ಯಕ್ಷಗಾನಕ್ಕೂ ಕುಂದಾಪ್ರ ಕನ್ನಡಕ್ಕೂ ಅವಿನಾಭಾವ ಸಂಬಂಧ


ಬೀಜಾಡಿ ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಹಿತಿ ಎ.ಎಸ್ .ಎನ್ ಹೆಬ್ಬಾರ್
ಬೀಜಾಡಿ: ನಮ್ಮ ಭಾಷೆಯ ಬಗ್ಗೆ ನಮಗೆ ಹೆಮ್ಮೆ, ಪ್ರೀತಿ ಇರಬೇಕು.ಯಕ್ಷಗಾನಕ್ಕೂ ಕುಂದಾಪ್ರ ಕನ್ನಡಕ್ಕೂ ಅವಿನಾಭಾವ ಸಂಬಂಧವಿದೆ. ಯಕ್ಷಗಾನದ ಹಾಸ್ಯ ಕಲಾವಿದರು ಹಿಂದಿನಿಂದಲೂ ಕುಂದಾಪ್ರ ಕನ್ನಡದಲ್ಲಿ ಮಾತನಾಡುತ್ತಿದ್ದರು ಎಂದು ಹಿರಿಯ ಸಾಹಿತಿ ಎ.ಎಸ್.ಎನ್ ಹೆಬ್ಬಾರ್ ಹೇಳಿದರು.
ಅವರು ಸೋಮವಾರ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್,
ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿ ಇವರ ಸಹಯೋಗದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ 4ನೇ ವರ್ಷ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಸಮಾರಂಭದಲ್ಲಿ ಆಶಯದ ಮಾತುಗಳನ್ನಾಡಿದರು.
ಕುಂದಾಪ್ರ ಕನ್ನಡ ಭಾಷೆಯ ಅಧ್ಯಯವಾಗಬೇಕು. ಈ ಭಾಷೆಯನ್ನು ಉಳಿಸಿ ಬೆಳೆಸಬೇಕಾದರೇ ನಾವು ಅನುದಿನವು ಕುಂದಾಪ್ರ ಕನ್ನಡವನ್ನು ಮಾತನಾಡಬೇಕು ಎಂದರು.
ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಾದಿರಾಜ್ ಹೆಬ್ಬಾರ್ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಹಿರಿಯ ಕೃಷಿಕ ಬೀಜಾಡಿ ನಾರಾಯಣ ಆಚಾರ್ ಅವರನ್ನು ಫಲಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರ ಬಿ.ಎನ್ ಧಿಂಸಾಲ್,ಬೀಜಾಡಿ-ಗೋಪಾಡಿ ರೋಟರಿ ಸಮುದಾಯ ದಳದ ಅಧ್ಯಕ್ಷ ನಾಗರಾಜ ಬಿ.ಜಿ ಭತ್ತ ಕುಟ್ಟುವ ಹಾಡನ್ನು ಹಾಡಿದರು. ರೋಟರಿ ಕುಂದಾಪುರ ರಿವರ್‍ಸೈಡ್ ಅಧ್ಯಕ್ಷ ಜಗನ್ನಾಥ ಮೊಗೇರ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ ಮಹೇಶ ಮೊಗವೀರ, ಕಾರ್ಯದರ್ಶಿ ಗಿರೀಶ್ ಕೆ.ಎಸ್., ರೋಟರಿ ಕುಂದಾಪುರ ರಿವರ್‍ಸೈಡ್ ಕಾರ್ಯದರ್ಶಿ ಡಾ.ವಿಲಾಶ್‍ಕೃತಿಕ್ ಉಪಸ್ಥಿತರಿದ್ದರು. 4ನೇ ವರ್ಷದ ಕುಂದಾಪುರ ಕನ್ನಡ ದಿನಾಚರಣೆಯ ಅದೃಷ್ಟವಂತರಾಗಿ ಹರೀಶ್ ಮೊಗವೇರ, ಕುಂದಾಪ್ರ ಕನ್ನಡದ ಅತೀ ಹೆಚ್ಚು ದೈವ ದೇವರ ಹೆಸರನ್ನು ಹೇಳಿದ ಕೃಷ್ಣ ಗೋಳಿಬೆಟ್ಟು, ಕುಂದಾಪ್ರ ಭಾಗದಲ್ಲಿ ಆಚರಿಸುವ ಅತೀ ಹೆಚ್ಚು ಹಬ್ಬಗಳ ಹೆಸರನ್ನು ಹೇಳಿದ ಶಾರದಾ ಗಾಣಿಗ ಬಹುಮಾನ ಪಡೆದರು. ಅನುಪ್‍ಕುಮಾರ್ ಬಿ.ಆರ್ ಸ್ವಾಗತಿಸಿದರು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಪಾಂಡುರಂಗ ವಂದಿಸಿದರು.

ನ್ಯಾಕ್ ಪೀರ್ ತಂಡವು ಜುಲೈ 14 ಮತ್ತು 15 ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಭೇಟಿ ನೀಡಿತು

ನ್ಯಾಕ್ ಪೀರ್ ತಂಡವು ಜುಲೈ 14 ಮತ್ತು 15 ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಭೇಟಿ ನೀಡಿತು. ತಂಡದ ಅಧ್ಯಕ್ಷರಾಗಿ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಡಾ. ಅಶೋಕ್ ಬೊಯ್ಟಿ, ತಂಡದ ಸದಸ್ಯ ಸಂಯೋಜಕರಾಗಿ ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಶಹೀದ್ ರಸೂಲ್ ಮತ್ತು ಅಸ್ಸಾಂನ ಟನ್ಷುಕಿಯಾದ ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಬಾದಲ್ ಕುಮಾರ್ ಸೇನ್ ಇದ್ದರು. ಸದಸ್ಯರನ್ನು ಸಂಸ್ಥೆಗೆ ಸ್ವಾಗತಿಸಲಾಯಿತು, ಅಲ್ಲಿ ಅವರಿಗೆ ಸಾಂಸ್ಥಿಕ ಮುಖ್ಯಾಂಶಗಳು ಮತ್ತು ವಿವಿಧ ಇಲಾಖೆಗಳಿಂದ ನ್ಯಾಕ್ ನ ಮೌಲ್ಯಮಾಪನ ಮಾನದಂಡಗಳಿಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪ್ರಸ್ತುತಪಡಿಸಲಾಯಿತು.
ತಂಡವು ಕಾಲೇಜಿನ ಎಲ್ಲಾ ವಿಭಾಗಗಳ ಸೌಲಭ್ಯಗಳು, ಕ್ಯಾಂಪಸ್ ಮೂಲಸೌಕರ್ಯಗಳು, ಸಂಘಗಳಿಗೆ ಭೇಟಿ ನೀಡಿದರು. 14 ರಂದು ಸಂಜೆ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಯಿತು.

15ರಂದು ಕಾಲೇಜಿನಲ್ಲಿ ನ್ಯಾಕ್ ಪೀರ್ ತಂಡದವರು ನಿರ್ಗಮನ ಸಭೆ ನಡೆಸಿದರು.
ತಂಡದ ಸದಸ್ಯರು ತಮ್ಮ ಅವಲೋಕನಗಳ ಆಧಾರದ ಮೇಲೆ ಸಂಸ್ಥೆಯ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳನ್ನು ವಿವರಿಸಿದರು. ಸುಧಾರಣೆಗೆ ಸಲಹೆಗಳನ್ನು ನೀಡಲಾಯಿತು.
ನಿರ್ಗಮನ ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಕಾಲೇಜಿನ ನ್ಯಾಕ್ ಸಂಯೋಜಕರಾದ ಶಶಿಕಾಂತ್ ಹತ್ವಾರ್, ಐಕ್ಯೂಎಸಿ ಸಂಯೋಜಕರಾದ ಡಾ.ವಿಜಯಕುಮಾರ್ ಕೆ.ಎಂ. ಅವರು ಉಪಸ್ಥಿತರಿದ್ದರು