Rev Fr Walter D’Mello takes charge as Parish Priest of Belthangady Church

BELTHANGADY, MAY 15: Rev. Fr Walter D’Mello took charge as the Parish Priest of Most Holy Redeemer Church, Belthangady. He has served 6 years as the Judicial Vicar of  Mangalore Diocese .

New Parish Priest Rev Fr Walter D’Mello was welcomed by Rev. Fr Joseph Cardoza, former Parish Priest Belthangady, Rev. Fr Clifford Pinto,  Principal Holy Redeemer English Medium School, Mr Walter Monis Vice PresidentParish Pastoral Council, Mr Gilbert Pinto, Secretary of Parish Pastoral Council, Mrs Pauline Rego, Co-ordinator Parish Pastoral Commissions, Sr Jacintha Baretto, superior St Teresa Convent and the Faithful.

Fr Walter D’Mello was accompanied by V. Rev. Fr Vincent Monteiro, Parish Priest Bendoor Church, Msgr Leslie Shenoy, Rev. Fr Arun Lobo, Rev Fr  Ronson Pinto, Rev. Fr Vivian Rodrigues, Rev. Fr Naveen Pinto, Rev. Fr Alfred Pinto, Rev Fr Francis Dsouza and Rev. Lawrence Dsouza.

Rev. Fr Joseph Cardoza,  handed over the responsibilities to his successor Rev Fr Walter D’Mello. Rev Fr Basil Vas deligate of Bishop was present.

Belthangady deanery priests Rev Fr Praveen Dsouza, Rev Fr Thomas Sequiera  and Rev Fr Henry Madtha were present for the entire program.

Fr Joseph Cardoza will be taking charge as Parish Priest of Martin De Pores Church, Belvai

 on Wednesday, May 16, 2023.He served as Parish Priest  from 08-08-2020 to 15-05-2023.

ಐ ಎಂ ಜೆ ಐ ಎಸ್ ಸಿ ಮೂಡ್ಲಕಟ್ಟೆ ಕುಂದಾಪುರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ  ಮಹಿಳೆಯರ ಥ್ರೋ ಬಾಲ್ ಪಂದ್ಯಾಕೂಟದ ಉದ್ಘಾಟನೆ 2022 – 23

ಕುಂದಾಪುರ: ಮೇ:17 –  ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ಮಹಿಳೆಯರ ಥ್ರೋ ಬಾಲ್ ಪಂದ್ಯಕೂಟದ ಉದ್ಘಾಟನೆಯನ್ನು ನೆರವೇರಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ| ಕಿಶೋರ್ ಕುಮಾರ್ ಸಿ ಕೆ. ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾ ಸಂಸ್ಥೆಯ ಬೆಳವಣಿಗೆಯಲ್ಲಿ ಕ್ರೀಡಾ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಈ ಸಂಸ್ಥೆಯಲ್ಲಿ ಅಂತರ್ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾಕೂಟವನ್ನು  ನಡೆಸಬಹುದೆಂಬ ಆಶಯವನ್ನು ವ್ಯಕ್ತಪಡಿಸಿ, ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯವನ್ನು ಕೋರಿದರು.

ಮುಖ್ಯ ಅತಿಥಿಯವರಾಗಿ ಆಗಮಿಸಿದ ಶ್ರೀಯುತ ಜಯಕರ್ ಶೆಟ್ಟಿ, ಅಧ್ಯಕ್ಷರು, ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ, ಇವರು ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಅವಕಾಶ ನೀಡಬೇಕೆಂದು ತಿಳಿಸುತ್ತಾ, ಸೋಲು ಗೆಲುವು ನಮ್ಮ ಬದುಕಿನ ಭಾಗ. ಸೋಲು ನಮ್ಮ ಕೊನೆಯಲ್ಲ, ಅದು ಮುಂದಿನ ಯಶಸ್ಸಿಗೆ ಸೋಪಾನ ಎಂದು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಐ ಎಂ ಜೆ ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಪ್ರೊ| ದೋಮ ಚಂದ್ರಶೇಖರ್ ರವರು ಸೋಲು ಮತ್ತು ಗೆಲುವು ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಮುಂದುವರಿಕೆ ಎನ್ನುವುದು ಕ್ರೀಡೆಯ ಮನೋಭಾವವನ್ನು ತಿಳಿಸುತ್ತದೆ ಎಂದರು.

 ಕಾರ್ಯಕ್ರಮದಲ್ಲಿ ಐಎಂಜೆ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ, ಕಾಲೇಜಿನ ಪ್ರಾಂಶುಪಾಲರಾದ ಡಾ| ಪ್ರತಿಭಾ ಎಂ ಪಟೇಲ್, ಉಪ ಪ್ರಾಂಶುಪಾಲರಾದ ಪ್ರೊ| ಜಯಶೀಲ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಯುತ ಪ್ರವೀಣ್ ಖಾರ್ವಿ, ವಿವಿಧ ವಿದ್ಯಾ ಸಂಸ್ಥೆಗಳ ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಕರು, ಕಾಲೇಜಿನ ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಪ್ರತಿಭಾ ಎಂ ಪಟೇಲ್,  ರವರು ಪ್ರಾಸ್ತಾವಿಕ ಭಾಷಣ ನೀಡಿದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಪ್ರೊ| ಸುಮನರವರು ನಿರೂಪಿಸಿದರು.  ಆಂಗ್ಲ ವಿಭಾಗದ ಪ್ರೊ| ಪಾವನ ರವರು ಸ್ವಾಗತಿಸಿದರು ಹಾಗೂ ವಾಣಿಜ್ಯ ವಿಭಾಗದ ಪ್ರೊ|ಶಬೀನಾ ಹೆಚ್ ವಂದಿಸಿದರು.

ಕ್ಷೇತ್ರದ ಸರ್ವತೋಮುಖ ಪ್ರಗತಿ ನನ್ನ ಗುರಿಯಾಗಿದೆ : ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ; ಕ್ಷೇತ್ರದ ಸರ್ವತೋಮುಖ ಪ್ರಗತಿ ನನ್ನ ಗುರಿಯಾಗಿದೆ ಎಂದು ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ಜೆಡಿಎಸ್ ಕಾರ್ಯಕರ್ತರು ಏರ್ಪಡಿಸಿದ್ದ ವಿಜಯೋತ್ಸವದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಸರ್ಕಾರ ಇದ್ದರೂ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ತರುವ ಶಕ್ತಿ ನನಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಕೃಷಿ ಕೊಳವೆ ಬಾವಿ ನಿರ್ಮಿಸಿಕೊಳ್ಳಲು ಅನುಕೂಲ ಕಲ್ಪಿಸಲಾಗುವುದು. ಕ್ಷೇತ್ರದಾದ್ಯಂತ ಪರಿಶೀಲನೆ ನಡೆಸಿ ಮನೆ ಇಲ್ಲದವರಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.
ತಾಲ್ಲೂಕಿನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪದವಿ ಪೂರ್ವ ಕಾಲೇಜು ಸ್ಥಾಪಿಸಲಾಗುವುದು. ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಸರಬರಾಜು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು. ನನಗೆ ಮತ ನೀಡಿ ಗೆಲ್ಲಿಸಿದ ಮತದಾರರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಪ್ರತಿ ಹಂತದಲ್ಲೂ ಪಕ್ಷಾತೀತವಾಗಿ ಹಾಗೂ ಪಾರದರ್ಶಕವಾಗಿ ನಡೆದುಕೊಳ್ಳುತ್ತೇನೆ. ನನ್ನ ಗೆಲುವಿಗೆ ಕಾರಣರಾದ ಎಲ್ಲರರಿಗೂ ಕೃತಜ್ಞನಾಗಿದ್ದೇನೆ ಎಂದು ಹೇಳಿದರು.
ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ ಜಿ.ಕೆ.ವೆಂಕಟಶಿವಾರೆಡ್ಡಿ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ಹೊಂದಿರುವ ಯೋಜನೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಗ್ರಾಮದ ಮುಖ್ಯ ರಸ್ತೆಗಳಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ರೋಡ್ ಶೋ ನಡೆಸಿ ಸಂಭ್ರಮಿಸಿದರು.
ಮುಖಂಡರಾದ ಶೇಷಾಪುರ ಗೋಪಾಲ್, ಕೆ.ಬಿ.ರಘುನಾಥ್ ರೆಡ್ಡಿ,ಎಂ.ವಿ.ಮಂಜುನಾಥ್,ಶ್ರೀನಿವಾಸ್,ಬಾಬು ರವಿಕುಮಾರ್, ಶ್ರೀನಿವಾಸಪ್ಪ, ಜಯಾಜ್ ಖಾನ್, ಅಬ್ದುಲ್, ಅಮ್ಜದ್, ಚಾನ್‌ಪಾಷ, ಸರ್ದಾರ್, ಫಯಾಜ್ ಖಾನ್, ಇಂತಿಯಾಜ್, ಪ್ರಸನ್ನ, ಮನು ದುರ್ಗಾಪ್ರಸಾದ್ ಇದ್ದರು.