ಭಂಡಾರ್ಕಾರ್ಸ್‌ ಪದವಿ ಪೂರ್ವ ಕಾಲೇಜು ಮತ್ತು ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ-ವಿಶ್ವ ಯೋಗ ದಿನಾಚರಣೆ

ಕುಂದಾಪುರ: ಜೂನ್ 21ರಂದು ಇಲ್ಲಿನ ಭಂಡಾರ್ಕಾರ್ಸ್‌ ಪದವಿ ಪೂರ್ವ ಕಾಲೇಜು ಮತ್ತು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್‌ ಮತ್ತು ಎನ್.ಸಿ.ಸಿ ಘಟಕದ ಸಹಭಾಗಿತ್ವದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗದ ಅಗತ್ಯ ಮತ್ತು ಮಹತ್ವದ ಕುರಿತಾಗಿ ಉಪನ್ಯಾಸ ಮತ್ತು ಯೋಗದ ವಿವಿಧ ಆಯಾಮಗಳ ಬಗ್ಗೆ ವಿದ್ಯರ್ಥಿಗಳಲ್ಲಿ ಅರಿವು ಮೂಡಿಸಲು ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ಆರ್ಟ್ಸ್‌ ಆಫ್‌ ಲೀವಿಂಗ್‌ ಸಂಸ್ಥೆಯ ಶೈಲಜ ಅವರು ಮಾತನಾಡಿ ಸಧೃಡ ಆರೋಗ್ಯಕ್ಕಾಗಿ ಧ್ಯಾನ,ಏಕಾಗ್ರತೆಯನ್ನು ಬೆಳೆಸಿಕೊಳ್ಳಿ,ಹಾಗೂ ಉಸಿರಾಟದ ವಿವಿಧ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ಪರಿಚಯಿಸುತ್ತ, ಶಾಂತಿದಾಯಕ,ನೆಮ್ಮದಿ,ತೃಪ್ತಿಯ ಬದುಕಿಗೆ ಯೋಗ ದಾರಿದೀಪ ಎಂದು ನುಡಿದರು. ಆರ್ಟ್‌ ಆಫ್‌ ಲೀವಿಂಗ್‌ ಕುಂದಾಪುರ ಘಟಕದ ಮಂಜುಶ್ರೀ ಹಾಗೂ ಷಣ್ಮುಖ‌ ಇವರುಗಳು ವಿದ್ಯಾರ್ಥಿಗಳಿಗೆ ಚಟುವಟಿಕೆದಾಯಕವಾದ ವಿವಿಧ ರೀತಿಯ ಯೋಗ ಭಂಗಿಗಳನ್ನು ಪರಿಚಯಿಸಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಪ್ರಾಧ್ಯಾಪಕಿ ಡಾ.ಸರೋಜ ಎಂ., ಪದವಿ ಕಾಲೇಜಿನ ಎನ್.ಎಸ್.ಎಸ್‌ ಘಟಕದ ಯೋಜನಾಧಿಕಾರಿಗಳಾದ. ಅರುಣ್‌.ಎಸ್‌ ,
ರಾಮಚಂದ್ರ ಆಚಾರಿ, ಮತ್ತು ಎನ್.ಸಿ.ಸಿ ಅಧಿಕಾರಿಗಳಾದ ಶರಣ್‌,ಅಂಜನ್‌ ಹಾಗೂ ಎಲ್ಲಾ ಬೋಧಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ರೇಣುಕಾ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಿಗೆ ಅಸಡ್ಡೆ ಬೇಡ. ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸೋಮಯಾಜಲಹಳ್ಳಿ ರಮೇಶ್‍ಬಾಬು ಅಭಿಪ್ರಾಯ

ಶ್ರೀನಿವಾಸಪುರ, ಜೂ.22ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರಿ ವೈದ್ಯರ ಬಗ್ಗೆ ಸಾರ್ವಜನಿಕರಲ್ಲಿರುವ ಅಸಡ್ಡೆ ಮನೋಭಾವ ದೂರವಾಗಬೇಕು, ವೈದ್ಯಕೀಯ ವೆಚ್ಚ ದುಬಾರಿಯಾಗಿರುವುದರಿಂದ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾವೆ ಆದ್ದರಿಂದ ಯಾವುದೇ ರೀತಿಯ ಖಾಯಿಲೆಗಳಿದ್ದರೂ ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಇದ್ದಾರೆ. ಅಂತಹ ಕಡೆ ವೈದ್ಯಕೀಯ ಸೇವೆ ಪಡೆದರೆ ಉತ್ತಮ ಎಂದು ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸೋಮಯಾಜಲಹಳ್ಳಿ ರಮೇಶ್‍ಬಾಬು ಅಭಿಪ್ರಾಯಪಟ್ಟರು.
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಾದ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ನಿರ್ದೇಶಕರಾದ ನಿರಂಜನಗೌಡ ಮತ್ತು ಸಂಸ್ಥೆಯ ಪ್ರಾದ್ಯಾಪಕ ಹಾಗೂ ಮುಖ್ಯಸ್ಥರಾದ ಎಂ.ಎಸ್. ಮೋಹನ್ ರವರನ್ನು ಸನ್ಮಾನಿಸಿ ಮಾತನಾಡಿದ ಅವರು ಸರ್ಕಾರಿ ಅಧೀನದಲ್ಲಿ ನಡೆಯುವ ಸಂಜಯಗಾಂಧಿ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಿಂದ ನಾನು ಚಿಕಿತ್ಸೆ ಪಡೆಯುತ್ತಿದ್ದೆ ಆಗ ಕಂಡಂತಹ ಅವರ ಸೇವಾ ಮನೋಭಾವ ಸಾರ್ವಜನಿಕ ಮೆಚ್ಚುಗೆಗೆ ಸಾಕ್ಷಿಯಾಗಿದೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಹಲವಾರು ಖಾಯಿಲೆಗಳಿಂದ ನರಳುವ ಜನರೊಂದಿಗೆ ಬೆರೆತು ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಸಂಸ್ಥೆಯ ನಿರ್ದೇಶಕರು ಸೇರಿದಂತೆ ಅವರ ಸಿಬ್ಬಂಧಿ ಮಾಡುತ್ತಾರೆ. ಆದ್ದರಿಂದ ನನ್ನ ಕೃತಜ್ಞತೆಯನ್ನು ಸಂಸ್ಥೆಯ ತಂಡಕ್ಕೆ ಸಲ್ಲಿಸಲಾಗಿದೆ ಎಂದರು.
ಸಂಸ್ಥೆಯ ನಿರ್ದೇಶಕ ಎಂ.ಆರ್. ನಿರಂಜನ್‍ಗೌಡ ಮಾತನಾಡಿ ಹಲವಾರು ವರ್ಷಗಳಿಂದ ಈ ಸಂಸ್ಥೆ ಬಡವರು ಮತ್ತು ಉಳ್ಳವರು ಎಂಬ ಬೇಧಬಾವ ತೋರದೆ ಇಲ್ಲಿ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮ ಜವಬ್ದಾರಿ ಅವಧಿಯಲ್ಲಿ ಇನ್ನಷ್ಟು ಸಾರ್ವಜನಿಕ ಸೇವೆ ಮುಂದುವರೆಸಲು ಇಂತಹ ಅಭಿನಂದನೆಗಳು ನಮ್ಮನ್ನು ಪ್ರೇರೆಪಿಸುತ್ತವೆ ಎಂದು ಪ್ರಶಂಸಿಸಿದರು.
ಈ ಸಂಧರ್ಭದಲ್ಲಿ ಕಾಂಗ್ರೇಸ್ ಹಿರಿಯ ಮುಖಂಡ ಸೋಮಯಾಜಲಹಳ್ಳಿ ಸಿ.ಎಸ್. ಪ್ರಸಾದ್, ಸಂಸ್ಥೆಯ ಸಿಬ್ಬಂಧಿಯಾದ ಡಾ|| ಸಿದ್ದೇಶ್ ಪಾಟೀಲ್, ಡಾ|| ಧರಣಿ ಚಿತ್ರ, ಡಾ|| ಎಂ.ಕೆ. ಆನ್ವೀಶ್, ಡಾ|| ಅರ್ಜುನ್, ಡಾ|| ಪ್ರಜ್ವಲ್, ಡಾ|| ಎನ್. ದರ್ಶನ್, ಡಾ|| ಅನಿಲ್ ಇತರರು ಇದ್ದರು.

ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಯೋಗದಿನಾಚರಣೆ :ಯೋಗದಿಂದ ಕಲಿಕೆಯಲ್ಲಿ ಕ್ರಿಯಾಶೀಲತೆ ಸಾಧ್ಯ-ಪ್ರದೀಪ್‍ಕುಮಾರ್

ಕೋಲಾರ:- ಮಾನಸಿಕ, ದೈಹಿಕ ಆರೋಗ್ಯ ಉತ್ತಮಗೊಳ್ಳುವ ಮೂಲಕ ಸದಾ ಕಲಿಕೆಯಲ್ಲಿ ಕ್ರಿಯಾಶೀಲತೆಗೆ ಯೋಗ ಸಹಕಾರಿ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್ ತಿಳಿಸಿದರು.
ಶಾಲೆಯ ಆವರಣದಲ್ಲಿ ವಿಶ್ವಯೋಗದಿನದ ಅಂಗವಾಗಿ ಮಕ್ಕಳಿಂದ ನಡೆದ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡಿ, ಇತರರಿಗೂ ತಿಳಿಸಿಕೊಡಿ, ನಿಮ್ಮ ಕಲಿಕೆಯಲ್ಲಿ ಸದಾ ಕ್ರಿಯಾಶೀಲತೆ ತುಂಬಲು ಯೋಗ ಸಹಕಾರಿ ಎಂಬುದನ್ನು ಮರೆಯದಿರಿ ಎಂದು ಕಿವಿಮಾತು ಹೇಳಿದರು.
ಯೋಗ ಜಾತ್ಯಾತೀತವಾದುದು, ಇದಕ್ಕೆ ಪಕ್ಷ,ಜಾತಿ,ವಯಸ್ಸು, ಲಿಂಗ ಬೇಧವಿಲ್ಲ ಪ್ರತಿಯೊಬ್ಬರೂ ಇದನ್ನು ಕಲಿತು ಜೀವನದಲ್ಲಿ ನಿರಂತರವಾಗಿ ಅಳವಡಿಸಿಕೊಳ್ಳಬಹುದಾಗಿದೆ, ವೈಜ್ಞಾನಿಕವಾಗಿಯೂ ಇಂದು ಯೋಗ ತನ್ನ ಸ್ಥಾನ ಗಟ್ಟಿಪಡಿಸಿಕೊಂಡಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಮನವಿಗೆ ಇಡೀ ವಿಶ್ವವೇ ಸ್ಪಂದಿಸಿದೆ, 200ಕ್ಕೂ ಹೆಚ್ಚು ದೇಶಗಳು ಇಂದು ಯೋಗದಿನ ಆಚರಿಸುತ್ತಿವೆ ಎಂದು ತಿಳಿಸಿದರು.
ಮಕ್ಕಳಿಂದ ಯೋಗ ಪ್ರದರ್ಶನ ಮಾಡಿಸಿದ ದೈಹಿಕ ಶಿಕ್ಷಕಿ ಲೀಲಾ, ಯೋಗಾಭ್ಯಾಸಕ್ಕಿಂತ ಉತ್ತಮವಾದ ವ್ಯಾಯಾಮವೇ ಇಲ್ಲ, ಇದು ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಹೆಚ್ಚು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಾದ ಸಿದ್ದೇಶ್ವರಿ, ಎಂ.ಆರ್.ಗೋಪಾಲಕೃಷ್ಣ, ಭವಾನಿ, ವೆಂಕಟರೆಡ್ಡಿ,ಶ್ವೇತಾ, ಸುಗುಣ, ಫರೀದಾ, ಸಿ.ಎಲ್.ಶ್ರೀನಿವಾಸಲು, ರಮಾದೇವಿ, ಡಿಚಂದ್ರಶೇಖರ್ ಮತ್ತಿತರರಿದ್ದರು.

ನೌಕರರ ಸಂಘದಿಂದ ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತಜಿಲ್ಲೆ ಅಭಿವೃದ್ದಿಗೆ ಒಂದಾಗಿ ಶ್ರಮಿಸೋಣ-ಅಕ್ರಂಪಾಷಾ

ಕೋಲಾರ:- ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಜಿಲ್ಲಾಡಳಿತಕ್ಕೆ ನೌಕರರು ಸಹಕಾರ ನೀಡುವ ಮೂಲಕ ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವ ಕೆಲಸವನ್ನು ಜತೆಯಾಗಿ ನಿರ್ವಹಿಸೋಣ, ಜನತೆಗೆ ನ್ಯಾಯ ಒದಗಿಸೋಣ ಎಂದು ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷಾ ಕರೆ ನೀಡಿದರು.
ನಗರದ ಜಿಲ್ಲಾಡಳಿತದ ಭವನದಲ್ಲಿ ಕೋಲಾರದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅಧಿಕಾರ ವಹಿಸಿಕೊಂಡ ಅಕ್ರಂ ಪಾಷಾ ಅವರನ್ನು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸನ್ಮಾನಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.
ಸರ್ಕಾರ ಹಾಗೂ ಜನತೆಯ ನಡುವೆ ಸೇತುವೆಯಾಗಿ ಸರ್ಕಾರಿ ನೌಕರರು ಕೆಲಸ ನಿರ್ವಹಿಸಬೇಕಾಗಿದೆ, ಈ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ನೌಕರರು ಪೂರ್ಣ ಸಹಕಾರ ನೀಡಿ ಎಂದ ಅವರು, ನೌಕರರ ಸಮಸ್ಯೆಗಳು ಏನೇ ಇದ್ದರೂ ನೇರವಾಗಿ ನನ್ನೊಂದಿಗೆ ಚರ್ಚಿಸಲು ಅವಕಾಶವಿದೆ, ನಿಮ್ಮ ಸಮಸ್ಯೆಗಳಿಗೂ ಜಿಲ್ಲಾಡಳಿತ ಸ್ಪಂದಿಸುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು, ಪ್ರಧಾನ ಕಾರ್ಯದರ್ಶಿ ಅಜಯ್‍ಕುಮಾರ್, ರಾಜ್ಯಪರಿಷತ್ ಸದಸ್ಯ ಗೌತಮ್, ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಗೌರವಾಧ್ಯಕ್ಷ ರವಿಚಂದ್ರ, ಉಪಾಧ್ಯಕ್ಷ ಪುರುಷೋತ್ತಮ್,ನಿಕಟಪೂರ್ವ ಅಧ್ಯಕ್ಷರುಗಲಾದ ಕೆ.ಎನ್.ಮಂಜುನಾಥ್, ಕೆ.ಬಿ.ಅಶೋಕ್, ಪದಾಧಿಕಾರಿಗಳಾದ ಜಂಟಿ ಕಾರ್ಯದರ್ಶಿಗಳಾದ ಪಿಡಿಒ ನಾಗರಾಜ್, ರವಿ, ಅಬಕಾರಿ ಇಲಾಖೆಯ ಮಂಜುನಾಥ್ ಮತ್ತಿತರರಿದ್ದರು.

ನಗರಕ್ಕೆ ಮೂಲಭೂತ ಸೌರ್ಕರ್ಯಗಳನ್ನು ಒದಗಿಸಿಕೊಡಿ

ಕೋಲಾರ,ಜೂ.21: ಇಂಡಿಯನ್ ಯೂನಿಯನ್ ಮುಸ್ಲೀಮ್ ಲೀಗ್ ವತಿಯಿಂದ ಕೋಲಾರದ ನೂತನ ಜಿಲ್ಲಾಧಿಕಾರಿಗಳಾದ ಅಕ್ರಂಪಾಶ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ನಗರದಲ್ಲಿರುವ ರಸ್ತೆಗಳ ಸಮಸ್ಯೆ, ಯು.ಜಿ.ಡಿ, ಕಸ ವಿಲೇವಾರಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ವಹಿಸಿ ಸಾರ್ವಜನಿಕರಿಗೆ ಅನಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.
ನಿಯೋಗದಲ್ಲಿ ಇಂಡಿಯನ್ ಯೂನಿಯನ್ ಮುಸ್ಲೀಮ್ ಲೀಗ್ ಜಿಲ್ಲಾಧ್ಯಕ್ಷ ಶೇಖ್ ಆಶ್ರಫ್‍ಆಲಿ, ಜಿಲ್ಲಾ ಕಾರ್ಯದರ್ಶಿ ಸೈಯದ್ ಸಿಬ್ಗತ್‍ವುಲ್ಲಾ, ವಜೀರ್‍ಪಾಷ, ಇಮ್ರಾನ್‍ಪಾಷ, ಸೈಯದ್ ನೂರ್ ಇನ್ನಿತರರು ಉಪಸ್ಥಿತರಿದ್ದರು.

The student cabinet and NSS inaugural of Rosa Mystica PU College

The student cabinet and NSS inaugural of Rosa Mystica PU College for the Academic Year, 2023- 24 was held on 21st June in the college auditorium. The college was privileged to have Charles Pais Retired professor and NSS program officer at St. Agnes’s college mangaluru, as a chief guest and Sri VinayaKaranth PTA vice president, Correspondent of Rosamystica Institution Sr. Gracy Monica B.S and Principal of our college Sr.Sadhana B.S were present on this occasion. The event began with a formal march of the new council members led by NafeesathulMisriya (CPL of the college) and Sumiksha (ACPL). The students led the gathering into an opening chorus and prayer service. The program started with an inaugural dance and song.

The chief guest was introduced and welcomed by our Principal Sr.Sadhana B.S. Oath taking ceremony was administered by the Principal. And badges and sash were given to each of the cabinet members by our institution Correspondent Sr.Gracy Monica B.S.The chief guest, Charles Pais, along with the guest VinayaKaranth, our program president, Sr.Gracy Monica, and the Principal Sr. Sadhana B.S, NafeesathulMisriya College CPL, and Sumiksha ACPL illuminated the light of leadership by lightning the lamp. The student cabinet was inaugurated by our institution, Correspondent Sr.Gracy Monica, by opening pingara. Along with cabinet inauguration, the NSS club was also inaugurated with the NSS theme chart by our chief guest, and the NSS flag was handed over to NSS unit leaders Thapaswini and Jithesh by Sr.Sadhana B.S

Mr. Charles Pais, chief guest of today’s program, congratulated the newly elected members and highlighted the importance of leadership qualities, and discharged their responsibilities in various fields.

We had Mr.VinayaKaranth, PTA vice-president with us, and he stimulated students by his inspiring words. And then, Sr.Gracy Monica, in her presidential address, informed that students should have gratitude towards what we receive in our life.
The ceremony was hosted by Mr.AvilRenilD’silva NSS coordinator and concluded with a vote of thanks by NafeesathulMisriya. The program ended by singing the National anthem.

International Yoga Day  was celebrated-Holy Redeemer English Medium School

International Yoga Day  was celebrated on June 21st at Holy Redeemer English Medium School, Belthangady. Program was inaugurated by lighting the lamp. Students Reshal Bennis and Alriya D’Souza gave brief informations on the origin, basics, theme, importance and benefits of Yoga. Meditation, light exercises, Pranayama, Suryanamaskara and many Asanas were performed by the students. Head Master Rev Fr Clifford Pinto guided and Physical Education Trainer Mr Sharath Pinto assisted. Teacher Mrs Preetha D’Souza compered the event.

ನಗರ ಪ್ರದೇಶದಲ್ಲಿ ಯೋಗ ಶಿಕ್ಷಣ ಆದ್ಯತೆಯ ವಿಷಯವಾಗಿದೆ :ಎಸ್.ವಿ.ಪ್ರಸಾದ್

ಶ್ರೀನಿವಾಸಪುರ: ನಗರ ಪ್ರದೇಶದಲ್ಲಿ ಯೋಗ ಶಿಕ್ಷಣ ಆದ್ಯತೆ ವಿಷಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಯೋಗಾಭ್ಯಾಸದಿಂದ ದೊರೆಯುವ ಪ್ರಯೋಜನ ಕುರಿತು ಪ್ರಚಾರ ಮಾಡಬೇಕಾದ ಅಗತ್ಯವಿದೆ ಎಂದು ತಾಲ್ಲೂಕು ಎಲ್‍ಐಸಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್ ಹೇಳಿದರು.
ಪಟ್ಟಣದಲ್ಲಿ ಎಲ್‍ಐಸಿ ಸಿಬ್ಬಂದಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಯೋಗ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಇಂದು ವಿಶ್ವ ಅಡ್ಡ ಪರಿಣಾಮ ಇಲ್ಲದ ಆರೋಗ್ಯ ರಕ್ಷಣೆಗಾಗಿ ಭಾರತದ ಕಡೆ ನೋಡುತ್ತಿದೆ. ಯೋಗ ಪರ್ಯಾಯ ಆರೋಗ್ಯ ರಕ್ಷಣಾ ಮಾರ್ಗವಾಗಿ ಸ್ವೀಕರಿಸಲ್ಪಡುತ್ತಿದೆ. ಭಾರತದ ಕೊಡುಗೆಯಾದ ಯೋಗ ಈಗ ಗಡಿದಾಟಿ ಹೋಗಿದೆ. ವಿಶ್ವದಾದ್ಯಂತ ಜನರು ಯೋಗ ಕಲಿಯಲು ಹಾತೋರೆಯುತ್ತಿದ್ದಾರೆ ಎಂದು ಹೇಳಿದರು.
ಎಲ್‍ಐಸಿ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರಯ್ಯ ಆರ್.ಕುಲಕರ್ಣಿ, ಬಾಲಚಂದ್ರ, ಶ್ರೀನಿವಾಸ್ ಇದ್ದರು.

ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ ಕೃತಿ ಬಿಡುಗಡೆ ಹಾಗೂ ಭವಿಷ್ಯದ ಮಕ್ಕಳ ರಂಗಭೂಮಿ, ಸವಾಲುಗಳು, ಸಾಧ್ಯತೆಗಳು ಎಂಬ ವಿಷಯ ಕುರಿತು ವಿಚಾರ ಸಂಕಿರಣ

ಶ್ರೀನಿವಾಸಪುರ: ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದ ಸಭಾಂಗಣದಲ್ಲಿ ಜೂ.23 ರಂದು ಬೆಳಿಗ್ಗೆ 11 ಗಂಟೆಗೆ ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ ಕೃತಿ ಬಿಡುಗಡೆ ಹಾಗೂ ಭವಿಷ್ಯದ ಮಕ್ಕಳ ರಂಗಭೂಮಿ, ಸವಾಲುಗಳು, ಸಾಧ್ಯತೆಗಳು ಎಂಬ ವಿಷಯ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.
ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಕೋಲಾರದ ಕೃಷಿ ಸಂಸ್ಕøತಿ ಕೇಂದ್ರದ ವತಿಯಿಂದ ಬುಧವಾರ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ರಂಗಭೂಮಿ ಕಲಾವಿದೆ ಡಾ. ವಿಜಯ, ಶಿಕ್ಷಣ ತಜ್ಞ ಕೋಡಿ ರಂಗಪ್ಪ ಕೃತಿ ಬಿಡುಗಡೆ ಮಾಡುವರು. ಕೃತಿ ಕುರಿತು ನಾನು ಮಾತನಾಡುತ್ತೇನೆ ಎಂದು ಹೇಳಿದರು.
ಸಂಸ್ಥೆ ಮಹಾ ಪೋಷಕ ಡಿ.ಎಲ್.ಸದಾಶಿವರೆಡ್ಡಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮುಖ್ಯ ಆಡಳಿತಾಧಿಕಾರಿ ಡಾ. ಎನ್.ಶಿವರಾಮರೆಡ್ಡಿ, ಚಲನಚಿತ್ರ ನಿರ್ದೇಶಕ ಬಿ.ಸುರೇಶ್, ವಲಯ ಅರಣ್ಯಾಧಿಕಾರಿ ಮಹೇಶ್ ಕಾಡೇಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಪ್ರಗತಿಪರ ಚಿಂತಕ ಡಾ. ಜಿ.ಶಿವಪ್ಪ ಅರಿವು, ಲೇಖಕ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.
ಭೈರವೇಶ್ವರ ವಿದ್ಯಾ ಸಂಸ್ಥೆಗಳ ಸಮೂಹ ಹಾಗೂ ಆಡಳಿತ ಮಂಡಳಿ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ, ಮಧ್ಯಾಹ್ನ 2.30ಕ್ಕೆ ಭವಿಷ್ಯದ ಮಕ್ಕಳ ರಂಗಭೂಮಿ, ಸವಾಲುಗಳು ಮತ್ತು ಸಾಧ್ಯತೆಗಳು ಎಂಬ ವಿಷಯ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಹೇಳಿದರು.
ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ. ಎನ್.ಶಿವರಾಮರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಣ ತಜ್ಞ ಸಂತೋಷ್ ಕವಲಗಿ ಕಾರ್ಯಕ್ರಮ ಉದ್ಘಾಟಿಸುವರು. ಸೀತಿ ಬಿಜಿಎಸ್ ಶಾಲೆ ಪ್ರಾಂಶುಪಾಲ ಸಿ.ಬೈರಪ್ಪ, ಸಾಹಿತಿಗಳಾದ ಕೇಶವ ಮಳಗಿ, ಸ.ರಘುನಾಥ, ಕೋಟಿಗಾನಹಳ್ಳಿ ರಾಮಯ್ಯ, ಶ್ರೀಪಾದ ಭಟ್, ಎಚ್.ನರಸಿಂಹಯ್ಯ ಭಾಗವಹಿಸುವರು ಎಂದು ಹೇಳಿದರು.
ಪ್ರಾಂಶುಪಾಲ ಗಂಗಾಧರ ಗೌಡ, ಮುಖ್ಯ ಶಿಕ್ಷಕ ವೆಂಕಟರಮಣಾರೆಡ್ಡಿ, ಕೃಷಿ ಸಂಸ್ಕøತಿ ಕೇಂದ್ರದ ಮುಖ್ಯಸ್ಥ ಬಿಸನಹಳ್ಳಿ ಬೈಚೇಗೌಡ ಇದ್ದರು.