ಹೋಲಿ ರೋಜರಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಪ್ರಾರ್ಥಮಿಕ ಹಾಗೂ ಪ್ರೌಢ ಶಾಲೆಗಳ ವಲಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ


ಕುಂದಾಪುರ, ಜು.31: ‘ಆಟ ಪಾಠ ಊಟ ಇದು ಮನುಷ್ಯನಿಗೆ ಬೇಕಾಗಿರುವ ಅಗತ್ಯವಾದ ವಿಷಯಗಳು, ಅದರಲ್ಲಿ ಮಕ್ಕಳಿಗೆ ಅಚ್ಚು ಮೆಚ್ಚಿನದು ಆಟ, ನಮ್ಮ ಎಳೆಯವಲ್ಲಿ ಇದನ್ನೆ ಶಾಲೆಯಲ್ಲಿ ನಿರೀಕ್ಷಿಸುತ್ತಿದ್ದೆವು. ಆಟಗಳಿಂದ ನಮ್ಮ ಶರೀರ ಸುಧ್ರಡವಾಗುತ್ತದೆ. ಸೋಲು ಗೆಲುವು ಇದ್ದದೆ ಆದರೆ ಆಟದಲ್ಲಿ ನಮ್ಮನು ನಾವು ತೊಡಗಿಕೊಳ್ಳಬೇಕು, ನೀವು ಆಟದಲ್ಲಿ ಶ್ರಮ ಪಟ್ಟು ಸಾಧನೆ ಮಾಡಬೇಕು, ಈ ಆಟ ಇಲ್ಲಿಗೆ ಮುಕ್ತಾಯವಾಗುವುದಿಲ್ಲ, ತಾಲ್ಲೂಕಿನಿಂದ ಜಿಲ್ಲೆ, ಜಿಲ್ಲೆಯಿಂದ ರಾಜ್ಯ, ರಾಜ್ಯದಿಂದ ರಾಷ್ಟ್ರೀಯ ಮಟ್ಟಕ್ಕೆ, ರಾಷ್ಟ್ರೀಯ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪುವಂತಹ ಗುರಿಯನ್ನು ಇಟ್ಟುಕೊಳ್ಳಬೇಕು” ಎಂದು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು, ಹಾಗೂ ಸಂತ ಮೇರಿಸ್ ಸಮುಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅ|ವಂ|ಸ್ಟ್ಯಾನಿ ತಾವ್ರೊ ಹೇಳಿದರು.
ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಹೋಲಿ ರೋಜರಿ ಆಂಗ್ಲ ಮಾದ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರಾರ್ಥಮಿಕ ಹಾಗೂ ಪ್ರೌಢ ಶಾಲೆಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಸಂದೇಶ ನೀಡಿದರು. ದೈಹಿಕ ಪರಿವೀಕ್ಷಗಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆ, ಕುಂದಾಪುರದ ರವೀಂದ್ರ ನಾಯಕ್ ಪ್ರಸ್ತಾವಿಕ ಭಾಷಣ ಮಾಡಿದರು. ಮುಖ್ಯ ಅತಿಥಿ ಮತ್ಸ್ಯ ಉದ್ಯಮಿ ಸತ್ಯ ಜಾವಗಲ್ ಮಾತನಾಡಿ “ಕ್ರೈಸ್ತರು ಶಿಕ್ಷಣ ನೀಡುವಲ್ಲಿ ಭಾರೀ ಮುಂದು, ಶಿಕ್ಷಣಕ್ಕಾಅಗಿ ನಾವು ಇವರಿಗೆ ಸಹಾಯ ಹಸ್ತವನ್ನು ನೀಡಬೇಕು. ಕ್ರೈಸ್ತ ಧರ್ಮಗುರುಗಳ ಒಡನಾಟ ಒಂದು ಭಾಗ್ಯವೇ ಸರಿ’ ಎಂದು ಅವರ ಭಾವನೆಯನ್ನು ವ್ಯಕ್ತಪಡಿಸಿದರು. ಹೋಲಿ ರೋಜರಿ ಆಂಗ್ಲ ಮಾದ್ಯಮ ಶಾಲೆಗಾಗಿ ಅವರು ಒಂದು ಟೇಬಲ್ ಟೆನ್ನಿಸ್ ಟೇಬಲನ್ನು ದಾನವಾಗಿ ನೀಡಿದ್ದು, ಅದನ್ನು ಅವರು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಿದರು. ಅವರ ಪರಿಚಯವನ್ನು ಶಿಕ್ಷಕ ಪ್ರಶಾಂತ್ ರೇಬೆರೊ ನೀಡಿದರು. ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಸಂತಮೇರಿಸ್ ವಿದ್ಯಾ ಸಂಸ್ಥೆಯವರು ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಿರ್ವಹೈಸುತ್ತಾರೆ ಎಂದು ಶ್ಲಾಘಿಸಿದರು. ವೇದಿಕೆಯಲ್ಲಿ ರೋಜರಿ ಚರ್ಚಿನ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ, ಸಂತ ಮೇರಿಸ್ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ರೆಶ್ಮಾ ಫೆರ್ನಾಂಡಿಸ್, ಸಂತ ಮೇರಿಸ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಅಸುಂಪ್ತಾ ಲೋಬೊ, ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಡೋರಾ ಡಿಸೋಜಾ, ಹೋಲಿ ರೋಜರಿ ಕಿಂಟರ್ ಗಾರ್ಟನ್ ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಾ ಡಿಆಲ್ಮೇಡಾ, ಸಂತ ಮೇರಿಸ್ ಸಮುಹ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಕರಾದ ಚಂದ್ರಶೇಖರ ಬೀಜಾಡಿ, ಶಾಂತಿ ರಾಣಿ ಬಾರೆಟ್ಟೊ, ಸ್ಪರ್ಧೆಯ ಸಹಾಯಕರಾಗಿ ನಿಶ್ಚಿತಾ ಶೆಟ್ಟಿ ಮತ್ತು ಶ್ರೀಕಾಂತ್ ಉಪಸ್ಥಿತರಿದ್ದರು.
ಹೋಲಿ ರೋಜರಿ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಧರ್ಮಭಗಿನಿ ತೆರೆಜಾ ಶಾಂತಿ ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಕ ರತ್ನಾಕರ ಶೆಟ್ಟಿ ನಿರೂಪಿಸಿದರು. ಶಿಕ್ಷಕಿ ಪ್ರತಿಬಾ ಶೆಟ್ಟಿ ವಂದಿಸಿದರು.
ಪಂದ್ಯಾವಳಿಯಲ್ಲಿ 14 ವರ್ಷದೊಳಗಿನ ಬಾಲಕರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ, ದ್ವೀತಿಯ ಸ್ಥಾನ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ, ಬಾಲಕಿಯರ ವಿಭಾಗದಲ್ಲಿ ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಪ್ರಥಮ ಸ್ಥಾನ, ದ್ವೀತಿಯ ಸ್ಥಾನ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ.
17 ವರ್ಷದೊಳಗಿನ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ, ದ್ವೀತಿಯ ಸ್ಥಾನ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ, ಬಾಲಕಿಯರ ವಿಭಾಗದಲ್ಲಿ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಪ್ರಥಮ ಸ್ತಾನ, ಬಾಲಕಿಯರ ವಿಭಾಗದಲ್ಲಿ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರು ಪಡೆದಿರುತ್ತಾರೆ.

ಕುಂದಾಪುರ ಚರ್ಚ್ ಗಾಯನ ಮಂಡಳಿಯಿಂದ ಸಿ.ಎ. ಪರೀಕ್ಷೆಯಲ್ಲಿ ತೆರ್ಗಡೆಯಾದ ವಿನಾರ್ಡ್ ಡಿಕೋಸ್ತಾರವರಿಗೆ ಸನ್ಮಾನ


ಕುಂದಾಪುರ, ಜು.31: ಈ ಸಾಲಿನ ಭಾರತೀಯ ಚಾರ್ಟೆಟ್ ಅಕೌಂಟೆಡ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಕುಂದಾಪುರ ಚರ್ಚ್ ಗಾಯನ ಪಂಗಡದ ಸದಸ್ಯರಾದ ವಿನಾರ್ಡ್ ಡಿಕೋಸ್ತಾ ಇವರನ್ನು ಜು.30 ರಂದು ಗಾಯನ ಮಂಡಳಿಯ ಪರವಾಗಿ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ವೇದಿಕೆಯಲ್ಲಿದ್ದ ಅಥಿತಿಗಳ ಜೊತೆ ಫಲ, ಪುಷ್ಪ, ಹಾರ, ಶಾಲು ಹೊದಿಸಿ, ಪೇಟ ತೋಡಿಸಿ, ರೋಜರಿ ಮಾತೆಯ ಪ್ರತಿಮೆ ನೀಡಿ ಸನ್ಮಾನಿಸಿದರು

ಸನ್ಮಾನಿಸಿದ ಅವರು “ವಿನಾರ್ಡ್ ನಮ್ಮ ಕುಂದಾಪುರದ ಸುಪುತ್ರ, ಆತನು ಕಲಿಯಲು ಎಷ್ಟು ಚುರುಕೊ, ಅಷ್ಟೆ ದೈವ ಭಕ್ತಿಯಲ್ಲಿ ಮುಂದು, ಅವನಿಗೆ ಸಂತ ಜೋಸೆಫ್ ವಾಜ್ ಇವರಲ್ಲಿ ಬಹಳ ಭಕ್ತಿ ಚಾರ್ಟೆಡ್ ಅಕೌಂಟೆಡ್ ಪರೀಕ್ಷೆಗಾಗಿ ತಲ್ಲೀನರಾಗುವಾಗಲೂ, ನಮ್ಮ ರೋಜರಿ ಚರ್ಚಿನ ಗಾಯನ ಪಂಗಡದಲ್ಲಿ ಸಕ್ರಿಯವಾಗಿ ಭಾಗವಹಿಸಿ ಚರ್ಚಿನ ಗಾಯನ ಪಂಗಡಕ್ಕೆ ತನ್ನ ಕಂಠದಿಂದ ಶ್ರೀಮಂತವಾಗಿಸಿದ್ದ ಈತ ಈಗ ಬಹು ಕಷ್ಟದ ಸಿ.ಎ. ಪರೀಕ್ಷೆ ತೆರ್ಗಡೆಯಾಗಿ ನಮಗೆ ಹೆಮ್ಮೆ ತಂದಿದ್ದಾನೆ, ಇದರಲ್ಲಿ ಅವರ ಹೆತ್ತವರ ಪಾಲೂ ಇದೆ” ಎಂದು ಅಭಿನಂದನಾ ಮಾತುಗಳನ್ನಾಡಿದರು.
ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ ಮಾತನಾಡಿ “ವಿನಾರ್ಡ್ ಪ್ರತಿಭಾವಂತ ಯುವಕನಾಗಿದ್ದಾನೆ ಎಂದು ಇತರ ಧರ್ಮಗುರುಗಳಿಂದ ಕೇಳಲ್ಪಟ್ಟಿದ್ದೆ, ಆತ ವೈ.ಸಿ.ಎಸ್. ಕುಂದಾಪುರ ವಲಯದ ಅಧ್ಯಕ್ಷನಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾಗಿ ಶ್ಲಾಘನೆ ಕೇಳಿದ್ದು, ನಮ್ಮ ಯುವ ಜನರಿಗೆ ಸ್ಪೂರ್ತಿಯಾಗಲು ಇತ್ತೀಚಿನ ಶಿಬಿರದಲ್ಲಿ ತಿಳುವಳಿಕೆ ಕೊಡಲು ನಾನು ಆತನನ್ನು ಆರಿಸಿದ್ದು ಫಲಫ್ರಬವೆಂಬತ್ತೆ ಇವತ್ತು ಸಿ.ಎ. ಯಾಗಿ ಮಾರ್ಪಟ್ಟಿದ್ದಾನೆ, ನಮ್ಮ ಯುವ ಯುವತಿಯರು ಇದನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಉನ್ನತ ಮಟ್ಟದ ಪದವಿ ಪಡೆದುಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಸಮ್ಮಾನ ಸ್ವೀಕರಿಸಿದ ವಿನಾರ್ಡ್ ಡಿಕೋಸ್ತಾ ಮಾತನಾಡಿ ‘ಎಲ್ಲರೂ ಇಂಜಿನಿಯರಿಂಗ್, ವೈಧ್ಯಕೀಯ ಕ್ಷೇತ್ರಗಳನ್ನು ಆರಿಸಿಕೊಳ್ಳುತ್ತಾರೆ, ಆದರೆ ನಾನು ಇತರ ಕ್ಷೇತ್ರಗಳನ್ನು ಪರೀಶಿಲಿಸಿ ವಾಣಿಜ್ಯವನ್ನು ಆರಿಸಿಕೊಂಡು ಸಿ.ಎ. ಆಗಲು ಮುಂದಡಿ ಇಟ್ಟೆ. ಸಿ.ಎ. ಪರೀಕ್ಷೆ ತೆರ್ಗಡೆಯಾಗಲು, ಕಠಿಣ ಪರಿಶ್ರಮದ ಅಗತ್ಯವಿದೆ, ನಾನು ಸಿ.ಎ. ತೆರ್ಗಡೆಯಾಗುಲು ನನ್ನ ಮಾತಾ ಪಿತ ನನ್ನ ಕುಟುಂಬದ ಪ್ರೇರಣೆ ಪೆÇ್ರೀತ್ಸಾಹ ತಂಬಾ ಇದೆ, ಜೊತೆಗೆ ನಾನು ನಂಬಿದ ರೋಜರಿ ಮಾತೆ ಮತ್ತು ಸಂತ ಜೋಸೆಫ್ ವಾಜ್ ಇವರ ದಯೆ ಕೂಡ ಆಗಿದೆಯೆಂದು ನಂಬುತ್ತೇನೆ’ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಕುಂದಾಪುರ ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ, ಗಾಯನ ಮಂಡಳಿ ಸದಸ್ಯ ಜೆರಾಲ್ಡ್ ಕ್ರಾಸ್ತಾ,  ಕುಂದಾಪುರ ಚರ್ಚಿನ ಸಮಾಜ ಸಂಪರ್ಕ ಮಾಧ್ಯಮದ ಸಂಚಾಲಕರಾದ ವಿನಾರ್ಡ್ ಇವರ ತಂದೆ ಸಾಹಿತಿ, ಪತ್ರಕರ್ತ ಬರ್ನಾಡ್ ಡಿಕೋಸ್ತಾ, ಈ ಸಂದರ್ಭದಲ್ಲಿ ಮಾತನಾಡಿದರು. ಗಾಯನ ಮಂಡಳಿ ಅಧ್ಯಕ್ಷೆಯಾದ ವಿನಾರ್ಡ್ ಇವರ ತಾಯಿ ವಿನಯಾ ಡಿಕೋಸ್ತಾ, ಚರ್ಚ್ ಸರ್ವ ಆಯೋಗದ ಸಂಯೋಜಕಿ ಪ್ರೇಮಾ ಡಿಕುನ್ಹಾ, ಗಾಯನ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು, ಫೆಲ್ಸಿಯಾನ ಡಿಸೋಜಾ ಸ್ವಾಗತಿಸಿದರು. ಆಲ್ಡ್ರಿನ್ ಡಿಸೋಜಾ ನಿರೂಪಿಸಿ, ಗಾಯನ ಮಂಡಳಿಯ ಕಾರ್ಯದರ್ಶಿ ರೀಮಾ ಡಿಆಲ್ಮೇಡಾ ವಂದಿಸಿದರು.

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ವಿಜಯ ಕುಮಾರ್ ಶೆಟ್ಟಿ ಆಯ್ಕೆ


ಕೋಟ:ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯು ಸಂಘದ ಅಧ್ಯಕ್ಷ ಪ್ರಭಾಕರ ಜೈನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಉಡುಪಿ ಬೋರ್ಡ್ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ರಾಜ್ಯ ಸಂಘದ ಉಪಾಧ್ಯಕ್ಷ ರಾಜಾರಾಮ ಶೆಟ್ಟಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಅಧ್ಯಕ್ಷರಾಗಿ ಸಾಯ್ಬರಕಟ್ಟೆ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ವಿಜಯ ಕುಮಾರ್ ಶೆಟ್ಟಿ ಆಯ್ಕೆಯಾದರು.
ಪ್ರಧಾನ ಕಾರ್ಯದರ್ಶಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಕ್ಕುಂಜೆ ಕೃಷ್ಣ ನಾಯ್ಕ್, ಕೋಶಾಧಿಕಾರಿಯಾಗಿ ನಿಟ್ಟೂರು ಪ್ರೌಢ ಶಾಲೆ ಅಶೋಕ್ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಮೂಕಾಂಬಿಕಾ ಪ್ರೌಢಶಾಲೆ ಹೊಸೂರು ಬೈಂದೂರಿನ ರವಿಶಂಕರ ಹೆಗ್ಡೆ, ಸೈಂಟ್ ಜೋಸೆಫ್ ಪ್ರೌಢ ಶಾಲೆ ಬೆಳ್ಮಣ್ಣು ಕಾರ್ಕಳ ಹರಿದಾಸ ಪ್ರಭು,ಸರಕಾರಿ ಹಿ.ಪ್ರಾ.ಶಾಲೆ ಹಳ್ಳಾಡಿ ಹರ್ಕಾಡಿ ಕುಂದಾಪುರ ಶರತ್ ಕುಮಾರ್ ಶೆಟ್ಟಿ,ಸರಕಾರಿ ಪ್ರೌಢಶಾಲೆ ಮೂಡುಗಿಳಿಯಾರು ಬ್ರಹ್ಮಾವರದ ಶೇಖರ್, ಎಸ್‍ವಿಎಸ್ ಪ್ರೌಢ ಶಾಲೆ ಕಟಪಾಡಿ ಉಡುಪಿ
ಕಿರಣ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿಯ ಸೌಮ್ಯ ಅಮೀನ್,ಮೂಕಾಂಬಿಕಾ ಪ್ರೌಢ ಶಾಲೆ ಕೊಡ್ಲಾಡಿ ಬೈಂದೂರಿನ ಸಂತೋಷ್ ಕುಮಾರ್ ಶೆಟ್ಟಿ, ಸರಕಾರಿ ಹಿ.ಪಾ.್ರಶಾಲೆ ಬೆಳ್ವೆ ಕುಂದಾಪುರ ಕಿಶನ್‍ರಾಜ್ ಶೆಟ್ಟಿ, ಕ್ರೈಸ್ಟ್ ಕಿಂಗ್ ಹಿ.ಪ್ರಾ. ಶಾಲೆ ಕಾರ್ಕಳ ಪ್ರಕಾಶ್, ಸರಕಾರಿ ಪ.ಪೂ.ಕಾಲೇಜು ಬ್ರಹ್ಮಾವರ ಜಗದೀಶ್,
ಮಾಧ್ಯಮ ಕಾರ್ಯದರ್ಶಿಯಾಗಿ ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರದ ಚಂದ್ರಶೇಖರ ಬೀಜಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಸ.ಹಿ.ಪ್ರಾ.ಶಾಲೆ ಬಾಳ್ಕುದ್ರು ಬ್ರಹ್ಮಾವರದ ಶ್ರೀಕಾಂತ ಸಾಮಂತ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ ಬೈಂದೂರಿನ ಚಂದ್ರಶೇಖರ ಶೆಟ್ಟಿ,ಸ.ಹಿ.ಪ್ರಾ.ಶಾಲೆ ಕುಂದಾಪುರದ ಸುಮಂಗಲಾ ನಾಯಕ್ ಆಯ್ಕೆಗೊಂಡರು.

ಕುಂದಾಪುರ : ಕಾಳಾವರದಲ್ಲಿ ಕಾರು – ಲೂನಾ ಡಿಕ್ಕಿ ಲೂನಾ ಸವಾರ ಸಾವು

ಕುಂದಾಪುರ, ಜು. ೩೦:ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ಮಾರ್ಗದ ಕಾಳಾವರ ಎಂಬಲ್ಲಿ ಭಾನುವಾರ ಸಂಜೆ ಕಾರು ಮತ್ತು ಲೂನಾ ನಡುವೆ ಅಪಘಾತಾವಾಗಿ ಲೂನಾ ಸವಾರ ನರಸಿಂಹ ಶೆಟ್ಟಿ (75) ಮ್ರತ ಪಟ್ಟಿದ್ದಾರೆ.  

 ಕಾಳಾವರ ಸರಕಾರಿ  ಶಾಲೆಯ ಸಮೀಪದ ಅಡ್ಡರಸ್ತೆಯಿಂದ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ನರಸಿಂಹ ಶೆಟ್ಟಿ ಮುಖ್ಯ ರಸ್ತೆಗೆ ಹಠಾತ್ ಪ್ರವೇಶಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕೋಟೇಶ್ವರದಿಂದ ಹಾಲಾಡಿ ಕಡೆಗೆ ಸಾಗುತ್ತಿದ್ದ ಬೊಲೆರೋ ಕಾರಿನ ಚಾಲಕ ಲೂನಾ ಹಠಾತ್ ಅಡ್ಡ ಬಂದಿದ್ದರಿಂದ ಅಪಘಾತ ತಪ್ಪಿಸಲು ಹೋಗಿ ಬ್ರೇಕ್ ಹಾಕಿದ್ದರಿಂದ ಕಾರು ರಸ್ತೆ ಬದಿಯ ಕಲ್ಲು ಕಂಬಕ್ಕೆ ಗುದ್ದಿದೆ. ಈ ಸಂದರ್ಭದಲ್ಲಿ ಲೂನಾ ಸವಾರ  ಗಂಭೀರ ಗಾಯಗೊಂಡಿದ್ದು, ಸವಾರ ನರಸಿಂಹ ಶೆಟ್ಟಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಯುಸ್ ನಗರ ಚರ್ಚಿನ ಕಥೊಲಿಕ್ ಸಭಾದಿಂದ ಮಕ್ಕಳ ಶಿಕ್ಷಣಕ್ಕೆ ಸಹಾಯಧನ ವಿತರಣೆ

ಕುಂದಾಪುರ, ಜು. 30;  ದಿನಾಂಕ 30-7-2023 ರಂದು ಪಿಯುಸ್ ನಗರ್ ಚರ್ಚಿನ ಕಥೊಲಿಕ್ ಸಭಾದಿಂದ ಮೂರು ಮಕ್ಕಳಿಗೆ ಶಿಕ್ಷಣಕ್ಕಾಗಿ ಸಹಾಯಧನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮಕ್ಕೆ ಪಿಯುಸ್ ನಗರ್ ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ವಾಮಿ ಆಲ್ಬರ್ಟ್ ಕ್ರಾಸ್ತಾ ಸಹಾಯಧನ ವಿತರಣೆ ಮಾಡಿ  ಪಿಯುಸ್ ನಗರ ಚರ್ಚಿನ ಕಥೊಲಿಕ್ ಸಭಾ ಸಂಘಟನೆ ಸೇವೆಗಳ  ಸಹಕಾರ ನಿರಂತರವಾಗಿ ಮಾಡುತ್ತಾ ಇದೆ. ಮುಂದೆ ಕೂಡ ಇಂತಹ ಒಳ್ಳೆ ಕೆಲಸಗಳು ಈ ಸಂಘಟನೆಯಲ್ಲಿ ನಡೆಯಲಿ’ ಎಂದು ಹಾರೈಸಿ ಸಂದೇಶವನ್ನು ನೀಡಿದರು. ಪಿಯುಸ್ ನಗರ ಕಥೊಲಿಕ್ ಸಭಾ ಸಂಘಟನೇಯ ಮಾರ್ಗದರ್ಶಕರಾದ, ಕಥೊಲಿಕ್ ಸಭಾ ಕುಂದಾಪುರ ವಲಯದ ಮಾಜಿ ಅಧ್ಯಕ್ಷರಾದ ಡಾ| ಸೋನಿ ಡಿಕೋಸ್ಟಾ ಉಪಸ್ಥಿತರಿದ್ದು ’ಪಿಯುಸ್ ನಗರ್ ಚರ್ಚಿನ ಕಥೊಲಿಕ್ ಸಂಘಟನೆಯ ಬಗ್ಗೆ ತಾನು ಈ ಸಂಘಟನೆಯಲ್ಲಿ ಮಾರ್ಗದರ್ಶಕರಾಗಿ ಸೇವೆ ನೀಡುವುದು ತನಗೆ ತುಂಬಾ ಖುಷಿ ನೀಡುತ್ತದೆ.ಇಲ್ಲಿ ಒಳ್ಳೆಯ ಕೆಲಸಗಳು ನಡೆಯುತ್ತಿವೆ ಹಾಗೂ ಇಲ್ಲಿ ಇರುವ ಎಲ್ಲಾ ಸದಸ್ಯರು ಸೇವಾ ಮನೋಭಾವ ಉಳ್ಳವರು’ ಎಂದು ತಿಳಿಸಿದರು.

    ಸಂಘಟನೆಯ ಅಧ್ಯಕ್ಷರಾದ ಶ್ರೀ ಅಲೆಕ್ಸಾಂಡರ್ ಲೂವಿಸ್ ಸ್ವಾಗತವನ್ನು ಕೋರಿದರು..ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಹಾಗೂ ಸಂಘಟನೆಯ ರಾಜಕೀಯ ಸಂಚಾಲಕರು ಶ್ರೀ ರೋಶನ್ ಬರೆಟ್ಟೊ  ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳ ಬಗ್ಗೆ ವಿಸ್ತಾರ ರೀತಿಯಲ್ಲಿ ಮಾಹಿತಿ ನೀಡಿದರು ಈ ಕಾರ್ಯಕ್ರಮಕ್ಕೆ ಮಾಜಿ ಅಧ್ಯಕ್ಷರಾದಂತಹ ಶ್ರೀ ರೇಮಿ ಫೆರ್ನಾಂಡಿಸ್, ನಿಯೋಜಿತ ಅಧ್ಯಕ್ಷೆ ಶ್ರೀಮತಿ ನ್ಯಾನ್ಸಿ ವಾಜ್ ಹಾಜರಿದ್ದರು.ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಡೆಸಾ ವಂದಿಸಿದರು.

ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತದಲ್ಲಿ ಬಿದ್ದ ಶರತ್‌ ಕುಮಾರನ  ಮೃತದೇಹ ಒಂದು ವಾರದ ಬಳಿಕ  ಪತ್ತೆ

ಕೊಲ್ಲೂರು,ಜು.30: ಸ್ನೇಹಿತರೊಂದಿಗೆ ಕಳೆದ ಭಾನುವಾರ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದ ಸಂದರ್ಭ ಕಾಲುಜಾರಿ ನೀರಿನಲ್ಲಿ ಬಿದ್ದು.ಕಾಣೆಯಾಗಿದ್ದ ಭದ್ರಾವತಿಯ ಯುವಕ ಶರತ್‌ ಕುಮಾರನ [23] ಮೃತದೇಹ ಜಲಪಾತದ ಸಮೀಪದಲ್ಲಿಯೆ ಪತ್ತೆಯಾಗಿದೆ.

ಶರತ್‌ ಹಾಗೂ ಸ್ನೇಹಿತ ಗುರುರಾಜ ಜೊತೆಗೂಡಿ ಜು.23ರ ಭಾನುವಾರದಂದು ಭದ್ರಾವತಿಯಿಂದ ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತ ನೋಡಲು ತೆರಳಿದ್ದರು. ಮಧ್ಯಾಹ್ನ 3-30ರ ಹೊತ್ತಿಗೆ ಜಲಪಾತ ಬಳಿ ವೀಡೀಯೋ ಮಾಡಲು ಹೇಳಿ ಬಂಡೆಯ ಮೇಲೆ ನಿಂತಿದ್ದ ಶರತ್‌ ಕಾಲು ಜಾರಿ ಬಿದ್ದಿದ್ದರು ನೀರಿನ ಸೆಳತಕ್ಕೆ ಸಿಲುಕಿ ನಾಪತ್ತೆಯಾಗಿದ್ದನು. ಕಾಲು ಜಾರಿ ಬಿಳುವ ಈ ಈ ಘಟನೆ ಸ್ನೇಹಿತನ ಮೊಬೈಲಿನಲ್ಲಿಯೂ ಸೆರೆಯಾಗಿತ್ತು.

   ಘಟನೆಯ ಮಾಹಿತಿಯನ್ನು ಸ್ನೆಹಿತ ತಿಳಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳೆದೊಂದು ವಾರದಿಂದ ಕೊಲ್ಲೂರು ಠಾಣೆಯ ಪೊಲೀಸ್‌ ತಂಡ, ಅರಣ್ಯ ಇಲಾಖೆ ಸಿಬ್ಬಂದಿಗಳು, ಉಡುಪಿಯ ಎಸ್‌ಡಿಆರ್‌ಎಫ್‌ ತಂಡ, ಕುಂದಾಪುರ ಹಾಗೂ ಬೈಂದೂರು ಅಗ್ವಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ.ನಡೆಸಿದ್ದರು. ಇವರೊಂದಿಗೆ ಮೃತ ಶರತ್‌ನ ಸಂಬಂಧಿ ಹಾಗೂ ಸ್ನೇಹಿತರ ಜೊತೆಗೂಡಿ ಹುಡುಕಾಟ ನಡೆಸಿದ್ದರು.

    ಶರತ್‌ನ ತಂದೆ ತಾಯಿ ಹೇಗಾದರೂ ತಮ್ಮ ಮಗನನ್ನು ಹುಡುಕಿಕೊಡಿ ಎಂದು ಸರಕಾರಕ್ಕೆ ಬೇಡಿಕೆ ಇರಿಸಿದ್ದರು. ನಿನ್ನೆಯಿಂದ ಮಳೆ ಕೊಂಚ ಕಡಿಮೆಯಾದ. ಹಿನ್ನೆಲೆಯಲ್ಲಿ ಹುಡುಕಾಟ ಚುರುಕುಗೊಳಿಸಿದ್ದು, ಶರತ್‌ ಮೃತದೇಹ ಜಲಪಾತದ ಸಮೀಪದ ಕಲ್ಲಿನ ಪೊಟರೆಯಲ್ಲಿ ಸಿಲುಕಿಕೊಂಡ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ನಡುವೆ ಸಾಹಸಿ ಚಿತ್ರದುರ್ಗದ ಜ್ಯೋತಿರಾಜ್‌ ತಂಡ, ಈಶ್ವರ್‌ ಮಲ್ಪೆ ತಂಡವೂ ನೀರಿನ ರಭಸದ ಒತ್ತಡದ ನಡುವೆಯೂ ಹುಡುಕಾಟ ನಡೆಸಿ. ಹಿಂದಿರುಗಿದ್ದರು. ಡ್ರೋನ್‌ ಮೂಲಕವೂ ಪತ್ತೆ ಕಾರ್ಯಾಚರಣೆ ನಡೆಸಲಾಗಿತ್ತು. ಕೊಲ್ಲೂರು ಠಾಣೆಯ ಪಿಎಸ್‌ಐಗಳಾದ ಜಯಶ್ರೀ ಹಾಗೂ ಸುಧಾರಾಣಿ ಅವರ ನೇತೃತ್ವದಲ್ಲಿ ಬೆಳಿಗ್ಗೆಯಿಂದ ಸಂಜೆಯ ತನಕಪೂಹುಡುಕಾಟ ನಡೆಸಲಾಗಿತ್ತು.

ಜೆಸಿಐ : ಸಾದು ಎಸ್ ಬಿಲ್ಲವರಿಗೆ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ನೆಲೆಯಲ್ಲಿ ಸನ್ಮಾನ

ಜೆಸಿಐ ಕುಂದಾಪುರ ಸಿಟಿಯಾ ಆಶ್ರಯದಲ್ಲಿ ಕೃಷಿ ಹಾಗು ಹೈನುಗಾರಿಕೆ ಯಲ್ಲಿ ಸಾಧನೆ ಮಾಡಿದ ಸಾದು ಎಸ್ ಬಿಲ್ಲವ ಇವರಿಗೆ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ನೆಲೆಯಲ್ಲಿ ಕುಂದಾಪುರದ ಸಹನಾ ಕನ್ವೆನ್ಷನ್ ಸಭಾಂಗಣ ದಲ್ಲಿ ಸನ್ಮಾನಿಸಲಾಯಿತು ಸಭೆಯ ಅಧ್ಯಕ್ಷ ತೆ ಯನ್ನು ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷೆ ಡಾ ಸೋನಿ ವಹಿಸಿದರು ಸಮಾರಂಭ ದಲ್ಲಿ ವಲಯ 15 ರ ಪೂರ್ವ ವಲಯಾಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ತ ವಲಯ ಉಪಾಧ್ಯಕ್ಷ ಅಭಿಲಾಶ್ ಬಿ ಏ ಜೇಸಿ ಐ ಶಂಕರನಾರಾಯಣ ಅಧ್ಯಕ್ಷ ರಾಘವೇಂದ್ರ ಚಾತ್ರಮಕ್ಕಿ ಜೆಸಿಐ ಹೆಬ್ರಿ ಯಾ ಅಧ್ಯಕ್ಷ ಪ್ರವೀಣ್ ಶೆಟ್ಟಿ ಜೆಸಿಐ ಕಡಬ ಕದಂಬ ದ ಅಧ್ಯಕ್ಷ ಅಭಿಷೇಕ್ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ರಾದ ರಾಘವೇಂದ್ರ ಚರಣ್ ನಾವಡ ಪ್ರಶಾಂತ್ ಹವಾಲ್ದಾರ್ ನಾಗೇಶ್ ನಾವಡ ಚಂದ್ರಕಾಂತ್ ವಿಜಯ್ ಭಂಡಾರಿ ಗಿರೀಶ್ ಹೆಬ್ಬಾರ್ ರಾಘವೇಂದ್ರ ಕುಲಾಲ್ ಕಾರ್ಯದರ್ಶಿ ಸಂದೇಶ್ ಶೆಟ್ಟಿ ಲೇಡಿ ಜೇಸಿ ಅಧ್ಯಕ್ಷೆ ಪ್ರೇಮ ಇನ್ನಿತರರು ಉಪಸ್ಥಿತರಿದ್ದರು.

ಕುಂದಾಪುರದಲ್ಲಿ ಅಜ್ಜ ಅಜ್ಜಿ – ಹಿರಿಯರ ದಿನಾಚರಣೆ “ಬಿಳಿ ಕೂದಲು ಜೀವಿತಕ್ಕೆ ಒಂದು ಕೀರಿಟ: ಫಾ| ರೋಶನ್ ಡಿಸೋಜಾ


ಕುಂದಾಪುರ,ಜು.30: ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಅಜ್ಜ-ಅಜ್ಜಿ ಹಾಗೂ ಹಿರಿಯರ ದಿನಾಚರಣೆಯನ್ನು (30-7-230) ಆಚರಿಸಲಾಯಿತು. ಮೊದಲಿಗೆ ಚರ್ಚಿನಲ್ಲಿ ಕøತ್ಞತಾ ಪೂರ್ವಕ ಬಲಿದಾನವನ್ನು ಅರ್ಪಿಸಲಾಯಿತು.
ಉಡುಪಿ ಧರ್ಮಪ್ರಾಂತ್ಯದ ಛಾನ್ಸಲರ್ ಅ|ವಂ|ರೋಶನ್ ಡಿಸೋಜಾ ಪವಿತ್ರ ಬಲಿದಾನವನ್ನು ಅರ್ಪಿಸಿ ‘ನಾವು ನಮ್ಮ ಹಿರಿಯವರ ಹತ್ತಿರ ಕಲಿಯಬೇಕಾದ್ದು ತುಂಬಾ ಇದೆ, ನಮ್ಮಲ್ಲಿ ವಿಧ್ಯೆ, ಶಿಕ್ಷಣ, ದೊಡ್ಡ ದೊಡ್ಡ ಪದವಿಗಳಿರಬಹುದು, ಆದರೆ ಹಿರಿಯರಲ್ಲಿರುವ ಅನುಭವ ನಮ್ಮಲ್ಲಿ ಇಲ್ಲ. ಅವರಲ್ಲಿ ಜೀವನದ ಅಪಾರ ಅನುಭವ ಇದೆ, ಅವರು ಅಮಗಿರುವ ಸವಲತ್ತುಗಳು ಇಲ್ಲದೇಯು, ನಮಕ್ಕಿಂತ ಹೆಚ್ಚು ಶ್ರಮಪಟ್ಟು ನಮ್ಮನ್ನು ಸಲಹಿದ್ದಾರೆ. ಯಾರು ಹಿರಿಯರಿಗೆ ವಿಧೇಯತೆ, ಗೌರವ ಕೊಟ್ಟು ಬಾಳಿದ್ದಾರೊ ಅವರೆಲ್ಲರಿಗೆ ಒಳಿತಾಗಿದೆ, ಯಾರೆಲ್ಲ ಅಗೌರವ ದುಖ ನೀಡಿದ್ದಾರೊ ಅವರಿಗೆಲ್ಲ ಕೆಟ್ಟದಾಗಿದೆ, ಹಿರಿಯರಿಂದ ನಮಗೆ ಆಸ್ತಿ ಪಾಸ್ತಿ ಬಳುವಳಿ ಬಂದಿದೆ, ಎಲ್ಲದಕಿಂತ ಹೆಚ್ಚು ದೇವರ ಮೇಲಿನ ಧ್ರಡ ನಂಬಿಕೆಯನ್ನು ಕೊಡಮಾಡುತ್ತಲೇ ಬಂದಿದ್ದಾರೆ. ಹಿರಿಯರ ಬಿಳಿ ಕೂದಲು ಅವರ ಜೀವಿತಕ್ಕೆ ಒಂದು ಕೀರಿಟವಾಗಿದೆ” ಎಂದು ಹೇಳುತ್ತಾ ಹಿರಿಯರಿಗೆ ಒಂದು ಕಿವಿ ಮಾತು ಹೇಳಿದರು “ನೀವು ನಿಮ್ಮ ಮಕ್ಕಳಿಗೆ ಆಸ್ತಿ ಪಾಸ್ತಿ ಸಂಪತ್ತು ಇದ್ದರೆ ಎಲ್ಲವನ್ನು ಮಕ್ಕಳಿಗೆ ಕೊಡಬೇಡಿ, ಸ್ವಲ್ಪವಾದರೂ ದಾನಧರ್ಮ ಮಾಡಿ” ಎಂದು ಅವರು ಸಂದೇಶದಲ್ಲಿ ತಿಳಿಸಿದರು.
ಇಗರ್ಜಿಯ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಸಹಬಲಿದಾನದಲ್ಲಿ ಭಾಗಿಯಾಗಿ, ಹಿರಿಯರಿಗೆ, ಅಜ್ಜ-ಅಜ್ಜಿಯಂದಿರಿಗೆ ಶುಭಾಶಯ ಕೋರಿ ಧನ್ಯವಾದಗಳನ್ನು ಅರ್ಪಿಸಿದರು. ಅತಿ ಹೆಚ್ಚು ಮೊಮ್ಮಕ್ಕಳನ್ನು ಹೊಂದಿದ ಇಗರ್ಜಿಯ 13 ವಾಳೆಯವರ ಅಜ್ಜ- ಅಜ್ಜಿಯಂದರಿಗೆ ಹೂ ನೀಡಿ ಅಭಿನಂದಿಸಲಾಯಿತು. ಭಾನುವಾರದ ಪ್ರಾರ್ಥನ ವಿಧಿಯನ್ನು ಹಿರಿಯರು ನೆಡಸಿಕೊಟ್ಟರು. ಕಾರ್ಯಕ್ರಮವನ್ನು ಇಗರ್ಜಿಯ ಕುಟುಂಬ ಆಯೋಗದಿಂದ ನಡೆಸಿಕೊಟ್ಟರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಸಿಹಿ ಹಂಚಲಾಯಿತು. ಹಿರಿಯ ಧರ್ಮಭಗಿನಿಯರು ಸೇರಿ ಸುಮಾರು 140 ಹಿರಿಯರು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನ, ಸರ್ವ ಆಯೋಗದದ ಸಂಯೋಜಕಿ ಪ್ರೇಮಾ ಡಿಕುನ್ಹಾ, ಇಗರ್ಜಿಯ ಕುಟುಂಬ ಆಯೋಗದ ಸಂಚಾಲಕಿ ಜೂಲಿಯಾನ ಮಿನೆಜೆಸ್ ಮತ್ತು ಸದಸ್ಯರು. ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ, ಕಾರ್ಯದರ್ಶಿ ಆಶಾ ಕರ್ವಾಲ್ಲೊ ಉಪಸ್ಥತರಿದ್ದರು.

ಪಟಾಕಿ ಗೋದಾಮ್ ಹಠಾತ್ ಸ್ಪೋಟ : 8 ಜನರ ಸಾವು, ಹಲವರಿಗೆ ಗಾಯ

ಕೃಷ್ಣಗಿರಿ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಳೆಯಪೇಟೈ ಪಟಾಕಿ ತಯಾರಿಕಾ ಘಟಕದ ಗೋದಾಮಿನಲ್ಲಿ ಹಠಾತ್ ಸ್ಫೋಟಗೊಂಡು ಸಂಭವಿಸಿದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಪೋಟದ ತೀವ್ರತೆಗೆ ಸಮೀಪದ ಮನೆಗಳು ಮತ್ತು ಅಂಗಡಿಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ. ಸ್ಪೋಟ ನೆಡೆದ ಸುತ್ತಲಿನ ಜಾಗ ಚೆಲ್ಲಾಪಿಲ್ಲಿಯಾಗಿದೆ.

ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಪಡೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.ಸ್ಪೋಟಕ್ಕೆ ನಿಖರವಾದ ಕಾರಣ ಇನ್ನು ತಿಳಿಯಬೇಕಾಗಿದೆ.