ಮಣಿಪುರ ಹಿಂಸಾಚಾರ : ಪ್ರತಿಭಟನಾ ಸಭೆ ಯಶಸ್ವಿಗೊಳಿಸಲು ಮನವಿ

ಉಡುಪಿ : ಮಣಿಪುರದಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಾನ ಮನಸ್ಕ ವೇದಿಕೆಯ ನೇತೃತ್ವದಲ್ಲಿ ಅಗಸ್ಟ್ 2ರಂದು ಉಡುಪಿಯಲ್ಲಿ ನಡೆಯುವ ಕಾಲ್ನಾಡಿಗೆ ಜಾತ ಹಾಗೂ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಕ್ರೈಸ್ತ ಸಂಘಗಳ ಅಂತರಾಷ್ಟ್ರೀಯ ಒಕ್ಕೂಟ (ಇಫ್ಕಾ) ಇದರ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಲೂವೀಸ್ ಲೋಬೊ ಕಲ್ಮಾಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲೆಯ ಪ್ರಮುಖ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುವ ಪ್ರತಿಭಟನಾ ಸಭೆ ಹಾಗೂ ಪ್ರತಿಭಟನಾ ಜಾತವು ಶೋಕಮಾತ ದೇವಾಲಯ ಉಡುಪಿ ಇಲ್ಲಿಂದ ಆರಂಭವಾಗಿ ಸರ್ವಿಸ್ ಬಸ್ ನಿಲ್ದಾಣ, ಕೆಎಂ ಮಾರ್ಗ, ಕೋರ್ಟ್ ರೋಡ್ ಮೂಲಕ ಸಾಗಿ ಮಿಷನ್ ಕಾಂಪೌಂಡ್ ನಲ್ಲಿ ಪ್ರತಿಭಟನಾ ಸಭೆಯ ಮೂಲಕ ಮುಕ್ತಾಯಗೊಳ್ಳಲಿದೆ. ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ಪ್ರತಿಭಟನಾ ಸಭೆಯಲ್ಲಿ 7,000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಿಗಳಿಂದ ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ಸಂಘರ್ಷ ಉಂಟಾಗಿದ್ದು ಅಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರವು ಸೂಕ್ತ ಕ್ರಮ ಕೈಗೊಂಡು ಮತ್ತೊಮ್ಮೆ ಅಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಲೋಬೋ ತಿಳಿಸಿದ್ದಾರೆ.

ವಿದ್ಯಾರ್ಥಿ ಕೆ.ರಾಕೇಶ್ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಾಲ್ನಡಿಗೆ ಜಾಥಾ

ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ವಿದ್ಯಾರ್ಥಿ ಕೆ.ರಾಕೇಶ್ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಚಲ್ದಿಗಾನಹಳ್ಳಿಯಿಂದ ಶ್ರೀನಿವಾಸಪುರದ ತಾಲ್ಲೂಕು ಕಚೇರಿಗೆ ಕಾಲ್ನಡಿಗೆ ಜಾಥಾ ಏರ್ಪಡಿಸಲಾಗಿತ್ತು.
ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಮಾತನಾಡಿ, ಸರ್ಕಾರ ಮತ್ತು ಸಮಾಜ ದಲಿತರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ. ಪ್ರತಿಭಾವಂತ ವಿದ್ಯಾರ್ಥಿ ರಾಕೇಶ್ ಕ್ಷುಲ್ಲಕ ಕಾರಣಕ್ಕೆ ಕೊಲೆಯಾಗಿದ್ದರೂ ಗಂಭೀರವಾಗಿ ಪರಿಗಣಿಸಿಲ್ಲ. ಇಂಥ ಪರಿಸ್ಥಿತಿಯಲ್ಲಿ ದಲಿತ ಸಮುದಾಯ ಪ್ರತಿಭಟನೆ ಹಾದಿ ಹಿಡಿಯದೆ ವಿಧಿಯಿಲ್ಲ ಎಂದು ಹೇಳಿದರು.
ಯಾವುದೇ ಚಳವಳಿಯಲ್ಲಿ ಬರಹಗಾರರು ಹಾಗೂ ಕಲಾವಿದರು ಮುಂಚೂಣಿಯಲ್ಲಿರಬೇಕು. ಆದರೆ ಈಗ ಅವರನ್ನು ಹಿಂದಕ್ಕೆ ತಳ್ಳಲಾಗಿದೆ. ಹೊಸ ಹಾಡುಗಳ ಮೂಲಕ ಸಾಮಾಜಿಕ ಜಾಗೃತಿ ಉಂಟುಮಾಡಬೇಕು. ರಾಕೇಶನ ಸಾವಿಗೆ ನ್ಯಾಯ ದೊರೆಯಬೇಕು ಎಂದು ಹೇಳಿದರು.
ದಲಿತ ಮುಖಂಡ ಚಿಂತಾಮಣಿ ಎನ್.ವೆಂಕಟೇಶ್ ಮಾತನಾಡಿ, ಪೊಲೀಸರು ರಾಕೇಶ್ ಕೊಲೆ ಆರೋಪಿಗಳನ್ನು ಕೂಡಲೆ ಬಂಧಿಸಬೇಕು. ಈ ವಿಷಯದಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಹಾಸನದ ದಲಿತ ಮುಖಂಡ ಶ್ರೀಧರ್ ಕಲ್ವೀರಣ್ಣ ಮಾತನಾಡಿ, ರಾಕೇಶ್ ಕೊಲೆಯನ್ನು ಕಠಿಣ ಪದಗಳಿಂದ ಖಂಡಿಸಬೇಕು. ಕೊಲೆಗಾರರಿಗೆ ಕಠಿಣ ಶಿಕ್ಷೆಯಾಗಬೇಕು. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಜನರನ್ನು ಸುಮ್ಮನೆ ಬಿಡಬಾರದು. ಸರ್ಕಾರ ರಾಕೇಶ್ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡ ವೀರಭದ್ರಸ್ವಾಮಿ, ದಲಿತ ಮುಖಂಡ ಚಲ್ದಿಗಾನಹಳ್ಳಿ ಈರಪ್ಪ, ಮಧು ಹೊಲೆಯಾರ್, ಸಿದ್ಧಾರ್ಥ ರಾಕೇಶ್ ಕೊಲೆ ಕಂಡಿಸಿ ಮಾತನಾಡಿದರು.
ವಿವಿಧ ದಲಿತ ಸಂಘಟನೆಗಳ ಕಲಾವಿದರು ಕ್ರಾಂತಿ ಗೀತೆಗಳನ್ನು ಹಾಡಿದರು. ಮುಖಂಡರು ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಶಿರಿನ್ ತಾಜ್ ಅವರಿಗೆ ನೀಡಿದರು.
ದಲಿತ ಮುಖಂಡ ವರ್ತನಹಳ್ಳಿ ವೆಂಕಟೇಶ್, ಸೂಲಿಕುಂಟೆ ರಮೇಶ್, ಗಡ್ಡಂ ಎನ್.ವೆಂಕಟೇಶ್, ಹೆಬ್ಬಾಳ ವೆಂಕಟೇಶ್, ಬಸವರಾಜ್, ವಿಜಯಕುಮಾರ್, ಆನಂದ್ ಬಂಡಾರಿ, ಪ್ರಭಾಕರಗೌಡ, ಪದ್ಮಾವತಮ್ಮ, ರಾಮಾಂಜಮ್ಮ, ಹಾರೋಹಳ್ಳಿ ರವಿ, ರಾಧಮ್ಮ, ನರಸಿಂಹಪ್ಪ, ಬೈಚೇಗೌಡ, ನವೀನ್, ಹುಂಜ ಮುನಿರೆಡ್ಡಿ, ನಾರಾಯಣಸ್ವಾಮಿ ಇದ್ದರು.

ಬೆಂಗಳೂರು ’ರವೀಂದ್ರ ಕಲಾಕ್ಷೇತ್ದ’ ಪೂರ್ಣರಾತ್ರಿ ನಡೆದ ಯಕ್ಷಗಾನ ತಾಳಮದ್ದಲೆ

ಬೆಂಗಳೂರು: ‘ಸಂಸ್ಕಾರ, ಸಂಸ್ಕೃತಿ ಪಸರಿಸುವ ವಿಶಿಷ್ಟ ಕಲೆ ಯಕ್ಷಗಾನ, ‘ಇದು ಹೇಗೆ ಸರಿ, ಅದೇಕೆ ಸರಿಯಲ್ಲ’ ಮುಂತಾಗಿ ತರ್ಕಿಸುವ ಬುದ್ಧಿ ನಮಗೆ ಶಾಲಾ ಪಠ್ಯದಿಂದ ದೊರೆತಿದ್ದಲ್ಲ, ಬದಲಾಗಿ ತರ್ಕಶಕ್ತಿ, ಪದ ಭಂಡಾರ. ಪೌರಾಣಿಕ ಜ್ಞಾನ ಇವೆಲ್ಲ ದೊರೆತಿರುವುದು ಯಕ್ಷಗಾನದಿಂದ’ ಎಂದು ಹಿರಿಯ ಅರ್ಥವಾದಿ ಜಬ್ಬಾರ್ ಸಮೋ ಅವರು ತಾಳಮದ್ದಲೆಗೆ ಮುನ್ನ, ಯಕ್ಷ ಸಂಕ್ರಾಂತಿ ವತಿಯಿಂದ ‘ಗುರು ಸಮ್ಮಾನ ಸ್ವೀಕರಿಸಿ ಅವರು ಮಾತಾನಾಡಿದರು.

ನಗರದ ರವೀಂದ್ರ ಕಲಾಕ್ಷೇತ್ರ ನಗರದಲ್ಲಿ ನಡೆದ ಪೂರ್ಣರಾತ್ರಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುಗಾರ ಗಂಟಿಹೊಳೆ ಅವರನ್ನು ಸನ್ಮಾನಿಸಲಾಯಿತು. ರಂಗಕರ್ಮಿ ಸೇತುರಾಂ ಎಸ್‌ಎನ್, ಜಬ್ಬಾರ್ ಸಮೋ, ಟಿ. ಶಿವಾನಂದ ಶೆಟ್ಟಿ, ದೀಪಕ್ ಶೆಟ್ಟಿ ಬಾರ್ಕೂರು, ಡಾ‌.ಬಾಬು ಗೋವಿಂದ ಪೂಜಾರಿ, ರಘುರಾಮ ಶೆಟ್ಟಿ ಎಳ್ಮುಡಿ, ಪ್ರವೀಣ್ ಕುಮಾರ್ ಶೆಟ್ಟಿ, ಅಶ್ವಥ್ ಹೆಗ್ಡೆ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ‘ಕೃಷ್ಣ ಸಂಧಾನ’ ಹಾಗೂ ಕರ್ಣಾರ್ಜು ಎಂಬ ಅಖ್ಯಾನಗಳ ಯಕ್ಷಗಾನ ತಾಳಮದ್ದಳೆ ಜರುಗಿತು‌. ಸುಮಾರು ಒಂದು ಸಾವಿರಕ್ಕು ಹೆಚ್ಚು ಪ್ರೇಕ್ಷಕರು ಆಗಮಿಸಿದ್ದರು, ಇನ್ನೂರಕ್ಕೂ ಹೆಚ್ಚು ಪ್ರೇಕ್ಷಕರು ಬೆಳಗಿನ ಜಾವದ ತನಕ ಉಪಸ್ಥಿತರಿದ್ದರು.

ಸಂಘಟಕ ನಾಗರಾಜ್ ಶೆಟ್ಟಿ ನೈಕಂಬ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುರೇಶ ನಂದ್ರೊಳ್ಳಿ ವಂದಿಸಿ, ಸುನಿಲ್ ಹೊಲಾಡು ನಿರೂಪಿಸಿದರು.

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆ: ಇಂಟರ್‍ಯಾಕ್ಟ್ ಕ್ಲಬ್ ಉದ್ಘಾಟನೆ

ಕುಂದಾಪುರ: ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇವರ ಆಶ್ರಯದಲ್ಲಿ ಇಂಟರ್‍ಯಾಕ್ಟ್ ಕ್ಲಬ್ ನ ಪದಪ್ರಧಾನ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಆಗಮಿಸಿದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಪ್ರೇಮಿಕ ಇವರು ದೀಪವನ್ನು ಬೆಳಗಿಸಿ ಮಾತನಾಡಿ ಕ್ಲಬ್ಬಿನ ಕೆಲಸ ಕಾರ್ಯಗಳನ್ನು ಶ್ಲಾಘಿಸಿದರು. ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ರೋ, ಜಗನ್ನಾಥ್ ಮೊಗೇರ ಪದ ಪ್ರದಾನ ನೆರವೇರಿಸಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಇತರರಿಗೆ ಸಹಾಯ ಮಾಡುವ, ಗೌರವವನ್ನು ನೀಡುವ ಹಾಗೂ ಅಂತರಾಷ್ಟ್ರೀಯ ಅರಿವು ಮೂಡಿಸುತ್ತದೆ ಎಂದರು. ರೋಟರಿ ಕ್ಲಬ್ಬಿನ ಮಾಜಿ ಅಧ್ಯಕ್ಷರು ಆಗಿರುವ ರೋ, ರಾಜು ಪೂಜಾರಿ ಪ್ರಸ್ತಾವಿಕ ಮಾತನಾಡಿದರು. ಕ್ಲಬ್ಬಿನ ಇಂಟರಾಕ್ಟ್ ಚೇರ್ಮನ್ ರೋ, ವಿನ್ಸೆಂಟ್ ಬರೆಟೊ ಶುಭ ಹಾರೈಸಿದರು. ರೋಟರಿ ಕ್ಲಬ್ಬಿನ ಕಾರ್ಯದರ್ಶಿಗಳಾದ ರೋ, ಡಾ. ವಿಲಾಸ್ ಕೃತಿಕ್, ಸದಸ್ಯರಾದ ರೋ, ರೊನಾಲ್ಡ್ ಡಿ ಮೆಲ್ಲೋ , ರೋ ಉಲ್ಲಾಸ್ ಕ್ರಾಸ್ತಾ ಉಪಸ್ಥಿತರಿದ್ದರು.ಇಂಟರಾಕ್ಟ್ ಕೋ ಆರ್ಡಿನೇಟರ್ ದೈಹಿಕ ಶಿಕ್ಷಕ ಮೈಕಲ್ ಇವರು ಸ್ವಾಗತಿಸಿದರು. ಶಿಕ್ಷಕಿಯಾದ ಶ್ರೀಮತಿ ಸರಸ್ವತಿ ಇವರು ವಂದಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ನಿರೂಪಿಸಿದರು. ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಕುಂದಾಪುರ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಶುಭಕರ ಆಚಾರಿ ನೇಮಕ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಪದವಿ ಕಾಲೇಜು ಆಡಳಿತ ಮಂಡಳಿಯು ಡಾ.ಶುಭಕರ ಆಚಾರಿ ಅವರನ್ನು 1ಆಗಸ್ಟ್ 2023ರಿಂದ ಪ್ರಾಂಶುಪಾಲರಾಗಿ ನೇಮಕ ಮಾಡಿದೆ.
ಕಾಲೇಜಿನ ಜನಪ್ರಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ. ಡಾ.ಶುಭಕರಾಚಾರಿ ಅವರು ಮೂಲತಃ ತೀರ್ಥಹಳ್ಳಿಯ ಗಬಡಿ ಗ್ರಾಮದ ಸೀತಾರಾಮ ಆಚಾರ್ಯ ಮತ್ತು ಇಂದಿರಾ ಅವರ ಪುತ್ರ ಶುಭಕರಾಚಾರಿ ತೀರ್ಥಹಳ್ಳಿಯ ತುಂಗಭದ್ರಾ ಮಹಾವಿದ್ಯಾಲಯಲ್ಲಿ ಪದವಿ ಶಿಕ್ಷಣದ ನಂತರ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದು ಡಾಕ್ಟರೇಟ್ ನ್ನು ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದರು.
ಸುಮಾರು 30 ವರ್ಷಗಳ ಸುದೀರ್ಘ ಅವಧಿಯಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.
ಕಾರ್ಕಳದ ಭುವನೇಂದ್ರ ಮತ್ತು ಮೂಡುಬಿದಿರೆ ಮಹಾವೀರ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾಗಿದ್ದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳಾದ 2014ರ ಮಾದರಿ ಸಂಸತ್ತು, 2015ರ ಬುಡಕಟ್ಟು ಸಂಸ್ಕೃತಿ ಅನಾವರಣ
2016ರ ವಿಕಲ ಚೇತನ ಸಮಾವೇಶ
2017ರ ರಾಷ್ಟ್ರಮಟ್ಟದ ಬುಡಕಟ್ಟು ಸಮ್ಮೇಳನ
2019ರಲ್ಲಿ ನಮ್ಮ ಕುಂದಾಪ್ರ ಸ್ವಚ್ಛ ಕುಂದಾಪ್ರ ಕಾರ್ಯಕ್ರಮಗಳ ಸಂಯೋಜಕರಾಗಿ ಕಾರ್ಯಕ್ರಮಗಳನ್ನು ಸಮರ್ಥವಾಗಿ ನಿಭಾಯಿಸಿದರು.
ಪ್ರಸ್ತುತ 1ಆಗಸ್ಟ್ ಈ ಹಿಂದಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಅವರು 31 ಜುಲೈ 2023ರಂದು ನಿವೃತ್ತಿ ಹೊಂದಿದ್ದಾರೆ. 1ಆಗಸ್ಟ್ 2023ರಿಂದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಶುಭಕರಾಚಾರಿ ನೇಮಕಗೊಂಡು ಕಾಲೇಜನ್ನು ಮುನ್ನಡೆಸಲಿರುವರು.

ಜಿ. ಗೋಪಾಲಕೃಷ್ಣ ಭಟ್ (ಕಾಶೀನಾಥ) ನಿಧನ

ಕುಂದಾಪುರದಲ್ಲಿ ನೆಲೆಸಿದ್ದ ಕೆನರಾ ಬ್ಯಾಂಕ್‍ನ ನಿವೃತ್ತ ಅಧಿಕಾರಿ ಜಿ. ಗೋಪಾಲಕೃಷ್ಣ ಭಟ್ (ಕಾಶೀನಾಥ 64), ಜುಲೈ 31 ರಂದು ನಿಧನರಾದರು.
ಗಂಗೊಳ್ಳಿ ಅಂಬಿಕಾ ದೇವಸ್ಥಾನದ ಪ್ರಸಿದ್ಧ ಭಟ್ ಮನೆತನದವರಾಗಿದ್ದ ಇವರು ಬ್ಯಾಂಕ್ ನೌಕರರಾಗಿ ಹಲವು ಕಡೆ ಸೇವೆ ಸಲ್ಲಿಸಿ ನಿವೃತ್ತರಾಗಿ ಕುಂದಾಪುರದ ಪೇಟೆ ವೆಂಕಟರಮಣ ದೇವಸ್ಥಾನದ ಬಳಿ ಇರುವ ಪ್ರಥಮೇಶ ರೆಸಿಡೆನ್ಸಿಯಲ್ಲಿ ಮನೆ ಮಾಡಿಕೊಂಡಿದ್ದರು.
ಇವರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಕಾಶೀನಾಥ ಎಂದೇ ಕರೆಯಲ್ಪಡುವ ಇವರು ಯುವಕರಾಗಿದ್ದಾಗಿಂದ ಕ್ರಿಯಾಶೀಲ ಸಮಾಜ ಸೇವಕರಾಗಿದ್ದು, ತುರ್ತು ಪರಿಸ್ಥಿತಿ ವಿರೋಧಿಸಿ ಯುವಕರೊಂದಿಗೆ ಸತ್ಯಾಗ್ರಹ ನಡೆಸಿದ್ದು ಬಂಧನಕ್ಕೊಳಗಾಗಿದ್ದರು.

ನ್ಯಾಯಾಲಯಗಳಲ್ಲೂ ವಿಕಲಚೇತನರಿಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ನ್ಯಾಯದ ಸುಲಭಲಭ್ಯತೆಯನ್ನು ಖಾತರಿ ಪಡಿಸಬೇಕಿದೆ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್.ಎ. ಬೋಪಣ್ಣ

ಬೆಂಗಳೂರು : ನ್ಯಾಯಾಲಯಗಳಲ್ಲಿ ವಿಕಲಚೇತನರಿಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ನ್ಯಾಯದ ಸುಲಭಲಭ್ಯತೆಯನ್ನು ಖಾತರಿ ಪಡಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಎ. ಬೋಪಣ್ಣ ಕರೆ ನೀಡಿದರು.

ಅವರು ಬೆಂಗಳೂರಿನ ರಾಮಯ್ಯ ಕಾನೂನು ಕಾಲೇಜಿನಲ್ಲಿ ಶನಿವಾರ ನಡೆದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ‘ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ)’ ಸಂಸ್ಥೆ ರಾಮಯ್ಯ ಕಾನೂನು ಕಾಲೇಜಿನ ಸಹಕಾರದೊಂದಿಗೆ ಸ್ಥಾಪಿಸಿದ ‘ನೂತನ ಡಿಸೆಬಿಲಿಟಿ ಲಾ ಸೆಂಟರ್‌’ ಅನ್ನು ಉದ್ಘಾಟಿಸಿ ಮಾತನಾಡಿದರು.

ತಮ್ಮ ವಿಕಲಚೇತನ ಸ್ಥಿತಿಯಿಂದಾಗಿ ಅವಕಾಶ ವಂಚಿತರು ಮತ್ತು ಬಡವರು ಹಲವು ವರ್ಷಗಳಿಂದ ನ್ಯಾಯದಿಂದ ವಂಚಿತರಾಗಿದ್ದಾರೆ. ನ್ಯಾಯದ ಸುಲಭ ಲಭ್ಯತೆಯನ್ನು ಅವರಿಗೆ ಪಡೆಯಲು ಸಾಧ್ಯವಾಗಿಲ್ಲ.

ಸಂವಿಧಾನವು ತನ್ನ ಎಲ್ಲ ಪ್ರಜೆಗಳಿಗೆ ಸಮಾನ ನ್ಯಾಯವನ್ನು ನೀಡುತ್ತಿದ್ದರೂ ಕೂಡ ವಿಕಲಚೇತನರಿಗೆ, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗಗಳಿಗೆ ತಮ್ಮ ಹಕ್ಕುಗಳ ಬಗ್ಗೆಯಾಗಲೀ, ಸಂವಿಧಾನವು ಸಂರಕ್ಷಿಸುತ್ತಿರುವ ಇತರ ಸೌಲಭ್ಯಗಳ ಬಗ್ಗೆಯಾಗಲೀ ತಿಳಿದಿಲ್ಲ ಎಂದು ಎಸ್.ಎ. ಬೋಪಣ್ಣ ಹೇಳಿದರು‌.

ನ್ಯಾಯದ ಸುಲಭ ಲಭ್ಯತೆಯು ನಮ್ಮ ಸಮಾಜದ ಪ್ರಮುಖ ಅಗತ್ಯತೆಯಾಗಿದ್ದು ಅದನ್ನು ಸಾಧಿಸುವಲ್ಲಿ ನಾವು ಮುಂದಡಿ ಇರಿಸಬೇಕಿದೆ ಎಂದು ಅವರು ಕರೆ ನೀಡಿದರು.

ಸಾಮಾಜಿಕ- ಆರ್ಥಿಕ ಸ್ಥರಗಳ ನಡುವೆ ಯಾವುದೇ ತಾರತಮ್ಯವಿಲ್ಲದೇ ನ್ಯಾಯ ನೀಡದಾಗ ಮಾತ್ರ ನ್ಯಾಯದ ಸುಲಭ ಲಭ್ಯತೆಯನ್ನು ಸಾಧಿಸಿದಂತಾಗುತ್ತದೆ ಎಂದು ನಾನು ನಂಬುತ್ತೇ‌ನೆ. ಸಾಮಾಜಿಕ ನ್ಯಾಯವು ನಮ್ಮ ಸಂವಿಧಾನದ ಮೂಲ ರಚನೆಯಾಗಿದೆ.  ಯಾವಾಗ ಎಲ್ಲ ವರ್ಗದ ಜನರನ್ನು ಸಮಾನವಾಗಿ ಪರಿಗಣಿಸಲಾಗುತ್ತದೆಯೋ ಆಗಲೇ ನಮ್ಮ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿದಂತಾಗುತ್ತದೆ. ವಿಶೇಷ ಚೇತನರಿಗೂ ನ್ಯಾಯ ದೊರಕಿಸುವುದು ನ್ಯಾಯದ ಸುಲಭಲಭ್ಯತೆಯ ಪ್ರಮುಖ ಅಂಶ‌. ವಿಶೇಷ ಚೇತನರ ಊನತೆಗಳಿಂದಾಗಿ ಅವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು, ಅವರ ನ್ಯಾಯ ಸಂರಕ್ಷಣೆಗಾಗಿ ಹೋರಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ನುಡಿದರು.

ಕೆಲವರ ಕೂಗುಮಾರಿ ಮಾತುಗಳು, ಎಲ್ಲರ ಸಂವಿಧಾನಾತ್ಮಕ ಹಕ್ಕುಗಳನ್ನು ಕಾಪಾಡುವ  ಆಶಯದಿಂದ ನಮ್ಮನ್ನು ದೂರೀಕರಿಸಿ ವಿಚಲಿತರನ್ನಾಗಿಸದಿರಲಿ ಎಂದು ಎಸ್.ಎ. ಬೋಪಣ್ಣ ಎಚ್ಚರಿಸಿದರು.

ರಾಷ್ಟೀಯ ಹಾಗೂ ರಾಜ್ಯ ಮಟ್ಟದಲ್ಲಿನ ನ್ಯಾಯಾಂಗ ರಂಗದಲ್ಲಾದ ಬೃಹತ್ ಕ್ರಾಂತಿಯ ಪರಿಣಾಮವಾಗಿ ಇಂದು ವಿಕಲಚೇತನರಿಗೆ ನ್ಯಾಯ ಒದಗಿಸುವ ಬಗ್ಗೆ ತಳಮಟ್ಟದಲ್ಲಿಯೇ ತಿಳಿಸಲಾಗುತ್ತಿದೆ.  ವಿಕಲಚೇತನರ ಲಿಂಗ ಹಾಗೂ ವಯಸ್ಸಿಗೆ ತಕ್ಕಂತೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಲು ಸರ್ಕಾರಗಳು ಮುಂದಡಿ ಇರಿಸಬೇಕಿದೆ. ವಿಕಲಾಂಗರು ಸೇರಿದಂತೆ ಸಮಾಜದ ಎಲ್ಲ ದುರ್ಬಲ ವರ್ಗಗಳಿಗೆ ನ್ಯಾಯ ಒದಗಿಸಿದಾಗ ಮಾತ್ರ ನ್ಯಾಯದ ನೈಜತೆಯನ್ನು ಕಾಪಾಡಿದಂತಾಗುತ್ತದೆ‌ ಎಂದು ಅವರು ಕರೆ ನೀಡಿದರು.

‘ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ)’ ಸಂಸ್ಥೆಯ ಪ್ರತಿನಿಧಿಗಳಾಗಿ ಗೌರವ ಕಾರ್ಯದರ್ಶಿ ಜೇಕಬ್ ಕುರಿಯನ್, ಸಿಇಓ ಡಾ. ಎನ್.ಎಸ್. ಸೆಂಥಿಲ್ ಕುಮಾರ್ ಭಾಗವಹಿಸಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ಹೈಕೋರ್ಟ್‌ ನ್ಯಾಯಮೂರ್ತಿ ಜಿ.ನರೇಂದ್ರ, ಗೋಕುಲ ಎಜುಕೇಶನ್ ಫೌಂಡೇಷನ್ ಉಪಾಧ್ಯಕ್ಷ ಎಂ.ಆರ್.ಸೀತಾರಾಂ ಉಪಸ್ಥಿತರಿದ್ದರು.

ಸ್ನೇಹಾಲಯ ಮಾನಸಿಕರ ಪುನರ್ವಸತಿ ಕೇಂದ್ರದ ನಿವಾಸಿಗಳಿಗಾಗಿ “ಸ್ನೇಹಾಲಯ ಫ್ಯಾಷನ್ ಫೆಸ್ಟ್ / “Snehalaya Fashion Fest” for residents of Snehalaya Mental Rehabilitation Centre

ದಿನಾಂಕ 29-07-2023 ರಂದು ಸ್ನೇಹಾಲಯ ಮಾನಸಿಕರ ಪುನರ್ವಸತಿ ಕೇಂದ್ರದ ನಿವಾಸಿಗಳಿಗಾಗಿ “ಸ್ನೇಹಾಲಯ ಫ್ಯಾಷನ್ ಫೆಸ್ಟ್” ನ್ನು ನಡೆಸಲಾಯಿತು . ಮಾನಸಿಕ ಅಸ್ವಸ್ಥರಿಗೆ ನಡೆದ  ಈ ಫ್ಯಾಷನ್ ಫೆಸ್ಟ್ ಭಾರತ ದೇಶದಲ್ಲಿ ನಡೆದ ಮೊದಲ ಕಾರ್ಯಕ್ರಮ ಎಂಬ ಹೆಗ್ಗಳಿಕೆ ಪಡೆಯಿತು. ಮಾತ್ರವಲ್ಲದೆ ರಾಂಪ್ ವಾಕ್ ನಡೆಸಿದ ಸ್ನೇಹಾಲಯದ 49 ನಿವಾಸಿಗಳ ಉತ್ಸಾಹ, ಆತ್ಮವಿಶ್ವಾಸ ಹಾಗೂ ಆಶಾವಾದಿತನ ವು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.  ಸ್ನೇಹಾಲಯದ ಸಂಸ್ಥಾಪಕರು ಹಾಗೂ ಟ್ರಸ್ಟಿಗಳು ಆಗಮಿಸಿದ ಗಣ್ಯರನ್ನು ಪ್ರಿತಿಯಿಂದ ಸ್ವಾಗತಿಸಿದರು. ಮುಖ್ಯ ಅಥಿತಿಗಳಾಗಿ ಮಂಜೇಶ್ವರದ ಶಾಸಕರಾದ ಶ್ರೀ ಎ.ಕೆ. ಎಮ್ ಅಶ್ರಫ್ ಹಾಗೂ ಬ್ರದರ್ ಜೋಸೆಪ್ ಕ್ರಾಸ್ತಾ ರವರು ಈ ಫ್ಯಾಷನ್ ಫೆಸ್ಟ್ ನ ಧ್ಯೇಯೋದ್ದೇಶಗಳನ್ನು ತಿಳಿಸುವ ಫಲಕದ ಅನಾವರಣದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಜೇಶ್ವರದ ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಶ್ರೀಮತಿ ಜೀನ್ ಲವಿನ ಮೊಂತೆರೊ, ಖ್ಯಾತ ನಿರೂಪಕರಾದ ವಿ.ಜೆ ಡಿಕ್ಸನ್, ಖ್ಯಾತ ಛಾಯಾಗ್ರಾಹಕ ಶಂಸುದಿನ್ ತಾಂಡಿಲಂ, ಡಿಜೆ ಶಾಡ್ಜ್, ಅಂತರಾಷ್ಟ್ರೀಯ ಫ್ಯಾಷನ್ ಶೋ ನಿರ್ದೇಶಕ ಶನೋಜ್ ಇರಾನಿ, ನೃತ್ಯ ಸಂಯೋಜಕಿ ಸಜ್ನಾ ಸಾಜ್, ವಸ್ತ್ರ ವಿನ್ಯಾಸಕಾರರಾದ ಯಜ್ಞೇಶ್ ಅಮೀನ್ ಉಳ್ಳಾಲ್, ಶ್ರೀ ರೋಶನ್ ಮಾರ್ಟಿಸ್ – ಮುಖ್ಯ ಸಂಪಾದಕರು, ಕರಾವಳಿ ಸುದ್ದಿ, ಶ್ರೀ ಅಲ್ವಿನ್ ಡಿಸೋಜಾ – ಅಧ್ಯಕ್ಷರು, ಕ್ಯಾಥೋಲಿಕ್ ಸಭಾ, ಮಂಗಳೂರು ಪ್ರಾಂತ್ಯ, ಶ್ರೀ ನವೀನ್ ಮೊಂತೆರೊ – ಸೌದಿ ಸ್ನೇಹಿತರ ಸಂಘ, ಶ್ರೀ ಎಂ.ಎಸ್.ಥಾಮಸ್ – ಸಂಸ್ಥಾಪಕ ಅಧ್ಯಕ್ಷರು ಸಂತೋಷ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಿತಂಗೋಳಿ, ಶ್ರೀ ಫ್ಯಾಷನ್ ಮಾಡೆಲ್ ಹಾಗು ಶೋ ಡೈರೆಕ್ಟರ್  ಶೋಭಿತ್ ಹಾಗೂ ವಸ್ತ್ರ ವಿನ್ಯಾಸಗಾರ ರಾದ ಶ್ರೀಮತಿ ಅಕ್ಷಯ ಇವರು ಉಪಸ್ಥಿತತರಿದ್ದರು. ಈ ಅಪರೂಪದ ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಶ್ರೀ ಶೋಭಿತ್ ಹಾಗು ಶ್ರೀಮತಿ ಅಕ್ಷಯ ರವರನ್ನು ಸನ್ಮಾನಿಸಲಾಯಿತು. ಮಂಗಳೂರಿನ ಖ್ಯಾತ ಕಾರ್ಯನಿರ್ವಾಹಕಿಯಾದ ಶ್ರೀಮತಿ ಲವಿಟ ಮಿನೇಜಸ್ ಕಾರ್ಯಕ್ರಮವನ್ನು ನಿರೂಪಿಸಿದರು.

SNEHALAYA FASHION FEST: Breaking Barriers and Celebrating Diversity – Fashion Show Empowers Individuals with Mental Health Challenges.

In a groundbreaking event that combined fashion, inclusivity, and advocacy, Snehalaya Psycho-social Center for Men and Women hosted a fashion show aimed at empowering individuals with mental health challenges. The event, titled “Snehalaya Fashion Fest,” took place at Snehalaya Auditorium on July 29, 2023.

The show was organized by Snehalaya Charitable Trust, a non-profit dedicated to promoting mental health awareness and breaking down the stigmas associated with mental health conditions. The main aim was to provide a platform for individuals with mental health challenges to showcase their talents, boost their self-confidence, and raise awareness about mental health issues.

From the very beginning, the event emphasized inclusivity and diversity. A wide range of models of all ages, genders, body types, and ethnicities participated in the show. Designers also joined hands with the cause and presented a diverse array of outfits, embracing a variety of styles and inspirations.

The show was inaugurated by Mr. AKM Ashraf, MLA Manjeswaram Constituency, along with Joseph Crasta, executive director of Snehalaya Charitable Trust. Guests from various realms of society were present for the event, namely: Mrs. Gean Lavina Monteiro – President, Manjeshwar Grama Panchayath, Mr. V.J. Dixon – Celebrity Host/TV Anchor/Fashion Model, Mr. Shamsudin Thandilam – Celebrity Photographer, Mr. DJ Shadz – International DJ, Mr. Shanoj Irani – International Fashion Show Director, Ms. Sajna Saaj – Choreographer, Mr. Yajnesh Amin Ullal – Fashion Designer, Mr. Shobith – Model and Show Director, Mrs. Akshaya – Costume Designer, Mr. Roshan Martis – Chief Editor, Karavali Suddi, Mr. Alwyn D’Souza – President, Catholic Sabha, Mangalore Province, Mr. Naveen Monteiro – Saudi Friends, Mr. M.S.Thomas – Founder President Santhosh Arts & Sports Club Sithangoli.

As the event concluded, it left a lasting impact on the audience and participants alike. The collective effort to break down barriers and empower individuals with mental health challenges through fashion resonated with many. The hope is that this event will inspire similar initiatives worldwide and continue to foster understanding and support for mental health causes. The backbone of the show, Mr. Shobith, and Mrs. Akshaya, were felicitated during the event. The Programme was hosted by Mrs. Lavita Menezes.