ಕುಂದಾಪುರದ ಹಿರಿಯ ಉದ್ಯಮಿ ರಾಮದಾಸ ಮಲ್ಯ ನಿಧನ


ಕುಂದಾಪುರದ ಹಿರಿಯ ವ್ಯವಹಾರೋದ್ಯಮಿ ರಾಮದಾಸ ಮಲ್ಯ (86) ಮೇ 22 ರಂದು ನಿಧನರಾದರು.
ಖಾಸಗಿ ಬಸ್ ಟ್ರಾನ್ಸ್‍ಪೋರ್ಟ್ ವ್ಯವಹಾರಸ್ಥರಾಗಿ ಜನಪ್ರಿಯರಾಗಿದ್ದ ಇವರು ಕುಂದಾಪುರದ ಪುರಸಭೆ ಬಳಿ ಕಾಂಡಿಮೆಂಟ್ಸ್ ವ್ಯವಹಾರ ಮಳಿಗೆಯನ್ನು ಪುತ್ರರೊಂದಿಗೆ ನಡೆಸುತ್ತಿದ್ದರು.
ಇವರು ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ ಸಮುದಾಯದ ಧರ್ಮಗುರುಗಳಿಂದ, ಹ್ಯುಮಾನಿಟಿ ಉಚಿತ ವಸತಿ 20 ಮನೆಗಳ ಕೀಲಿ ಕೈಗಳ ಆಶೀರ್ವಚನ

ವರದಿ: ಪಿಯೂಸ್ ಲಿಗೋರಿ ರೊಡ್ರಿಗಸ್

ಉಚಿತ ವಸತಿ ಯೋಜನೆಯ 20 ಮನೆಗಳ 20 ಕೀಲಿ ಕೈಗಳನ್ನು ಸ್ಥಳೀಯ ಅಲಂಗಾರು ಚರ್ಚಿನ ಧರ್ಮಗುರುಗಳು , ಶ್ರೀ ಬಡಗು ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಲಂಗಾರು ಅರ್ಚಕರು, ಸಾವಿರ ಕಂಬದ ಬಸದಿ, ಮೂಡಬಿದ್ರೆ ಸ್ವಾಮೀಜಿಯವರು, ನೂರಾನಿ ಮಸೀದಿ ಪುತ್ತಿಗೆ ಧರ್ಮಗುರುಗಳು ಆಶೀರ್ವದಿಸಿ ಸಂಸ್ಥೆಯ ಮೇಲೆ ಹಾಗೂ ಸಂಸ್ಥೆಯ ದಾನಿ ಅಭಿಮಾನಿಗಳ ಮೇಲೆ ದೇವರ ಕೃಪೆಯನ್ನು ಬೇಡಿ ಶುಭ ಹಾರೈಸಿದರು. ಹ್ಯುಮಾನಿಟಿ ಟ್ರಸ್ಟಿಗಳಾದ ಮತ್ತು ಅಭಿಮಾನಿಗಳಾದ ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ ನಾಲ್ಕೂ ಸಮುದಾಯದವರು ಭಾಗವಹಿಸಿದ್ದರು.

ಮಾಜಿ ಶಾಸಕ ಯುಆರ್ ಸಭಾಪತಿ ನಿಧನ (71)

ಉಡುಪಿ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ  ಮಾಜಿ ಶಾಸಕ ಯು ಆರ್ ಸಭಾಪತಿ ನಿಧನರಾಗಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. 1994 ರಲ್ಲಿ ಕೆಸಿಪಿ ಮತ್ತು 1999 ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  ಯುಆರ್ ಸಭಾಪತಿ ಅವರು ಮಾಜಿ ಸಿಎಂ ಬಂಗಾರಪ್ಪ ಅವರ ಅನುಯಾಯಿ ಆಗಿದ್ದರು. ಆಸ್ಕರ್ ಫರ್ನಾಂಡಿಸ್ ರಾಜಕೀಯ ಪ್ರವೇಶಕ್ಕೂ ಸಭಾಪತಿ ಪ್ರೇರಣೆಯಾಗಿದ್ದರು. ಯು ಆರ್ ಸಭಾಪತಿ ರಾಷ್ಟ್ರೀಯ ಜನತಾದಳ, ಜಾತ್ಯಾತೀತ ಜನತಾದಳದೊಂದಿಗೂ ಗುರುತಿಸಿಕೊಂಡಿದ್ದರು. 80 -90ರ ದಶಕದ ಕರಾವಳಿಯ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು.

ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ದಿವ್ಯ ಬಲಿಪೀಠ ಸೇವಕರ ದಿನಾಚರಣೆ

Report And Photos : Dominic Braganza

ಕುಂದಾಪುರ, ಮೇ, 21: ಭಾನುವಾರ ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ದಿವ್ಯ ಬಲಿಪೀಠದ ಸೇವಕರ ದಿನವನ್ನು ಆಚರಿಸಿ ದಿವ್ಯ ಬಲಿಪೂಜೆಯನ್ನು ಅರ್ಪಿಸಲಾಯಿತು. ಕುಂದಾಪುರ ಹೋ ಲಿ ರೋಜರಿ ಚರ್ಚಿನ ಸಹಾಯ ಧರ್ಮಗುರುಗಳಾದ ವಂದನೀಯ ಫಾ. ಅಶ್ವಿನ್ ಆರಾನ್ನಾ ಪ್ರಧಾನ ಯಾಜಕರಾಗಿ ಈ ದಿವ್ಯ ಬಲಿಪೂಜೆಯನ್ನು ಅರ್ಪಿಸಿ “ದಿವ್ಯ ಬಲಿಪೀಠದ ಸೇವಕರ ಪಾಲಕ ಸಂತ ಬರ್ಕ್ ಮನ್ಸ್ ರಿಗೆ ದಿವ್ಯ ಬಲಿಪೀಠದ ಸೇವೆ ಮಾಡುವುದರಲ್ಲಿ ಅತೀವ ಶ್ರದ್ಧೆ ಹಾಗೂ ಪ್ರೀತಿಯಿತ್ತು. ಅದರಂತೆ ದಿವ್ಯ ಬಲಿಪೀಠದ ಸೇವಕರು ಅವರ ಪಾಲಕ ಸಂತರ ಆದರ್ಶವನ್ನು ಮೈಗೂಡಿಸಿಕೊಂಡು, ಯೇಸು ಕ್ರೀಸ್ತರು  ತೋರಿಸಿದ ಹಾದಿಯಲ್ಲಿ ನಡೆದು, ಮುಂದೊಂದು ದಿನ ದೇವರ ಕರೆಗೆ ಓಗೊಟ್ಟು ಯಾಜಕರಾಗಿ ದೇವರ ಸೇವೆ ಮಾಡುವಂತಾಗಲಿ”  ಎಂದು ಪ್ರಾರ್ಥಿಸಿದರು.

    ಕುಂದಾಪುರ ಹೋ ಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ಅತೀ ವಂದನೀಯ ಫಾ. ಸ್ಟ್ಯಾನಿ ತಾವ್ರೋರವರು ಸಹ ಯಾಜಕರಾಗಿ ದಿವ್ಯ ಬಲಿಪೂಜೆಯಲ್ಲಿ ಭಾಗವಹಿಸಿ ದೇವರ ಶುಭ ಸಂದೇಶವನ್ನು ವಾಚಿಸಿ ಅರ್ಥಭರಿತವಾದ ಪ್ರಸಂಗವನ್ನು ನೀಡಿದರು. ದಿವ್ಯ ಬಲಿಪೂಜೆಯ ಕೊನೆಯಲ್ಲಿ ದಿವ್ಯ ಬಲಿಪೀಠದ ಸೇವಕರು ಸಮರ್ಪಣಾ ಪ್ರಾರ್ಥನೆಯನ್ನು ವಾಚಿಸಿದರು. ದಿವ್ಯ ಬಲಿಪೂಜೆಯ ನಂತರ ದಿವ್ಯ ಬಲಿಪೀಠ ಸೇವಕರಿಗಾಗಿ ಫಲಾಹಾರವನ್ನು ನೀಡಲಾಯಿತು.

Bhagyashree of St Lawrence English Medium school Bondel bags first prize in International karate competition.

10th standard student of st Lawrence English Medium school Bondel Mangalore Bhagyashree, daughter of Kamalaksha and Babitha participated in 45th JSKA international open level karate Championship compitition held on 13 and 14th of May 2023 at V.K.N. Menon Indoor Stadium, Thrissur, Kerala, India and won first place in KATA and third place in KUMITE. 

Earlier on 6&7th of May 2023 she had participated in TSKO 2nd National level karate Championship held at C.Pa Adhithanar Kalyana Mandapam, Anna Salai, Kodaikanal and won black belt in KUMITE and Kata. She was trained by Karate master Mr Kamalaksha. 

ಮಾವಿನ ಸುಗ್ಗಿಯಲ್ಲಿ ವರ್ತಕರು ಮತ್ತು ರೈತರು ಸಮನ್ವಯತೆಯಿಂದ ವಹಿವಾಟು ನಡೆಸಿ – ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಸಲಹೆ

ಶ್ರೀನಿವಾಸಪುರ ಮೇ-20 : ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಮಾವಿಗೆ ಹೆಸರುವಾಸಿಯಾಗಿದೆ ಆದ್ದರಿಂದ ರೈತರು, ವರ್ತಕರು ಸಮನ್ವಯತೆಯಿಂದ ನಡೆದುಕೊಂಡು ಯಾವುದೇ ಅಡಚಣೆಗಳಿಲ್ಲದೆ ಮಾವಿನ ಸುಗ್ಗಿ ಪೂರ್ಣಗೊಳಿಸಬೇಕು ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಸೂಚಿಸಿದರು.
ಎ.ಪಿ.ಎಂ.ಸಿ. ಪ್ರಾಂಗಣದಲ್ಲಿ ಶನಿವಾರ ಕರೆಯಲಾಗಿದ್ದ ವರ್ತಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಾರ್ಷಿಕ ಬೆಳೆ ಮಾವಿನ ಸುಗ್ಗಿ ಪ್ರಾರಂಭವಾಗಿದೆ ವರ್ತಕರು ರೈತರಿಗೆ ಯಾವುದೇ ತೊಂದರೆಯಾಗದಂತೆ ಪಾರದರ್ಶಕತೆಯನ್ನು ಕಾಪಾಡಬೇಕು ಕಾರ್ಮಿಕರಿಗೆ ಅಗತ್ಯವಾದ ಶುದ್ದ ಕುಡಿಯುವ ನೀರು, ವಿಶ್ರಾಂತಿಧಾಮ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನಿಗಾ ವಹಿಸಬೇಕು ಎಂದು ಕಾರ್ಯದರ್ಶಿ ಉಮಾರವರಿಗೆ ಸೂಚಿಸಿದರು. ಪೊಲೀಸ್ ಇಲಾಖೆಯವರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಜೊತೆಗೆ ಮುಖ್ಯರಸ್ತೆಯಲ್ಲಿ ನಿಲ್ಲಿಸುವ ಬೃಹತ್ ವಾಹನಗಳು ತೆರವುಗೊಳಿಸಲು ಪೊಲೀಸ್ ಇಲಾಖೆಯವರು ಗಮನ ಹರಿಸಬೇಕು, ಪ್ರಾಂಗಣದೊಳಗೆ ಮದ್ಯ ಮಾರಾಟ ನಿಲ್ಲಿಸಲು ಅಬಕಾರಿ ಇಲಾಖೆ ಕಾರ್ಯೋನ್ಮುಕರಾಗಬೇಕು ಎಂದ ಅವರು ಅಗತ್ಯವಿರುವ ರಸ್ತೆ, ಚರಂಡಿ ಕಾಮಗಾರಿಯನ್ನು ನಡೆಸಲು ಕ್ರಿಯಾಯೋಜನೆ ತಯಾರಿಸಿ ಒತ್ತುವರಿಯಾಗಿರುವ ಜಮೀನನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾವು ಬೆಳೆಗಾರರ ಅಧ್ಯಕ್ಷ ಚಿನ್ನಪ್ಪರೆಡ್ಡಿ ಮಾತನಾಡಿ ಸರಿಸುಮಾರು 150 ಮಂಡಿಗಳು ಇರುವ ಪ್ರಾಂಗಣದಲ್ಲಿ ಹಲವಾರು ಕುಂದುಕೊರತೆಗಳು ಜೀವಂತವಾಗಿದ್ದಾವೆ ಅದನ್ನು ಸರಿಪಡಿಸಲು ಕರೆದಿರುವ ಸಭೆಗೆ ಹಲವಾರು ಮಂಡಿ ಮಾಲೀಕರು ಬಾರದೆ ಇರುವುದು ಬೇಸರದ ಸಂಗತಿ, ಎ.ಪಿ.ಎಂ.ಸಿ. ಕಾಯ್ದೆಯ ಪ್ರಕಾರ ಕಮೀಷನ್ ಪಡೆಯಬಾರದು ಹಾಗೂ ಮಂಡಿ ಮಾಲೀಕರು ತ್ಯಾಜ್ಯವನ್ನು ರಸ್ತೆಬದಿ ಹಾಕಬಾರದು ಎಂದು ವರ್ತಕರ ಗಮನಕ್ಕೆ ತಂದರು.
ಎ.ಪಿ.ಎಂ.ಸಿ. ಕಾರ್ಯದರ್ಶಿ ಉಮಾ ಮಾತನಾಡಿ ಸಮಿತಿಗೆ ಬರುವ ಆದಾಯದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತಿಲ್ಲ 2015ನೇ ಸಾಲಿನಲ್ಲಿ ಸಮಿತಿ ಮಾಡಿರುವ ಸಾಲಕ್ಕೆ ಬಡ್ಡಿ ತೀರಿಸಲು ಆಗದ ಕಾರಣ ಶಾಸಕರು ಪ್ರಾಂಗಣಕ್ಕೆ ಅಗತ್ಯವಿರುವ ರಸ್ತೆ, ಚರಂಡಿ, ಕಾಂಪೌಂಡ್ ನಿರ್ಮಾಣ, ಶುದ್ದ ನೀರಿನ ಘಟಕ ಮತ್ತು ತ್ಯಾಜ್ಯ ವಿಲೇವಾರಿ ಮಾಡಲು ಸ್ಥಳಾವಕಾಶವನ್ನು ನೀಡಬೇಕು ಎಂದು ಕೋರಿದರು.
ಈ ಸಂಧರ್ಭದಲ್ಲಿ ಜಿಲ್ಲ ಪಂಚಾಯ್ತಿ ಮಾಜಿ ಅಧ್ಯಕ್ಷ ತೂಪಲ್ಲಿ ಆರ್. ನಾರಾಯಣಸ್ವಾಮಿ, ಮಂಡಿ ಮಾಲೀಕರ ಸಂಘದ ಅಧ್ಯಕ್ಷ ಅಕ್ಬರ್ ಷರೀಫ್, ಎ.ಪಿ.ಎಂ.ಸಿ. ಮಾಜಿ ನಿರ್ದೇಶಕರಾದ ಅಥಾವುಲ್ಲ, ಅನೀಸ್ ಅಹಮದ್, ನಾರಾಯಣಸ್ವಾಮಿ, ಪಿ.ಎಸ್.ಐ. ರಾಮಚಂದ್ರಯ್ಯ ಇತರರು ಇದ್ದರು.

ಹಿರಿಯ ರಾಜಕಾರಣಿ ಕೆ.ಎಚ್ ಮುನಿಯಪ್ಪ ಅವರು ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ -ಪ್ರಮಾಣ ವಚನ ಸ್ವೀಕಾರ

ಶ್ರೀನಿವಾಸಪುರ: ಕರ್ನಾಟಕ ರಾಜಕೀಯದ ಅತ್ಯಂತ ಹಿರಿಯ ರಾಜಕಾರಣಿಯಾದ ಕೆ.ಎಚ್ ಮುನಿಯಪ್ಪ ಅವರು ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದು , ಇಂದು ( ಮೇ 20 ) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೆ.ಎಚ್ ಮುನಿಯಪ್ಪ ಅವರು 07 ಮಾಚ್ 1948 ರಂದು ಕೋಲಾರ ಜಿಲ್ಲೆಯ ಕಂಬದಹಳ್ಳಿ ಶ್ರೀ ಹನುಮಪ್ಪ ಹಾಗೂ ಶ್ರೀಮತಿ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ವೃತ್ತಿಯಲ್ಲಿ ವಕೀಲರಾಗಿರುವ ಕೆ.ಎಚ್ ಮುನಿಯಪ್ಪ ಸಮಾಜಿಕ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು. ನಾಗರತ್ನಮ್ಮ ಅವರನ್ನು ವಿವಾಹವಾಗಿರುವ ಕೆ.ಎಚ್ ಮುನಿಯಪ್ಪ ಅವರಿಗೆ ನಾಲ್ವರು ಪುತ್ರಿಯರು ಓರ್ವ ಪುತ್ರನಿದ್ದಾನೆ.

1960 ರಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಕೆ.ಎಚ್ ಮುನಿಯಪ್ಪ ಅವರು ಸುದೀರ್ಘ ರಾಜಕೀಯ ಜೀವನದ ಅನುಭವ ಹೊಂದಿದ್ದಾರೆ. ಕೇಂದ್ರ ರಾಜಕೀಯದಲ್ಲಿ ಸೋಲಿಲ್ಲದ ಸರದಾರನಂತಿದ್ದ ಕೆ.ಎಚ್ ಮುನಿಯಪ್ಪ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರ ರಾಜಕೀಯ ತಂತ್ರಗಾರಿಕೆಗಳಿಂದ ಸೋಲನ್ನು ಅನುಭವಿಸಿದ್ದರು.

ಶ್ರೀನಿವಾಸಪುರ : ಗ್ರಾಮೀಣ ಮಕ್ಕಳ 9 ದಿನಗಳ ಬೇಸಿಗೆ ಶಿಬಿರಕ್ಕೆ ಗ್ರಂಥಾಲಯ ಮೇಲ್ವಿಚಾರಕ ಎನ್.ನಾಗೇಂದ್ರ ಇವರಿಂದ ಚಾಲನೆ

ಶ್ರೀನಿವಾಸಪುರ 1 : ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ನಾಯಕತ್ವ , ನೈತಿಕತೆ , ಸಹಾನುಭೂತಿ, ಜವಾಬ್ದಾರಿ ನಿರ್ವಹಣೆ, ತಂಡ ನಿರ್ವಹಣೆ, ಸಾಮಾಜಿಕ ಹೊಂದಾಣಿಕೆ ಮತ್ತು ನಾಗರಿಕೆ ಪ್ರಜ್ಞೆ ವಿಷಯವಾಗಿ ವಿವಿಧ ಚಟುವಟಿಕೆಗಳನ್ನು ನಡೆಸುವುದೇ ಈ ಶಿಬಿರದ ಆಶಯವಾಗಿರುತ್ತದೆ ಎಂದು ಗ್ರಂಥಾಲಯ ಮೇಲ್ವಿಚಾರಕ ಎನ್.ನಾಗೇಂದ್ರ ಹೇಳಿದರು.
ತಾಲೂಕಿನ ಲಕ್ಷ್ಮೀಪುರ ಗ್ರಂಥಾಲಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಶುಕ್ರವಾರ ಗ್ರಾಮೀಣ ಮಕ್ಕಳ 9 ದಿನಗಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಿಸಿಕೊಳ್ಳಲು ಬೇಸಿಗೆ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಓದುವ , ಬರೆಯುವ , ಅಂಕಿಸಂಖ್ಯೆ, ವಿಜ್ಞಾನ ವಿಷಯಗಳು,ನಾಯಕತ್ವ ಮತ್ತು ಸಂವಹನ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಲಾಗಿದೆ. ಪರಿಸರ ಕಾಳಜಿ, ಸಾಮಾಜಿಕ ಕಾಳಜಿ ಬೆಳಸುವುದು ಮತ್ತು ಸ್ಥಳೀಯ ಸಂಸ್ಕøತಿ, ಜೀವನ ಶೈಲಿ, ಇತಿಹಾಸ ಅಂಶಗಳನ್ನು ತಿಳಿಯುವಂತೆ ಮಾಡುವುದು ಹಾಗೂ ಮಕ್ಕಳಲ್ಲಿರುವ ಸೃಜನಾತ್ಮಕ ಸಾಮಥ್ರ್ಯವನ್ನು ಅಭಿವೃದ್ಧಿಪಡಿಸುವುದು ಬೇಸಿಗೆ ಶಿಬಿರದ ಆಶಯವಾಗಿರುತ್ತದೆ. ತನ್ಮೂಲಕ ಗ್ರಾಮಪಂಚಾಯಿತಿ ಗ್ರಂಥಾಲಯಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಲು ಮಕ್ಕಳನ್ನು ಪ್ರೇರೇಪಿಸುವುದು.
ಮಕ್ಕಳಲ್ಲಿ ಸೃಜನಾತ್ಮಕತೆಗೆ ಸಹಾಯಕವಾಗಿ ಮಕ್ಕಳ ಪುಸ್ತಕ , ದಿನಪತ್ರಿಕೆ , ನಿಯತಕಾಲಿಕೆಗಳನ್ನು ಓದುವುದು, ಚಿತ್ರ ಓದುವಿಕೆ, ಕಥೆ ಕಟ್ಟುವಿಕೆ , ನಿಧಿ ಶೋಧ, ಗಟ್ಟಿ ಓದು ಮತ್ತು ಪತ್ರ ಬರವಣಿಗೆಗೆ ಸಂಬಂಧಿಸಿದಂತೆ ವಿವಿಧ ಚಟುವಟಿಕೆಗಳನ್ನು ಶಿಬಿರದ ಅವಧಿಯಲ್ಲಿ ಆಯೋಜಿಸಲಾಗುವುದು ಹಾಗೂ ಮಕ್ಕಳ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು ದೈನಂದಿನ ಬದುಕಿನಲ್ಲಿ ಕಾಣುವ ಚಟಿವಟಿಕೆಗಳನ್ನು ಅರಿಯಲು , ಶೋಧನಾ ಪ್ರವೃತ್ತಿ ಪ್ರೋತ್ಸಾಹಿಸಲು ಮತ್ತು ಕಲಿತದ್ದನ್ನು ವರದಿ ಮಾಡಲು ಯೋಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಶಿಬಿರದಲ್ಲಿ ಪಾಲ್ಗುಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
19 ರಿಂದ 27 ದಿನಾಂಕದವರೆಗೂ 9 ದಿನಗಳ ಬೇಸಿಗೆ ಶಿಬಿರವು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1;30ರ ವರಗೆ ನಡೆಯಲಿದ್ದು, ಈ ಸಮಯದಲ್ಲಿ ಹೊಸ ಹೊಸ ವಿನೂತನ ಚಟುವಟಿಕೆಗಳನ್ನು ಮಾಡಿಸಿ ಮಕ್ಕಳನ್ನು ಗ್ರಂಥಾಲಯದ ಕಡೆ ಸಳೆಯುವ ಪ್ರಯತ್ನವನ್ನು ಮಾಡಲಾಗುವುದು.
ಮಕ್ಕಳಿಗೆ ಪಠ್ಯ, ಪಠ್ಯೇತರ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿನ ಕೌಶಲ್ಯವನ್ನು ಪತ್ತೆ ಹಚ್ಚಿ ಮುಂದಿನ ದಿನಗಳಲ್ಲಿ ವೇದಿಕೆ ನಿರ್ಮಿಸಿ ಕೊಡುವುದೇ ಈ ಶಬಿರದ ಉದ್ದೇಶ ಎಂದು ತಿಳಿಸುತ್ತಾ ಈ ಬೇಸಿಗೆ ಶಿಬಿರವನ್ನು ಮಕ್ಕಳು ಸದಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ಗ್ರಂಥಾಲಯವು ಡಿಜಟಲೀಕರಣವಾಗಿರುವುದರಿಂದ ಮಕ್ಕಳು ಇಂಟರ್ ನೆಟ್ ಬಳಸಿಕೊಂಡು ತಮ್ಮಗೆ ಆಸಕ್ತಿ ಇರುವಂತೆ ಪುಸ್ತಕಗಳನ್ನು ಓದಬಹುದು ಎಂದರು.
ಗ್ರಾ.ಪಂ. ಬಿಲ್ ಕಲೆಕ್ಟರ್ ಶಿವಣ್ಣ, ಗ್ರಾ.ಪಂ. ಸಿಬ್ಬಂದಿಗಳಾದ ಚಿಕ್ಕವೆಂಕಟರಮಣ, ವೆಂಕಟೇಶ್, ವಿದ್ಯಾರ್ಥಿಗಳು ಹಾಗು ಮಹಿಳಾ ಸಂಘಗಳ ಸದಸ್ಯರು ಭಾಗವಹಿಸಿದ್ದರು.

IMJ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ, ಮೂಡ್ಲಕಟ್ಟೆ- ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ವಲಯ ಥ್ರೋಬಾಲ್ ಪಂದ್ಯಾವಳಿ- ಆಳ್ವಾಸ್ ಮೂಡುಬಿದಿರೆ ಚಾಂಪಿಯನ್

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆ ಕುಂದಾಪುರ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳೆಯರಿಗಾಗಿ ನಡೆದ ಅಂತರ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು 2-0 ನೇರ ಸೆಟ್‌ಗಳಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್ ಆಯಿತು. ಈ ಅಂತರ ವಲಯ ಪಂದ್ಯಾವಳಿಗೂ ಮುನ್ನ ಇದೇ ಮೈದಾನದಲ್ಲಿ ಮೇ 17ರಂದು ನಡೆದ ಉಡುಪಿ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಇದೇ ಹೆಬ್ರಿ ತಂಡವನ್ನು ಸೋಲಿಸಿ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿತ್ತು. ಇಂಟರ್‌ಜೋನ್ ಪಂದ್ಯಾವಳಿಯಲ್ಲಿ ಪಧುವ ಕಾಲೇಜು ಮಂಗಳೂರು ತೃತೀಯ ಮತ್ತು ಎಂಎಸ್‌ಆರ್‌ಎಸ್ ಕಾಲೇಜು ಶಿರ್ವ ನಾಲ್ಕನೇ ಸ್ಥಾನ ಪಡೆದುಕೊಂಡಿತು. ಉಡುಪಿ ವಲಯದ ಪಂದ್ಯಾವಳಿಯಲ್ಲಿ ಎಸ್.ಎಂ.ಸಿ ಶಿರ್ವ ತೃತೀಯ ಹಾಗೂ ಎಂ.ಎಸ್.ಆರ್.ಎಸ್ ಶಿರ್ವ ನಾಲ್ಕನೇ ಸ್ಥಾನ ಪಡೆದರು.

IMJ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಈ ಪಂದ್ಯಾವಳಿಯನ್ನು ತಮ್ಮ ಆರಂಭದ ವರ್ಷದಲ್ಲಿಯೇ ಆಯೋಜಿಸಿದೆ. ಮೇ 17 ರಂದು ಉಡುಪಿ ವಲಯ ಪಂದ್ಯಾವಳಿ ಮತ್ತು ಮೇ 19 ರಂದು ಇಂಟರ್ಜೋನ್ ಪಂದ್ಯಾವಳಿ ನಡೆಯಿತು. ಮೇ 19 ರಂದು ಇಂಟರ್‌ಜೋನ್ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಿತು.
 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯವರಾದ ಆಡಳಿತ ನಿರ್ದೇಶಕರು, ಸೃಷ್ಟಿ ಇನ್ಫೋಟಿಕ್  ಕುಂದಾಪುರದ ಶ್ರೀಯುತ ಹರ್ಷವರ್ಧನ್ ಶೆಟ್ಟಿ ಯವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮುಖ್ಯವಾಗಿ ಮೂರು E ಗಳಾದ ಎಜುಕೇಶನ್, ಎನ್ವಿರಾನ್ಮೆಂಟ್, ಎಕ್ಸ್ಪೋಜರ್ ಗಳನ್ನ ಬೆಳೆಸಿಕೊಳ್ಳಬೇಕು. ಅವಾಗ ಜೀವನದಲ್ಲಿ ಸದೃಢತೆಯನ್ನು ಸಾಧಿಸಲು ಸಾಧ್ಯ ಎಂದರು. ಗೌರವ ಅತಿಥಿಯರಾದ ದೈಹಿಕ ನಿರ್ದೇಶಕರು ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಜೆರಾಲ್ಡ್ ಸಂತೋಷ್ ಡಿಸೋಜರವರು ವಿದ್ಯಾರ್ಥಿಗಳು ತಮ್ಮ ಸಮಯದ ಪರಿಪಾಲನೆಯನ್ನು ಪಾಲಿಸಿಕೊಂಡು ಬಂದು ಕ್ರೀಡೆಯಲ್ಲಿ ಯಥೇಚ್ಛವಾಗಿ ತಮ್ಮನ್ನು ತಾವು ತೊಡಗಿಸಿ ಕೊಂಡಾಗ ನಿಮ್ಮ ದೇಹದಾಢ್ಯವನ್ನು ಸದೃಢಗೊಳಿಸಲು ಸಾಧ್ಯ, ಮೊಬೈಲ್ ನೋಡುವುದರಲ್ಲಿ ಹೆಚ್ಚಿನ ಸಮಯವನ್ನು ಕಳೆಯದೆ ಆ ಸಮಯವನ್ನು ಕ್ರೀಡೆಗೆ ಬಳಸಿಕೊಳ್ಳುವುದರ ಮೂಲಕ ನೀವು ಜೀವನದಲ್ಲಿ ಇನ್ನೂ ಹೆಚ್ಚಿನ ಧೃಡತ್ವವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.
 ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ರವರು ಅಧ್ಯಕ್ಷೀಯ ಮಾತುಗಳಲ್ಲಿ, ಸೋಲು ಎಂಬುದು ಇವತ್ತಿಗೆ ಕೊನೆಯಲ್ಲ. ಮುಂದಿನ ಸಂದರ್ಭದಲ್ಲಿ ಆ ಸೋಲನ್ನು ಗೆಲುವಾಗಿ  ಪರಿಗಣಿಸುವ ಛಲವನ್ನು ಹೊಂದಿ ಅದಕ್ಕೆ ತಕ್ಕನಾದ ಪರಿಶ್ರಮವಹಿಸಿ ನಮ್ಮ ದಾಖಲೆಯನ್ನು ನಾವೇ ಮುರಿಯುವಂತಹ ಸಾಮರ್ಥ್ಯವನ್ನು ಪಡೆದುಕೊಳ್ಳಬೇಕು ಎಂದರು.
 ಕಾರ್ಯಕ್ರಮದಲ್ಲಿ ಸಹ ನಿರ್ದೇಶಕರು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಡಾ| ಹರಿದಾಸ ಕೂಳೂರು, ಭಂಡಾರ್ಕರ್ಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜು ಕುಂದಾಪುರದ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಯುತ ಶಂಕರ್ ನಾರಾಯಣ, ಐಎಂಜೆ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ, ಉಪ ಪ್ರಾಂಶುಪಾಲರಾದ ಪ್ರೊ| ಜಯಶೀಲ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಯುತ ಪ್ರವೀಣ್ ಖಾರ್ವಿ, ವಿವಿಧ ವಿದ್ಯಾ ಸಂಸ್ಥೆಗಳ ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಕರು, ತೀರ್ಮಾನಗಾರರು, ಕಾಲೇಜಿನ ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಥಮ ಸ್ಥಾನ ಆಳ್ವಾಸ್ ಕಾಲೇಜು ಮೂಡಬಿದಿರೆ, ದ್ವಿತೀಯ ಸ್ಥಾನ ಗೌರ್ನಮೆಂಟ್ ಫಸ್ಟ್ ಗ್ರೇಡ್ ಕಾಲೇಜು ಹೆಬ್ರಿ, ತೃತೀಯ ಸ್ಥಾನ  ಪದ್ವ ಕಾಲೇಜು ಮಂಗಳೂರು, ಚತುರ್ಥ ಸ್ಥಾನ ಎಂ ಎಸ್ ಆರ್ ಎಸ್ ಕಾಲೇಜು ಶಿರ್ವ.
ಕಾರ್ಯಕ್ರಮವನ್ನು ಕನ್ನಡ ವಿಭಾಗದ ಪ್ರೊ| ಸುಮನರವರು ನಿರೂಪಿಸಿದರು.  ಆಂಗ್ಲ ವಿಭಾಗದ ಪ್ರೊ| ಪಾವನ ರವರು ಸ್ವಾಗತಿಸಿದರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಯುತ ಪ್ರವೀಣ್ ಖಾರ್ವಿ,  ವಂದಿಸಿದರು. ವಿಜೇತರ ಪಟ್ಟಿಯನ್ನು ಬಿಸಿಎ  ವಿಭಾಗದ ಮುಖ್ಯಸ್ಥರಾದ ಪ್ರೊ ಅಹಮದ್ ಖಲೀಲ್ ರವರು ಓದಿದರು.