ಕಥೊಲಿಕ್ ಸಭಾ ಬಸ್ರೂರು ಘಟಕ ಹಾಗೂ ಬಸ್ರೂರು ಸ್ಪೋರ್ಟ್ಸ್ ಕ್ಲಬ್ (ರಿ) ಬಸ್ರೂರು ಜಂಟಿ ಆಶ್ರಯದಲ್ಲಿ ವನಮಹೋತ್ಸವ


ಕುಂದಾಪುರ,ಜು. 9:
ಕಥೊಲಿಕ್ ಸಭಾ ಬಸ್ರೂರು ಘಟಕ ಹಾಗು ಬಸ್ರೂರು ಸ್ಪೋರ್ಟ್ಸ್ ಕ್ಲಬ್ (ರಿ) ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಬಸ್ರೂರು ಪಂಚಾಯತ್ ವಠಾರದಲ್ಲಿ ಹಮ್ಮಿಕೊಳ್ಳಲಾಗಿತ್ತು,ಮುಖ್ಯ ಅತಿಥಿಯಾಗಿ ಬಸ್ರೂರು ಪಂಚಾಯತ್ ಅಧ್ಯಕ್ಷರಾದ ಬಿ. ದಿನಕರ ಶೆಟ್ಟಿಯವರು ಉಪಸ್ಥಿತರಿದ್ದರು ಎರಡೂ ಸಂಸ್ಥೆಯ ಅಧ್ಯಕ್ಷರು ಗಿಡವನ್ನು ಮುಖ್ಯ ಅತಿಥಿಯವರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಿ. ದಿನಕರ ಶೆಟ್ಟಿಯವರು ಮಾತನಾಡಿ ವನಮಹೋತ್ಸವ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು, ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕಥೋಲಿಕ ಸಭಾ ಬಸ್ರೂರು ಘಟಕದ ಅಧ್ಯಕ್ಷರಾದ ವಿಕ್ರಮ್ ಡಿಸೋಜ, ಬಸ್ರೂರು ಸ್ಪೋರ್ಟ್ಸ್ ಕ್ಲಬ್‌ನ ಗೌರವಧ್ಯಕ್ಷರಾದ ಅಜೀಜ್ ರವರು ಉಪಸ್ಥಿತರಿದ್ದರು, ಬಸ್ರೂರು ಸ್ಪೋರ್ಟ್ಸ್ ಕ್ಲಬ್ ನ ಉಪಾಧ್ಯಕ್ಷರಾದ ಫ್ಲೈವನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು, ಕೆಥೋಲಿಕ್ ಸಭಾ ಕಾರ್ಯದರ್ಶಿ ಮರಿಯಾ ಡಿಸಿಲ್ವಾ ವಂದಿಸಿದರು. ಎರಡೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದು ಅವರಿಗೆ ಗಿಡಗಳನ್ನು ವಿತರಿಸಲಾಯಿತು.

ವನಮಹೋತ್ಸವ ಆಚರಣೆ – ಕಥೊಲಿಕ್ ಸಭಾ ಕುಂದಾಪುರ

ಕುಂದಾಪುರ,ಜು. 9: ಇಂದು ಹೋಲಿ ರೋಸರಿ ಚರ್ಚ್ ಆವರಣದಲ್ಲಿ ಕಥೊಲಿಕ್ ಸಭಾ ಕುಂದಾಪುರ ಘಟಕದ ವತಿಯಿಂದ ವನಮಹೋತ್ಸವ ಆಚರಣೆ ನಡೆಯಿತು .ಉದ್ಘಾಟನೆ ಯನ್ನು ನೆರವೇರಿಸಿದ ಅತಿ ವಂದನೀಯ ಫಾ. ಸ್ಟ್ಯಾನಿ ತಾವ್ರೊ ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ , ವರ್ಷಂಪ್ರತಿ ಮನೆಯಲ್ಲಿ ಒಂದು ಗಿಡವನ್ನು ನೆಟ್ಟು ಸಂರಕ್ಷಿಸಿದರೆ, ಭವಿಷ್ಯದಲ್ಲಿ ಉತ್ತಮ ಪರಿಸರ ನಮ್ಮದಾಗುತ್ತದೆ ಎಂದರು.
ಮನೆಗೊಂದು ಉತ್ತಮ ತಳಿಯ ಗಿಡಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಧರ್ಮ ಗುರುಗಳಾದ ಅಶ್ವಿನ್ ಅರಾನ್ನಾ, ಪಾಲನ ಮಂಡಳಿಯ ಉಪಾಧ್ಯಕ್ಷೆಯಾದ ಶಾಲೆಟ್ ರೆಬೆಲ್ಲೊ, ಸರ್ವ ಆಯೋಗಗಳ ಸಂಚಾಲಕಿ ಪ್ರೇಮ ಡಿಕುನ್ನಾ, ಕಥೊಲಿಕ್ ಸಭಾ ಕುಂದಾಪುರ ಘಟಕದ ಕಾರ್ಯದರ್ಶಿ ವಾಲ್ಟರ್ ಡಿಸೋಜಾ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಥೊಲಿಕ್ ಸಭಾ ಕುಂದಾಪುರ ಘಟಕದ ಅಧ್ಯಕ್ಷೆ ಶೈಲಾ ಅಲ್ಮೇಡಾ ಸ್ವಾಗತಿಸಿ ವಿತರಿಸಿದ ಗಿಡಗಳನ್ನು ಉತ್ತಮವಾಗಿ ಪೋಷಿಸಿದವರಿಗೆ ಮುಂದಿನ ವರ್ಷ ಬಹುಮಾನಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಸರಕಾರದಿಂದ ಉಚಿತವಾಗಿ ಗಿಡಗಳನ್ನು ನೀಡಲು ಸಹಕರಿಸಿದ ಜಿಲ್ಲಾ ಸಹಾಯಕ ಅರಣ್ಯ ಆಯುಕ್ತರಾದ ಶ್ರೀ ಕ್ಲಿಫರ್ಡ್ ಲೋಬೊ ರವರನ್ನು ಕಾರ್ಯಕ್ರಮ ಸಂಚಾಲಕಿ ಆಶಾ ಕರ್ವಾಲ್ಲೊ ಅಭಿನಂದಿಸಿ ,ಕಾರ್ಯಕ್ರಮವನ್ನು ನಿರೂಪಿಸಿದರು
.