ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಸಂಸತ್ತು ಉದ್ಘಾಟನೆ

ಕುಂದಾಪುರ, ಜೂ.16: ಸ್ಥಳೀಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಈ ಸಾಲಿನ ವಿದ್ಯಾರ್ಥಿ ಸಂಸತ್ತು ಉದ್ಘಾಟನೆಯ ಕಾರ್ಯಕ್ರಮವು ಜೂ. 16 ರಂದು ನೆರವೇರಿತು. ಹೋಲಿ ರೋಜರಿ ಚರ್ಚಿನ ಸಹಾಯಕ ಧರ್ಮಗುರುಗಳಾದ ಅಶ್ವಿನ್ ಅರಾನ್ನಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಲಾ ಸಂಸತ್ತನ್ನು ವಿದ್ಯುಕ್ತವಾಗಿ ಉದ್ಘಾಟಿಸಿ “ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣವನ್ನು ಮೈಗೂಡಿಸಿಕೊಳ್ಳಬೇಕೆಂಬ ಸಂದೇಶದೊಂದಿಗೆ ಸತತ 6 ವರ್ಷಗಳಿಂದ ಸಂಸ್ಥೆ ಶೇಕಡಾ 100% ದಾಖಲೆಯ ಫಲಿತಾಂಶ ಗಳಿಸುತ್ತಾ ಬಂದಿದ್ದು ಪ್ರಸ್ತುತ ವರ್ಷದಲ್ಲಿಯೂ ಶೇಕಡಾ 100% ಫಲಿತಾಂಶ ಗಳಿಸಿ ತಾಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ. ಉಪಸ್ಥಿತರಿದ್ದು ಶಾಲಾ ಸಂಸತ್ತಿನ ನಾಯಕರು ಹಾಗೂ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು.ಶಾಲಾ ವಿದ್ಯಾರ್ಥಿ ನಾಯಕಿ ರಿಷಿಕಾ ಜಾಟ್ ಸ್ವಾಗತಿಸಿದರು. ಮಯೊಲ್ಲಾ ಧನ್ಯವಾದ ಸಮರ್ಪಿಸಿದರು. ಡಿ ಸಾನ್ವಿ, ಅಕ್ಷಯ, ಮರಿಯಾ ವಿಯೊಲ್ಲಾ ಕಾರ್ಯಕ್ರಮವನ್ನು ನಿರೂಪಿಸಿದರು.

ಕುಂದಾಪುರ : ಎಮ್.ಸಿ.ಸಿ. ಬ್ಯಾಂಕಿನಿಂದ ಶಾಲಾ ವಿದ್ಯಾಥಿಗಳಿಗೆ ಪುಸ್ತಕ ಮತ್ತು ಕೊಡೆಗಳ ವಿತರಣೆ


ಕುಂದಾಪುರ,ಜೂ.16: ಕುಂದಾಪುರ ರೋಜರಿ ಚರ್ಚಿನ, ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಯ ಸಂತ ಮೇರಿಸ್ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಸಂತ ಮೇರಿಸ್ ಪ್ರೌಢ ಶಾಲೆ, ಹೋಲಿ ರೋಜರಿ ಆಂಗ್ಲಾ ಮಾದ್ಯಮ ಶಾಲೆ ಮತ್ತು ಸಂತ ಮೇರಿಸ್ ಪದವಿ ಪೂ.ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ಎಮ್.ಸಿ.ಸಿ. ಬ್ಯಾಂಕ್ ವತಿಯಿಂದ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಪುಸ್ತಕ ಮತ್ತು ಕೊಡೆಗಳ ವಿತರಣೆಯನ್ನು ಇತ್ತೀಚೆಗೆ ಮಾಡಿದರು. ವಿತರಣೆಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಶಪ್ ಅ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊರವರು ಸಹಕರಿಸಿದರು.


ಈ ಸಂದರ್ಭದಲ್ಲಿ ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ, ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ, ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ, ಸಂತ ಮೇರಿಸ್ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯಿನಿ ಡೋರಾ ಡಿಸೋಜಾ, ಹೋಲಿ ರೋಜರಿ ಆಂಗ್ಲಾ ಮಾದ್ಯಮ ಶಾಲೆಯ ಮುಖ್ಯೋಪಾದ್ಯಾಯಿನಿ ಸಿಸ್ಟರ್ ತೆರೆಜಾ ಶಾಂತಿ, ಸಂತ ಮೇರಿಸ್ ಪದವಿ ಪೂ.ಕಾಲೇಜಿನ ಪ್ರಾಂಶುಪಾಲೆ ರೇಶ್ಮಾ ಫೆರ್ನಾಂಡಿಸ್, ಬ್ಯಾಂಕಿನ ನಿರ್ದೇಶಕರಾದ ಡಾ.ಜೆರಾಲ್ಡ್ ಪಿಂಟೊ ಮತ್ತು ಕಿರಣ್ ಕ್ರಾಸ್ಟೊ ಉಪಸ್ಥಿತರಿದ್ದರು. ಸಂತ ಮೇರಿಸ್ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯಿನಿ ಅಸುಂಪ್ತಾ ಲೋಬೊ ಸ್ವಾಗತಿಸಿದರು. ಪ್ರಾದ್ಯಪಕ ನಾಗರಾಜ ಶೆಟ್ಟಿ ವಂದಿಸಿದರು. ದೈಹಿಕ ಶಿಕ್ಷಕ ಚಂದ್ರಶೇಖರ್ ಬೀಜಾಡಿ ನಿರೂಪಿಸಿದರು
.