ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಜೂನಿಯರ್ ರೆಡ್‍ಕ್ರಾಸ್ ಸಂಘದ ಉದ್ಘಾಟನೆ

ಕುಂದಾಪುರ: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಇಲ್ಲಿ ಜೂನಿಯರ್ ರೆಡ್‍ಕ್ರಾಸ್ ಸಂಘದ ಉದ್ಘಾಟನೆಯು ಸಂತ ಮೇರಿ ಹಾಗೂ ಹೋಲಿ ರೋಜರಿ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೇಜ್ ಶಾಂತಿ ಡಿಸೋಜಾರವರು ವಹಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅತಿಥಿಗಳನ್ನು ಸ್ವಾಗತಿಸಿದರು.
ಕುಂದಾಪುರ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ ರೆಡ್‍ಕ್ರಾಸ್ ಸಂಸ್ಥೆಯ ಧ್ಯೇಯೊದ್ದೇಶಗಳು ಹಾಗೂ ಮೂಲಭೂತ ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಇನ್ನೋರ್ವ ಮುಖ್ಯ ಅತಿಥಿ ಕುಂದಾಪುರ ರೆಡ್‍ಕ್ರಾಸ್ ಸಂಸ್ಥೆಯ ಖಜಾಂಜಿ ಶ್ರೀ ಶಿವರಾಮ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ರೆಡ್‍ಕ್ರಾಸ್‍ನ ಪ್ರತಿಜ್ಞಾ ವಿಧಿ ಭೋಧಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ರೆಡ್‍ಕ್ರಾಸ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಡಾ. ಸೋನಿ ಡಿ’ಕೋಸ್ಟಾ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಶುಚಿತ್ವದ ಕುರಿತಾದ ಮಾಹಿತಿಯನ್ನು ನೀಡಿದರು.
ಶಾಲಾ ಆಡಳಿತ ಮಂಡಳಿಯ ಸದಸ್ಯರೂ ಆದ ಸೋನಿ ಡಿ’ಕೋಸ್ಟಾರವರ ಸಮಾಜ ಸೇವೆಗಾಗಿ ್ಲ ಶಾಲಾವತಿಯಿಂದ ಅವರನ್ನು ಸನ್ಮಾನಿಸಲಾಯಿತು. ರೆಡ್‍ಕ್ರಾಸ್ ಸಂಸ್ಥೆಯ ಸದಸ್ಯರಾದ ಶ್ರೀ ಗಣೇಶ್ ಆಚಾರ್‍ರವರು ಉಪಸ್ಥಿತರಿದ್ದರು. ಜೂನಿಯರ್ ರೆಡ್‍ಕ್ರಾಸ್‍ನ ಅಧ್ಯಕ್ಷೆ ಕುಮಾರಿ ಧನ್ಯಶ್ರೀಯವರಿಗೆ ರೆಡ್‍ಕ್ರಾಸ್‍ನ ಬ್ಯಾಡ್ಜ್ ನೀಡಲಾಯಿತು.
ಶಿಕ್ಷಕಿ ಕುಮಾರಿ ರಂಜಿತಾರವರು ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಕಿ ಹಾಗೂ ಜೂನಿಯರ್ ರೆಡ್‍ಕ್ರಾಸ್‍ನ ಸಂಯೋಜಕಿ ಶ್ರೀಮತಿ ನಿಖಿತಾ ಶೆಟ್ಟಿಯವರು ವಂದನಾರ್ಪಣೆಗೈದರು. ಈ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಮಮತಾರವರು ನಿರೂಪಿಸಿದರು.

ಶ್ರೀನಿವಾಸಪುರ ಬೆಸ್ಕಾಂ ಇಲಾಖೆ ಮುಂಭಾಗದಲ್ಲಿ ವಿದ್ಯುತ್‍ನಲ್ಲಿ ಅಡಚಣೆ ಸರಿಪಡಿಸುವಂತೆ ಕಛೇರಿ ಬಳಿ ಪ್ರತಿಭಟನೆ

ಶ್ರೀನಿವಾಸಪುರ 2 : ಪಟ್ಟಣದ ಬೆಸ್ಕಾಂ ಇಲಾಖೆ ಮುಂಭಾಗ ಬುಧವಾರ ಕರ್ನಾಟಕ ರಾಜ್ಯ ಹಸಿರು ಸೇನೆ ಸಂಘದವತಿಯಿಂದ ವಿದ್ಯುತ್‍ನಲ್ಲಿ ಅಡಚಣೆ ಸರಿಪಡಿಸುವಂತೆ ಕಛೇರಿ ಬಳಿ ಪ್ರತಿಭಟನೆ ನಡೆಸಿ ಎಇಇ ಅಧಿಕಾರಿ ರಾಮತೀರ್ಥರವರಿಗೆ ಮನವಿ ಪತ್ರನೀಡಿದರು.
ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಮಾತನಾಡಿ ಸರ್ಕಾರ ರೈತರ ಪಂಪುಸೆಟ್‍ಗಳಿಗೆ ಏಳು ತಾಸು ವಿದ್ಯುತ್ ನೀಡುತ್ತವೆಂದು ಹೇಳಿದ್ದರು ಸಹ ಈಗ ಮೂರು ತಾಸು ಸಹ ವಿದ್ಯುತ್ ನೀಡುತ್ತಿಲ್ಲ ಇದರಿಂದ ತೋಟಗಾರಿಕೆ ಬೆಳೆಗಳಿಗೆ ತೊಂದರೆಯಾಗಿದ್ದು ಬೆಳೆಗಳು ಒಣಗುತ್ತಿವೆ.
ಲೋಡ್ ಶೆಡ್ಡಿಂಗ್ ನೆಪದಲ್ಲಿ ಸಾಯಂಕಾಲ ವಿದ್ಯುತ್‍ನ್ನು ಕಡಿತಗೊಳಿಸಿ ವಿದ್ಯಾರ್ಥಿಗಳಿಗೆ ಓದಿಕೊಳ್ಳಲು ತುಂಬಾ ಅನಾನುಕೂಲವಾಗುತ್ತಿದೆ ಮತ್ತು ವಿದ್ಯುತ್‍ನ್ನು ಸರಿಯಾಗಿ ಸಮರ್ಪಕವಾಗಿ ನೀಡುತ್ತಿಲ್ಲ . ಆದ ಕಾರಣ ಶ್ರೀನಿವಾಸಪುರ ತಾಲೂಕಿನ ರೈತರ ಪಂಪುಸೆಟ್‍ಗಳಿಗೆ ಮತ್ತು ಸಾರ್ವಜನಿಕರಿಗೆ ಸಮರ್ಪಕವಾದ ವಿದ್ಯುತ್ ಸರಬರಾಜು ಮಾಡುತ್ತಿಲ್ಲ.
ಶ್ರೀನಿವಾಸಪುರ ಬೆಸ್ಕಾಂ ಇಲಾಖೆ ಲೋಡ್ ಶೆಡ್ಡಿಂಗ್ ನೆಪದಲ್ಲಿ ರೈತರ ಪಂಪು ಸೆಟ್‍ಗಳಿಗೆ ನೀಡುತ್ತಿರುವ ವಿದ್ಯುತ್ ಮತ್ತು ಸಾರ್ವಜನಿಕರಿಗೆ ನೀಡುತ್ತಿರುವ ವಿದ್ಯುತ್‍ನಲ್ಲಿ ತೊಂದರೆ ನೀಡುತ್ತಿದ್ದು , ಸರ್ಕಾರವು ರೈತರ ಪಂಪುಸೆಟ್‍ಗಳಿಗೆ ಸರ್ಮಪಕವಾಗಿ ವಿದ್ಯುತ್ ಸರಬಾರಜು ಮಾಡಿ ಸರಿಪಡಿಸುವಂತೆ ಒತ್ತಾಯಿಸಿದರು .
ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ತಾಲೂಕು ಅಧ್ಯಕ್ಷ ಎನ್.ಜಿ.ಶ್ರೀರಾಮಿರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಬೈರೆಡ್ಡಿ, ರೈತಮುಖಂಡರಾದ ರಾಮೇಗೌಡ, ನಾರಾಯಣಸ್ವಾಮಿ, ವೀರಪ್ಪರೆಡ್ಡಿ, ಗಂಗಾಧರ್, ಹೆಬ್ಬಟ್ಟ ರಮೇಶ್, ಶ್ರೀಧರ್, ನಾಗದೇನಹಳ್ಳಿ ಚಂದ್ರಶೇಖರ್, ಅಬ್ಬಣಿ ಶ್ರೀನಿವಾಸ್ ಇದ್ದರು.
30 ಎಸ್‍ವಿಪುರ್ 2 : ಪಟ್ಟಣದ ಬೆಸ್ಕಾಂನ ಎಇಇ ಅಧಿಕಾರಿ ರಾಮತೀರ್ಥರವರಿಗೆ ಕರ್ನಾಟಕ ರಾಜ್ಯ ಹಸಿರು ಸೇನೆ ಸಂಘದವತಿಯಿಂದ ಮನವಿ ಪತ್ರ ನೀಡಲಾಯಿತು.

ಮಹಿಳೆಯರು ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಮಹಿಳೆಯರು ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು. ಯೋಜನೆ ಲಾಭ ಪಡೆಯಲು ತಪ್ಪದೆ ಅರ್ಜಿ ಸಲ್ಲಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಬುಧವಾರ ಏರ್ಪಡಿಸಿದ್ದ ಗೃಹ ಲಕ್ಷ್ಮಿ ಯೋಜನೆ ಜಾರಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಈ ಯೋಜನೆಯಿಂದ ಬಡ ಕುಟುಂಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ನೆರವು ದೊರೆತಂತಾಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಸೂರಿಲ್ಲದೆ ಪರಿತಪಿಸುತ್ತಿರುವ ಎಲ್ಲ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುವುದು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು. ಅಗತ್ಯ ಇರುವ ಕಡೆ ಒಳಚರಂಡಿ ನಿರ್ಮಿಸಲಾಗುವುದು. ಒಳ ಚರಂಡಿ ನಿರ್ವಹಣೆ ಸರಿಯಿಲ್ಲದೆ ಕೆಲವು ಕಡೆ ದುರ್ನಾತ ಬೀರುತ್ತಿದೆ. ಅದನ್ನು ಸರಿಪಡಿಸಲಾಗುವುದು. ತಾಲ್ಲೂಕಿನಿಂದ ನೆರೆಯ ಆಂಧ್ರಪ್ರದೇಶಕ್ಕೆ ಹರಿದು ಹೋಗುವ ಮಳೆ ನೀರನ್ನು ದಕ್ಷಿಣಾಭಿಮುಖವಾಗಿ ಹರಿಸಿ, ರೋಣೂರು ಕೆರೆ ಸೇರಿದಂತೆ, ಅಮಾನಿಕೆರೆಗೆ ಹರಿಸಲಾಗುವುದು. ಕೆರೆ ಅಭಿವೃದ್ಧಿಪಡಿಸಿ ಬೋಟಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್ ಮಾತನಾಡಿ, ಗೃಹ ಲಕ್ಷ್ಮಿ ಯೋಜನೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಡ ಕುಟುಂಬಗಳ ಪಾಲಿಗೆ ವರದಾನವಾಗಿದೆ. ಯೋಜನೆ ಹಣದಿಂದ ಮಹಿಳೆಯರಿಗೆ ಮಾತ್ರವಲ್ಲದೆ, ಕುಟುಂಬದ ಎಲ್ಲ ಸದಸ್ಯರಿಗೆ ಅನುಕೂಲವಾಗುತ್ತದೆ. ಇನ್ನೂ ಅರ್ಜಿ ಸಲ್ಲಿಸದಿದಿರುವ ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ವಿ.ನಾಗರಾಜು, ಎನ್.ಶಂಕರ್, ನಾಗರಾಜ್, ಸಬ್ಬೀರ್, ಆನಂದ್, ಎಂ.ಶ್ರೀನಿವಾಸನ್, ಕೆ.ಜಿ.ರಮೇಶ್, ಮನು ಇದ್ದರು.

ರಾಜಕೀಯ ದಿಗ್ಗಜರಿಂದ ಕ್ರೀಡಾ ಚಟುವಟಿಕೆಗಳಿಗೆ ನೆರವಾಗುವಂತಹ ಪುಸ್ತಕಗಳ, ಕೈಪಿಡಿಗಳ ಬಿಡುಗಡೆ

ಕೋಲಾರ ತಾಲ್ಲೂಕಿನ ಕ್ಯಾಲನೂರು ಕೆಪಿಎಸ್ ಶಾಲೆಯ ದೈಹಿಕ ಶಿಕ್ಷಕ ಡಾ.ಜಿ.ಎಂ.ಶ್ರೀನಿವಾಸ್ ಅವರು ಕ್ರೀಡಾಚಟುವಟಿಕೆಗಳಿಗೆ ನೆರವಾಗಲು ಬರೆದಿರುವ ನಾಲ್ಕು ಪುಸ್ತಕಗಳಾದ ಥ್ರೋಬಾಲ್ ನವೀನ ನಿಯಮಗಳು, ಕಬಡ್ಡಿ ನವೀನ ನಿಯಮಗಳು, ಕರಾಟೆ ಕೈಪಿಡಿ ಮತ್ತು ಸ್ಪರ್ಧಾತ್ಮಕ ಸಾಹಿತ್ಯ ಕೈಪಿಡಿಗಳನ್ನು ಮೂಡಬಿದರೆಯಲ್ಲಿ ನಡೆದ ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಭಾಧ್ಯಕ್ಷ ಅಬ್ದುಲ್ ಖಾದರ್, ಎಂಎಲ್‍ಸಿ ಅರುಣ ಷಹಾಪುರ,ಪುಟ್ಟಣ್ಣ, ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಸ್.ಚೌಡಪ್ಪ, ಮುಡಬಿದರೆ ಭಾವನಾ ಮತ್ತಿತರರಿದ್ದರು.

ಕುಂದಾಪುರದಲ್ಲಿ ಎಕಾ ಕಾಲದಲ್ಲಿ ಮೂರು ಕಡೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ – ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಶೋಭಾಲಕ್ಷ್ಮೀ ಚಾಲನೆ

ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ತಾಲೂಕು ಆಡಳಿತ, ಮಕ್ಕಳ ಅಭಿವೃದ್ದಿ ಇಲಾಖೆ ಕುಂದಾಪುರ ತಾಲೂಕು, ಕುಂದಾಪುರ ಪುರಸಭೆ ವತಿಯಿಂದ ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯನ್ನು ಕುಂದಾಪುರದ ತಹಶೀಲ್ದಾರ್ ಶೋಭಾಲಕ್ಷ್ಮೀ ಉದ್ಘಾಟಿಸಿದರು.

   ಉದ್ಘಾಟನೆ ಮಾಡಿದ ಅವರು ಮಹಿಳೆಯರಿಗೆ ನಾ- ನಾಯಕಿ ಎಂದು ಪುನರುಚ್ಚಸಿ ಹೇಳಿ ಎಂದು ಹೇಳಿದರು. ಒಂದು ಕುಟುಂಬದಲ್ಲಿ ಹಾಲಿಗೆ ದಿನ ಒಂದರಂತೆ ರೂ.೫೦ ಬೇಕು ಅದಕ್ಕೆ ನೀವು ಯಾರ ಹತ್ತಿರವೂ ಕೇಳಬೇಕಾಗಿಲ್ಲ. ನಾರಿಯರಿಗೆ ಇದರಿಂದ ಆರ್ಥಿಕ ಸಹಾಯವಾಗುತ್ತೆ, ನಾರಿ ಅಂದರೆ ಲಕ್ಷ್ಮಿ, ನಾರೀಯರ ಸಬಲೀಕರಣವಾಗ ಬೇಕು” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯ 155 ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿ ಹಾಗೂ ಪ್ರತಿ ನಗರ ಸ್ಥಳೀಯ ಸಂಸ್ಥೆಯ 52 ವಾರ್ಡ್‌ಗಳಲ್ಲಿ ಹಾಗೂ 6 ತಾಲೂಕು ಕೇಂದ್ರಗಳಲ್ಲಿ ಮತ್ತು 1 ಜಿಲ್ಲಾ ಕೇಂದ್ರದಲ್ಲಿ ಸೇರಿದಂತೆ ಒಟ್ಟು 114 ಸ್ಥಳಗಳಲ್ಲಿ ಏಕ ಕಾಲದಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. 2.48 ಸಾವಿರ ಫಲಾನುಭವಿಗಳು ಈಗಾಲೇ ನೋಂದಾಯಿಸಿಕೊಂಡಿದ್ದಾರೆ. ನೀವು ಈಗ ನೊಂದಾಯಿಸಿ ಕೊಂಡವರಿಗೆ ಈ ಯೋಜನೇಯನ್ನು ತಿಳಿಸಬೇಕು ಎಂದು ಅವಾಗ ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳಾ ಸಬಲೀಕರಣಕ್ಕೆ ಪೂರಕವಾಗುತ್ತದೆ’ ಎಂದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ ವರ್ಣೆಕರ್, ಪುರಸಭಾ ಮುಖ್ಯಾಧಿಕಾರಿ ಮಂಜುನಾಥ, ಪುರಸಭಾ ಸದಸ್ಯ ಶ್ರೀಧರ ಶೇರೆಗಾರ್, ದೇವಕಿ ಸಣ್ಣಯ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ, ಕಲಾವತಿ ಮತ್ತು ಇನ್ನಿತರ ಕಾಂಗ್ರೆಸ್ ನಾಯಕರುನ್ಉಪಸ್ಥಿತರಿದ್ದರು.ಕಾಂಗ್ರೆಸ್ ಕಾರ್ಯಕರ್ತರು ಮಹಿಳೆಯರಿಗೆ ಸಂತೋಷವನ್ನು ಇಮ್ಮಡಿಕೊಳಿಸಲು ಸಿಹಿ ಹಂಚಿ ಸಂತೋಷವನ್ನು ವ್ಯಕ್ತಪಡಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯೋಜನಾಧಿಕಾರಿ ಅನುರಾಧ ಹಾದಿಮನೆ ಸ್ವಾಗತಿಸಿದರು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ್ ಆರ್ ವಂದಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಒಂದೇ ಕಾಲದಲ್ಲಿ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಮತ್ತು ಕಲಾಮಂದಿರದಲ್ಲಿ ಒಟ್ಟಾರೆ ಮೂರು ಕಡೆ ಗೃಹಲಕ್ಷ್ಮೀ ಯೋಜನೆ ಉದ್ಘಾಟನ ಕಾರ್ಯಕ್ರಮ ನದೆಯಿತು.

ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದ ಛಾಯಚಿತ್ರಗಳು

ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಛಾಯಚಿತ್ರಗಳು

MITK, Moodlakatte Tuberculosis & AIDs Awareness Program/ಎಂಐಟಿ ಕುಂದಾಪುರ : ಏಡ್ಸ್ ಮತ್ತು ಟಿಬಿ ನಿಯಂತ್ರಣ ಜಾಗೃತಿ ಕಾರ್ಯಕ್ರಮ

NSS & YRC unit of MIT Kundapura in association with Rotary club Kundapura district AIDs  and TB Control  division Udupi, organized Tuberculosis  and AID’s awareness program at MIT Kundapura.

President of the Rotary Mr. Nagaraj Naik spoke the occasion. Senior Treatment Supervisor Sri Gurudas of General Hospital Kundapura spoke on the control of TB and for AID’s control Personnel Counselor Smt. Nalinakshi of general Hospital Kundapura gave the awareness to the students. Principal of the collage Dr. Abdul Kareem, Vice Principal Prof. Melwin D’Souza Brand Building Director Dr. Ramkrishna Hegde, Institute NSS Co-ordinator Prof. Balnageshwar S and YRC Co-Ordinator and coordinator of the programme Prof Varun Kumar Ex. Rotary Secretary Naveen D’Souza ,  Secretary Prashanth Hawaldar  member Geetha Mukundan, Staff & students were present the occasion. Prof. Akshatha Naik hosted the programme.  

ಎಂಐಟಿ ಕುಂದಾಪುರ : ಏಡ್ಸ್ ಮತ್ತು ಟಿಬಿ ನಿಯಂತ್ರಣ ಜಾಗೃತಿ ಕಾರ್ಯಕ್ರಮ

ಎಂಐಟಿ ಕುಂದಾಪುರದ ಎನ್‌ಎಸ್‌ಎಸ್ ಮತ್ತು ವೈಆರ್‌ಸಿ ಘಟಕವು ರೋಟರಿ ಕ್ಲಬ್ ಕುಂದಾಪುರ ಜಿಲ್ಲಾ ಏಡ್ಸ್ ಮತ್ತು ಟಿಬಿ ನಿಯಂತ್ರಣ ವಿಭಾಗ ಉಡುಪಿಯ ಸಹಯೋಗದಲ್ಲಿ ಕ್ಷಯ ಮತ್ತು ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಎಂಐಟಿ ಕುಂದಾಪುರದಲ್ಲಿ ಆಯೋಜಿಸಿತು.

ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ನಾಗರಾಜ ನಾಯ್ಕ ಮಾತನಾಡಿದರು. ಜನರಲ್ ಆಸ್ಪತ್ರೆ ಕುಂದಾಪುರದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಶ್ರೀ ಗುರುದಾಸ್ ಅವರು ಟಿಬಿ ನಿಯಂತ್ರಣದ ಕುರಿತು ಮಾತನಾಡಿದರು ಮತ್ತು ಸಿಬ್ಬಂದಿ ಸಲಹೆಗಾರರಾದ ಕುಂದಾಪುರ ಜನರಲ್ ಆಸ್ಪತ್ರೆಯ ಶ್ರೀಮತಿ. ನಳಿನಾಕ್ಷಿ ಅವರು ವಿದ್ಯಾರ್ಥಿಗಳಿಗೆ ಏಡ್ಸ್/ಎಚ್‌ಐವಿ ಕುರಿತು ಜಾಗೃತಿ ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ, ಉಪಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿ’ಸೋಜಾ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗಡೆ, ಸಂಸ್ಥೆಯ ಎನ್‌ಎಸ್‌ಎಸ್ ಸಂಯೋಜಕ ಪ್ರೊ.ಬಾಲನಾಗೇಶ್ವರ್ ಎಸ್ ಮತ್ತು ವೈಆರ್‌ಸಿ ಸಂಯೋಜಕ ಹಾಗೂ ಕಾರ್ಯಕ್ರಮದ ಸಂಯೋಜಕ ಪ್ರೊ.ವರುಣ್ ಕುಮಾರ್, ಮಾಜಿ ರೋಟರಿ ಕಾರ್ಯದರ್ಶಿ ನವೀನ್ ಡಿಸೋಜ, ಹಾಲಿ ಕಾರ್ಯದರ್ಶಿ ಪ್ರಶಾಂತ್ ಹವಾಲ್ದಾರ್, ಸದಸ್ಯೆ ಗೀತಾ ಮುಕುಂದನ್, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೊ.ಅಕ್ಷತಾ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.

ಸ. ಬಾ. ಪ. ಪೂರ್ವ ಕಾಲೇಜ್, ಪ್ರೌಢ ಶಾಲೆಗೆ ಲೋಕಾಯುಕ್ತ ಡಿವೈಎಸ್‍ಪಿ ಸೂರ್ಯನಾರಾಯಣ ರಾವ್ ಭೇಟಿ -ನೀಡಿ ಕಡತಗಳ ಪರಿಶೀಲನೆ

ಶ್ರೀನಿವಾಸಪುರ: ಇಲ್ಲಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಕಚೇರಿಗೆ ಮಂಗಳವಾರ ಲೋಕಾಯುಕ್ತ ಡಿವೈಎಸ್‍ಪಿ ಸೂರ್ಯನಾರಾಯಣ ರಾವ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು.
ಎರಡನೇ ವರ್ಗಾವಣೆ ಪತ್ರ ಹಾಗೂ ಅಂಕಪಟ್ಟಿಗಾಗಿ ಅರ್ಜಿ ಸಲ್ಲಿಸಿದ ಹಳೆ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ, ಶಾಲಾ ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಲಾಯಿತು ಎಂದು ಲೋಕಾಯುಕ್ತ ಡಿವೈಎಸ್‍ಪಿ ಸೂರ್ಯನಾರಾಯಣ ರಾವ್ ತಿಳಿಸಿದರು.
ವಿಷಯಕ್ಕೆ ಸಂಬಂಧಿಸಿದಂತೆ ಶುಲ್ಕ ವಿವರ ಮತ್ತು ಎರಡನೆ ಸಲ ವರ್ಗಾವಣೆ ಪತ್ರ ಹಾಗೂ ಅಂಕಪಟ್ಟಿ ಪಡೆದುಕೊಳ್ಳಬೇಕಾದಾಗ ಅನುಸರಿಸಬೇಕಾದ ವಿಧಿ ವಿಧಾನ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ವರದಿ ಕೇಳಲಾಗುವುದು ಎಂದು ಹೇಳಿದರು.
ಕಾಲೇಜಿನ ಉಪ ಪ್ರಾಂಶುಪಾಲೆ ರಾಧಾಮಣಿ ಹಾಗೂ ಕಚೇರಿ ಸಿಬ್ಬಂದಿ ಇದ್ದರು.

ಹೊಸದಾದ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಶಕ್ತಿ ಮತ್ತು ಸಾಮರ್ಥ್ಯ ಸಾಹಿತ್ಯಕ್ಕೆ ಇದೆ : ಹೆಚ್.ಬಿ ಇಂದ್ರಕುಮಾರ್

ಕುಂದಾಪುರ : ಹೊಸದಾದ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಶಕ್ತಿ ಮತ್ತು ಸಾಮರ್ಥ್ಯ ಸಾಹಿತ್ಯಕ್ಕೆ ಇದೆ ಎಂದು ಹೆಚ್.ಬಿ ಇಂದ್ರಕುಮಾರ್ ಹೇಳಿದರು .
ಅವರು ಆಗಸ್ಟ್ 30ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಅವರು ಸಾಹಿತ್ಯ ನಮ್ಮನ್ನು ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ . ಸಾಹಿತ್ಯ ದ ಕಥೆ ಕಾದಂಬರಿ ಕವನ ಸಂಕಲನಗಳನ್ನು ಬೇರೆ ಬೇರೆ ನೆಲೆಗಳಲ್ಲಿ ಅರ್ಥೈಸಬಹುದು. ಕೆಲವು ಸಂದರ್ಭಗಳಲ್ಲಿ ಸಾಹಿತ್ಯ ರಚನೆಗಳ ವಸ್ತು ತುಂಬಾ ಚೆನ್ನಾಗಿರುತ್ತದೆ ಮತ್ತು ಓದುಗರನ್ನು ಚಿಂತನೆಗೆ ಒಳಪಡಿಸಿ ಓದುವಂತೆ ಮಾಡುತ್ತದೆ. ಅಲ್ಲದೆ ಓದುಗರನ್ನು ಇನ್ನೂ ಹೆಚ್ಚು ಆಕರ್ಷಿಸುವಂತೆ ಮತ್ತು ಓದುವಂತೆ ಸಾಹಿತ್ಯದ ರಚನೆಯಾಗಬೇಕು. ಯಾವುದೇ ಸಾಹಿತ್ಯ ರಚನೆಯಲ್ಲಿ ಭಾಷೆ, ಸಮೃದ್ಧ, ನಿಗೂಢತೆ ಮತ್ತು ಮನಸಿಗೆ ಹಿತವೆನಿಸುವ ವಿಸ್ಮಯಗಳ ಹೂರಣವನ್ನು ಸಾಹಿತ್ಯವು ಒಳಗೊಂಡಿದ್ದರೆ ಓದುಗರನ್ನು ಹೆಚ್ಚು ಆಕರ್ಷಿಸುತ್ತದೆ. ಮನುಷ್ಯನ ಸಂವೇದನೆಯಲ್ಲಿಯೇ ಸಾಹಿತ್ಯ ಅಡಗಿದೆ. ಸಮಯದ ಪರಿವೆಯೇ ಇಲ್ಲದೆ ನಮ್ಮನ್ನು ಯಾವುದೋ ಲೋಕಕ್ಕೆ ಪ್ರವೇಶ ಮಾಡಿಸುವ ಶಕ್ತಿ ಸಾಹಿತ್ಯಕ್ಕೆ ಇದೆ. ಹಾಗೆ ಈ ಪ್ರಶಸ್ತಿಯು ನನ್ನ ಬರವಣಿಗೆಯ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿದೆ ಎಂದು ಅಭಿಪ್ರಾಯಪಟ್ಟರು. ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಹೆಚ್.ಶಾಂತಾರಾಮ್ ಅವರು ಮಾತನಾಡಿ ಸಾಹಿತ್ಯ ಸೇವೆ ಮುಂದುವರಿಯಲಿ ಎಂದು ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ.ಶಾಂತಾರಾಮ ಪ್ರಭು ಮಾತನಾಡಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಿ ಮತ್ತು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ. ಈ ಪ್ರಶಸ್ತಿ ತುಂಬಾ ಶ್ರೇಷ್ಠವಾದದ್ದು. ಎಂದು ಹೇಳಿದರು.
ತಳಿಕಂಡಿ – ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕುಂದಾಪುರ ತಾಲೂಕಾ ತಹಶೀಲ್ದಾರ್ ಶೋಭಲಕ್ಷ್ಮಿ ಅವರು ಭಾಷೆ ಎಂದರೆ ಬದುಕು. ಭಾಷೆ ಎಂದರೆ ಸಂಸ್ಕೃತಿ ಎಂದು ಹೇಳಿದರು.
ಈ ಸಂದರ್ಭದಲ್ಲಿ
ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ದೇವದಾಸ್ ಕಾಮತ್ ಮತ್ತು ರಾಜೇಂದ್ರ ತೋಳಾರ್ ಉಪಸ್ಥಿತರಿದ್ದರು.
ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕರಾದ ಡಿ.ರೇಖಾ ಬನ್ನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ವಂದಿಸಿದರು. ಕನ್ನಡ ಉಪನ್ಯಾಸಕರಾದ ಮೈತ್ರಿ “ತಳಿಕಂಡಿ” ಪುಸ್ತಕದ ಕುರಿತು ಮಾತನಾಡಿದರು.
ಆಂಗ್ಲ ಭಾಷಾ ಉಪನ್ಯಾಸಕಿ ರೋಹಿಣಿ ಹೆಚ್.ಬಿ ಕಾರ್ಯಕ್ರಮ ನಿರೂಪಿಸಿದರು.

ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಮೇರಿ ಮಾತೆಯ ಹುಟ್ಟು ಹಬ್ಬದ (ತೇನೆ ಹಬ್ಬ) ಪ್ರಯುಕ್ತ ನೊವೆನಾ ಆರಂಭ

ಕುಂದಾಪುರ, ಆ.30: ಉಡುಪಿ ಧರ್ಮಪ್ರಾಂತ್ಯದಲ್ಲೆ ಹಿರಿಯ ಇಗರ್ಜಿಯಾದ 453 ವರ್ಷದ ಇತಿಹಾಸ ಇರುವ ಹೋಲಿ ರೋಜರಿ ಚರ್ಚಿನಲ್ಲಿ ತೆನೆ ಹಬ್ಬ ಮೇರಿ ಮಾತೆಯ ಹುಟ್ಟು ಹಬ್ಬದ  ಪ್ರಯುಕ್ತ (ಸೆ.8) ತಯಾರಿಗಾಗಿ 9 ದಿನಗಳ ನೊವೆನಾ ಇಂದು ಅಗೋಸ್ತ್ 30 ರಂದು ಆರಂಭವಾಯಿತು. ಇಗರ್ಜಿಯ ಪ್ರಧಾನ ಧರ್ಮಗುರು ಅ|ವಂ| ಸ್ಟ್ಯಾನಿ ತಾವ್ರೊ ಪವಿತ್ರ ಬಲಿದಾನ ಅರ್ಪಿಸಿದ ತರುವಾಯ ಇಗರ್ಜಿಗಾಗಿ ನೂತನವಾಗಿ ತಂದ ಬಾಲ ಮೇರಿಯ ಪ್ರತಿಮೆಯನ್ನು ಆಏಶಿರ್ವದಿಸಿ ನೊವೆನಾ ಪ್ರಾರ್ಥನೆ ನಡೆಸಿಕೊಟ್ಟು ನೊವೆನಾಕ್ಕೆ ಚಾಲನೆ ನೀಡಿದರು.ಮಕ್ಕಳು ಮತ್ತು ದೊಡ್ಡವರು ಭಕ್ತಿ ಗಾಯನದೊಂದಿಗೆ ಹೂ ಗಳನ್ನು ಬಾಲ ಮೇರಿ ಮಾತೆಗೆ ಅರ್ಪಿಸಿದರು.