ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ 25 ಲಕ್ಷ ರೂ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಕೋಲಾರ,ಜು.4: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಆಪತ್ಕಾಲದ ವೇಳೆ ನೆರವಿಗಾಗಿ ಸ್ಥಾಪಿಸಿರುವ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 25 ಲಕ್ಷ ರೂಗಳನ್ನು ಮಂಜೂರು ಮಾಡಿದ್ದಾರೆ.
ಜುಲೈ 1 ರಂದು ಕೋಲಾರದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಈ ಕುರಿತು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಮನವಿ ಸಲ್ಲಿಸಿತ್ತು.
ಈ ಮನವಿಯನ್ನು ಆಧರಿಸಿ ಕೆ.ವಿ.ಪ್ರಭಾಕರ್ ಅವರು ಜುಲೈ 3 ರಂದು ಸೋಮವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ 25 ಲಕ್ಷ ರೂಗಳನ್ನು ಮಂಜೂರು ಮಾಡಿಸಿದ್ದಾರೆ.
25 ಲಕ್ಷ ರೂಗಳನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಲ್ಯಾಣ ನಿಧಿಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾರ್ತಾ ಇಲಾಖೆಯ ಆಯುಕ್ತರಿಗೆ ಲಿಖಿತ ಸೂಚನೆ ನೀಡಿದ್ದಾರೆ.
ಈಗಾಗಲೇ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರು ಅನಾರೋಗ್ಯಕ್ಕೆ ತುತ್ತಾದ ಸಂದರ್ಭದಲ್ಲಿ ಮತ್ತು ಅವರ ಕುಟುಂಬದವರು ನಿಧನರಾದಾಗ ಸಂಘದ ವತಿಯಿಂದಲೇ ಆಪತ್ಕಾಲದ ನೆರವನ್ನು ಒದಗಿಸುತ್ತಿದೆ.
ಕೋವಿಡ್ ನಂತರದ ದಿನಗಳಲ್ಲಿ ಪತ್ರಕರ್ತರ ಸ್ಥಿತಿಗತಿ ಮತ್ತಷ್ಟು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿರುವ ವೇಳೆ ಪತ್ರಕರ್ತರ ಮತ್ತು ಅವರ ಕುಟುಂಬದವರ ಆಪತ್ಕಾಲಕ್ಕೆ ಅನಕೂಲವಾಗುವಂತೆ 1 ಕೋಟಿ ರೂಗಳ ನಿಧಿಯನ್ನು ಸಂಗ್ರಹಿಸಲು ಪತ್ರಕರ್ತರ ಸಂಘವು ಮುಂದಾಗಿದೆ.
ಈ ನಿಟ್ಟಿನಲ್ಲಿ ಈಗಾಗಲೇ ಸಂಘವು 3,30,555 ರೂಗಳನ್ನು ಸಂಗ್ರಹಿಸಿ ಡಿ.ಸಿ.ಸಿ ಬ್ಯಾಂಕಿನಲ್ಲಿ ಠೇವಣಿ ಇರಿಸಿದೆ.
ಕೋಲಾರ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಅನಕೂಲಕ್ಕಾಗಿ ಸ್ಥಾಪಿಸಿರುವ ಕಲ್ಯಾಣನಿಧಿಗೆ 25 ಲಕ್ಷ ರೂ ನೆರವು ಕೋರಿ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿ ಹಣ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮತ್ತು ಹಣ ಮಂಜೂರು ಮಾಡಿಸುವಲ್ಲಿ ಆಸಕ್ತಿ ವಹಿಸಿ ಶ್ರಮಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಕರಾವಳಿಯಲ್ಲಿ ಮಳೆಯ ಅಬ್ಬರ-ಉಡುಪಿ ಇಬ್ಬರ ಸಾವು-ಮಂಗಳೂರು ಕೆರೆಯಾಯ್ತು ಪಂಪ್ ವೆಲ್ ಭಾಗ


ಮಂಗಳೂರು, ಉಡುಪಿ: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರ ಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆದ್ರ್ರ ಮಳೆಯು ಒಂದೆರಡು ದಿನಗಳಿಂದ ತೀವ್ರಗೊಂಡಿದ್ದು., ಸೋಮವಾರ ಬಿರುಸುಗೊಂಡಿದ್ದ ಮಳೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾನಿಯನ್ನು ಉಂಟುಮಾಡಿದೆ.

ಜೂ.8 ರವರೆಗೆ ಭಾರಿ ಮಳೆಯಾಗಲಿದೆಯೆಂದು ಹವಮಾನ ಇಲಾಖೆ ಎಚ್ಚರಿಸಿದೆ.


ಮಂಗಳೂರಿನಲ್ಲಿ ಪಂಪ್ ವೆಲ್ ಭಾಗದಲ್ಲಿ. ಮೇಲ್ ಸೇತುವೆ ಕೆಳಗಡೆ ಅಸಮರ್ಪಕ ಕಾಮಾಗಾರಿಯಿಂದ ನೀರು ನಿಂತು ದೊಡ್ಡ ಕೆರೆಯಂತೆ ಆಗಿದ್ದು ಜನಸಂಚಾರಕ್ಕೆ ತೊಂದರೆಯಾಗಿದೆ. ಉಡುಪಿಯ ಶಿರ್ವದ ಬಳಿ ಆವರಣಗೋಡೆ ಇಲ್ಲದ ಬಾವಿಯ ಮಣ್ಣು ಕುಸಿದು ಬಾವಿಗೆ ಬಿದ್ದು ಗುಲಾಬಿ (43) ಮೃತಪಟ್ಟಿದ್ದಾರೆ. ಕುಂಬಳೆ ಸಮೀಪದ ಅಂಗಡಿ ಮೊಗರಿನಲ್ಲಿ ಗಾಳಿ ಮಳೆಯಿಂದಾಗಿ ಮರ ಉರುಳಿ ಬಾಲಕಿ ಆಯಿಷತ್ ಮಿನ್ಹಾ (11) ಸಾವನ್ನಪ್ಪಿದ್ದಾಳೆ.

ಜೆಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ವೈದ್ಯರ ದಿನಾಚರಣೆ:ಡಾ|ಸೋನಿಯವರಿಗೆ ಸನ್ಮಾನ

ಕುಂದಾಪುರ : ಜೆಸಿಐ ಕುಂದಾಪುರ ಸಿಟಿ ಇವರ ಆಶ್ರಯದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ಕುಂದಾಪುರ ಆಯುಷ್ಯಧಾಮ ಆಸ್ಪತ್ರೆಯ ವೈದ್ಯರಾದ ಡಾ ಸೋನಿ ಡಿಕೋಸ್ತಾರವರನ್ನು ಕುಂದಾಪುರದ ಹೋಟೆಲ್ ಶ್ರೇಯಸ್ ಇನ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು

ಸನ್ಮಾನ ಸ್ವೀಕರಿಸಿದ ವೈದ್ಯರು ಮಾತನಾಡಿ ’ತಮ್ಮ ಜವಾಬ್ದಾರಿ ಅರಿತು ಸೇವೆ ಮಾಡಿದಾಗ ಮಾತ್ರ ಸಮಾಜ ಅವರನ್ನು ಗೌರವಿಸುತ್ತದೆ. ಹಾಗೆಯೇ ರೋಗಿಗಳು ಕೂಡ ತಮ್ಮ ವೈದ್ಯರಲ್ಲಿ ವಿಶ್ವಾಸವಿರಿಸಿ ಅವರ ಸಲಹೆಗಳನ್ನು ಪಾಲಿಸಬೇಕು’ ಎಂದು ಹೇಳಿದರು.
ಸಮಾರಂಭದಲ್ಲಿ ಜೆಸಿಐ ಕುಂದಾಪುರ ಸಿಟಿಯ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ವಲಯ ಉಪಾಧ್ಯಕ್ಷ ಅಭಿಲಾಶ್, ಪೂರ್ವ ಅಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ನಾಗೇಂದ್ರ ಪೈ, ನಾಗೇಶ್ ನಾವಡ, ವಿಜಯ ಭಂಡಾರಿ, ಲೇಡಿ ಜೇಸಿ ಅಧ್ಯಕ್ಷ ಪ್ರೇಮಾ ಡಿಕುನ್ಹಾ, ಜೊತೆ ಕಾರ್ಯದರ್ಶಿ ಶೈಲಾ, ಸದ್ಯಸ್ಯರಾದ ದಿನೇಶ್ ಪುತ್ರನ್, ಅನಿತಾ ಡಿಸೋಜಾ, ನಾಗರಾಜ ಪಾಟ್ವಲ್, ಶ್ರುತಿ ಡಿಸೋಜಾ ಇನ್ನಿತರರು ಉಪಸ್ಥಿತರಿದ್ದರು
.

ಕೋಲಾರ ಜಿಲ್ಲಾ ಅಥ್ಲೇಟಿಕ್ಸ್ ಅಸೋಸಿಯೇಷನ್‍ಗೆ ನೂತನ ಪಧಾಧಿಕಾರಿಗಳು-ಕ್ರೀಡಾ ಸಾಧಕರಾಗಲು ನಿರಂತರ ಅಭ್ಯಾಸ,ಪರಿಶ್ರಮ ಮುಖ್ಯ;ಎನ್.ಮುನಿಯಪ್ಪ

ಕೋಲಾರ: ಕ್ರೀಡೆಗಳನ್ನು ಹಣ ನೀಡಿ ಖರೀದಿಸಲು ಸಾಧ್ಯವಿಲ್ಲ. ಕ್ರೀಡೆಗಳು ಅಭ್ಯಾಸ ಮತ್ತ ಶ್ರಮದಿಂದ ಮಾತ್ರ ಸಾಧನೆಗೈಯಲು ಸಾಧ್ಯ ಎಂದು ಕೋಲಾರ ಜಿಲ್ಲಾ ಅಥ್ಲೇಟಿಕ್ಸ್ ಅಸೋಸಿಯೇಷನ್ ನೂತನ ಅಧ್ಯಕ್ಷ ಎನ್. ಮುನಿಯಪ್ಪ ಅಭಿಪ್ರಾಯಪಟ್ಟರು.
ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿದೆ. ಸಮರ್ಪಕವಾದ ಸೌಲಭ್ಯಗಳು ಹಾಗೂ ತರಭೇತಿಯ ಕೊರತೆಯಿಂದ ಜಿಲ್ಲೆಯಲ್ಲಿ ಉತ್ತಮವಾದ ಪ್ರತಿಭೆಗಳಿದ್ದರೂ ಹೊರಹೊಮ್ಮಲು ಸಾಧ್ಯವಾಗುತ್ತಿಲ್ಲ ಎಂದು ಕಳವಳ ವ್ಯಕ್ತ ಪಡೆಸಿದರು,
ನಮ್ಮ ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಕೊರತೆಯಿಲ್ಲ ಅವರಿಗೆ ಉತ್ತಮವಾದ ತರಭೇತಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಬೆಳಕಿಗೆ ತರುವ ಕೆಲಸವನ್ನು ಮುಂದಿನ ದಿನಗಳಲ್ಲಿ ಜಿಲ್ಲಾ ಅಥ್ಲೇಟಿಕ್ಸ್ ಅಸೋಸಿಯೇಷನ್ ಮಾಡಲಿದೆ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಮನವಿ ಮಾಡಿದರು,
ಕಾರ್ಯದರ್ಶಿ ಕೆ.ಆರ್.ರಾಘವೇಂದ್ರ ಮಾತನಾಡಿ, ಕಳೆದ 30 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಅಥ್ಲೇಟಿಕ್ಸ್ ತರಭೇತಿದಾರರಾದ ಲಿಂಗಪ್ಪ ಮತ್ತು ಯುವಜನ ಕ್ರೀಡಾ ಇಲಾಖೆಯ ಅಧಿಕಾರಿ ಎ.ಎಲ್.ರಾಮ್‍ರಾವ್ ಅವರ ಅವಧಿಯಲ್ಲಿ ಕೋಲಾರದ ಪ್ರತಿಭೆಗಳು ರಾಜ್ಯ ಮತ್ತು ಅಂತರ್‍ರಾಜ್ಯ ಮಟ್ಟದ ಸ್ವರ್ಧೆಗಳಲ್ಲಿ ಪ್ರತಿನಿಧಿಸಿದ್ದರು ಆಗ ಕ್ರೀಡಾಪಟುಗಳಿಗೆ ಅರ್ಥಿಕವಾಗಿ ಸಹಾಯದ ಕೊರತೆ ಕಂಡು ಬಂದರೂ ಪ್ರೋತ್ಸಾಹಕ್ಕೆ ಕೊರತೆ ಇರಲಿಲ್ಲ ಎಂದರು.
ನಿಕಟ ಪೂರ್ವ ಪದಾಧಿಕಾರಿ ಜಗನ್ ಮಾತನಾಡಿ, ನಗರದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಸಿಂಥೇಟಿಕ್ಸ್ ಟ್ರಾಕ್‍ಗೆ ಸರ್ಕಾರ 7 ಕೋಟಿ ರೂ ಬಿಡುಗಡೆ ಮಾಡಿದ್ದರೂ ಸಹ ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿದೆ ವಿಳಂಭ ಮಾಡಲಾಗುತ್ತಿದೆ ಎಂದು ವಿಷಾದಿಸಿದರು.
ಅಧ್ಯಕ್ಷರಾಗಿ ಎನ್. ಮುನಿಯಪ್ಪ,ಉಪಾಧ್ಯಕ್ಷ ಗೌಸ್ ಖಾನ್, ಕಾರ್ಯದರ್ಶಿ ಕೆ.ಆರ್. ರಾಘವೇಂದ್ರ, ಜಂಟಿ ಕಾರ್ಯದರ್ಶಿ ರಾಜೇಶ್ ಬಾಬು.ಸಿ, ಖಜಾಂಜಿ ಎಸ್.ಆರ್. ಪುರುಷೋತ್ತಮ್, ಸದಸ್ಯರಾಗಿ ಇಸ್ಮಾಯಿಲ್ ಖಾನ್, ನಾಗೇಶ್ ಎಂ. ಕೆ.ಆರ್. ಸತೀಶ್ ಕುಮಾರ್ ಎಂದು ವೇದಿಕೆಯಲ್ಲಿದ್ದವರನ್ನು ಪರಿಚಯಿಸಿದರು.

ಸಾಯಿಬಾಬಾ ದೇವಾಲಯ;ಸಡಗರ ಸಂಭ್ರಮದಿಂದ ಗುರು ಪೂರ್ಣಿಮೆ ಆಚರಣೆ

ಶ್ರೀನಿವಾಸಪುರ:  ಸಡಗರ ಸಂಭ್ರಮದಿಂದ ಗುರು ಪೂರ್ಣಿಮೆ ಆಚರಿಸಲಾಯಿತು. ಜನರು ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿ ಸರದಿಯ ಸಾಲಿನಲ್ಲಿ ನಿಂತು ಬಾಬಾ ದರ್ಶನ ಪಡೆದರು.

  ಗುರು ಪೂರ್ಣಿಮೆ ಪ್ರಯುಕ್ತ ಶಿರಿಡಿ ಸಾಯಿಬಾಬಾ ದೇವಾಲಯ ಹಾಗೂ ಬಾಬಾ ವಿಗ್ರಹಕ್ಕೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಸಂಭ್ರಮಾಚಾರಣೆಯಲ್ಲಿ ಭಾಗವಹಿಸಿದ್ದರು.

  ದೇವಾಲಯಕ್ಕೆ ಆಗಮಿಸಿದ್ದ ವಿವಿಧ ಸಾಂಸ್ಕೃತಿಕ ಸಂಘಟನೆಗಳ ಮಹಿಳೆಯರು ಬಾಬಾ ಗೀತೆಗಳನ್ನು ಹಾಡಿದರು. ಬಾಬಾ ದರ್ಶನ ಪಡೆದ ಭಕ್ತರಿಗೆ ಊಟದ ವ್ಯವಸ್ಥೆ  ಮಾಡಲಾಗಿತ್ತು. ದಾನಿಗಳು ವಿಶೇಷ ಪ್ರಸಾದ ವಿತರಿಸಿದರು. ಪಟ್ಟಣದಲ್ಲಿ ಬಾಬಾ ವಿಗ್ರಹ ಮೆರವಣಿಗೆ ಏರ್ಪಡಿಸಲಾಗಿತ್ತು.  ಗುರು ಪೂರ್ಣಿಮೆ ಪ್ರಯುಕ್ತ ವಿಶೇಷ ಕಾರ್ಯಕ್ರಮ.  ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

  ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುರುಗಳಿಗೆ ವಿಶೇಷ ಗೌರವಾರ್ಪಣೆ ಮಾಡಿ, ಗುರುಗಳಿಂದ ಆಶೀರ್ವಾದ ಪಡೆದರು. ಪೂಜಾ ಕಾರ್ಯಕ್ರಮ ದಲ್ಲಿ. ಕೆ .ಆರ್. ಕೇದಾರ್ ನಾಥ್,ವೈ.ಆರ್. ನಾಗೇಂದ್ರಬಾಬು, ಕೆ ಎಲ್ ರಾಮನಾಥ್, ಕೆ .ಟಿ.ಅಪ್ಪಿ ,ಡಿ.ಸಿ.ಬದ್ರಿನಾಥ್, ಬಿ.ಎಸ್. ಸುರೇಶ್, ಕೆ. ಶ್ರೇಯಸ್, ಪೃಥ್ವಿ ,ಕಾರ್ತಿಕ್,ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮ ವನ್ನು  ಹರೀಶ್, ನಾಗರಾಜಯ್ಯ,ನೆರವೆರಿಸಿದರು.

ದಲಿತ ಚಳವಳಿ ಒತ್ತಡದ ಗುಂಪಾಗಿಯೇ ಬೆಳೆಯಬೇಕು: ಸಿ.ಎಂ.ಮುನಿಯಪ್ಪ

ಕೋಲಾರ,ಜು.3: ದಲಿತ ಚಳವಳಿ ಒತ್ತಡದ ಗುಂಪಾಗಿಯೇ ಬೆಳೆಯಬೇಕು. ಪ್ರತಿ ತಾಲ್ಲೂಕಿನಲ್ಲಿ 100 ಯುವಕರು ಇದ್ದರೆ ಇಡೀ ಜಿಲ್ಲೆಯನ್ನು ನೈತಿಕ ಶಕ್ತಿಯಿಂದ ನಿಯಂತ್ರಿಸಬಹುದು. ದಲಿತರು, ಬಡವರು, ಶೋಷಿತರಿಗೆ ನ್ಯಾಯ ಕಲ್ಪಿಸಬಹುದು ಎಂದು ದಲಿತ ಮುಖಂಡ ಸಿ.ಎಂ.ಮುನಿಯಪ್ಪ ಅಭಿಪ್ರಾಯಪಟ್ಟರು.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‍ಗೆ ಭಾಜನರಾಗಿರುವ ಸಿ.ಎಂ.ಮುನಿಯಪ್ಪ ಅವರು ಸೋಮವಾರ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರನ್ನು ಕರ್ನಾಟಕಕ್ಕೆ ಪರಿಚಯಿಸಿದ್ದು ದಲಿತ ಚಳವಳಿ. ಹೋರಾಟಗಾರರಿಗೆ ನೈತಿಕ ಭಯ, ನೈತಿಕ ಎಚ್ಚರ ಇರಬೇಕು. ಆಗ ನಾವು ಭ್ರಷ್ಟರಾಗುವುದಿಲ್ಲ. ಅದೇ ದಿಕ್ಕಿನಲ್ಲಿ ನಾವು ಹೋರಾಟ ರೂಪಿಸಿದೆವು ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಗ್ರಾಮದಲ್ಲಿ ಹುಟ್ಟುತ್ತಲೇ ಮಗುವಿಗೆ ಜೀತದ ಪಟ್ಟ ಕಟ್ಟುವ ಪದ್ಧತಿ ಇದ್ದದ್ದು ಶೋಚನೀಯ. 150 ಮಂದಿ ಜೀತದಾಳರಾಗಿದ್ದರು. ಅಲ್ಲಿಂದ ದಲಿತ ಚಳವಳಿ ಹೋರಾಟ ಶುರುವಾಯಿತು ಎಂದರು.
ಚಳವಳಿಗೆ ಗೌರವ ಡಾಕ್ಟರೇಟ್ ಅರ್ಪಿಸುತ್ತೇನೆ. 1974ರಿಂದ ಧರ್ಮಯುತವಾಗಿ, ನ್ಯಾಯಯುತವಾಗಿ ನಡೆಯಲು ಕಾರಣರಾದ ನಾಯಕರಿಗೆ ಅರ್ಪಣೆ ಮಾಡುತ್ತೇನೆ. ನನಗೆ ಯಾವುದೇ ಹೋರಾಟದ ಹಿನ್ನೆಲೆ ಇಲ್ಲ. ನಾನು ದನ ಕಾಯುವ ವ್ಯಕ್ತಿಯ ಮಗ. ಕುಟುಂಬ ಜೀತದಾಳಾಗಿತ್ತು. ದಲಿತ ಚಳವಳಿ ನನಗೆ ನೈತಿಕ ಶಕ್ತಿ ತುಂಬಿತು. ದನ ಕಾಯುವ ಪುತ್ರ, ರಾಜ್ಯದ ಮುಖ್ಯಮಂತ್ರಿಯನ್ನು ಪ್ರಶ್ನಿಸುವ ಧೈರ್ಯ ತುಂಬಿದ್ದು ದಲಿತ ಚಳವಳಿ. ಇದು ನನ್ನೊಬ್ಬನ ಶ್ರಮ ಅಲ್ಲ. ಹಲವರ ಪರಿಶ್ರಮ ಇದೆ ಎಂದು ಹೇಳಿದರು.
ಈಗಿನ ಹೋರಾಟ ಬೇರೆ ದಿಕ್ಕಿನಲ್ಲಿ ಸಾಗುತ್ತಿದೆ. ಹೋರಾಟಗಾರರಿಗೆ ಕಣ್ಣು, ಕಿವಿ ಇಲ್ಲ. ಸಮಾಜ ಕಲ್ಯಾಣ ಇಲಾಖೆಯ ಭ್ರಷ್ಟಚಾರದ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಆ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದರು.
ಡಾಕ್ಟರೇಟ್ ಪದವಿ ಬಗ್ಗೆ ಮುಜುಗರ ನನಗೆ ಇದೆ. ಅದರ ಗೌರವ ಕಳೆದು ಹೋಗಿದೆ. ಯಾರು ಬೇಕಾದರೂ ಡಾಕ್ಟರೇಟ್ ಪದವಿ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಇದೆ. ಉತ್ತಮರಿಗೆ ಸಿಕ್ಕರೂ ಅದಕ್ಕೆ ಗೌರವ ಇಲ್ಲವಾಗಿದೆ ಎಂದು ತಿಳಿಸಿದರು.
ಲೋಕಸಭೆ ಸ್ಪರ್ಧೆ ವಿಚಾರವಾಗಿ ನಾನು ಹಿಂದೆ ಹೋಗಲ. ಆಸೆ ಇಲ್ಲ. ಅದಾಗಿಯೇ ಬಂದರೆ ನೋಡೋಣ. ಬಹಳಷ್ಟು ನಿರೀಕ್ಷೆಇಲ್ಲ. ಅದಕ್ಕೆ ಬೇಕಾಗುವ ಹಣವೂ ಇಲ್ಲ. ಒತ್ತಡದ ಗುಂಪಾಗಿ ನಡೆಸಿಕೊಂಡು ಹೋಗಲು ಇಷ್ಟ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮಾತನಾಡಿ, ಮುನಿಯಪ್ಪ ಅವರಿಗೆ ಗೌರವ ಡಾಕ್ಟರೇಟ್ ಪದವಿ ಸಿಕ್ಕಿರುವುದು ಇಡೀ ಪತ್ರಕರ್ತರಿಗೆ ಸಂತೋಷದ ವಿಚಾರ. ಪತ್ರಕರ್ತರಿಗೆ ಗೌರವ ಡಾಕ್ಟರೇಟ್ ಸಿಕ್ಕಿರುವುದು ವಿರಳ ಎಂದರು.
ದಲಿತ ಚಳವಳಿಗೆ ಮೂಲ ಕಾರಣರಲ್ಲಿ ಮುನಿಯಪ್ಪ ಕೂಡ ಒಬ್ಬರು. 1994ರಲ್ಲಿ ಮುಖ್ಯಮಂತ್ರಿಯಾಗಿದ್ದ ದೇವೇಗೌಡರು ಕೋಲಾರಕ್ಕೆ ಜನತಾ ದರ್ಶನಕ್ಕೆ ಬಾರದಂತೆ ತಡೆಯೊಡ್ಡುವುದಾಗಿ ಹೇಳಿದ್ದ ಪ್ರಕರಣ ಹಾಸ್ಟೆಲ್‍ನಲ್ಲಿ ಮಕ್ಕಳ ಸಂಖ್ಯೆ ಕಡಿತಗೊಳಿಸುವುದಾಗಿ ಹೇಳಿದ್ದ ಅಂದಿನ ಜಿ.ಪಂ ಸಿಇಒ ಬಿ.ಎಚ್.ಅನಿಲ್ ಕುಮಾರ್ ಅವರನ್ನು ಕಚೇರಿ ಒಳಗೆ ಹೋಗಲು ಬಿಡದ್ದು ಸೇರಿದಂತೆ ವಿವಿಧ ಹೋರಾಟ ಉಲ್ಲೇಖಿಸಿದರು. ನೇರ ಹೋರಾಟ ಅವರದ್ದು. ಸಂಚಿಕೆ ಎಂಬುದು ಹೋರಾಟಗಳ ಉಗಮ ಸ್ಥಳ ಎಂದು ನುಡಿದರು.
ನಚಿಕೇತ ನಿಲಯ ಟಿ.ಚನ್ನಯ್ಯ ಕನಸಿನ ಕೂಸು. ಅದನ್ನು ಸಂಪನ್ಮೂಲ ಕೇಂದ್ರವನ್ನಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಮುನಿಯಪ್ಪ ಪ್ರಯತ್ನಿಸಬೇಕು. ರಾಜ್ಯಾಧಿಕಾರ ಸಿಗುವ ಅವಕಾಶ ಬಳಸಿಕೊಳ್ಳಬೇಕು ಎಂದು ಕೋರಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ವಿ.ಮುನಿರಾಜು, ಹಿಂದಿನ ಹೋರಾಟ ಪ್ರಭಾವಕಾರಿಯಾಗಿತ್ತು. ಹೋರಾಟ ನಡೆದರೆ ಅಧಿಕಾರಿಗಳು ಬೆದರುತ್ತಿದ್ದರು. ಅಂಥ ಹೋರಾಟ ನಡೆಸಿದವರು ಮುನಿಯಪ್ಪ. ಸರ್ವ ಜನಾಂಗದವರಿಗೆ ನಾಯಕತ್ವ ನೀಡಿದವರು. ಈಗ ಸ್ವಾರ್ಥಕ್ಕೆ, ವೈಯಕ್ತಿಕ ಲಾಭಕ್ಕೆ ಹೋರಾಟ ನಡೆಸಲಾಗುತ್ತದೆ ಎಂದರು.
ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ಎಸ್.ಗಣೇಶ್ ಮಾತನಾಡಿ, ಕೋಲಾರ ಚಳವಳಿಗಳ ತವರೂರು. ನಾಲ್ಕು ದಶಕಗಳ ಹೋರಾಟ. ಹೋರಾಟದ ಫಲವಾಗಿ ಅನೇಕ ಹಾಸ್ಟೆಲ್ ಆರಂಭವಾಯಿತು. ಶೋಷಿತರು, ಬಡವರಿಗೆ ಭೂಮಿ ಸಿಕ್ಕಿತು. ನಾಯಕತ್ವದ ಗುಣ ಕರಗತವಾಗಿದೆ ಎಂದು ತಿಳಿಸಿದರು.
ಹೊಸ ಪೀಳಿಗೆಯನ್ನು ಹೋರಾಟಕ್ಕೆ ತರಲು ಪ್ರಯತ್ನಿಸಿದರು. ಈಗಿನ ಕಾಲಘಟ್ಟದಲ್ಲಿ ಆಗಿನ ರೀತಿ ಹೋರಾಟ ನಡೆಸಿದ್ದರೆ ಬದುಕಿ ಉಳಿಯುತ್ತಿರಲಿಲ್ಲವೇನೋ? ಎಂದರು.
ರಾಜ್ಯಾಧಿಕಾರ ಪಡೆಯುವಲ್ಲಿ ಹೋರಾಟ ಯಶಸ್ವಿಯಾಗಿಲ್ಲ. ಆದರೆ, ಒತ್ತಡ ತರುವಲ್ಲಿ ಯಶಸ್ವಿಯಾಗಿದ್ದಾರೆ. ಮುನಿಯಪ್ಪ ಒಂದು ಶಕ್ತಿ ಎಂದು ನುಡಿದರು.
ಸಂಘದ ಖಜಾಂಚಿ ಸುರೇಶ್ ಕುಮಾರ್ ನಿರೂಪಿಸಿದರು. ಸದಸ್ಯ ಆಸೀಫ್ ಪಾಷ ಸ್ವಾಗತಿಸಿದರು. ಹಿರಿಯ ಪತ್ರಕರ್ತರಾದ ಕೋ.ನಾ.ಮಂಜುನಾಥ್, ಸಿ.ವಿ.ನಾಗರಾಜ್, ಬಿ.ಸುರೇಶ್ ಮಾತನಾಡಿದರು.
ಹಿರಿಯ ಪತ್ರಕರ್ತರಾದ ಅಬ್ಬಣಿ ಶಂಕರ್, ಓಂಕಾರಮೂರ್ತಿ, ಕೆ.ಬಿ.ಜಗದೀಶ್, ಸ್ಕಂದಕುಮಾರ್, ಎನ್.ಶಿವಕುಮಾರ್, ಮದನ್, ಮಾಮಿ ಪ್ರಕಾಶ್, ಸಿ.ವಿ.ನಾಗರಾಜ್, ಎನ್.ಸತೀಶ್, ಕಾರಂಗುಂಟೆ ನಾರಾಯಣಸ್ವಾಮಿ, ವಿಜಿಕುಮಾರ್, ಪ್ರಕಾಶ್, ವೆಂಕಟೇಶ್‍ಬಾಬಾ, ರಾಜೇಂದ್ರಸಿಂಹ, ಎಸ್.ರವಿಕುಮಾರ್, ಸಮೀರ್ ಅಹಮದ್, ಸೈಯದ ತಬ್ರೇಜ್, ಈಶ್ವರ್, ವೆಂಕಟೇಶ್, ಮಂಜುನಾಥ್, ಕಿರಣ್, ಅಮರ್, ಪುರುಷೋತ್ತಮ, ಸಿ.ಅಮರೇಶ,
ಗಂಗಾಧರ್, ಗೋಪಿ, ಪವನ್, ಕುಮಾರ್, ನಾಗೇಶ್ ಹಾಗೂ ಪತ್ರಕರ್ತರು ಇದ್ದರು.