ಆರ್‌.ಎನ್.‌ಶೆಟ್ಟಿ : ಕುಮಾರಿ ಪೂರ್ವಿಕಾಳಿಂದ ಶಾಸ್ತ್ರೀಯ ನೃತ್ಯದಲ್ಲಿ ರಾಷ್ಟ್ರಮಟ್ಟದ ಸಾಧನೆ

ಕುಂದಾಪುರದ ಆರ್‌.ಎನ್.‌ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ಕುಮಾರಿ ಪೂರ್ವಿಕಾ ಇವರು ಪ್ರಭಾತ್ ಕಲಾವಿದರ ತಂಡ ಗೋಪಿನಾಥ್ ನ್ಯಾಸ-2023 ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಸ್ಪರ್ಧೆಗಳ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪರ್ಯಾಯ ಪಾರಿತೋಷಕವನ್ನು ಗಳಿಸಿರುತ್ತಾರೆ.

ಕು.ಪೂರ್ವಿಕಾ ಇವರು ವಿದುಷಿ ಪ್ರವಿತ ಮತ್ತು ಅಶೋಕ್ ಕುಮಾರ್ ರವರ ಪುತ್ರಿ. ಪೂರ್ವಿಕಾಳ ಈ ಅಮೋಘ ನೃತ್ಯಸಾಧನೆಯನ್ನು ಮೆಚ್ಚಿ, ಕಾಲೇಜಿನ ಸಂಚಾಲಕರಾದ ಶ್ರೀ ಬಿ.‌ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.  

ಮೂಡ್ಲಕಟ್ಟೆ ಐ ಎಂ ಜೆ ಇನ್ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ & ಕಾಮರ್ಸ್‌ ಪದವಿ ಕಾಲೇಜಿನ ಪ್ರಥಮ ಸೆಮಿಸ್ಟರ್‌ ಶ್ಲಾಘನೀಯ ಫಲಿತಾಂಶ

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರಥಮ ವರ್ಷದ ಮೊದಲ ಸೆಮಿಸ್ಟರ್‌ ಬ್ಯಾಚುಲರ್‌ ಆಫ್‌ ಕಾಮರ್ಸ್‌ (ಬಿಕಾಂ) ಮತ್ತು ಬ್ಯಾಚುಲರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಶನ್ಸ್‌ (ಬಿಸಿಎ) ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲಾಗಿದ್ದು, ಐಎಂಜೆಐಎಸ್‌ ಸಿ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ. ಈ ಫಲಿತಾಂಶವು ಯುವ ಮನಸ್ಸುಗಳ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಬಿಂಬಿಸುವುದರ ಜೊತೆಗೆ ವಿದ್ಯಾರ್ಥಿಗಳು ತಮ್ಮ ಸಾಧನೆಗಳನ್ನು ಗುರುತಿಸಿ ಕೊಳ್ಳಲು ಅವಕಾಶವಾಗಿದೆ. ಶೈಕ್ಷಣಿಕ ಪ್ರಯಾಣದುದ್ದಕ್ಕೂ ವಿದ್ಯಾರ್ಥಿಗಳನ್ನು ಪೋಷಿಸುವ ಮತ್ತು ಬೆಂಬಲಿಸುವಲ್ಲಿ ಉಪನ್ಯಾಸಕರು, ಪೋಷಕರು ಮತ್ತು ಶಿಕ್ಷಣ ಸಂಸ್ಥೆಯ ಪ್ರಯತ್ನಕ್ಕೆ ಕನ್ನಡಿಯಾಗಿದೆ. ಅಂತಹ ಪ್ರತಿಭಾವಂತ ಮತ್ತು ದೃಢನಿಶ್ಚಯದ ವಿದ್ಯಾರ್ಥಿಗಳೊಂದಿಗೆ, ಉಜ್ವಲ ಭವಿಷ್ಯವನ್ನು ರೂಪಿಸುವ ಬಲವಾದ ಭರವಸೆಯನ್ನು ಐ ಎಂ ಜೆ ಇನ್ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ & ಕಾಮರ್ಸ್‌ ಸಂಸ್ಥೆ ಹೊಂದಿದೆ.

ಬಿಕಾಂ ಫಲಿತಾಂಶ: ಬಿಕಾಂ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳಲ್ಲಿ, ಶೇಕಡಾ 91% ವಿದ್ಯಾರ್ಥಿಗಳು ತೇರ್ಗಡೆ ಶ್ರೇಣಿಯನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ವಿಷಯಗಳಲ್ಲಿನ ಸಮರ್ಪಣೆ ಮತ್ತು ಪರಿಶ್ರಮವನ್ನು ಕಾಣಬಹುದು. ಬಿಕಾಂ ಸ್ಟ್ರೀಮ್‌ನಲ್ಲಿ ಕಾಲೇಜಿನಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿ ಸಭಾ 8.46 ರ ಅತ್ಯುತ್ತಮ 684 ಅನ್ನು ಗಳಿಸಿದ್ದು, ಇದಲ್ಲದೆ, ಬಿಕಾಂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೇಕಡಾ 20% ವಿದ್ಯಾರ್ಥಿಗಳು 8 ಕ್ಕಿಂತ ಹೆಚ್ಚಿನ 684 ಅನ್ನು ಸಾಧಿಸಿದ್ದಾರೆ. ಉಳಿದಂತೆ. ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳು ಏಳಕ್ಕಿಂತ ಹೆಚ್ಚಿನ 688 ಗಳಿಸಿವಲ್ಲಿ ಯಶಸ್ವಿಯಾಗಿದ್ದಾರೆ… ಇದು. ಉನ್ನತ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಳ್ಳುವಲ್ಲಿ ಶಿಕ್ಷಣ ಸಂಸ್ಥೆಯ ಸಮರ್ಪಣೆಯನ್ನು ಸೂಚಿಸುತ್ತದೆ ಹಾಗು ವಿದ್ಯಾರ್ಥಿಗಳ ಸತತವಾದ ಶ್ರೇಷ್ಠತೆಗಾಗಿ ಮಾಡಿದ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ.

ಬಿ.ಸಿ.ಎ. ಫಲಿತಾಂಶಗಳು: ಬಿ.ಸಿ.ಎ. ಫಲಿತಾಂಶಗಳು ಪರೀಕ್ಷೆಗಳಿಗೆ ಹಾಜರಾದ 80 ವಿದ್ಯಾರ್ಥಿಗಳ ಪ್ರಯತ್ನ ಮತ್ತು ಫಲಿತಾಂಶ ಉತ್ತಮವಾಗಿದ್ದು, ಅವರಲ್ಲಿ ಶೇಕಡಾ 77% ತೇರ್ಗಡೆ ಶ್ರೇಣಿಗಳನ್ನು ಪಡೆದುಕೊಂಡಿರುವುದರಲ್ಲಿ ಅವರ ಕಠಿಣ ಪರಿಶ್ರಮ ಮತ್ತು ಅವರ ಅಧ್ಯಯನದ ಬದ್ಧತೆಯನ್ನು ನಾವು ಕಾಣಬಹುದು. ಬಿ.ಸಿ.ಎ. ಸ್ಟ್ರೀಮ್‌ನಲ್ಲಿ ಕಾಲೇಜಿನಲ್ಲಿ ಅತ್ಯಧಿಕ ಅಂಕವನ್ನು ಪಡೆದಿರುವ ವಿದ್ಯಾರ್ಥಿನಿ ನೇತ್ರಾವತಿ 9.44 ರಷ್ಟು 68% ಸಾಧಿಸಿದ್ದಾರೆ. ಈ ಅಸಾಧಾರಣ ಕಾರ್ಯಕ್ಷಮತೆಯು ವಿಷಯದಲ್ಲಿ ವಿದ್ಯಾರ್ಥಿನಿಯ ಪ್ರಾವೀಣ್ಯತೆಯನ್ನು ಮಾತ್ರವಲ್ಲದೆ ಕಂಪ್ಯೂಟರ್‌ ಅಪ್ಲಿಕೇಶನ್‌ಗಳ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುವ ಸಾಮರ್ಥ್ಯವನ್ನು ತೋರಿಸುತ್ತದೆ. ಇದಲ್ಲದೆ, ಬಿ.ಸಿ.ಎ. ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇಕಡಾ 26%, ವಿದ್ಯಾರ್ಥಿಗಳು 8 68 ಗಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ. ಈ ಅಂಕಿಅಂಶವು ಶೈಕ್ಷಣಿಕ ಯಶಸ್ಸಿಗೆ ಸಂಸ್ಥೆಯ ವಿದ್ಯಾರ್ಥಿಗಳು ಹಾಗು ಶಿಕ್ಷಕರ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ ಹಾಗು ಅವರು ಕಂಪ್ಯೂಟರ್‌ ಅಪ್ಲಿಕೇಶನ್‌ಗಳ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಾದ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿದ್ದಾರೆ ಎಂದು ಸೂಚಿಸುತ್ತದೆ.

ಅನ್ಯ ಚಟುವಟಿಕೆ ಹಾಗು ಕಲಿಕೆಯ ನಡುವೆ ಸಾಧನೆ ಕಾಲೇಜಿನ ವಿದ್ಯಾರ್ಥಿಗಳು ಪಠ್ಯೇತರವಾಗಿ ಸಾಂಸ್ಕೃತಿಕ ಹಾಗು. ಕ್ರೀಡಾ ವಿಷಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ಈ ಸಾಧನೆ ಮಾಡಿರುವುದು ಹೆಮ್ಮೆ ತಂದಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ವಿದ್ಯಾಸಂಸ್ಥೆಯಲ್ಲಿ ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌, ಸೈಬರ್‌ ಸೆಕ್ಯೂರಿಟಿ, 0೩, ಆ, ಅಕೌಂಟಿಂಗ್‌ ಮತ್ತು ಟಾಕ್ಸಾಷನ್‌ ಸೇರಿದಂತೆ ಅನೇಕ ಹೆಚ್ಚುವರಿ ವಿಷಯಗಳ ಅಧ್ಯಯನ ನಡೆಯುತ್ತಿದ್ದು, ಅವುಗಳನ್ನು ಕಲಿಯುತ್ತಾ ಪದವಿ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿರುವುದು ಸಂಸ್ಥೆಗೆ ಸಾರ್ಥಕತೆಯ ಭಾವ ತಂದಿದೆ ಎಂದು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಸಿದ್ಧಾರ್ಥ ಜೆ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಒಟ್ಟಾರೆಯಾಗಿ, ಬಿಕಾಂ ಮತ್ತು ಬಿಸಿಎ ಪರೀಕ್ಷೆಗಳ ಫಲಿತಾಂಶಗಳು ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗಳನ್ನು ಪ್ರದರ್ಶಿಸಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಆಯಾ ವಿಷಯ ಕ್ಷೇತ್ರಗಳಲ್ಲಿನ ಬದ್ಧತೆ ಈ ಅತ್ಯುತ್ತಮ ಫಲಿತಾಂಶಗಳಿಗೆ ಕಾರಣವಾಗಿದೆ.

ಈ ಫಲಿತಾಂಶಗಳು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುತ್ತವೆ, ಅಲ್ಲದೆ ಉತ್ಕೃಷ್ಟತೆಗಾಗಿ ಶ್ರಮಿಸಲು ಮತ್ತು ಅವರ ಶೈಕ್ಷಣಿಕ ಶ್ರೇಷ್ಟತೆಯನ್ನು ಗುರುತಿಸಲು ಸಹಾಯವಾಗುತ್ತದೆ. ಈ ಸಂಧರ್ಭದಲ್ಲಿ ಐಎಂಜೆ ಇನ್ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ & ಕಾಮರ್ಸ್‌ ಸಂಸ್ಥೆಯು ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳನ್ನು ಹಾರೈಸಿದೆ.

ಮಾನವ ಸ್ವಾರ್ಥಕ್ಕಾಗಿ ಅರಣ್ಯ ನಾಶ ಮಾಡಿದ ಪರಿಣಾಮ ಕಾಲ – ಕಾಲಕ್ಕೆ ಮಳೆಯಾಗಿದೆ:ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ : ಮಾನವ ಸ್ವಾರ್ಥಕ್ಕಾಗಿ ಅರಣ್ಯ ನಾಶ ಮಾಡಿದ ಪರಿಣಾಮ ಕಾಲ – ಕಾಲಕ್ಕೆ ಮಳೆಯಾಗಿದೆ ಸಂಕಷ್ಟ ಎದುರಾಗಿದ್ದು, ಇಂದಿನ ಪರಿಸ್ಥತಿಯಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ಹೊದಲಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಆರ್.ತಿಮ್ಮಸಂದ್ರ ಗ್ರಾಮದ ಸಮೀಪ ಡಾ|| ಬಿ.ಆರ್ ಅಂಬೇಡ್ಕರ್ ವಸತಿಶಾಲೆಯ ಆವರಣದಲ್ಲಿ ಶನಿವಾರ ವನಮಹೋತ್ಸವ ಹಾಗು ಕೋಟಿ ವೃಕ್ಷಾರೋಹಣ ಸಸಿ ನೆಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಬಾಲ್ಯದಿಂದಲೇ ಪರಿಸರದ ಬಗ್ಗೆ ಹೆಚ್ಚಿನ ಅರಿವನ್ನು ಮೈಗೂಡಿಸಿ ಕೊಳ್ಳಬೇಕು ಹಾಗೆಯೇ ಪರಿಸರ ಮಾಲಿನ್ಯ ತಡೆಗಟ್ಟಲು ಪ್ರತಿಯೊಬ್ಬರೂ ಶ್ರಮಿಸಬೇಕು, ಪರಿಸರದ ಉಳಿವುಗಾಗಿ ತಮ್ಮನ್ನು ತೊಡಗಿಸಿಕೊಂಡು ಪರಿಸರ ನಾಶವನ್ನು ತಡೆಯಬೇಕಾಗಿದೆ ಗಿಡಗಳನ್ನು ನೆಡುವುದು ಮುಖ್ಯವಲ್ಲಾ ಅದನ್ನು ಕಾಪಾಡಿಕೊಂಡಾಗ ಮಾತ್ರ ಪರಿಸರ ಉಳಿಯುತ್ತದ್ದೆ ಎಂದರು.
ಪರಿಸರವನ್ನು ಸಂರಕ್ಷಿಸದಿದ್ದರೆ ಮುಂದೆ ಕಠಿಣ ದಿನಗಳನ್ನು ಎದುರಿಸಲು ಸಿದ್ಧವಾಗಬೇಕಾಗುತ್ತದೆ. ಗಿ-ಮರಗಳನ್ನು ಬೆಳುಸುವುದರಿಂದ ಶುದ್ದ ಗಾಳಿ ದೊರೆಯುವ ಜೊತೆಗೆ ಸಕಾಲದಲ್ಲಿ ಮಳೆಬೆಳೆಯಾಗುತ್ತದೆ. ಇದರಿಂದ ರೈತರು ಮತ್ತು ಜನಸಾಮಾನ್ಯರು ಸಮೃದ್ಧಿಯಿಂದ ಜೀವನ ನಡೆಸಲು ಸಾಧ್ಯ ಎಂದರು.
ಇತ್ತೀಚಿನ ದಿನಗಳಲ್ಲಿ ಪರಿಸರ ದಿನಾಚರಣೆ ವನಮಹೋತ್ಸವ ಕಾರ್ಯಕ್ರಮಗಳು ಆಚರಣೆಗೆ ಮಾತ್ರ ಸೀಮಿತವಾಗಬಾರದು ಪರಿಸರ ಕುರಿತು ಮುಂದಿನ ಯುವ ಪೀಳಿಗೆಗೆ ನಾವೆಲ್ಲರೂ ತಿಳಿಸಿಕೊಡಬೇಕು ಎಂದರು.
ಸಾಮಾಜಿಕ ವಲಯ ಅರಣ್ಯಾಧಿಕಾರಿ ಕೆ.ಎನ್ ರವಿಕೀರ್ತಿ ಮಾತನಾಡಿ ಪ್ರಕೃತಿಯ ರಕ್ಷಣೆಗೆ ಮಾನವನಕೊಡುಗೆ ಅಗತ್ಯವಾಗಿದೆ ಅರಣ್ಯ ಇಲಾಖೆಯೊಂದಿಗೆ ಜನಸಾಮಾನ್ಯರಿಗೂ ಪ್ರಕೃತಿ ರಕ್ಷಣೆ ಮಾಡುವ ಜವಾಬ್ದಾರಿ ಇದೆ ಐಷಾರಾಮಿ ಜೀವನಕ್ಕೆ ಪ್ರಕೃತಿಯನ್ನು ಬಲಿಕೊಡದೇ ಅದರಿಂದ ಸಿಗುವ ಕೊಡುಗೆಗಳ ಕುರಿತು ಯೋಚಿಸಿ ಅದರ ರಕ್ಷಣೆಗೆ ಮುಂದಾಗಬೇಕೆಂದು ತಿಳಿಸಿದರು.
ಇದೇ ಸಮಯದಲ್ಲಿ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳಿಂದ ಕಲ್ಲೂರು ಸಮೀಪ ನಿರ್ಮಾಣವಾಗುತ್ತಿರುವ ನೂತನ ನ್ಯಾಯಾಲಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಈ ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ಮಹೇಶ್, ಪಿಡಿಓ ಕೆ.ಪಿ. ಶ್ರೀನಿವಾಸರೆಡ್ಡಿ, ಸಮಾಜಿಕ ವಲಯ ಅರಣ್ಯಾಧಿಕಾರಿ ಕಛೇರಿಯ ಸಿಬ್ಬಂದಿ ಜಾವೀದ್, ನರಸಿಂಹ, ಇನ್ನಿತರರು ಉಪಸ್ಥಿತರಿದ್ದರು.