ಸ್ವಾತಂತ್ರ್ಯದ ಸವಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು ಎಂಬ ಆಶಯ ಸಾಕಾರಗೊಳ್ಳಬೇಕು : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಸ್ವಾತಂತ್ರ್ಯದ ಸವಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು ಎಂಬ ಆಶಯ ಸಾಕಾರಗೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು ಎಂದು ಹೇಳಿದರು.
ಕ್ಷೇತ್ರದ ಯುವ ಸಮುದಾಯಕ್ಕೆ ಉದ್ಯೋಗಾವಕಾಶ ಒದಗಿಸುವ ಉದ್ದೇದಿಂದ ಪಟ್ಟಣದ ಹೊರವಲಯದಲ್ಲಿ ಕೈಗಾರಿಕಾ ವಲಯ ನಿರ್ಮಿಸಲಾಗುವುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪಟ್ಟಣದಲ್ಲಿ ನವನಗರ ಯೋಜನೆ ಜಾರಿಗೆ ತಂದು ನಾಗರಿಕರಿಗೆ ಅಗತ್ಯವಾದ ರಸ್ತೆ, ಒಳಚರಂಡಿ ನಿರ್ಮಿಸಲಾಗುವುದು. ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಮೊದಲ ಅದ್ಯತೆ ನೀಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಯೋಧರನ್ನು ಸ್ಮರಿಸಬೇಕು. ಅವರ ತ್ಯಾಗ, ಬಳಿದಾನ ದೇಶದ ಸ್ವಾತಂತ್ರ್ಯ ರಕ್ಷಣೆಗೆ ಸ್ಫೂರ್ತಿಯಾಗಬೇಕು. ವಿವಿಧತೆಯಲ್ಲಿ ಏಕತೆ ನೀತಿ ಮುಂದುವರಿಯಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕರಿ ಕೃಷ್ಣಪ್ಪ, ಪ್ರಾಂಶುಪಾಲ ರಾಮಾಂಜನೇಯಪ್ಪ ಸ್ವಾತಂತ್ರ್ಯದ ಮಹತ್ವ ಕುರಿತು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಮ್ಮ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬೈರೆಡ್ಡಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಪೊಲೀಸ್ ಇನ್ಸ್‍ಪೆಕ್ಟರ್ ಆರ್.ದಯಾನಂದ, ತಾಲ್ಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣಿ, ವೆಂಕಟಸ್ವಾಮಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ಗಣೇಶ್, ಮುಖಂಡ ಶೇಷಾಪುರ ಗೋಪಾಲ್ ಮತ್ತಿತರರು ಇದ್ದರು.
ಸಮಾರಂಭದಲ್ಲಿ ಪೊಲೀಸ್, ಗೃಹರಕ್ಷಕ ದಳ ಹಾಗೂ ವಿದ್ಯಾರ್ಥಿಗಳಿಂದ ಪಥಸಂಚಲನ ಏರ್ಪಡಿಸಲಾಗಿತ್ತು. ಬೇರೆ ಬೇರೆ ಶಾಲಾ ವಿದ್ಯಾರ್ಥಿಗಳಿಂದ ದೇಶ ಭಕ್ತಿಗೆ ಸಂಬಂಧಿಸಿದ ನೃತ್ಯ ಹಾಗೂ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯರು ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕುಂದಾಪುರ,16: ಸಂತ ಜೋಸೆಪರ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇವರ ಆಶ್ರಯದಲ್ಲಿ 15-08-2023 ರಂದು “ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಕಾನೂನು ಅರಿವು” ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ರೋ.ಜಗನ್ನಾಥ್ ಮೊಗೆರ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ವಕೀಲರಾದ ವೈ ಶರತ್ ಕುಮಾರ್ ಶೆಟ್ಟಿ ಇವರು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಕಾನೂನು ಅರಿವು ಮಾಹಿತಿ ನೀಡಿದರು. ವ್ಯಕ್ತಿಯ ವ್ಯಕ್ತಿತ್ವದ ವಿಕಸನಕ್ಕೆ ಅಗತ್ಯವಾದ ಸಾಮಾಜಿಕ ಮತ್ತು ರಾಜಕೀಯ ವಾತಾವರಣವನ್ನು ಮೂಲಭೂತ ಹಕ್ಕುಗಳು ಎಂದು ಕರೆಯುತ್ತಾರೆ. ನಮ್ಮ ಸಂವಿಧಾನದ ಮೂರನೇ ಭಾಗದಲ್ಲಿ ಮೂಲಭೂತ ಹಕ್ಕುಗಳನ್ನು ಅಳವಡಿಸಲಾಗಿದೆ. ಈ ಹಕ್ಕುಗಳು ಪ್ರಜಾಪ್ರಭುತ್ವದ ಯಶಸ್ವಿಗೆ ಅಗತ್ಯವಾದವುಗಳು. ಮೂಲಭೂತ ಕರ್ತವ್ಯಗಳ ಬಗ್ಗೆ ಪ್ರಸ್ತಾವಿಸುತ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಮೂಲಭೂತ ಹಕ್ಕುಗಳಿರುವಂತೆ ಕರ್ತವ್ಯಗಳಿಗೆ ನ್ಯಾಯಾಲಯದ ರಕ್ಷಣೆ ಇರುವುದಿಲ್ಲ. ಕರ್ತವ್ಯಗಳನ್ನು ಉಲ್ಲಂಘಿಸಿದವರಿಗೆ ಸಾಮಾನ್ಯ ಕಾನೂನಿನ ಅನ್ವಯ ಶಿಕ್ಷೆ ವಿಧಿಸಲಾಗುತ್ತದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಶುಭ ಹಾರೈಸಿದರು. ಶಿಕ್ಷಕರಾದ ಮೈಕಲ್ ಪುಟಾರ್ಡೊ ಸ್ವಾಗತಿಸಿದರು. ಶಿಕ್ಷಕಿ ಸರಸ್ವತಿಯವರು ವಂದಿಸಿದರು. ಶಿಕ್ಷಕ ಅಶೋಕ್ ದೇವಾಡಿಗ ನಿರೂಪಿಸಿದರು. ರೋಟರಿ ಕಾರ್ಯದರ್ಶಿಯಾಗಿರುವ ರೋ. ಡಾ. ವಿಲಾಸ್ ಕೃತಿಕ್ ಸದಸ್ಯರಾದ ರೋ.ವಿನ್ಸೆಂಟ್ ಬರೆಟ್ಟೊ , ರೋ. ನಟರಾಜ್, ರೋ. ಕೌಶಿಕ್ ಇವರು ಉಪಸ್ಥಿತರಿದ್ದರು. ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆಟೋರಿಕ್ಷಾ ,ಟ್ಯಾಕ್ಸಿ ,ಮೆಟಾಡೊರ್, ಡ್ರೈವರ್ ಅಸೋಸಿಯೇಷನ್ ನಿಂದ ಸ್ವಾತಂತ್ರ್ಯ ದಿನಾಚರಣೆ

ಕುಂದಾಪುರ: ಆಟೋರಿಕ್ಷಾ ,ಟ್ಯಾಕ್ಸಿ ,ಮೆಟಾಡೊರ್, ಡ್ರೈವರ್ ಅಸೋಸಿಯೇಷನ್ ನಿಂದ ಸ್ವಾತಂತ್ರ್ಯ 77 ನೇ ದಿನಾಚರಣೆಯನ್ನು ಆಚರಿಸಲಾಯಿತು. ’ಸ್ವಾತಂತ್ರ್ಯ ,ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಲವು ರೀತಿಯಲ್ಲಿ ಧಕ್ಕೆ ಬರುತ್ತಿದೆ. ನಾವೆಲ್ಲರೂ ಒಂದಾಗಿ ಇವುಗಳ ಸಂರಕ್ಷಣೆಯ ಸಂಕಲ್ಪ ತೊಡಬೇಕಾಗಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಅಸೋಸಿಯೇಷನ್ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಯವರು ಮಾತನಾಡಿ ದೇಶದ ಇಂದಿನ ಸರ್ವತೋಮುಖ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಕಾರಣ ಎಂದು ಹೇಳಿ ಎಲ್ಲರನ್ನೂ ಸಭೆಗೆ ಸ್ವಾಗತಿಸಿದರು.
ಸಭೆಯಲ್ಲಿ ಪುರಸಭೆ ಸದಸ್ಯರಾದ ಚಂದ್ರಶೇಖರ್ ಖಾರ್ವಿ, ಅಬು ಅಹಮ್ಮದ್, ಸೋಶಿಯಲ್ ಮೀಡಿಯಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಉಪಸಮಿತಿಗಳ ಅಧ್ಯಕ್ಷರಾದ ಚಂದ್ರ ಅಮೀನ್, ಅಶ್ವತ್ ಕುಮಾರ್, ಮುನಾಫ್ ಕೋಡಿ, ಶಶಿಕುಮಾರ್, ಮಾಜಿ ಪುರಸಭಾ ಅಧ್ಯಕ್ಷರಾದ ಹಾರುನ್ ಸಾಹೇಬ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇವತಿ ಶೆಟ್ಟಿ, ಅಸೋಸಿಯೇಷನ್ ಗೌರವ ಅಧ್ಯಕ್ಷರಾದ ವಕ್ವಾಡಿ ಭಾಸ್ಕರ್ ಪೂಜಾರಿ ,ಉಪಾಧ್ಯಕ್ಷರಾದ ಶೇಖರ ಪೂಜಾರಿ ತಲ್ಲೂರು, ಜೇಮ್ಸ್ ರೆಬೆಲ್ಲೊ ಹೆಮ್ಮಾಡಿ ,ವಿ ಎನ್ ಗುಂಡ ಪಾರಿಜಾತ, ಭಾಸ್ಕರ ಪೂಜಾರಿ ಕಂಡ್ಲೂರು ,ಕಾಂಗ್ರೆಸ್ ಪಕ್ಷದ ನಾಯಕರುಗಳಾದ ಎಚ್ ಗಂಗಾಧರ ಶೆಟ್ಟಿ, ಅಭಿಜಿತ್ ಪೂಜಾರಿ, ಅಶೋಕ್ ಸುವರ್ಣ, ಮಧುಕರ, ಆಶಾ ಕರ್ವಾಲ್ಲೊ, ಸುಭಾಷ್ ಪೂಜಾರಿ, ಸದಾನಂದ ಖಾರ್ವಿ, ಜ್ಯೋತಿ ಕೆ, ಶೋಭಾ ಸಚ್ಚಿದಾನಂದ, ಸುವರ್ಣ ಅಲ್ಮೇಡಾ, ಶಶಿ ರಾಜ್ ಪೂಜಾರಿ, ಕೇಶವ ಭಟ್, ವೇಲಾ ಬ್ರಗಾಂಜ , ಜ್ಯೋತಿ ಮೊಗವೀರ, ಜೋಸೆಫ್ ರೆಬೆಲ್ಲೊ, ಡೊಲ್ಫಿ ಡಿಕೋಸ್ತ, ವಿವೇಕಾನಂದ, ಕೆ ಸುರೇಶ, ನಾಗರಾಜ ನಾಯ್ಕ, ಪ್ರೀತಮ್ ಕರ್ವಾಲ್ಲೊ ,ದಿನೇಶ್ ಬೆಟ್ಟ, ಗುಲಾಬಿ, ಡೆಪೋಡಿಲ್ ಕ್ರಾಸ್ಟೋ , ಸೂರ್ಯನಾರಾಯಣ, ಇಬ್ರಾಹಿಂ, ಸಂತೋಷ್ ಖಾರ್ವಿ ,ಬಾಲಾ ಬಸ್ರೂರ್, ನರೇಂದ್ರ ಗಾಣಿಗ, ಪ್ರಕಾಶ್, ಸುರೇಶ್ ಸಂಗಮ್, ಭಾಸ್ಕರ, ಆನಂದ ,ಅಜಿತ್ ಕುಮಾರ್, ರತ್ನಾಕರ್ ಶೆಟ್ಟಿ ,ಜನಾರ್ದನ್ ಖಾರ್ವಿ, ಕೆ ಅಶೋಕ್ ,ಮಂಜುನಾಥ , ಪಿಯುಸ್ ಡಿಸೋಜ, ವಿಶ್ವನಾಥ ಪೂಜಾರಿ, ಎಂ ಉದಯಕುಮಾರ್, ಶಶಿಧರ, ಕಿರಣ್, ಬಸ್ತು, ಅಶೋಕ ಡಿಸೋಜಾ ವಿಜಯ ಪೂಜಾರಿ ತಲ್ಲೂರು ಫೆಲಿಕ್ಸ್ ತಲ್ಲೂರು ಇನ್ನಿತರರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಕಾರ್ಯಕ್ರಮವನ್ನು ನಿರೂಪಿಸಿ, ಅಸೋಶಿಯೇಶನ್ ನಾ ಕಾರ್ಯದರ್ಶಿ ಮಾಣಿ ಉದಯ್ ಅವರು ವಂದಿಸಿದರು. ಸಭೆಯ ನಂತರ ಅಸೋಸಿಯೇಷನ್ ನಾ ಸದಸ್ಯರು ವಾಹನಗಳ ಜಾಥ ಕುಂದಾಪುರದ ಪ್ರಮುಖ ರಸ್ತೆಯಲ್ಲಿ ನಡೆಸಿದರು.

ಉಪ ವಿಭಾಗೀಯ ಕುಂದಾಪುರ ಸರಕಾರಿ ಅಸ್ಪತ್ರೆಗೆ “ಅಪ್ರಿಶಿಯೇಶನ್” ಪ್ರಶಸ್ತಿ

ಕುಂದಾಪುರ,17,ಉಪ ವಿಭಾಗೀಯ  ಕುಂದಾಪುರ ಸಾರ್ವಜನಿಕ ಆಸ್ಪತ್ರೆಗೆ ಅಪ್ರಿಶಿಯೇಶನ್ ಪ್ರಶಸ್ತಿ ಲಭಿಸಿದೆ. ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆದ  77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆಯುಷ್ಠಾನ್‌ ಭರತ್‌ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ- ಆರೋಗ್ಯ ಕರ್ನಾಟಕ  (AB -PMJAY -ARK )  ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಂಬಂಧ ಜಿಲ್ಲಾ  ಮಟ್ಟದಿಂದ ಪ್ರಶಂಸಾ ಪ್ರಮಾಣಪತ್ರವನ್ನು ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್‌ ಇವರು ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. ರಾಬರ್ಟ್‌ ರೆಬೆಲ್ಲೊ ಇವರಿಗೆ ನೀಡಿದರು.

ಈ ಸಂದರ್ಭದಲ್ಲಿ ಇಲಾಖೆಯ ಇತರ ಅಧಿಕಾರಿಯವರು. ಉಪಸ್ಥಿತರಿದ್ದರು. ಆಯುಷ್ಯಾನ್‌ ಭರತ್‌ ಪ್ರಧಾನ ಮಂತ್ರಿ ಜನಾರೋಗ್ಯ ಅಯೋಜನೆಯಡಿ ಜಿಲ್ಲಾವಾರು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಹಾಗೂ ನೊಂದಾಯಿತ ಖಾಸಗಿ ಆಸ್ಪತ್ರೆಗಳು ಸಾಧಿಸಿರುವ ಕಾರ್ಯಕ್ಷಮತೆ ಹಾಗೂ ಯೋಜನೆಯ ಸದ್ಗಳಕೆ ಆಧಾರದ ಮೇಲೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಹಿಂದಿನ ಸಾಲಿನಲ್ಲಿ ಕಾಯಕಲ್ಪ ಪ್ರಶಸ್ತಿ ಹಾಗೂ ಲಕ್ಷ್ಯ ಪ್ರಶಸ್ತಿಯು ಲಭಿಸಿರುವುದು ಹೆಮ್ಮೆಯ ವಿಷಯವಾಗಿದೆಯೆಂದು ಡಾ. ರಾಬರ್ಟ್‌ ರೆಬೆಲ್ಲೊ ತಿಳಿಸಿದ್ದಾರೆ