು.
ಮುಖಂಡರಾದ ಎನ್.ಜಿ.ಬೇಟಪ್ಪ, ಎಂ.ಗೋವಿಂದಗೌಡ, ಸೊಣ್ಣೇಗೌಡ, ವಿ.ವೆಂಕಟಸ್ವಾಮಿ, ಎನ್.ಮೋಹನ್, ವಿ.ಬಾಬು, ಐ.ಎಂ.ಮಂಜುನಾಥ್, ಎಂ.ಸಂಪತ್, ವೆಂಕಟೇಶರೆಡ್ಡಿ, ಸಂತೋಷ್ ಇದ್ದರು.

ಇನ್ನೊಮ್ಮೆ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ತರಬೇಕು :ಕೇಂದ್ರ ಸಚಿವ ಅರ್ಜುನ್‍ರಾಮ್ ಮೇಘ್ವಾಲ್

ಶ್ರೀನಿವಾಸಪುರ: ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಶಕ್ತಿ ತುಂಬಬೇಕು. ಇನ್ನೊಮ್ಮೆ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ತರಬೇಕು ಎಂದು ಕೇಂದ್ರ ಸಂಸದೀಯ ಹಾಗೂ ಸಂಸ್ಕøತಿ ಸಚಿವ ಅರ್ಜುನ್‍ರಾಮ್ ಮೇಘ್ವಾಲ್ ಹೇಳಿದರು.
ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರ ಆಶೋತ್ತರಗಳ ಈಡೇರಿಕೆಗೆ ಪೂರಕವಾಗಿವೆ ಎಂದು ಹೇಳಿದರು.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆಯಂಥ ಹಲವು ಯೋಜನೆಗಳು ರೈತರು, ಕಾರ್ಮಿಕರು, ಹಾಗೂ ಸಮಾಜದಲ್ಲಿನ ಕಟ್ಟ ಕಡೆ ವ್ಯಕ್ತಿಗೂ ತಲುಪಿವೆ. ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳ ಲಾಭ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗಿದೆ. ಆದ್ದರಿಂದ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರಲು ಮತದಾರರು ಆಶೀರ್ವಾದ ಮಾಡಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಾಯನಸ್ವಾಮಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಿಸುತ್ತಿವೆ. ರೈತರು, ಕೃಷಿಕರು, ಕೃಷಿ ಕಾರ್ಮಿಕರು ಹೀಗೆ ಸಮಾಜದ ಎಲ್ಲ ವರ್ಗದ ಜನರಿಗೆ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿ ಜೆ.ಆರ್.ಶ್ರೀನಿವಾಸರೆಡ್ಡಿ, ಜಯಚಂದ್ರ, ಅಶೋಕರೆಡ್ಡಿ, ಎನ್.ರಾಜೇಂದ್ರ ಪ್ರಸಾದ್, ರಾಜೇಖರರೆಡ್ಡಿ, ಶಶಿಕುಮಾರ್ , ಆರ್.ನಾರಾಯಣಸ್ವಾಮಿ, ಆಂಜಪ್ಪ, ಟಿ.ಮಂಜುನಾಥರೆಡ್ಡಿ, ಪದ್ಮನಾಭ್, ಶ್ರೀರಾಮ್, ಶಂಷೀರ್ ಇದ್ದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಸಂತ ನಿರಂಕಾರಿ ಸತ್ಸಂಗ ನಾಗೂರು ಇಲ್ಲಿ ಬ್ರಹತ್ ರಕ್ತ ದಾನ ಶಿಬಿರ

25-4-22 ರಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಸಂತ ನಿರಂಕಾರಿ ಸತ್ಸಂಗ ನಾಗೂರು ಇಲ್ಲಿ ಬ್ರಹತ್ ರಕ್ತ ದಾನ ಶಿಬಿರವನ್ನು ಆಯೋಜಿಸಿದರು. ಇದರ ಉದ್ಘಾಟನೆ ಯನ್ನು ಸಂತ ನಿರಂಕಾರಿ ಸಂಸ್ಥೆಯ ಆನಂದ್ ಚಾಬ್ರಿಯ ಮತ್ತು ರೆಡ್ ಕ್ರಾಸ್ ಸಭಾಪತಿ ಎಸ್ ಜಯಕರ ಶೆಟ್ಟಿ ಇವರು ಜಂಟಿಯಾಗಿ ಮಾಡಿದರು. ಕಾರ್ಯಕ್ರಮ ದಲ್ಲಿ ರೆಡ್ ಕ್ರಾಸ್ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣೇಶ್ ಆಚಾರ್ಯ, ಸತ್ಯನಾರಾಯಣ ಪುರಾಣಿಕ ಹಾಗೂ ಸಂತ ನಿರಂಕಾರಿ ಸಂಸ್ಥೆಯ ರಾಮ ಪೂಜಾರಿ, ರಾಮ ಮೊಗವೀರ, ಲಕ್ಷ್ಮಣ ಪೂಜಾರಿ, ನಿರಂಜನ ಪೈ, ಚಂದ್ರ ಚಂದನ್, ದಾಮೋದರ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು. ಒಟ್ಟು116 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ :ಅಹಮದ್ ಪಾಷಾ ಬೀದರ್ ನಲ್ಲಿನ ತನ್ನ ಕುಟುಂಬವನ್ನು ಮತ್ತೆ ಸೇರಿಕೊಂಡರು


ದಿನಾಂಕ 05.01.2023 ರಂದು ಹೊಸಂಗಡಿಯ ರಸ್ತೆಯಲ್ಲಿ ನಿರ್ಗತಿಕನಾಗಿ,ಕಳಪೆಯಾದ ಸ್ವಚ್ಛತೆ ಮತ್ತು ಖಿನ್ನತೆಗೆ ಒಳಗಾಗಿ
ಅಲೆದಾಡುತ್ತಿದ್ದ ಸುಮಾರು 39 ವರ್ಷ ಪ್ರಾಯದ ವ್ಯಕ್ತಿಯನ್ನು ಸಮಾಜ ಸೇವಕರಾದ ಶ್ರೀ ಇಬ್ರಾಹಿಂ ಅವರು ರಕ್ಷಿಸಿ ಮಂಜೇಶ್ವರದ
ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ಆರೈಕೆ ಮತ್ತು ಚಿಕಿತ್ಸೆಗಾಗಿ ದಾಖಲಿಸಿದರು.
ಪ್ರಾಥಮಿಕ ಆರೈಕೆಯ ನಂತರ ಅವರಿಗೆ ಮನೋವೈದ್ಯಕೀಯ ಕಾಯಿಲೆ ಇರುವುದು ಪತ್ತೆಯಾಯಿತು ಮತ್ತು ಅವರು ತನ್ನನ್ನು
ಅಹ್ಮದ್ ಬಾಷಾ ಎಂಬುದಾಗಿ ತಿಳಿಸಿದರು . ಮನೋರೋಗ ತಜ್ಞರು ಮತ್ತು ಮನೋವೈದ್ಯಕೀಯ ಸಮಾಜ ಸೇವಕರ
ಮಾರ್ಗದರ್ಶನದಲ್ಲಿ ಅವರಿಗೆ ವಿವಿಧ ಚಿಕಿತ್ಸಕ ಚಟುವಟಿಕೆಗಳೊಂದಿಗೆ ಚಿಕಿತ್ಸೆಯನ್ನು ಪ್ರಾರಂಭಿಸಲಾಯಿತು.
ನಿಧಾನವಾಗಿ ಅವರು ತಮ್ಮ ಸ್ಥಿತಿಯನ್ನು ಸುಧಾರಿಸಿಕೊಂಡರು ಮತ್ತು ಅವರ ಸ್ಥಳೀಯ ವಿವರಗಳನ್ನು ಹಂಚಿಕೊಂಡರು. ಈ
ವಿವರಗಳ ಆಧಾರದ ಮೇಲೆ ಸ್ನೇಹಾಲಯ ತಂಡ ಸ್ಥಳೀಯ ಪೊಲೀಸ್ ಠಾಣೆ ಮತ್ತು ಪಂಚಾಯತ್ ನ್ನು ಸಂಪರ್ಕಿಸಿತು . ಇದರಂತೆ
ಕರ್ನಾಟಕದ ಬೀದರ್‌ನ ಅಮಲಾಪುರದ ಟಿಪ್ಪು ಸುಲ್ತಾನ್ ಕಾಲೋನಿಯಲ್ಲಿನ ಅವರ ಕುಟುಂಬವನ್ನು ಪತ್ತೆಹಚ್ಚುವಲ್ಲಿ ತಂಡ
ಯಶಸ್ವಿಯಾಯಿತು .ಸ್ನೇಹಾಲಯ ತಂಡವು ಅವರ ಕಿರಿಯ ಸಹೋದರ ಮೊಹಮ್ಮದ್ ಮುಕ್ತಾರ್ ಅವರನ್ನು ಸಂಪರ್ಕಿಸಿತು. ಇಂದು
ದಿನಾಂಕ 24.04.2023 ರಂದು ಅವರು ಮತ್ತು ದಲಿತ ಮತ್ತು ಮೈನಾರಿಟಿಸ್ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ
ಮಹಮ್ಮದ್ ಸಲೀಂ ತಮ್ಮ ನಾಯಕರಾದ ಶ್ರೀ ಮೊಹಮ್ಮದ್ ಸಲೀಮ್ ಅವರೊಂದಿಗೆ ಸ್ನೇಹಾಲಯವನ್ನು ತಲುಪಿದರು. ಸುಮಾರು
8 ತಿಂಗಳ ಹಿಂದೆ ಕಾಣೆಯಾದ ಅಹ್ಮದ್ ಪಾಷಾ ಅವರನ್ನು ಮತ್ತೆ ಭೇಟಿ ಮಾಡಿ ಸಂತೋಷಪಟ್ಟರು.
ಅಹ್ಮದ್ ಪಾಷಾ ಟ್ರಾವೆಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಒಮ್ಮೆ ಅಪಘಾತಕ್ಕೀಡಾದರು ಮತ್ತು ತಲೆಗೆ ಆದ ಏಟಿಗೆ ಚಿಕಿತ್ಸೆ
ಪಡೆದರು ಎಂದು ಅವರು ತಿಳಿಸಿದರು . ತದನಂತರ ಅವರು ಮಾನಸಿಕ ಅಸ್ವಸ್ಥತೆಯನ್ನು ಹೊಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು
ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದಾಗಿ ಹಾಗೂ ಅವರೆಲ್ಲರು ಆತನಿಗಾಗಿ ಹುಡುಕಾಟ ನಡೆಸಿದ್ದಾಗಿ ತಿಳಿಸಿದರು .ಅಹ್ಮದ್
ಪಾಷಾರನ್ನು ಮತ್ತೆ ಭೇಟಿ ಮಾಡಿ ತಮ್ಮ ಊರಿಗೆ ಕರೆದೊಯ್ಯಲು ಸಂತೋಷಪಟ್ಟರು. ಅವರು ಸ್ನೇಹಾಲಯದ ಸೇವೆಯನ್ನು
ಶ್ಲಾಘಿಸಿದರು ಮತ್ತು ತಮ್ಮ ತಂಡಕ್ಕೆ ಮಾರ್ಗದರ್ಶನ ನೀಡಿದ ಸ್ನೇಹಾಲಯದ ಸಂಸ್ಥಾಪಕ ಸಹೋದರ ಜೋಸೆಫ್ ಕ್ರಾಸ್ತಾ
ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಶ್ರೀನಿವಾಸಪುರ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಸೋಮವಾರ ಅಂತಿಮ ಪಟ್ಟಿ

ಶ್ರೀನಿವಾಸಪುರ 3: ಶ್ರೀನಿವಾಸಪುರ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಸೋಮವಾರ ಅಂತಿಮ ಪಟ್ಟಿಯನ್ನು ಮಾಡಲಾಗಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೆ.ಆರ್.ರಮೇಶ್‍ಕುಮಾರ್, ಜೆಡಿಎಸ್ ಪಕ್ಷದಿಂದ ಜಿ.ಕೆ.ವೆಂಕಟಶಿವಾರೆಡ್ಡಿ, ಬಿಜೆಪಿ ಪಕ್ಷದಿಂದ ಆರ್.ಶ್ರೀನಿವಾಸರೆಡ್ಡಿ, ಎಎಪಿ ಪಕ್ಷದಿಂದ ವೈ.ವಿ.ವೆಂಕಟಾಚಲ, ಕೆ.ಆರ್.ಪಕ್ಷದಿಂದ ಜಿ.ಕೆ.ಆನಂದ್ , ಪಕ್ಷೇತರ ಅಭ್ಯರ್ಥಿಗಳಾಗಿ ಎನ್.ಎಸ್.ರಮೇಶ್‍ಕುಮಾರ್, ಎಸ್.ರಮೇಶ್‍ಕುಮಾರ್, ವೆಂಕಟಶಿವಾರೆಡ್ಡಿ, ಟಿ.ಎನ್.ವೆಂಕಟಶಿವಾರೆಡ್ಡಿ ಅಂತಿಮ ಕಣದಲ್ಲಿ ಇದ್ದಾರೆ

ನಿಧನ : ಪಿ.ವಿ.ಚಂದ್ರಯ್ಯ ಶೆಟ್ಟಿ


ಶ್ರೀನಿವಾಸಪುರ: ಪಟ್ಟಣದ ವರ್ತಕ ಪಿ.ವಿ.ಚಂದ್ರಯ್ಯ ಶೆಟ್ಟಿ (87) ಭಾನುವಾರ ನಿಧನರಾದರು. ಅವರು ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲಿದ್ದರು.
ಮೃತರಿಗೆ ನಾಲ್ವರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಏ.24 ರಂದು ಬೆಳಿಗ್ಗೆ ಪಟ್ಟಣದ ಹೊರವಲಯದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು.