ವರದಕ್ಷಿಣೆಯಾಗಿ ಕಾರು ಕೊಡದಿದ್ದಕ್ಕೆ ಕೇವಲ ಎರಡು ಗಂಟೆಯೊಳಗೆ ತಲಾಖ್

ಆಗ್ರಾ: ವರದಕ್ಷಿಣೆಯಾಗಿ ಕೊಡದಿದ್ದಕ್ಕೆ ಕಾರು ವರನೊಬ್ಬ ಕೇವಲ ಎರಡು ಗಂಟೆಯೊಳಗೆ ಮದುವೆಯಾದ ಎರಡೇ ಗಂಟೆಯಲ್ಲಿ ತನ್ನ ಪತ್ನಿಗೆ ತಲಾಖ್‌ ನೀಡಿರುವ ಅಘಾತಕಾರಿ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.

 ಇದೀಗ ಪೊಲೀಸರು ವರ ಮೊಹಮ್ಮದ್‌ ಆಸಿಫ್‌ ಸೇರಿದಂತೆ ಅರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಈ ಕುರಿತು  ವಧುವಿನ ಸಹೋದರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣೆಕ್ಕೆ ಪ್ರತಿಕ್ರಿಯಿಸಿರುವ ವಧುವಿನ ಸಹೋದರ ಕಮ್ರಾನ್‌ ವಾಸಿ ನನ್ನ ಇಬ್ಬರು ಸಹೋದರಿಯರಾದ ಡಾಲಿ ಹಾಗೂ ಗೌರಿಗೆ ಒಂದೇ ದಿನ ಮದುವೆ ನಿಶ್ಚಯ ಮಾಡಲಾಗಿತ್ತು. ಮದುವೆಯಾದ ಬಳಿಕ ತನ್ನ ಓರ್ವ ತಂಗಿ ಗೌರಿ ತನ್ನ ಪತಿಯ ಮನೆಯವರೊಂದಿಗೆ ಮನೆಗೆ ಹೋಗಿದ್ದಾಳೆ. ಆದರೆ ಡಾಲಿಯ ಪತಿ ಮೊಹಮ್ಮದ್‌ ಆಸಿಫ್‌ ತನಗೆ ಪರದಕ್ಷಿಣೆಯಲ್ಲಿ ಕಾರು ಕೊಡಲಿಲ್ಲ ಎಂದು ತಗಾದೆ ತೆಗೆದಿದ್ದಾನೆ. ಇದಕ್ಕೆ ಒತ್ತು ನೀಡಿ ವರನ ಮನೆಯ ಕಡೆಯವರೂ ಇದೇ ವಿಚಾರದಲ್ಲಿ ತಗಾದೆ ತೆಗೆದು ಕಾರನ್ನು ಕೊಡಿಸುವಂತೆ ಕೇಳಿದ್ದಾರೆ. ಇಲ್ಲದಿದ್ದಲ್ಲಿ, ತಕ್ಷಣವೇ ಐದು ಲಕ್ಷ ರೂ. ಹಣ ಕೊಡುವಂತೆ ಬೇಡಿಕೆಯಿಟ್ಟಿದ್ದಾರೆ.

    ಈ ವೇಳೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸಮಯ ಕೇಳಿದ್ದಕ್ಕಾಗಿ ಅವರು ಕುಪಿತಗೊಂಡು ಆತನ ಕುಟುಂಬಸ್ಥರು ಸ್ಥಳದಲ್ಲಿಯೇ ವರನ ಕಡೆಯಿಂದ ಮೂರು ಬಾರಿ ತಲಾಖ್‌ ಹೇಳಿಸಿ ಹೊರಟು ಹೋಗಿದ್ದಾರೆ.  ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪರ ಮೊಹಮ್ಮದ್‌ ಅಸಿಫ್‌ ಹಾಗೂ ಅತನ ಕುಟುಂಬಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ

ರೈತರು,ಪಿಂಚಣಿದಾರರು ಕಂದಾಯ ಹಾಗೂ ಪಿಂಚಣಿ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು : ತಹಶೀಲ್ದಾರ್ ಶಿರಿನ್ ತಾಜ್

ಶ್ರೀನಿವಾಸಪುರ: ರೈತರು ಹಾಗೂ ವಿವಿಧ ಯೋಜನೆಗಳ ಪಿಂಚಣಿದಾರರು ಕಂದಾಯ ಹಾಗೂ ಪಿಂಚಣಿ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ತಾಲ್ಲೂಕಿನ ರೋಣೂರಿನ ನಾಡ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್‍ಗೆ ಚಾಲನೆ ನೀಡಿ ಮಾತನಾಡಿ, ಕೃಷಿಕರು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ತಾಲ್ಲೂಕು ಕಚೇರಿಗೆ ಬರುವುದನ್ನು ತಪ್ಪಿಸಲು ಹೋಬಳಿ ಕೇಂದ್ರದಲ್ಲಿ ಅದಾಲತ್ ನಡೆಸಲಾಗುತ್ತಿದೆ ಎಂದು ಹೇಳಿದರು.
ಅದಾಲತ್‍ನಲ್ಲಿ ಪಹಣಿ ಕಾಲಂ ನಂಬರ್ 3 ಮತ್ತು 9 ತಿದ್ದುಪಡಿಗೆ ಸಂಬಂಧಿಸಿದಂತೆ 9 ಪ್ರಕರಣಗಳು, 11ಇ ತಿದ್ದುಪಡಿಗೆ ಸಂಬಂಧಿಸಿದಂತೆ 24 ಪ್ರಕರಣಗಳ ಪೈಕಿ ಪಣಣಿಗೆ ಸಂಬಂಧಿಸಿದ 10, 3 ಮತ್ತು 9 ತಿದ್ದುಪಡಿಗೆ ಸಂಬಂಧಿಸಿದ 8 ಪ್ರಕರಣ ಸೇರಿದಂತೆ ಒಟ್ಟು 51 ಕಡತ ವಿಲೇವಾರಿ ಮಾಡಲಾಯಿತು.
ಉಪ ತಹಶೀಲ್ದಾರ್ ಕೆ.ಎಲ್.ಜಯರಾಮ್, ಕಂದಾಯ ನಿರೀಕ್ಷಕ ವಿನೋದ್ ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಇದ್ದರು.

ದೇಶವು ಪ್ರಗತಿಯತ್ತಾ ಸಾಗಲು ಯುವ ಜನತೆ ಸತ್ಪ್ರಜೆಗಳಾದರೆ ಮಾತ್ರ ಸಾಧ್ಯ – ಪಿಡಿಒ ನರೇಂದ್ರಬಾಬು

ಶ್ರೀನಿವಾಸಪುರ 1 : ದೇಶಕ್ಕೆ ಬೆನ್ನೆಲುಬಾದ ಆರೋಗ್ಯವಂತ ಯುವಕರೇ ದೇಶದ ಆಸ್ತಿ , ದೇಶವು ಪ್ರಗತಿಯತ್ತಾ ಸಾಗಲು ಯುವ ಜನತೆ ಸತ್ಪ್ರಜೆಗಳಾದ ಮಾತ್ರ ಸಾಧ್ಯ . ಆದ್ದರಿಂದ ಆರೋಗ್ಯವಂತ ಸಮಾಜಕ್ಕೆ ಯುವ ಸಮುದಾಯ ಇರಲೇಬೇಕು ಎಂದು ಪಿಡಿಒ ನರೇಂದ್ರಬಾಬು ಹೇಳಿದರು.
ರಾಯಲ್ಪಾಡು ಪ್ರೌಡಶಾಲೆಯಲ್ಲಿ ಗುರುವಾರ ಹೋಬಳಿಯ ಮಟ್ಟದ 2023-24 ನೇ ಸಾಲಿನ 6 ದಿನಗಳ ಕ್ರೀಡಾಕೂಟದ ಪೂರ್ವಭಾವಿ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯು ಒಂದು ಅವಿಬಾಜ್ಯ ಅಂಗ ಕ್ರೀಡೆಯಲ್ಲಿ ಪಾಲ್ಗೂಳ್ಳುವುದರಿಂದ ವಿದ್ಯಾರ್ಥಿಗಳಿಗೆ ಓದುವುದಕ್ಕೆ ಮನಸ್ಸು ಉಲ್ಲಾಸವಾಗಿ ,ಏಕಾಗ್ರತೆಯು ಬೆಳೆಯುತ್ತದೆ ಎಂದು ತಿಳಿಸಿದರು. ಕ್ರೀಡೆಗಳು ಎಂದ ಮೇಲೆ ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೊಬಾವ ಮರೆಯಬೇಕು ಎಂದರು.
ಇದೇ ತಿಂಗಳು 24 ರಿಂದ 29 ರ ವರೆಗೆ ನಡೆಯುವ ಕ್ರೀಡಾಕೂಟಕ್ಕೆ ಬೇಕಾದ ಊಟದ , ಬಹುಮಾನಗಳ ವ್ಯವಸ್ಥೆ ಹಾಗೂ ಇತರೆ ಕ್ರೀಡೆಗಳಿಗೆ ಬೇಕಾದ ಸೌಲಭ್ಯಗಳ ಕುರಿತು ಚರ್ಚಿಲಾಯಿತು.
ಹೋಬಳಿ ಮಟ್ಟದ ಕ್ರೀಡಾಕೂಟಗಳ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಕೆ.ಎನ್.ರಾಮಚಂದ್ರ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಆಟವು ಒಂದು ಅಂಗವಾಗಿದ್ದು, ಶಿಕ್ಷಕರು ತಮ್ಮ ತಮ್ಮ ಶಾಲೆಗಳಿಗೆ ಸಂಬಂದಿಸಿದ ಕ್ರೀಡಾಶಕ್ತಿ ಇರುವಂತಹ ವಿದ್ಯಾರ್ಥಿಗಳನ್ನು ಕ್ರೀಡಾಕೂಟಕ್ಕೆ ಕರೆತರುವುದು ಎಂದು ಸಲಹೆ ನೀಡಿದರು. ಹೋಬಳಿ ಮಟ್ಟ ಕ್ರೀಡಾಕೂಟವನ್ನು ದಾನಿಗಳು, ಗ್ರಾಮಸ್ಥರು, ಪ್ರಾಥಮಿಕ , ಪ್ರೌಡಶಾಲಾ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಗ್ರಾಮದ ಮುಖಂಡರಾದ ಸಿಮೆಂಟ್‍ನಾರಾಯಣಸ್ವಾಮಿ, ಸಿ.ಎಸ್.ವೆಂಕಟರಮಣಪ್ಪ, ಆಂಜಿ, ಸಿ.ವಿ.ಮಂಜುನಾಥ್, ಚಕ್ಕಾ ಅಪ್ಪಿ, ಮುಖ್ಯ ಶಿಕ್ಷಕ ಪಿ.ಮಾರಣ್ಣ, ಸಿಆರ್‍ಪಿ ವರದರೆಡ್ಡಿ, ಮುಖ್ಯ ಶಿಕ್ಷಕರಾದ ಎಂ.ಕೆ.ವೆಂಕಟರಮಣ, ಮಂಜೇಶ್, ಕಾವೇರಿ ಶಾಲೆಯ ಮುಖ್ಯ ಶಿಕ್ಷಕ ಮಹೇಶ್, ತಪಸ್ವಿ ಶಾಲೆಯ ಶಿಕ್ಷಕ ಬಾಬು, ವಾಸವಿ ಶಾಲೆಯ ಶಿಕ್ಷಕ ಲಲಿತ , ಪ್ರೌಡಶಾಲಾ ಕಚೇರಿ ಸಿಬ್ಬಂದಿ ಆರೀಫ್ ಇದ್ದರು.

ಮಂಗಳೂರು:ಕಾರು ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ, ಪ್ರಪಾತಕ್ಕೆ ಉರುಳುದು ಸ್ವಲ್ಪದರಲ್ಲೇ ಪಾರಾಗಿ ಅದೃಷ್ಟವಶಾತ್ ಮೂವರು ಬಚಾವ್

ಮಂಗಳೂರು. ನಗರದ ಕದ್ರಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದಿದೆ. ಕಾರಿನಲ್ಲಿನಲ್ಲಿದ್ದವರು ಅದೃಷ್ಟವಶಾತ್ ಅಲ್ಪ ಸ್ವಲ್ಪ ಗಾಯಗಳಾಗಿ ಪಾರಾಗಿದ್ದಾರೆ. ಸ್ವಲ್ಪವೂ ಹೆಚ್ಚು ಕಡಿಮೆ ಆದಲ್ಲಿ ಕಾರು ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳಿ ದೊಡ್ಡ ಅನಾಹುತವಾಗುವುದು ತಪ್ಪಿದಂತಾಗಿದೆ.

   ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ್ಯರಾಗಿ ಪಾರಾಗಿದ್ದಾರೆ. ಶುಕ್ರವಾರ ತಡರಾತ್ರಿ ಸುಮಾರು 12.30ರ ವೇಳೆಗೆ ಅಪಘಾತ ನಡೆದಿದೆ. ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಹತ್ತಿರದಲ್ಲಿದ್ದ ಗಿಡ ಗಂಟಿಗಳ ಮಧ್ಯೆ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಗೆ ರಸ್ತೆಯ್ ಲೈಟ್ ಕಂಬ ಉರುಳಿ ದೂರಕ್ಕೆ ಎಸೆಯಲ್ಪಟ್ಟಿದೆ. ಸಂಚಾರಿ ಪೊಲೀಸರು ಪ್ರಕರಣವನ್ನು ದಾಖಲು ಮಾಡಿ ಕೊಂಡಿದ್ದಾರೆ.

ಸೈನ್ಸ್ ಕ್ಲೇ ಹಾಗೂ ಸೈನ್ಸ್ ಡಂಬ್‍ಷರಾಡ್ಸ್ ಸ್ಪರ್ಧೆಯಲ್ಲಿ ರಾಯಲ್ಪಾಡಿನ ಸಿ.ವಿ.ಸವಿತಾ ನೇತೃತ್ವದ ತಂಡಕ್ಕೆ ಪ್ರಥಮ ಬಹುಮಾನ

ಶ್ರೀನಿವಾಸಪುರ : ಬೆಂಗಳೂರಿನ ವಿಜಯ ಮೈನ್ಸ್ ಕಾಲೇಜುವತಿಯಿಂದ ಗುರುವಾರ ನಡೆದ ಸೈನ್ಸ್ ಕ್ಲೇ ಸ್ಪರ್ಧೆಯಲ್ಲಿ ಹಾಗು ಸೈನ್ಸ್ ಡಂಬ್‍ಷರಾಡ್ಸ್ ನಲ್ಲಿ ಪ್ರಥಮ ಬಹುಮಾನವನ್ನು ರಾಯಲ್ಪಾಡಿನ ಸಿ.ವಿ.ಸವಿತಾ ನೇತೃತ್ವದ ತಂಡ ಹರ್ಷಿತಾ, ಕೃಪಾವತಿ, ನೇತ್ರಾವತಿ, ಕಿರಣ್‍ಕುಮಾರ್ ರವರಿಗೆ ಪ್ರಾಂಶುಪಾಲರಾದ ಕೆ.ಎಸ್.ಶೈಲಜಾ ಬಹುಮಾನವನ್ನು ನೀಡಿ ಶುಭಕೋರಿದರು . ಉಪನ್ಯಾಸಕರಾದ ಡಾ. ಸುರೇಶ್, ಮೇಘನಾ, ಪ್ರಿಯದರ್ಶಿನಿ , ಜ್ಯೋತಿ, ಚೈತ್ರ , ಜೈಬಾ ಇದ್ದರು.

ತಲ್ಲೂರು ಮಾಜಿ ಗ್ರಾ.ಪಂ. ಸದಸ್ಯ ವಾಸುದೇವ ಖಾರ್ವಿ ನಿಧನ

ಕುಂದಾಪುರ: ತಲ್ಲೂರು ಮಾಜಿ ಗ್ರಾಮ ಪಂಚಾಯತ್ ಸದಸ್ಯ ವಾಸುದೇವ ಖಾರ್ವಿ(61 )ಅವರು ತಲ್ಲೂರು ಕೋಟೆಬಾಗಿಲಿನಲ್ಲಿರುವ ತಮ್ಮ ಸ್ವಗ್ರಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಜುಲೈ 13ರ ರಾತ್ರಿ ನಿಧನರಾದರು. ಮೀನುಗಾರಿಕಾ ವೃತ್ತಿಯಲ್ಲಿದ್ದ ಅವರು ಸಮಾಜ ಸೇವೆಯಲ್ಲೂ ಗುರ್ತಿಸಿ ಕೊಂಡಿದ್ದರು. ಮೃತರು ಪತ್ನಿ ಒಂದು ಹೆಣ್ಣು ಹಾಗೂ ಮಾಜಿ ಗ್ರಾ.ಪಂ.ಸದಸ್ಯ ಸುನೀಲ್ ಖಾರ್ವಿ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಾರು ಚಲಾಯಿಸುತ್ತೀರುವಾಗ ಗಂಡ ಹೆಂಡತಿ ಜಗಳ ಕಾದು – ಕಾರು ಪಲ್ಟಿ

(ಚಿತ್ರ ಸಾಂದರ್ಭಿಕ)

ಬೆಂಗಳೂರು: ಕಾರು ಚಲಾಯಿಸುತ್ತೀರುವಾಗಲೂ ಗಂಡ-ಹೆಂಡತಿ ಜಗಳಕ್ಕೆ ಕಾದು, ಕಾರು ಪಲ್ಟಿಯಾದ ಘಟನೆ ಬೆಂಗಳೂರು ನಗರದ ಹಲಸೂರು ಗೇಟ್‌ ಪೊಲೀಸ್‌ ಠಾಣೆಯ ಬಳಿ ತಡರಾತ್ರಿ ಘಟನೆ  ನಡೆದಿದೆ. ಗಂಡ ಹೆಂಡತಿ ಮಾರುಕಟ್ಟೆ ಕಡೆಯಿಂದ ಐ 20 ಕಾರಿನಲ್ಲಿ ಬರುತ್ತಿರುವಾಗ ಗಂಡ ಹೆಂಡತಿ ನಡುವೆ ಜಗಳವಾಗಿದೆ.. ಕಾರಿನಲ್ಲಿ ಪತಿ- ನಡೆದಿದೆ. ಇದರಿಂದ ತಾಳ್ಮೆ ಕಳೆದುಕೊಂಡ ಪತ್ನಿ ದಿಢೀರನೇ ಕಾರಿನ ಸ್ಟೇರಿಂಗ್‌ ಎಳೆದ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಈ ಅವಘಡದಿಂದ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪರಾಗಿದ್ದಾರೆ. ಕುಡಿದ ಅಮಲಿನಲ್ಲಿ ಕಾರು.ಚಲಾಯಿಸಿರುವ ಶಂಕೆಯೂ ವ್ಯಕ್ತವಾಗಿದ್ದು, ಘಟನೆ ವಿಷಯ ತಿಳಿದು, ಸ್ಥಳಕ್ಕೆ ಹಲಸೂರು ಗೇಟ್‌ ಪೊಲೀಸರು ಭೇಟಿ ನೀಡಿ ಪಲ್ಪಿಯಾಗಿದ್ದ ಕಾರನ್ನು ಮೇಲೆತ್ತಿ ದಂಪತಿಯನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸರು ಪ್ರಕರಣ ಸಂಬಂಧ ತನಿಖೆ ಕೈಗೊಂಡಿದ್ದಾರೆ.

ವಿಕಲಚೇತನರಿಗಿಂತ ಹೆಚ್ಚಾಗಿ ಸಭ್ಯ ಸಮಾಜಕ್ಕೆ ಸುಲಭಲಭ್ಯತೆಯ ಕುರಿತು ಬೋಧಿಸಬೇಕಾದ ಅಗತ್ಯತೆ ಇದೆ: ಸಿ.ಎಸ್ ದ್ವಾರಕಾನಾಥ್ – ಸೇ ಎಸ್ ಟು ಆಕ್ಸೆಸ್’ ಅಭಿಯಾನದ ಪೋಸ್ಟರ್ ಬಿಡುಗಡೆ

ವಿಕಲಚೇತನರಿಗಿಂತ ಹೆಚ್ಚಾಗಿ ಸಭ್ಯ ಸಮಾಜಕ್ಕೆ ಸುಲಭಲಭ್ಯತೆಯ ಕುರಿತು ಬೋಧಿಸಬೇಕಾದ ಅಗತ್ಯತೆ ಇದೆ: ಸಿ.ಎಸ್ ದ್ವಾರಕಾನಾಥ್

‘ಸೇ ಎಸ್ ಟು ಆಕ್ಸೆಸ್’ ಅಭಿಯಾನದ ಪೋಸ್ಟರ್ ಬಿಡುಗಡೆ

‘ಎಪಿಡಿ’ಯಿಂದ ಮೂರು ದಿನಗಳ ರಾಜ್ಯಮಟ್ಟದ ಆಕ್ಸೆಸಿಬಿಲಿಟಿ ಕಾರ್ಯಾಗಾರಕ್ಕೆ ಚಾಲನೆ

ಬೆಂಗಳೂರು: ವಿಕಲಚೇತನರ ಊನತೆಗಳನ್ನೇ ಕುಂಟ, ಕುರುಡ ಎಂದು ಬೈಗುಳಗಳನ್ನಾಗಿ ಪರಿವರ್ತಿಸಿಕೊಂಡಿರುವ ಸಭ್ಯ ಸಮಾಜಕ್ಕೆ ಇವತ್ತು ಸುಲಭ ಲಭ್ಯತೆಯ ಕುರಿತು ತಿಳಿ ಹೇಳಬೇಕಾದ ಅಗತ್ಯತೆ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ‌‌. ಸಿ.ಎಸ್. ದ್ವಾರಕಾನಾಥ್‌ರವರು ಹೇಳಿದರು.

ಅವರು ಬೆಂಗಳೂರಿನ ಪಾಲನಾ ಭವನದಲ್ಲಿ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ವತಿಯಿಂದ ಆಯೋಜಿಸಲಾಗಿದ್ದ ಸುಲಭಲಭ್ಯತೆ ಕುರಿತ ರಾಜ್ಯಮಟ್ಟದ ಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿದರು.

ಕಾಯಕ ಯೋಗಿ ಬಸವಣ್ಣನವರ ತತ್ವಗಳನ್ನು ನೆನೆದ ಅವರು, ವಿಕಲಚೇತನರಿಗೆ ಪ್ರೀತಿ, ಕಾಳಜಿ ಬೇಕಿದೆಯೇ ವಿನಃ ಕರುಣೆ, ದಯೆ ಬೇಕಾಗಿಲ್ಲ ಎಂದು ಸಮಾಜಕ್ಕೆ ಕರೆ ನೀಡಿದರು.

ಕಾರ್ಯಾಗಾರದಲ್ಲಿ ಸುಲಭ ಲಭ್ಯತೆಯ ಕುರಿತು ಮಾಹಿತಿ ನೀಡಲು ಆರಂಭಿಸಲಾದ ‘ಸೇ ಎಸ್ ಟು ಆಕ್ಸೆಸ್’ ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವಿಕಲಚೇತನರ ಆಯೋಗದ ರಾಜ್ಯ ಆಯುಕ್ತರಾದ ಶ್ರೀಮತಿ ಲತಾ ಕುಮಾರಿ ಮಾತನಾಡಿ, “ಎಪಿಡಿ ಸಂಸ್ಥೆ ನೀಡುತ್ತಿರುವ ತರಬೇತಿ ಕಾರ್ಯಾಗಾರಗಳು ರಾಜ್ಯಾದ್ಯಂತ ಪಸರಿಸಬೇಕಿದೆ. ಪ್ರತಿಯೊಬ್ಬ ಮನುಷ್ಯನಿಗೂ ನ್ಯೂನತೆಗಳಿವೆ. ಅವುಗಳನ್ನು ಮೀರಿ ಸಮಾಜದಲ್ಲಿ ಬೆಳೆಯಬೇಕಿದ್ದು, ಘನತೆಯ ಬದುಕನ್ನು ಕಟ್ಟಿಕೊಳ್ಳಲು ಪ್ರತಿಯೊಬ್ಬರು ಆರ್ಥಿಕವಾಗಿ ಬಲಿಷ್ಠವಾಗಬೇಕಿದೆ. ಉದ್ಯೋಗ ಇವತ್ತು ಪುರುಷ ಲಕ್ಷಣ ಎನ್ನುವುದಕ್ಕಿಂತ ಸ್ತ್ರೀ ಪುರುಷರಿಬ್ಬರ ಲಕ್ಷಣವೆಂದು ಬದಲಾಯಿಸಿಕೊಳ್ಳಬೇಕಿದೆ‌ ಎಂದರು‌.

ಇದೇ ವೇಳೆ ಮಾತನಾಡಿದ ಎಪಿಡಿಯ ಗೌರವಾನ್ವಿತ ಕಾರ್ಯದರ್ಶಿ ಜೇಕಬ್ ಕುರಿಯನ್‌, ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ) ಸುಮಾರು 64 ವರ್ಷಗಳಿಂದ ವಿಕಲಚೇತನರ,ದುರ್ಬಲರ ಸಬಲೀಕರಣಕ್ಕಾಗಿ ಸೇವೆ ಸಲ್ಲಿಸುತ್ತಾ ಬಂದಿದೆ. ಸಮಾಜದಲ್ಲಿ ಅಂಗವೈಕಲ್ಯತೆಯ ಕುರಿತು ತಪ್ಪು ಅಭಿಪ್ರಾಯ ಇರುವುದನ್ನು ಗುರುತಿಸಿದೆ. ಇಂದು ಸುಲಭಲಭ್ಯತೆಯ ಅಗತ್ಯತೆ ಕೇವಲ ವಿಕಲಚೇತರಿಗೆ ಮಾತ್ರ ಇದೆ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿದೆ. ಈ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಬೇಕಾದ ಅನಿವಾರ್ಯತೆ ಈಗಿನ ಸಮಾಜದಲ್ಲಿ ಎದ್ದು ಕಾಣುತ್ತಿದೆ ಎಂದರು.

ಇಂದು ಮಕ್ಕಳು, ಗರ್ಭಿಣಿ ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಕಾಯಿಲೆ ಪೀಡಿತರಿಗೂ ಆಕ್ಸೆಸಿಬಿಲಿಟಿ ಅಗತ್ಯತೆ ಇದೆ ಎಂಬುದನ್ನು ಮನಗಾಣಬೇಕಿದೆ‌. ಸುಲಭಲಭ್ಯತೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿರುವುದರಿಂದಲೇ ವಿದೇಶಗಳಲ್ಲಿ ವಿಕಲಚೇತನರು, ಹಿರಿಯ ನಾಗರಿಕರು ಮಾಲ್, ಸಿನೆಮಾ ಥಿಯೇಟರ್, ಕಂಪೆನಿಗಳು ಸೇರಿದಂತೆ ಔದ್ಯೋಗಿಕ ರಂಗದಲ್ಲಿ ಲವಲವಿಕೆಯಿಂದ ಓಡಾಡುತ್ತಿದ್ದಾರೆ. ವಿಪರ್ಯಾಸವೆಂದರೆ ಭಾರತದಲ್ಲಿ ಸಾರಿಗೆ, ಉದ್ಯೋಗ,ಉದ್ಯಮ ಹಾಗೂ ವಿಹಾರ ಕೇಂದ್ರಗಳಲ್ಲಿಯೂ ವಿಕಲಚೇತನರು, ಗರ್ಭಿಣಿಯರು ಹಾಗೂ ಹಿರಿಯ ನಾಗರಿಕರು ಸಮಸ್ಯೆಗಳನ್ನು ಎದುರಿಸಬೇಕಾಗಿದ್ದು, ಹೆಚ್ಚಿನವರು ಮನೆಗಳಲ್ಲಿಯೇ ಉಳಿದುಕೊಳ್ಳಲು ಬಯಸುತ್ತಾರೆ. ಈ ಪರಿಸ್ಥಿತಿಯಲ್ಲಿ ಬದಲಾವಣೆ ಕಂಡು ಬರಬೇಕಿದ್ದಲ್ಲಿ ಪೂರಕವಾದ ಸುಲಭ ಲಭ್ಯತೆ ಸೌಕರ್ಯಗಳನ್ನು ಒದಗಿಸಲು ಸಮಾಜದಲ್ಲಿ ಕೈಜೋಡಿಸಬೇಕಿದ್ದು ಆಗ ಮಾತ್ರ ಕರ್ನಾಟಕವನ್ನು ಅಸ್ಸೆಸೆಬಿಲಿಟಿಯಲ್ಲಿ ಮಾದರಿ ರಾಜ್ಯವನ್ನಾಗಿ ಮಾಡಲು ಸಾಧ್ಯ ಎಂದರು.

ಕಾರ್ಯಾಗಾರದಲ್ಲಿ 15ಕ್ಕೂ ಹೆಚ್ಚು ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗವಹಿಸಿದ್ದು, ಮೂರುದಿನಗಳ ಕಾಲ ಆಕ್ಸೆಸಿಬಿಲಿಟಿ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

‘ಸುಲಭ ಲಭ್ಯತೆ’ ಎಂದರೇನು?

ಸುಲಭಲಭ್ಯತೆ ಅಥವಾ ಆಕ್ಸೆಸಿಬಿಲಿಟಿ ಎಂದರೆ ವಿಕಲಚೇತನರು, ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರು ಸೇರಿದಂತೆ ಇತರ ಜನರಿಗೆ ಸಾರಿಗೆ, ಉದ್ಯೋಗ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಪೂರಕವಾದ ವಾತಾವರಣವನ್ನು ಕಲ್ಪಿಸುವುದಾಗಿದೆ. ಇನ್ನೊಂದು ಅರ್ಥದಲ್ಲಿ ವಿಕಲಚೇತನರಿಗೆ ಸುಲಭವಾಗಿ ಬಳಸಲು ಸಾಧ್ಯವಾಗುವ ಹಾಗೆ ಉತ್ಪನ್ನಗಳು, ಸಾಧನಗಳು, ಸೇವೆಗಳು, ವಾಹನಗಳು ಅಥವಾ ಪರಿಸರವನ್ನು ವಿನ್ಯಾಸಗೊಳಿಸುವುದಾಗಿದೆ. ವ್ಹೀಲ್ ಚೇರ್, ವಾಕರ್, ಭೂತಗನ್ನಡಿ, ರ‌್ಯಾಂಪ್ ರೈಲಿಂಗ್, ಲಿಫ್ಟ್, ವಿಕಲಚೇತನರು ಬಳಸಬಹುದಾದ ಶೌಚಾಲಯಗಳು, ರಸ್ತೆಯಲ್ಲಿ ಇಳಿಜಾರು ವ್ಯವಸ್ಥೆಗಳು, ಸಾರಿಗೆಗಳಲ್ಲಿ ಹತ್ತಲು ಬೇಕಾಗುವ ರ‌್ಯಾಂಪ್‌ಗಳ ವ್ಯವಸ್ಥೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸುವುದಾಗಿದೆ.

ವಿಕಲಚೇತನರಿಗಾಗಿ ವಿಶಿಷ್ಟ ಆ್ಯಪ್

ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿರುವ ಸುಲಭಲಭ್ಯತೆಗಳಾದ ರ‌್ಯಾಂಪ್ ರೈಲಿಂಗ್, ವ್ಹೀಲ್ ಚೇರ್, ಲಿಫ್ಟ್ ಸೇರಿದಂತೆ ಇತರೆ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ವಿಕಲಚೇತನರಿಗೆ ಬಳಸಲು ಸುಲಭವಾಗುವಂತಹ ಅಪ್ಲೀಕೇಶನ್ ನಿರ್ಮಿಸುತ್ತಿರುವ ಕುರಿತು ಜೇಕಬ್ ಕುರಿಯನ್ ಮಾಹಿತಿ ನೀಡಿದರು.

ಕಾರ್ಯಾಗಾರದ ಆರಂಭದಲ್ಲಿ ಎಪಿಡಿ ಸಿಬ್ಬಂದಿ ಮುನಿ ಚೌಡಪ್ಪರವರು ಸ್ವಾಭಿಮಾನ ಗೀತೆಯನ್ನು ಹಾಡಿದರು. ಎಪಿಡಿ ನಿರ್ದೇಶಕರಾದ ಶಿವ. ಸಿ. ಹಿರೇಮಠ್‌ರವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು‌. ಉಪ ನಿರ್ದೇಶಕರಾದ ಎಸ್. ಬಾಬು‌ರವರು ಕಾರ್ಯಾಗಾರದ ಉದ್ದೇಶ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ವಿಷಯಗಳ ಕುರಿತು ಮಾಹಿತಿ ನೀಡಿದರು. ಶಿವಪ್ಪ. ಬಿ. ಎನ್ ಧನ್ಯವಾದವಿತ್ತರು.

ಡಾ.ವೈ.ಎ.ನಾರಾಯಣಸ್ವಾಮಿ ಪ್ರಶ್ನೆಗೆ:ಹಾಲಿ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗುವುದು-ಸಚಿವ ಮಧು ಬಂಗಾರಪ್ಪ

ಕೋಲಾರ:- ರಾಜ್ಯದಲ್ಲಿನ ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಾಲಿ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮವಹಿಸುವುದಾಗಿ ಸದನದಲ್ಲಿ ಭರವಸೆ ನೀಡಿದರು.
ಖಾಲಿ ಇರುವ 5120 ಹುದ್ದೆಗಳಲ್ಲಿ 3794 ಹುದ್ದೆಗಳಿಗೆ ಆರ್ಥಿಕ ಇಲಾಖೆ ಅನುಮತಿ ಬೇಕಾಗಿದ್ದು, ಶೀಘ್ರ ಅನುಮೋದನೆ ಪಡೆದು ಪ್ರಕ್ರಿಯೆ ಪ್ರಾರಂಭಿಸುವುದಾಗಿ ಭರವಸೆ ನೀಡಿದರು.
ಸದನದಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ವಿಷಯ ಪ್ರಸ್ತಾಪಿಸಿ, ಅನುದಾನಿತ ಶಾಲೆಗಳಲಿಗೆ 1326 ಬೋಧಕ ಹುದ್ದೆಗಳ ಭರ್ತಿಗೆ ಕಳೆದ 2015 ರ ಹಿಂದೆಯೇ ಅನುಮತಿ ನೀಡಲಾಗಿದೆ ಆದರೆ ಖಾಸಗಿ ಶಾಲೆಗಳ ಕೆಲವೊಂದು ನಿಮಯಗಳಿಂದಾಗಿ ಹುದ್ದೆಗಳು ಭರ್ತಿಯಾಗಿಲ್ಲ ಅದರ ಜತೆಗೆ ಇದೀಗ ಖಾಲಿ ಇರುವ 3794 ಹುದ್ದೆಗಳ ಭರ್ತಿಗೂ ಸರ್ಕಾರ ಕ್ರಮವಹಿಸಬೇಕಾಗಿದೆ ಎಂದು ಒತ್ತಾಯಿಸಿದರು.
ಸಚಿವ ಮಧು ಬಂಗಾರಪ್ಪ ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಖಾಲಿ ಹುದ್ದೆ ಭರ್ತಿಗೆ ಕ್ರಮವಹಿಸಲಾಗುವುದು, ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಧ್ಯೆಪ್ರವೇಶಿಸಿ ಮಾತನಾಡಿದ ಡಾ.ವೈ.ಎ.ಎನ್, 2021ರ ಅಂತ್ಯದವರೆಗೆ ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚಿನ ಬೋಧಕ ಹುದ್ದೆಗಳು ಖಾಲಿ ಇದೆ, ಆದರೂ 2020ರ ಹಿಂದೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಕ್ರಮ ಕೈಗೊಳ್ಳಿ ಎಂದರು.